Homeದಲಿತ್ ಫೈಲ್ಸ್ಜಾತಿ ದೌರ್ಜನ್ಯ ವಿರೋಧಿಸಿ ಪುಣೆಯಿಂದ ಮುಂಬೈಗೆ ದಲಿತ ಕುಟುಂಬದ ಪಾದಯಾತ್ರೆ

ಜಾತಿ ದೌರ್ಜನ್ಯ ವಿರೋಧಿಸಿ ಪುಣೆಯಿಂದ ಮುಂಬೈಗೆ ದಲಿತ ಕುಟುಂಬದ ಪಾದಯಾತ್ರೆ

- Advertisement -
- Advertisement -

ಕೈಯಲ್ಲಿ ಕೇವಲ ₹70, ನ್ಯಾಯಕ್ಕಾಗಿ ಮನವಿ; 35 ವರ್ಷದ ರತನ್ ತಮ್ಮ ಇಬ್ಬರು ಸಹೋದರಿಯರು ಮತ್ತು ಇಬ್ಬರು ಚಿಕ್ಕ ಮಕ್ಕಳೊಂದಿಗೆ ಪುಣೆಯಿಂದ ಮುಂಬೈಗೆ 150 ಕಿ.ಮೀ.ಗೂ ಹೆಚ್ಚು ನಡೆದುಕೊಂಡು ತಲುಪಿದ್ದಾರೆ. ತಮ್ಮ ಕಷ್ಟದ ಸ್ಥಿತಿಯನ್ನು ವಿವರಿಸುವ ಪೋಸ್ಟರ್‌ಗಳನ್ನು ಹಿಡಿದು, ಫೆಬ್ರವರಿ 7 ರಂದು ತಮ್ಮ ಪ್ರಯಾಣವನ್ನು ಪ್ರಾರಂಭಿಸಿ ಫೆಬ್ರವರಿ 13 ರಂದು ಆಜಾದ್ ಮೈದಾನಕ್ಕೆ ಆಗಮಿಸಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಲು ಬಯಸಿದರು. ಆದರೆ, ಹತ್ತು ದಿನಗಳ ನಂತರವೂ ಅವರು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ.

ಅವರ ಈ ಪಾದಯಾತ್ರೆಯು ಜಾತಿ ಆಧಾರಿತ ಹಿಂಸೆ ಮತ್ತು ಸರ್ಕಾರಿ ಸಾಂಸ್ಥಿಕ ನಿರ್ಲಕ್ಷ್ಯದ ವಿರುದ್ಧವಾಗಿದೆ. ಪಿಂಪ್ರಿ-ಚಿಂಚ್‌ವಾಡ್‌ನ ಥೆರ್‌ಗಾಂವ್ ನಿವಾಸಿಗಳಾದ ರತನ್ ಮತ್ತು ಅವರ ಕುಟುಂಬವು ಮತಂಗ್ (ಮಾಂಗ್) ಸಮುದಾಯಕ್ಕೆ ಸೇರಿದವರು; ಈ ಸಮುದಾಯವು ಐತಿಹಾಸಿಕವಾಗಿ ಅಂಚಿನಲ್ಲಿರುವ ಮತ್ತು ತಾರತಮ್ಯಕ್ಕೆ ಒಳಗಾದ ಪರಿಶಿಷ್ಟ ಜಾತಿಯಾಗಿದೆ. ಎರಡು ವರ್ಷಗಳ ಹಿಂದೆ ರತನ್ ಅವರ 14 ವರ್ಷದ ಮಗ ಕರಣ್ ಮೇಲೆ ಜಾತಿ ನಿಂದನೆ ಮಾಡಿ, ನೆರೆಹೊರೆಯ ಪ್ರಬಲ ಜಾತಿ ವ್ಯಕ್ತಿಗಳು ಕ್ರೂರವಾಗಿ ಹಲ್ಲೆ ನಡೆಸಿದ್ದರು. ಬಳಿಕ, ಅವರ ಕುಟುಂಬಕ್ಕೆ ಸಂಕಷ್ಟ ಪ್ರಾರಂಭವಾಯಿತು.

ಅಂದಿನಿಂದ, ಪದೇಪದೆ ಮೇಲ್ಜಾತಿಯ ವ್ಯಕ್ತಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅವರು ಜಾತಿ ಆಧಾರಿತ ಅವಮಾನಗಳನ್ನು ನಡೆಸಿ, ದೈಹಿಕವಾಗಿ ಹಲ್ಲೆ ಮಾಡಿ, ಅವರ ಜೀವನವನ್ನು ಅಸಹನೀಯವಾಗಿಸಿದ್ದಾರೆ ಎಂದು ಅವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

“ನನ್ನ ಸೋದರಳಿಯನಿಗೆ, ನೀವು ಮಂಗಿಗಳೇ, ಬೆಳಿಗ್ಗೆ ಯಾಕೆ ನಿಮ್ಮ ಮುಖವನ್ನು ತೋರಿಸುತ್ತೀರಿ ಎಂದು ಅವಮಾಣಿಸಲಾಯಿತು” ಎಂದು ರತನ್ ಅವರ ಸಹೋದರಿ 32 ವರ್ಷದ ರೇಷ್ಮಾ ಚೌಹಾಣ್ ಹೇಳಿದರು. “ಅವರು ಯಾವುದೇ ಕಾರಣವಿಲ್ಲದೆ ಜಗಳವಾಡುತ್ತಾರೆ, ಈಗ ನಮಗೆ ಜೀವ ಭಯವಿದೆ” ಎಂದು ಹೇಳಿದರು.

ಸ್ಥಳೀಯ ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಫಲವಾದಾಗ ಕುಟುಂಬದ ತೊಂದರೆಗಳು ಇನ್ನಷ್ಟು ಹೆಚ್ಚಾದವು. ಪಿಂಪ್ರಿ-ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಪೊಲೀಸರಿಗೆ ಹಲವಾರು ದೂರುಗಳನ್ನು ನೀಡಿದ್ದರೂ, ಯಾವುದೇ ಎಫ್‌ಆಐಆರ್‌ ದಾಖಲಾಗಿಲ್ಲ. ಬದಲಾಗಿ, ಆರು ತಿಂಗಳ ಹಿಂದೆ ಯಾವುದೇ ಮುನ್ಸೂಚನೆಯಿಲ್ಲದೆ ನಮ್ಮ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಯಿತು. ಬಾಪುಜಿ ಬುವಾ ದೇವಸ್ಥಾನದ ಬಳಿಯ ಸಾರ್ವಜನಿಕ ತೊಟ್ಟಿಯಿಂದ ನೀರು ತರಲು ಒತ್ತಾಯಿಸಲಾಯಿತು. ನಾವು ಮತ್ತಷ್ಟು ಅವಮಾನವನ್ನು ಎದುರಿಸಿದೆವು, ಸ್ಥಳೀಯರು ನಮ್ಮನ್ನು ಓಡಿಸಲು ನಮ್ಮ ನೀರಿನ ಪಾತ್ರೆಗಳಿಗೆ ಸತ್ತ ಇಲಿಗಳನ್ನು ಎಸೆದರು” ಎಂದು ರೇಷ್ಮಾ ತಾವು ಅನುಭವಿಸುತ್ತಿರುವ ದೌರ್ಜನ್ಯದ ಕುರಿತು ವಿವರಿಸಿದ್ದಾರೆ.

ರತನ್ ಅವರ ಕಿರಿಯ ಸಹೋದರಿ 23 ವರ್ಷದ ಸೋನಮ್ ಲೊಂಡೆ ಮಾತನಾಡಿ, ತಮ್ಮ ಮನೆಗೆ ಬಲವಂತವಾಗಿ ಪ್ರವೇಶಿಸುವುದು ಸೇರಿದಂತೆ ಹಲವು ಭಾರಿ ದೈಹಿಕ ಹಿಂಸೆಯ ಘಟನೆಗಳ ನಂತರ ದೌರ್ಜನ್ಯಗಳನ್ನು ದಾಖಲಿಸಲು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದೇವೆ ಎಂದು ಹೇಳಿದರು. “ದುರದೃಷ್ಟವಶಾತ್, ಅವರು ಕೆಲವು ಅಪರಿಚಿತರೊಂದಿಗೆ ಬಂದು, ಸಿಸಿಟಿವಿಯನ್ನು ಬಟ್ಟೆಯಿಂದ ಮುಚ್ಚಿ, ಕ್ಯಾಮೆರಾದಿಂದ ಮೆಮೊರಿ ಚಿಪ್ ಅನ್ನು ತೆಗೆದರು” ಎಂದು ಅವರು ಹೇಳಿದರು.

ಒಳಚರಂಡಿ ಕಾಮಗಾರಿ ನಮ್ಮ ಆಸ್ತಿಯನ್ನು ಅತಿಕ್ರಮಿಸುತ್ತಿರುವ ಬಗ್ಗೆ ನೆರೆಹೊರೆಯವರಲ್ಲಿ ಒಬ್ಬರನ್ನು ಪ್ರಶ್ನಿಸಿದಾಗ ವಾದವು ಉಲ್ಬಣಗೊಂಡಿತು ಎಂದು ಲೊಂಡೆ ನೆನಪಿಸಿಕೊಂಡರು. “ವಾಕಾಡ್ ಪೊಲೀಸರು ನನ್ನನ್ನು ಠಾಣೆಗೆ ಕರೆದೊಯ್ದು ಒಂದು ರಾತ್ರಿ ಬಂಧನದಲ್ಲಿಟ್ಟರು” ಎಂದು ಅವರು ಹೇಳಿದರು.

“ನಾವು ಇಲ್ಲಿ ವಾಸಿಸುವ ಎರಡನೇ ತಲೆಮಾರಿನವರಾಗಿದ್ದರೂ, ಮಾಲೀಕತ್ವದ ದಾಖಲೆಗಳನ್ನು ತೋರಿಸಲು ನಮ್ಮನ್ನು ಕೇಳಲಾಯಿತು. ಇದು ಜಾತಿ ಆಧಾರಿತ ಹಿಂಸಾಚಾರವನ್ನು ಮುಚ್ಚಿಹಾಕುವ ಪ್ರಯತ್ನವಾಗಿರಬಹುದು ಅಥವಾ ನಮ್ಮಿಂದ ಏನನ್ನಾದರೂ ಪಡೆಯಲು ಜಾತಿ ಆಧಾರಿತ ಘಟನೆಗಳಿಗೆ ನಮ್ಮನ್ನು ಪ್ರಚೋದಿಸಿರಬಹುದು” ಎಂದು ಲೊಂಡೆ ಹೇಳಿದರು.

ಕಳೆದ ನವೆಂಬರ್‌ನಲ್ಲಿ, ಕುಟುಂಬವು ಹೊರಗೆ ಅಡುಗೆ ಮಾಡುತ್ತಿದ್ದಾಗ, ಕಿರುಕುಳ ನೀಡುತಿದ್ದವರು ಪೊಲೀಸರೊಂದಿಗೆ ಬಂದು ಕೂಗಾಡಲು ಪ್ರಾರಂಭಿಸಿದರು ಎಂದು ಆರೋಪಿಸಲಾಗಿದೆ. “ಅವರು ನನ್ನ 10 ವರ್ಷದ ಮಗಳು ನೂತನ್‌ಗೆ ಹೊಡೆದು, ನಾವು ದಾಖಲಿಸಿದ್ದ ಸಾಕ್ಷ್ಯವನ್ನು ಅಳಿಸಲು ನನ್ನ ಫೋನ್ ಕಸಿದುಕೊಂಡರು. ನಮ್ಮ ಮೊಬೈಲ್ ಫೋನ್ ಇನ್ನೂ ಅವರ ಬಳಿಯೇ ಇದೆ” ಎಂದು ರತನ್ ಹೇಳಿದರು.

ಇದರ ನಂತರ, ಸಂತ್ರಸ್ತರು ಆಯುಕ್ತರನ್ನು ಭೇಟಿ ಮಾಡಲು ಪಿಸಿಎಂಸಿ ಕಚೇರಿಗೆ ಹೋದರು. ಆದರೆ, ಅವರು ವಿಫಲರಾದರು ಎಂದು ರತನ್ ಹೇಳಿದರು. “ನಮ್ಮನ್ನು ಕಾಲೇವಾಡಿ ಪೊಲೀಸ್ ಠಾಣೆಗೆ ತೆರಳುವಂತೆ ನಿರ್ದೇಶಿಸಲಾಯಿತು, ಅಲ್ಲಿ ಅಧಿಕಾರಿಗಳು ಬೆಳಿಗ್ಗೆ 11 ಗಂಟೆಯಿಂದ ಮಧ್ಯರಾತ್ರಿಯವರೆಗೆ ಬಂಧಿಸಿ, ನೆಲವನ್ನು ಸ್ವಚ್ಛಗೊಳಿಸಲು ಒತ್ತಾಯಿಸಿ, ಪ್ರಕರಣ ದಾಖಲಿಸದೆ ನಮ್ಮನ್ನು ಕಳುಹಿಸಿದರು” ಎಂದು ರೇಷ್ಮಾ ಆರೋಪಿಸಿದರು.

ಫೆಬ್ರವರಿ 5 ರಂದು, ಪೊಲೀಸ್ ದೂರು ದಾಖಲಿಸಲು ಮತ್ತೊಂದು ವಿಫಲ ಪ್ರಯತ್ನದ ನಂತರ, ಕುಟುಂಬವು ಮರುದಿನ ಪಿಸಿಎಂಸಿ ಆಯುಕ್ತರ ಕಚೇರಿಗೆ ಲಿಖಿತ ದೂರು ಸಲ್ಲಿಸಿತು. ಯಾವುದೇ ಆಯ್ಕೆಗಳು ಉಳಿದಿಲ್ಲದ ಕಾರಣ, ಅವರು ನ್ಯಾಯಕ್ಕಾಗಿ ಮುಂಬೈಗೆ ಮೆರವಣಿಗೆ ನಡೆಸಲು ನಿರ್ಧರಿಸಿದರು.

ಇದನ್ನೂ ಓದಿ; ಉತ್ತರ ಪ್ರದೇಶ| ದಲಿತರ ಮದುವೆ ಮೆರವಣಿಗೆಯ ಮೇಲೆ ದಾಳಿ ನಡೆಸಿದ 8 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...