Homeದಲಿತ್ ಫೈಲ್ಸ್ಜಾತಿ ದೌರ್ಜನ್ಯ ವಿರೋಧಿಸಿ ಪುಣೆಯಿಂದ ಮುಂಬೈಗೆ ದಲಿತ ಕುಟುಂಬದ ಪಾದಯಾತ್ರೆ

ಜಾತಿ ದೌರ್ಜನ್ಯ ವಿರೋಧಿಸಿ ಪುಣೆಯಿಂದ ಮುಂಬೈಗೆ ದಲಿತ ಕುಟುಂಬದ ಪಾದಯಾತ್ರೆ

- Advertisement -
- Advertisement -

ಕೈಯಲ್ಲಿ ಕೇವಲ ₹70, ನ್ಯಾಯಕ್ಕಾಗಿ ಮನವಿ; 35 ವರ್ಷದ ರತನ್ ತಮ್ಮ ಇಬ್ಬರು ಸಹೋದರಿಯರು ಮತ್ತು ಇಬ್ಬರು ಚಿಕ್ಕ ಮಕ್ಕಳೊಂದಿಗೆ ಪುಣೆಯಿಂದ ಮುಂಬೈಗೆ 150 ಕಿ.ಮೀ.ಗೂ ಹೆಚ್ಚು ನಡೆದುಕೊಂಡು ತಲುಪಿದ್ದಾರೆ. ತಮ್ಮ ಕಷ್ಟದ ಸ್ಥಿತಿಯನ್ನು ವಿವರಿಸುವ ಪೋಸ್ಟರ್‌ಗಳನ್ನು ಹಿಡಿದು, ಫೆಬ್ರವರಿ 7 ರಂದು ತಮ್ಮ ಪ್ರಯಾಣವನ್ನು ಪ್ರಾರಂಭಿಸಿ ಫೆಬ್ರವರಿ 13 ರಂದು ಆಜಾದ್ ಮೈದಾನಕ್ಕೆ ಆಗಮಿಸಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಲು ಬಯಸಿದರು. ಆದರೆ, ಹತ್ತು ದಿನಗಳ ನಂತರವೂ ಅವರು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ.

ಅವರ ಈ ಪಾದಯಾತ್ರೆಯು ಜಾತಿ ಆಧಾರಿತ ಹಿಂಸೆ ಮತ್ತು ಸರ್ಕಾರಿ ಸಾಂಸ್ಥಿಕ ನಿರ್ಲಕ್ಷ್ಯದ ವಿರುದ್ಧವಾಗಿದೆ. ಪಿಂಪ್ರಿ-ಚಿಂಚ್‌ವಾಡ್‌ನ ಥೆರ್‌ಗಾಂವ್ ನಿವಾಸಿಗಳಾದ ರತನ್ ಮತ್ತು ಅವರ ಕುಟುಂಬವು ಮತಂಗ್ (ಮಾಂಗ್) ಸಮುದಾಯಕ್ಕೆ ಸೇರಿದವರು; ಈ ಸಮುದಾಯವು ಐತಿಹಾಸಿಕವಾಗಿ ಅಂಚಿನಲ್ಲಿರುವ ಮತ್ತು ತಾರತಮ್ಯಕ್ಕೆ ಒಳಗಾದ ಪರಿಶಿಷ್ಟ ಜಾತಿಯಾಗಿದೆ. ಎರಡು ವರ್ಷಗಳ ಹಿಂದೆ ರತನ್ ಅವರ 14 ವರ್ಷದ ಮಗ ಕರಣ್ ಮೇಲೆ ಜಾತಿ ನಿಂದನೆ ಮಾಡಿ, ನೆರೆಹೊರೆಯ ಪ್ರಬಲ ಜಾತಿ ವ್ಯಕ್ತಿಗಳು ಕ್ರೂರವಾಗಿ ಹಲ್ಲೆ ನಡೆಸಿದ್ದರು. ಬಳಿಕ, ಅವರ ಕುಟುಂಬಕ್ಕೆ ಸಂಕಷ್ಟ ಪ್ರಾರಂಭವಾಯಿತು.

ಅಂದಿನಿಂದ, ಪದೇಪದೆ ಮೇಲ್ಜಾತಿಯ ವ್ಯಕ್ತಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅವರು ಜಾತಿ ಆಧಾರಿತ ಅವಮಾನಗಳನ್ನು ನಡೆಸಿ, ದೈಹಿಕವಾಗಿ ಹಲ್ಲೆ ಮಾಡಿ, ಅವರ ಜೀವನವನ್ನು ಅಸಹನೀಯವಾಗಿಸಿದ್ದಾರೆ ಎಂದು ಅವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

“ನನ್ನ ಸೋದರಳಿಯನಿಗೆ, ನೀವು ಮಂಗಿಗಳೇ, ಬೆಳಿಗ್ಗೆ ಯಾಕೆ ನಿಮ್ಮ ಮುಖವನ್ನು ತೋರಿಸುತ್ತೀರಿ ಎಂದು ಅವಮಾಣಿಸಲಾಯಿತು” ಎಂದು ರತನ್ ಅವರ ಸಹೋದರಿ 32 ವರ್ಷದ ರೇಷ್ಮಾ ಚೌಹಾಣ್ ಹೇಳಿದರು. “ಅವರು ಯಾವುದೇ ಕಾರಣವಿಲ್ಲದೆ ಜಗಳವಾಡುತ್ತಾರೆ, ಈಗ ನಮಗೆ ಜೀವ ಭಯವಿದೆ” ಎಂದು ಹೇಳಿದರು.

ಸ್ಥಳೀಯ ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಫಲವಾದಾಗ ಕುಟುಂಬದ ತೊಂದರೆಗಳು ಇನ್ನಷ್ಟು ಹೆಚ್ಚಾದವು. ಪಿಂಪ್ರಿ-ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಪೊಲೀಸರಿಗೆ ಹಲವಾರು ದೂರುಗಳನ್ನು ನೀಡಿದ್ದರೂ, ಯಾವುದೇ ಎಫ್‌ಆಐಆರ್‌ ದಾಖಲಾಗಿಲ್ಲ. ಬದಲಾಗಿ, ಆರು ತಿಂಗಳ ಹಿಂದೆ ಯಾವುದೇ ಮುನ್ಸೂಚನೆಯಿಲ್ಲದೆ ನಮ್ಮ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಯಿತು. ಬಾಪುಜಿ ಬುವಾ ದೇವಸ್ಥಾನದ ಬಳಿಯ ಸಾರ್ವಜನಿಕ ತೊಟ್ಟಿಯಿಂದ ನೀರು ತರಲು ಒತ್ತಾಯಿಸಲಾಯಿತು. ನಾವು ಮತ್ತಷ್ಟು ಅವಮಾನವನ್ನು ಎದುರಿಸಿದೆವು, ಸ್ಥಳೀಯರು ನಮ್ಮನ್ನು ಓಡಿಸಲು ನಮ್ಮ ನೀರಿನ ಪಾತ್ರೆಗಳಿಗೆ ಸತ್ತ ಇಲಿಗಳನ್ನು ಎಸೆದರು” ಎಂದು ರೇಷ್ಮಾ ತಾವು ಅನುಭವಿಸುತ್ತಿರುವ ದೌರ್ಜನ್ಯದ ಕುರಿತು ವಿವರಿಸಿದ್ದಾರೆ.

ರತನ್ ಅವರ ಕಿರಿಯ ಸಹೋದರಿ 23 ವರ್ಷದ ಸೋನಮ್ ಲೊಂಡೆ ಮಾತನಾಡಿ, ತಮ್ಮ ಮನೆಗೆ ಬಲವಂತವಾಗಿ ಪ್ರವೇಶಿಸುವುದು ಸೇರಿದಂತೆ ಹಲವು ಭಾರಿ ದೈಹಿಕ ಹಿಂಸೆಯ ಘಟನೆಗಳ ನಂತರ ದೌರ್ಜನ್ಯಗಳನ್ನು ದಾಖಲಿಸಲು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದೇವೆ ಎಂದು ಹೇಳಿದರು. “ದುರದೃಷ್ಟವಶಾತ್, ಅವರು ಕೆಲವು ಅಪರಿಚಿತರೊಂದಿಗೆ ಬಂದು, ಸಿಸಿಟಿವಿಯನ್ನು ಬಟ್ಟೆಯಿಂದ ಮುಚ್ಚಿ, ಕ್ಯಾಮೆರಾದಿಂದ ಮೆಮೊರಿ ಚಿಪ್ ಅನ್ನು ತೆಗೆದರು” ಎಂದು ಅವರು ಹೇಳಿದರು.

ಒಳಚರಂಡಿ ಕಾಮಗಾರಿ ನಮ್ಮ ಆಸ್ತಿಯನ್ನು ಅತಿಕ್ರಮಿಸುತ್ತಿರುವ ಬಗ್ಗೆ ನೆರೆಹೊರೆಯವರಲ್ಲಿ ಒಬ್ಬರನ್ನು ಪ್ರಶ್ನಿಸಿದಾಗ ವಾದವು ಉಲ್ಬಣಗೊಂಡಿತು ಎಂದು ಲೊಂಡೆ ನೆನಪಿಸಿಕೊಂಡರು. “ವಾಕಾಡ್ ಪೊಲೀಸರು ನನ್ನನ್ನು ಠಾಣೆಗೆ ಕರೆದೊಯ್ದು ಒಂದು ರಾತ್ರಿ ಬಂಧನದಲ್ಲಿಟ್ಟರು” ಎಂದು ಅವರು ಹೇಳಿದರು.

“ನಾವು ಇಲ್ಲಿ ವಾಸಿಸುವ ಎರಡನೇ ತಲೆಮಾರಿನವರಾಗಿದ್ದರೂ, ಮಾಲೀಕತ್ವದ ದಾಖಲೆಗಳನ್ನು ತೋರಿಸಲು ನಮ್ಮನ್ನು ಕೇಳಲಾಯಿತು. ಇದು ಜಾತಿ ಆಧಾರಿತ ಹಿಂಸಾಚಾರವನ್ನು ಮುಚ್ಚಿಹಾಕುವ ಪ್ರಯತ್ನವಾಗಿರಬಹುದು ಅಥವಾ ನಮ್ಮಿಂದ ಏನನ್ನಾದರೂ ಪಡೆಯಲು ಜಾತಿ ಆಧಾರಿತ ಘಟನೆಗಳಿಗೆ ನಮ್ಮನ್ನು ಪ್ರಚೋದಿಸಿರಬಹುದು” ಎಂದು ಲೊಂಡೆ ಹೇಳಿದರು.

ಕಳೆದ ನವೆಂಬರ್‌ನಲ್ಲಿ, ಕುಟುಂಬವು ಹೊರಗೆ ಅಡುಗೆ ಮಾಡುತ್ತಿದ್ದಾಗ, ಕಿರುಕುಳ ನೀಡುತಿದ್ದವರು ಪೊಲೀಸರೊಂದಿಗೆ ಬಂದು ಕೂಗಾಡಲು ಪ್ರಾರಂಭಿಸಿದರು ಎಂದು ಆರೋಪಿಸಲಾಗಿದೆ. “ಅವರು ನನ್ನ 10 ವರ್ಷದ ಮಗಳು ನೂತನ್‌ಗೆ ಹೊಡೆದು, ನಾವು ದಾಖಲಿಸಿದ್ದ ಸಾಕ್ಷ್ಯವನ್ನು ಅಳಿಸಲು ನನ್ನ ಫೋನ್ ಕಸಿದುಕೊಂಡರು. ನಮ್ಮ ಮೊಬೈಲ್ ಫೋನ್ ಇನ್ನೂ ಅವರ ಬಳಿಯೇ ಇದೆ” ಎಂದು ರತನ್ ಹೇಳಿದರು.

ಇದರ ನಂತರ, ಸಂತ್ರಸ್ತರು ಆಯುಕ್ತರನ್ನು ಭೇಟಿ ಮಾಡಲು ಪಿಸಿಎಂಸಿ ಕಚೇರಿಗೆ ಹೋದರು. ಆದರೆ, ಅವರು ವಿಫಲರಾದರು ಎಂದು ರತನ್ ಹೇಳಿದರು. “ನಮ್ಮನ್ನು ಕಾಲೇವಾಡಿ ಪೊಲೀಸ್ ಠಾಣೆಗೆ ತೆರಳುವಂತೆ ನಿರ್ದೇಶಿಸಲಾಯಿತು, ಅಲ್ಲಿ ಅಧಿಕಾರಿಗಳು ಬೆಳಿಗ್ಗೆ 11 ಗಂಟೆಯಿಂದ ಮಧ್ಯರಾತ್ರಿಯವರೆಗೆ ಬಂಧಿಸಿ, ನೆಲವನ್ನು ಸ್ವಚ್ಛಗೊಳಿಸಲು ಒತ್ತಾಯಿಸಿ, ಪ್ರಕರಣ ದಾಖಲಿಸದೆ ನಮ್ಮನ್ನು ಕಳುಹಿಸಿದರು” ಎಂದು ರೇಷ್ಮಾ ಆರೋಪಿಸಿದರು.

ಫೆಬ್ರವರಿ 5 ರಂದು, ಪೊಲೀಸ್ ದೂರು ದಾಖಲಿಸಲು ಮತ್ತೊಂದು ವಿಫಲ ಪ್ರಯತ್ನದ ನಂತರ, ಕುಟುಂಬವು ಮರುದಿನ ಪಿಸಿಎಂಸಿ ಆಯುಕ್ತರ ಕಚೇರಿಗೆ ಲಿಖಿತ ದೂರು ಸಲ್ಲಿಸಿತು. ಯಾವುದೇ ಆಯ್ಕೆಗಳು ಉಳಿದಿಲ್ಲದ ಕಾರಣ, ಅವರು ನ್ಯಾಯಕ್ಕಾಗಿ ಮುಂಬೈಗೆ ಮೆರವಣಿಗೆ ನಡೆಸಲು ನಿರ್ಧರಿಸಿದರು.

ಇದನ್ನೂ ಓದಿ; ಉತ್ತರ ಪ್ರದೇಶ| ದಲಿತರ ಮದುವೆ ಮೆರವಣಿಗೆಯ ಮೇಲೆ ದಾಳಿ ನಡೆಸಿದ 8 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...