Homeಅಂತರಾಷ್ಟ್ರೀಯಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್

ಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್

- Advertisement -
- Advertisement -

ಜರ್ಮನಿಯಲ್ಲಿ ಭಾನುವಾರ (ಫೆ.23) ನಡೆದ ರಾಷ್ಟ್ರೀಯ ಚುನಾವಣೆಯಲ್ಲಿ ಫ್ರೆಡ್ರಿಕ್ ಮರ್ಝ್‌  ನೇತೃತ್ವದ ಸಂಪ್ರದಾಯವಾದಿ ಮೈತ್ರಿಕೂಟ ಗೆಲುವು ಸಾಧಿಸಿದೆ. ತೀವ್ರ ಬಲಪಂಥೀಯ ಪಕ್ಷ ಆಲ್ಟರ್ನೇಟಿವ್ ಫಾರ್ ಜರ್ಮನಿ (ಎಎಫ್‌ಡಿ) ಮತ ಗಳಿಕೆಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ.

ಅಂತಿಮ ಮತ ಎಣಿಕೆಯ ಫಲಿತಾಂಶದ ಪ್ರಕಾರ, ಎಎಫ್‌ಡಿ ತನ್ನ ಮತ ಗಳಿಕೆಯನ್ನು ಈ ಬಾರಿ ದ್ವಿಗುಣಗೊಳಿಸಿಕೊಂಡಿದ್ದು, ಶೇ.19.5ರಷ್ಟು ಪಡೆದುಕೊಂಡಿದೆ. ಎಎಫ್‌ಡಿ ಜರ್ಮನಿಯ ನಾಗರಿಕರಲ್ಲಿ ಬಿತ್ತಿದ ವಲಸೆ ಮತ್ತು ಭದ್ರತೆ ಕುರಿತ ಆತಂಕ ಮತಗಳಿಕೆ ಹೆಚ್ಚಿಸಲು ಕಾರಣವಾಗಿದೆ ಎಂದು ವರದಿಗಳು ಹೇಳಿವೆ.

ಮೆರ್ಜ್ ಅವರ ಸಿಡಿಯು/ಸಿಎಸ್‌ಯು ಮೈತ್ರಿಕೂಟ ಶೇ.28.5ರಷ್ಟು ಮತಗಳನ್ನು ಪಡೆದುಕೊಂಡು ಗೆಲುವು ಸಾಧಿಸಿದೆ. ನಿರ್ಗಮಿತ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರ ಸೆಂಟರ್-ಲೆಫ್ಟ್ ಸೋಶಿಯಲ್ ಡೆಮಾಕ್ರೇಟ್ಸ್ (ಎಸ್‌ಪಿಡಿ) ಶೇ.16ರಷ್ಟು ಮಗಳನ್ನು ಮಾತ್ರ ಗಳಿಸಲು ಸಫಲವಾಗಿದೆ.

ಮಾಜಿ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಅವರ ಪಕ್ಷದ ದೀರ್ಘಕಾಲದ ಪ್ರತಿಸ್ಪರ್ಧಿ ಮೆರ್ಜ್, ಅಕ್ರಮ ವಲಸೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ತನ್ನ ಕರಾಳ ನಾಜಿ ಇತಿಹಾಸಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಇನ್ನೂ ಪ್ರಯತ್ನಿಸುತ್ತಿರುವ ದೇಶದಲ್ಲಿ ಎಎಫ್‌ಡಿಯ ಮತಗಳಿಕೆ ಎಲ್ಲರನ್ನು ಆಶ್ವರ್ಯಗೊಳಿಸಿದೆ. ಏಕೆಂದರೆ, ಸಿಡಿಯು/ಸಿಎಎಸ್‌ಯು ಸೇರಿದಂತೆ ಎಲ್ಲಾ ಪಕ್ಷಗಳು ಎಎಫ್‌ಡಿ ಹೆಚ್ಚು ಮತಗಳಿಸದಂತೆ ತಡೆಯಲು ಪ್ರಯತ್ನಿಸಿತ್ತು.

ಸದ್ಯಕ್ಕೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಮಿತ್ರಪಕ್ಷಗಳ ಬೆಂಬಲವನ್ನು ಹೊಂದಿರುವ ಎಎಫ್‌ಡಿ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಲು ಸಜ್ಜಾಗಿದೆ. ಇತರ ಎಲ್ಲಾ ಪಕ್ಷಗಳು ಅದನ್ನು ಅಧಿಕಾರದಿಂದ ದೂರವಿಡುವ ಪ್ರತಿಜ್ಞೆ ಮಾಡಿತ್ತು.

ಆದರೆ, ಎಎಫ್‌ಡಿ ನಾಯಕಿ ಆಲಿಸ್ ವೀಡೆಲ್ ಐತಿಹಾಸಿಕ ಫಲಿತಾಂಶವನ್ನು ಶ್ಲಾಘಿಸಿದ್ದು, ನಮ್ಮ ಪಕ್ಷ ಸಿಡಿಯು/ಸಿಎಸ್‌ಯು ಜೊತೆ ಸೇರಿ ಆಡಳಿತ ನಡೆಸಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ಈಗ ಉಸ್ತುವಾರಿ ಚಾನ್ಸೆಲರ್ ಆಗಿರುವ ನಿರ್ಗಮಿತ ಸ್ಕೋಲ್ಜ್ ಅವರಿಂದ ಅಧಿಕಾರವಹಿಸಿಕೊಳ್ಳಲಿರುವ ಮೆರ್ಜ್ ಅವರು ಹೊಸ ಸಮ್ಮಿಶ್ರ ಸರ್ಕಾರ ರಚಿಸಬೇಕಿದೆ. ಈಸ್ಟರ್ ವೇಳೆಗೆ ಅವರ ಸರ್ಕಾರ ರಚಿಸುವ ಸಾಧ್ಯತೆ ಇದೆ. ಅದುವರೆಗೆ ಜರ್ಮನಿಯ ಸರ್ಕಾರವಿಲ್ಲದೆ ಮುನ್ನಡೆಯಬೇಕಿದೆ.

“ಸಮ್ಮಿಶ್ರ ಸರ್ಕಾರ ರಚಿಸುವ ಸಂಬಂಧ ಸುದೀರ್ಘ ಮಾತುಕತೆ ಮತ್ತು ವಿಳಂಬ ನೀತಿ ಸರಿಯಲ್ಲ. ಹೊರಗಿನ ಜಗತ್ತು ನಮ್ಮನ್ನು ಕಾಯುತ್ತಾ ಕೂತಿಲ್ಲ. ಶೀಘ್ರದಲ್ಲೇ ಸರ್ಕಾರ ರಚಿಸಬೇಕಿದೆ” ಎಂದು ವಿಜಯ ಘೋಷಣೆ ಬಳಿಕ ಮೆರ್ಜ್ ಹೇಳಿದ್ದಾರೆ.

ಬಹುಮತ ಪಡೆಯಲು ಮೆರ್ಜ್ ಅವರು ಮೊದಲು ಎಸ್‌ಪಿಡಿಯನ್ನು ಸಂಪರ್ಕಿಸುವ ಸಾಧ್ಯತೆ ಇದೆ. ಆದರೆ, ಜರ್ಮನಿಯ ಸಾಂಪ್ರದಾಯಿಕ ಕಾರ್ಮಿಕರ ಪಕ್ಷವನ್ನು ಐತಿಹಾಸಿಕವಾಗಿ ಕಳಪೆ ಫಲಿತಾಂಶಕ್ಕೆ ಕೊಂಡೊಯ್ದ ಸ್ಕೋಲ್ಜ್ ಅವರನ್ನು ಹೊರಗಿಟ್ಟು ಮಾತುಕತೆ ನಡೆಯಬಹುದು ಎನ್ನಲಾಗಿದೆ.

ಬಹುಮತ ಪಡೆಯಲು ಸ್ಥಾನಗಳನ್ನು ಪಡೆಯಲು ಮೆರ್ಜ್ ಗ್ರೀನ್ಸ್ ಅನ್ನು ಕೂಡ ಸಂಪರ್ಕಿಸಬಹುದು. ಗ್ರೀನ್ಸ್  ಚುನಾವಣೆಯಲ್ಲಿ ಶೇಖಡ 12 ರಷ್ಟು ಮತಗಳಿಸಿದೆ. ಆದರೆ, ಸಿಡಿಯುನ ಬವೇರಿಯನ್ ಸಹೋದರ ಪಕ್ಷವಾದ ಸಿಎಸ್‌ಯು ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.

ಯುಎಸ್‌ಏಡ್‌ನ 2 ಸಾವಿರ ಉದ್ಯೋಗಿಗಳನ್ನು ವಜಾ ಮಾಡಿದ ಟ್ರಂಪ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...