Homeಅಂತರಾಷ್ಟ್ರೀಯಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್

ಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್

- Advertisement -
- Advertisement -

ಜರ್ಮನಿಯಲ್ಲಿ ಭಾನುವಾರ (ಫೆ.23) ನಡೆದ ರಾಷ್ಟ್ರೀಯ ಚುನಾವಣೆಯಲ್ಲಿ ಫ್ರೆಡ್ರಿಕ್ ಮರ್ಝ್‌  ನೇತೃತ್ವದ ಸಂಪ್ರದಾಯವಾದಿ ಮೈತ್ರಿಕೂಟ ಗೆಲುವು ಸಾಧಿಸಿದೆ. ತೀವ್ರ ಬಲಪಂಥೀಯ ಪಕ್ಷ ಆಲ್ಟರ್ನೇಟಿವ್ ಫಾರ್ ಜರ್ಮನಿ (ಎಎಫ್‌ಡಿ) ಮತ ಗಳಿಕೆಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ.

ಅಂತಿಮ ಮತ ಎಣಿಕೆಯ ಫಲಿತಾಂಶದ ಪ್ರಕಾರ, ಎಎಫ್‌ಡಿ ತನ್ನ ಮತ ಗಳಿಕೆಯನ್ನು ಈ ಬಾರಿ ದ್ವಿಗುಣಗೊಳಿಸಿಕೊಂಡಿದ್ದು, ಶೇ.19.5ರಷ್ಟು ಪಡೆದುಕೊಂಡಿದೆ. ಎಎಫ್‌ಡಿ ಜರ್ಮನಿಯ ನಾಗರಿಕರಲ್ಲಿ ಬಿತ್ತಿದ ವಲಸೆ ಮತ್ತು ಭದ್ರತೆ ಕುರಿತ ಆತಂಕ ಮತಗಳಿಕೆ ಹೆಚ್ಚಿಸಲು ಕಾರಣವಾಗಿದೆ ಎಂದು ವರದಿಗಳು ಹೇಳಿವೆ.

ಮೆರ್ಜ್ ಅವರ ಸಿಡಿಯು/ಸಿಎಸ್‌ಯು ಮೈತ್ರಿಕೂಟ ಶೇ.28.5ರಷ್ಟು ಮತಗಳನ್ನು ಪಡೆದುಕೊಂಡು ಗೆಲುವು ಸಾಧಿಸಿದೆ. ನಿರ್ಗಮಿತ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರ ಸೆಂಟರ್-ಲೆಫ್ಟ್ ಸೋಶಿಯಲ್ ಡೆಮಾಕ್ರೇಟ್ಸ್ (ಎಸ್‌ಪಿಡಿ) ಶೇ.16ರಷ್ಟು ಮಗಳನ್ನು ಮಾತ್ರ ಗಳಿಸಲು ಸಫಲವಾಗಿದೆ.

ಮಾಜಿ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಅವರ ಪಕ್ಷದ ದೀರ್ಘಕಾಲದ ಪ್ರತಿಸ್ಪರ್ಧಿ ಮೆರ್ಜ್, ಅಕ್ರಮ ವಲಸೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ತನ್ನ ಕರಾಳ ನಾಜಿ ಇತಿಹಾಸಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಇನ್ನೂ ಪ್ರಯತ್ನಿಸುತ್ತಿರುವ ದೇಶದಲ್ಲಿ ಎಎಫ್‌ಡಿಯ ಮತಗಳಿಕೆ ಎಲ್ಲರನ್ನು ಆಶ್ವರ್ಯಗೊಳಿಸಿದೆ. ಏಕೆಂದರೆ, ಸಿಡಿಯು/ಸಿಎಎಸ್‌ಯು ಸೇರಿದಂತೆ ಎಲ್ಲಾ ಪಕ್ಷಗಳು ಎಎಫ್‌ಡಿ ಹೆಚ್ಚು ಮತಗಳಿಸದಂತೆ ತಡೆಯಲು ಪ್ರಯತ್ನಿಸಿತ್ತು.

ಸದ್ಯಕ್ಕೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಮಿತ್ರಪಕ್ಷಗಳ ಬೆಂಬಲವನ್ನು ಹೊಂದಿರುವ ಎಎಫ್‌ಡಿ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಲು ಸಜ್ಜಾಗಿದೆ. ಇತರ ಎಲ್ಲಾ ಪಕ್ಷಗಳು ಅದನ್ನು ಅಧಿಕಾರದಿಂದ ದೂರವಿಡುವ ಪ್ರತಿಜ್ಞೆ ಮಾಡಿತ್ತು.

ಆದರೆ, ಎಎಫ್‌ಡಿ ನಾಯಕಿ ಆಲಿಸ್ ವೀಡೆಲ್ ಐತಿಹಾಸಿಕ ಫಲಿತಾಂಶವನ್ನು ಶ್ಲಾಘಿಸಿದ್ದು, ನಮ್ಮ ಪಕ್ಷ ಸಿಡಿಯು/ಸಿಎಸ್‌ಯು ಜೊತೆ ಸೇರಿ ಆಡಳಿತ ನಡೆಸಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ಈಗ ಉಸ್ತುವಾರಿ ಚಾನ್ಸೆಲರ್ ಆಗಿರುವ ನಿರ್ಗಮಿತ ಸ್ಕೋಲ್ಜ್ ಅವರಿಂದ ಅಧಿಕಾರವಹಿಸಿಕೊಳ್ಳಲಿರುವ ಮೆರ್ಜ್ ಅವರು ಹೊಸ ಸಮ್ಮಿಶ್ರ ಸರ್ಕಾರ ರಚಿಸಬೇಕಿದೆ. ಈಸ್ಟರ್ ವೇಳೆಗೆ ಅವರ ಸರ್ಕಾರ ರಚಿಸುವ ಸಾಧ್ಯತೆ ಇದೆ. ಅದುವರೆಗೆ ಜರ್ಮನಿಯ ಸರ್ಕಾರವಿಲ್ಲದೆ ಮುನ್ನಡೆಯಬೇಕಿದೆ.

“ಸಮ್ಮಿಶ್ರ ಸರ್ಕಾರ ರಚಿಸುವ ಸಂಬಂಧ ಸುದೀರ್ಘ ಮಾತುಕತೆ ಮತ್ತು ವಿಳಂಬ ನೀತಿ ಸರಿಯಲ್ಲ. ಹೊರಗಿನ ಜಗತ್ತು ನಮ್ಮನ್ನು ಕಾಯುತ್ತಾ ಕೂತಿಲ್ಲ. ಶೀಘ್ರದಲ್ಲೇ ಸರ್ಕಾರ ರಚಿಸಬೇಕಿದೆ” ಎಂದು ವಿಜಯ ಘೋಷಣೆ ಬಳಿಕ ಮೆರ್ಜ್ ಹೇಳಿದ್ದಾರೆ.

ಬಹುಮತ ಪಡೆಯಲು ಮೆರ್ಜ್ ಅವರು ಮೊದಲು ಎಸ್‌ಪಿಡಿಯನ್ನು ಸಂಪರ್ಕಿಸುವ ಸಾಧ್ಯತೆ ಇದೆ. ಆದರೆ, ಜರ್ಮನಿಯ ಸಾಂಪ್ರದಾಯಿಕ ಕಾರ್ಮಿಕರ ಪಕ್ಷವನ್ನು ಐತಿಹಾಸಿಕವಾಗಿ ಕಳಪೆ ಫಲಿತಾಂಶಕ್ಕೆ ಕೊಂಡೊಯ್ದ ಸ್ಕೋಲ್ಜ್ ಅವರನ್ನು ಹೊರಗಿಟ್ಟು ಮಾತುಕತೆ ನಡೆಯಬಹುದು ಎನ್ನಲಾಗಿದೆ.

ಬಹುಮತ ಪಡೆಯಲು ಸ್ಥಾನಗಳನ್ನು ಪಡೆಯಲು ಮೆರ್ಜ್ ಗ್ರೀನ್ಸ್ ಅನ್ನು ಕೂಡ ಸಂಪರ್ಕಿಸಬಹುದು. ಗ್ರೀನ್ಸ್  ಚುನಾವಣೆಯಲ್ಲಿ ಶೇಖಡ 12 ರಷ್ಟು ಮತಗಳಿಸಿದೆ. ಆದರೆ, ಸಿಡಿಯುನ ಬವೇರಿಯನ್ ಸಹೋದರ ಪಕ್ಷವಾದ ಸಿಎಸ್‌ಯು ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.

ಯುಎಸ್‌ಏಡ್‌ನ 2 ಸಾವಿರ ಉದ್ಯೋಗಿಗಳನ್ನು ವಜಾ ಮಾಡಿದ ಟ್ರಂಪ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...