Homeಅಂತರಾಷ್ಟ್ರೀಯಯುಎಸ್‌ಏಡ್‌ನ 2 ಸಾವಿರ ಉದ್ಯೋಗಿಗಳನ್ನು ವಜಾ ಮಾಡಿದ ಟ್ರಂಪ್ ಆಡಳಿತ

ಯುಎಸ್‌ಏಡ್‌ನ 2 ಸಾವಿರ ಉದ್ಯೋಗಿಗಳನ್ನು ವಜಾ ಮಾಡಿದ ಟ್ರಂಪ್ ಆಡಳಿತ

- Advertisement -
- Advertisement -

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಆಡಳಿತವು ಅಂತಾರಾಷ್ಟ್ರೀಯ ಅಭಿವೃದ್ಧಿಗಾಗಿ ಅಮೆರಿಕದ ಏಜೆನ್ಸಿಯ (ಯುಎಸ್‌ಏಡ್‌) 2 ಸಾವಿರ ಉದ್ಯೋಗಿಗಳನ್ನು ಭಾನುವಾರ (ಫೆ.23) ವಜಾ ಮಾಡಿದ್ದು, ಇತರೆ ಸಾವಿರಾರು ನೌಕರರನ್ನು ರಜೆ ಮೇಲೆ ಕಳುಹಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಅಮೆರಿಕ ಮತ್ತು ವಿದೇಶಗಳಲ್ಲಿ ಸಾವಿರಾರು ಯುಎಸ್‌ಏಡ್ ಸಿಬ್ಬಂದಿಯನ್ನು ವಜಾಗೊಳಿಸಲು ಆಡಳಿತಕ್ಕೆ ಅವಕಾಶ ನೀಡಿದ ಫೆಡರಲ್ ನ್ಯಾಯಾಲಯದ ತೀರ್ಪಿನ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ತಮ್ಮನ್ನು ವಜಾಗೊಳಿಸುವ ಸರ್ಕಾರದ ಯೋಜನೆಯ ಮೇಲಿನ ತಾತ್ಕಾಲಿಕ ತಡೆಯಾಜ್ಞೆಯನ್ನು ವಿಸ್ತರಿಸುವಂತೆ ಯುಎಸ್‌ಏಡ್ ಸಿಬ್ಬಂದಿ ಸಲ್ಲಿಸಿದ್ದ ಅರ್ಜಿಯನ್ನು ಯುಎಸ್‌ ಜಿಲ್ಲಾ ನ್ಯಾಯಾಧೀಶ ಕಾರ್ಲ್ ನಿಕೋಲ್ಸ್ ತಿರಸ್ಕರಿಸಿದ್ದರು. ಇದು ಆಡಳಿತದ ನಿರ್ಧಾರಕ್ಕೆ ಪರಿಣಾಮಕಾರಿಯಾಗಿ ಹಸಿರು ನಿಶಾನೆ ತೋರಿಸಿತ್ತು.

ನಿರ್ಣಾಯಕ ವಿಷಯಗಳ ಹುದ್ದೆಗಳು, ಪ್ರಮುಖ ನಾಯಕತ್ವದ ಹುದ್ದೆಗಳು ಅಥವಾ ವಿಶೇಷವಾಗಿ ಗೊತ್ತುಪಡಿಸಿದ ವಿಷಯಗಳನ್ನು ನಿರ್ವಹಿಸುವವರನ್ನು ಹೊರತುಪಡಿಸಿ, ಉಳಿದ ಎಲ್ಲಾ ನೇರ ನೇಮಕಾತಿ ಸಿಬ್ಬಂದಿಯನ್ನು ಆಡಳಿತಾತ್ಮಕ ರಜೆಯ ಮೇಲೆ ಇರಿಸಲಾಗಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಉದ್ಯಮಿ ಎಲಾನ್‌ ಮಸ್ಕ್‌ ನೇತೃತ್ವದ ಅಮೆರಿಕದ ಸರ್ಕಾರಿ ದಕ್ಷತೆಯ ಇಲಾಖೆಯು ವೆಚ್ಚಗಳಲ್ಲಿ ಕಡಿತ ಮಾಡುವುದಾಗಿ ಈಚೆಗೆ ಘೋಷಿಸಿತ್ತು. ಇದರ ಬೆನ್ನಲ್ಲೇ ಯುಎಸ್‌ಏಡ್‌ನ ಉದ್ಯೋಗಿಗಳನ್ನು ಕಡಿತಗೊಳಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಟ್ರಂಪ್ ಅಧಿಕಾರವಹಿಸಿಕೊಂಡ ಬಳಿಕ ಆಡಳಿತಾತ್ಮಕವಾಗಿ ಹಲವು ಬದಲಾವಣೆಗಳು ಆಗಿವೆ. ಈ ಪೈಕಿ ಅಮೆರಿಕದಿಂದ ಹೊರ ಹೋಗುತ್ತಿರು ಆರ್ಥಿಕ ಸಹಾಯವನ್ನು ಕಡಿತಗೊಳಿಸುವುದರ ಬಗ್ಗೆ ಆಡಳಿತ ಪ್ರಮುಖವಾಗಿ ಒತ್ತು ನೀಡುತ್ತಿದೆ.

ವಿಶ್ವ ಆರೋಗ್ಯ ಸಂಸ್ಥೆ, ಪ್ಯಾರಿಸ್ ಒಪ್ಪಂದ, ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಹೊರ ಬಂದಿರುವುದು ಇತ್ಯಾದಿ ಇದಕ್ಕೆ ಉದಾಹಣೆಗಳಾಗಿವೆ.

ಯುಎಸ್‌ಏಡ್ ವಿಚಾರದಲ್ಲಿ ಭಾರತ ಪ್ರಮುಖವಾಗಿ ತಳುಕು ಹಾಕಿಕೊಂಡಿದೆ. ಭಾರತದ ಚುನಾವಣೆಗೆ 21 ಮಿಲಿಯ ಡಾಲರ್ ಖರ್ಚು ಮಾಡಲಾಗಿದೆ ಎಂಬುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಟ್ರಂಪ್ ಆಡಳಿತ 4,600 ಯುಎಸ್‌ಏಡ್‌ ಉದ್ಯೋಗಿಗಳ ಕಡಿತ ಸೇರಿದಂತೆ ಅಮೆರಿಕದ ನಾಗರಿಕ ಸೇವೆ ಮತ್ತು ವಿದೇಶಾಂಗ ಸಚಿವಾಲಯದ ಸಿಬ್ಬಂದಿಯನ್ನು ರಜೆ ಮೇಲೆ ಕಳುಹಿಸುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ.

5 ತಿಂಗಳುಗಳ ಬಳಿಕ ಹಿಜ್ಬೊಲ್ಲಾ ಮಾಜಿ ನಾಯಕ ನಸ್ರಲ್ಲಾ ಅಂತ್ಯಕ್ರಿಯೆ; ಸಾವಿರಾರು ಜನ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...