Homeಅಂತರಾಷ್ಟ್ರೀಯಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್

ಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್

- Advertisement -
- Advertisement -

ಜರ್ಮನಿಯಲ್ಲಿ ಭಾನುವಾರ (ಫೆ.23) ನಡೆದ ರಾಷ್ಟ್ರೀಯ ಚುನಾವಣೆಯಲ್ಲಿ ಫ್ರೆಡ್ರಿಕ್ ಮರ್ಝ್‌  ನೇತೃತ್ವದ ಸಂಪ್ರದಾಯವಾದಿ ಮೈತ್ರಿಕೂಟ ಗೆಲುವು ಸಾಧಿಸಿದೆ. ತೀವ್ರ ಬಲಪಂಥೀಯ ಪಕ್ಷ ಆಲ್ಟರ್ನೇಟಿವ್ ಫಾರ್ ಜರ್ಮನಿ (ಎಎಫ್‌ಡಿ) ಮತ ಗಳಿಕೆಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ.

ಅಂತಿಮ ಮತ ಎಣಿಕೆಯ ಫಲಿತಾಂಶದ ಪ್ರಕಾರ, ಎಎಫ್‌ಡಿ ತನ್ನ ಮತ ಗಳಿಕೆಯನ್ನು ಈ ಬಾರಿ ದ್ವಿಗುಣಗೊಳಿಸಿಕೊಂಡಿದ್ದು, ಶೇ.19.5ರಷ್ಟು ಪಡೆದುಕೊಂಡಿದೆ. ಎಎಫ್‌ಡಿ ಜರ್ಮನಿಯ ನಾಗರಿಕರಲ್ಲಿ ಬಿತ್ತಿದ ವಲಸೆ ಮತ್ತು ಭದ್ರತೆ ಕುರಿತ ಆತಂಕ ಮತಗಳಿಕೆ ಹೆಚ್ಚಿಸಲು ಕಾರಣವಾಗಿದೆ ಎಂದು ವರದಿಗಳು ಹೇಳಿವೆ.

ಮೆರ್ಜ್ ಅವರ ಸಿಡಿಯು/ಸಿಎಸ್‌ಯು ಮೈತ್ರಿಕೂಟ ಶೇ.28.5ರಷ್ಟು ಮತಗಳನ್ನು ಪಡೆದುಕೊಂಡು ಗೆಲುವು ಸಾಧಿಸಿದೆ. ನಿರ್ಗಮಿತ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರ ಸೆಂಟರ್-ಲೆಫ್ಟ್ ಸೋಶಿಯಲ್ ಡೆಮಾಕ್ರೇಟ್ಸ್ (ಎಸ್‌ಪಿಡಿ) ಶೇ.16ರಷ್ಟು ಮಗಳನ್ನು ಮಾತ್ರ ಗಳಿಸಲು ಸಫಲವಾಗಿದೆ.

ಮಾಜಿ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಅವರ ಪಕ್ಷದ ದೀರ್ಘಕಾಲದ ಪ್ರತಿಸ್ಪರ್ಧಿ ಮೆರ್ಜ್, ಅಕ್ರಮ ವಲಸೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ತನ್ನ ಕರಾಳ ನಾಜಿ ಇತಿಹಾಸಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಇನ್ನೂ ಪ್ರಯತ್ನಿಸುತ್ತಿರುವ ದೇಶದಲ್ಲಿ ಎಎಫ್‌ಡಿಯ ಮತಗಳಿಕೆ ಎಲ್ಲರನ್ನು ಆಶ್ವರ್ಯಗೊಳಿಸಿದೆ. ಏಕೆಂದರೆ, ಸಿಡಿಯು/ಸಿಎಎಸ್‌ಯು ಸೇರಿದಂತೆ ಎಲ್ಲಾ ಪಕ್ಷಗಳು ಎಎಫ್‌ಡಿ ಹೆಚ್ಚು ಮತಗಳಿಸದಂತೆ ತಡೆಯಲು ಪ್ರಯತ್ನಿಸಿತ್ತು.

ಸದ್ಯಕ್ಕೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಮಿತ್ರಪಕ್ಷಗಳ ಬೆಂಬಲವನ್ನು ಹೊಂದಿರುವ ಎಎಫ್‌ಡಿ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಲು ಸಜ್ಜಾಗಿದೆ. ಇತರ ಎಲ್ಲಾ ಪಕ್ಷಗಳು ಅದನ್ನು ಅಧಿಕಾರದಿಂದ ದೂರವಿಡುವ ಪ್ರತಿಜ್ಞೆ ಮಾಡಿತ್ತು.

ಆದರೆ, ಎಎಫ್‌ಡಿ ನಾಯಕಿ ಆಲಿಸ್ ವೀಡೆಲ್ ಐತಿಹಾಸಿಕ ಫಲಿತಾಂಶವನ್ನು ಶ್ಲಾಘಿಸಿದ್ದು, ನಮ್ಮ ಪಕ್ಷ ಸಿಡಿಯು/ಸಿಎಸ್‌ಯು ಜೊತೆ ಸೇರಿ ಆಡಳಿತ ನಡೆಸಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ಈಗ ಉಸ್ತುವಾರಿ ಚಾನ್ಸೆಲರ್ ಆಗಿರುವ ನಿರ್ಗಮಿತ ಸ್ಕೋಲ್ಜ್ ಅವರಿಂದ ಅಧಿಕಾರವಹಿಸಿಕೊಳ್ಳಲಿರುವ ಮೆರ್ಜ್ ಅವರು ಹೊಸ ಸಮ್ಮಿಶ್ರ ಸರ್ಕಾರ ರಚಿಸಬೇಕಿದೆ. ಈಸ್ಟರ್ ವೇಳೆಗೆ ಅವರ ಸರ್ಕಾರ ರಚಿಸುವ ಸಾಧ್ಯತೆ ಇದೆ. ಅದುವರೆಗೆ ಜರ್ಮನಿಯ ಸರ್ಕಾರವಿಲ್ಲದೆ ಮುನ್ನಡೆಯಬೇಕಿದೆ.

“ಸಮ್ಮಿಶ್ರ ಸರ್ಕಾರ ರಚಿಸುವ ಸಂಬಂಧ ಸುದೀರ್ಘ ಮಾತುಕತೆ ಮತ್ತು ವಿಳಂಬ ನೀತಿ ಸರಿಯಲ್ಲ. ಹೊರಗಿನ ಜಗತ್ತು ನಮ್ಮನ್ನು ಕಾಯುತ್ತಾ ಕೂತಿಲ್ಲ. ಶೀಘ್ರದಲ್ಲೇ ಸರ್ಕಾರ ರಚಿಸಬೇಕಿದೆ” ಎಂದು ವಿಜಯ ಘೋಷಣೆ ಬಳಿಕ ಮೆರ್ಜ್ ಹೇಳಿದ್ದಾರೆ.

ಬಹುಮತ ಪಡೆಯಲು ಮೆರ್ಜ್ ಅವರು ಮೊದಲು ಎಸ್‌ಪಿಡಿಯನ್ನು ಸಂಪರ್ಕಿಸುವ ಸಾಧ್ಯತೆ ಇದೆ. ಆದರೆ, ಜರ್ಮನಿಯ ಸಾಂಪ್ರದಾಯಿಕ ಕಾರ್ಮಿಕರ ಪಕ್ಷವನ್ನು ಐತಿಹಾಸಿಕವಾಗಿ ಕಳಪೆ ಫಲಿತಾಂಶಕ್ಕೆ ಕೊಂಡೊಯ್ದ ಸ್ಕೋಲ್ಜ್ ಅವರನ್ನು ಹೊರಗಿಟ್ಟು ಮಾತುಕತೆ ನಡೆಯಬಹುದು ಎನ್ನಲಾಗಿದೆ.

ಬಹುಮತ ಪಡೆಯಲು ಸ್ಥಾನಗಳನ್ನು ಪಡೆಯಲು ಮೆರ್ಜ್ ಗ್ರೀನ್ಸ್ ಅನ್ನು ಕೂಡ ಸಂಪರ್ಕಿಸಬಹುದು. ಗ್ರೀನ್ಸ್  ಚುನಾವಣೆಯಲ್ಲಿ ಶೇಖಡ 12 ರಷ್ಟು ಮತಗಳಿಸಿದೆ. ಆದರೆ, ಸಿಡಿಯುನ ಬವೇರಿಯನ್ ಸಹೋದರ ಪಕ್ಷವಾದ ಸಿಎಸ್‌ಯು ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.

ಯುಎಸ್‌ಏಡ್‌ನ 2 ಸಾವಿರ ಉದ್ಯೋಗಿಗಳನ್ನು ವಜಾ ಮಾಡಿದ ಟ್ರಂಪ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...