Homeಕರ್ನಾಟಕ'ಮೈಸೂರು ಚಲೋ' ಮೆರವಣಿಗೆಗೆ ಹೈಕೋರ್ಟ್‌ ನಕಾರ : ಒಂದೂವರೆ ತಾಸು ಸಮಾವೇಶ ನಡೆಸಲು ಅನುಮತಿ

‘ಮೈಸೂರು ಚಲೋ’ ಮೆರವಣಿಗೆಗೆ ಹೈಕೋರ್ಟ್‌ ನಕಾರ : ಒಂದೂವರೆ ತಾಸು ಸಮಾವೇಶ ನಡೆಸಲು ಅನುಮತಿ

- Advertisement -
- Advertisement -

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಖಂಡಿಸಿ ಮೈಸೂರು ಚಲೋ ಮೆರವಣಿಗೆ ನಡೆಸಲು ಹೈಕೋರ್ಟ್ ಅನುಮತಿ ನಿರಾಕರಿಸಿದ್ದು, ಪುಟ್‌ಬಾಲ್ ಕ್ರೀಡಾಂಗಣದಲ್ಲಿ ಒಂದೂವರೆ ತಾಸು ಸಮಾವೇಶ ನಡೆಸಲು ಮಾತ್ರ ಷರತ್ತುಬದ್ದ ಅನುಮತಿ ನೀಡಿದೆ ಎಂದು ವರದಿಯಾಗಿದೆ.

ಮೈಸೂರು ಚಲೋಗೆ ಅನುಮತಿ ನಿರಾಕರಿಸಿದ್ದ ನಗರ ಪೊಲೀಸ್‌ ಆಯುಕ್ತರ ಕ್ರಮ ಪ್ರಶ್ನಿಸಿ ರಾಷ್ಟ್ರೀಯ ಸುರಕ್ಷಾ ಜನಾಂದೋಲನಾ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್‌. ದೇವದಾಸ್‌ ಅವರ ಏಕಸದಸ್ಯ ಪೀಠ ಸೋಮವಾರ (ಫೆ.24) ವಿಚಾರಣೆ ನಡೆಸಿದೆ.

ಮೈಸೂರಿನ ಫುಟ್‌ಬಾಲ್‌ ಕ್ರೀಡಾಂಗಣದ ವ್ಯಾಪ್ತಿಯಲ್ಲಿ ಅರ್ಜಿದಾರರು ಸಭೆ/ಸಮಾವೇಶ ನಡೆಸಬಹುದು. ಇದಕ್ಕೆ 1 ಲಕ್ಷ ರೂಪಾಯಿ ಮೌಲ್ಯದ ಬಾಂಡ್‌ ಅನ್ನು ಮೈಸೂರು ಪೊಲೀಸ್‌ ಆಯುಕ್ತರಿಗೆ ಒದಗಿಸಬೇಕು. ಸಮಾವೇಶದಲ್ಲಿ ಭಾಗಿಯಾಗುವ ಯಾರೂ ಪ್ರಚೋದನಾಕಾರಿ ಭಾಷಣ ಮಾಡದಂತೆ ಅರ್ಜಿದಾರರು ಖಾತರಿವಹಿಸಬೇಕು. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದರೆ ಅರ್ಜಿದಾರರನ್ನು ಹೊಣೆಗಾರರನ್ನಾಗಿಸಲಾಗುವುದು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಇಂದು (ಫೆ.24) ಬೆಳಿಗ್ಗೆ ಮೈಸೂರು ಚಲೋ ನಡೆಸಲು ರಾಷ್ಟ್ರೀಯ ಸುರಕ್ಷಾ ಜನಾಂದೋಲನಾ ಸಮಿತಿ ಮುಂದಾಗಿತ್ತು. ಆದರೆ, ನಿಷೇಧಾಜ್ಞೆ ಜಾರಿಗೊಳಿಸಿದ್ದ ಪೊಲೀಸರು ಮೆರವಣಿಗೆ, ಸಭೆಗೆ ಅನುಮತಿ ನಿರಾಕರಿಸಿದ್ದರು. ಆದರೆ, ಮಧ್ಯಾಹ್ನ 3:30ರ ಬಳಿಕ ಒಂದೂವರೆ ತಾಸು ಸಭೆ ನಡೆಸಲು ನ್ಯಾಯಾಲಯ ಅನುಮತಿ ನೀಡಿದೆ ಎಂದು ವರದಿ ಹೇಳಿದೆ.

ಮೈಸೂರು ಪೊಲೀಸ್‌ ಆಯುಕ್ತರು ಫುಟ್‌ಬಾಲ್‌ ಕ್ರೀಡಾಂಗಣ ವ್ಯಾಪ್ತಿಯಲ್ಲಿ ಅಗತ್ಯ ಬಂದೋಬಸ್ತ್‌ ಮಾಡಬೇಕು. ಇಡೀ ಸಭೆಯನ್ನು ವಿಡಿಯೋ ಚಿತ್ರೀಕರಣ ಮಾಡಬೇಕು. ಸೀಮಿತ ಅವಧಿಗೆ ನಿಷೇಧಾಜ್ಞೆ ಹಿಂಪಡೆಯಬೇಕು ಎಂದು ನ್ಯಾಯಾಲಯವು ನಿರ್ದೇಶಿಸಿದೆ. ಅರ್ಜಿ ಇತ್ಯರ್ಥಪಡಿಸಿದೆ ಎಂದು ವರದಿ ವಿವರಿಸಿದೆ.

ಇಂದು ವಿಚಾರಣೆ ವೇಳೆ ಅರ್ಜಿದಾರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಎಂ ಅರುಣ ಶ್ಯಾಮ್‌ ಅವರು “ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಜಿಹಾದಿ ಮನಸ್ಥಿತಿಯವರು ಹಲ್ಲೆ ನಡೆಸಿದ್ದಾರೆ. ಪೊಲೀಸರಿಗೆ ಬೆಂಬಲ ಸೂಚಿಸುವ ದೃಷ್ಟಿಯಿಂದ ಮೈಸೂರಿನ ಗನ್‌ ಹೌಸ್‌ನಿಂದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ ಶಾಂತಿಯುತವಾಗಿ ಮೈಸೂರು ಚಲೋ ನಡೆಲು ಅನುಮತಿಸುವ ಮೂಲಕ ಅರ್ಜಿದಾರರ ಮೂಲಭೂತ ಹಕ್ಕು ರಕ್ಷಿಸಬೇಕು” ಎಂದು ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು “ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದೆ. ಒಂದು ವಾರ ಅಥವಾ 10 ದಿನಗಳ ಬಳಿಕ ಅರ್ಜಿದಾರರು ಸಭೆ/ಮೆರವಣಿಗೆ ನಡೆಸಬಹುದಾಗಿದೆ. ಈಗಾಗಲೇ ಸಭೆ ನಡೆಸಲು ಅನುಮತಿ ಕೋರಿ ಸಲ್ಲಿಸಿದ್ದಎರಡು ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಗೆ ಅಡ್ಡಿಯಾಗುವ ಸಾಧ್ಯತೆ ಇರುವುದರಿಂದ ಹಾಗೂ ಅಹಿತರಕರ ಘಟನೆ ನಡೆದರೆ ಅರ್ಜಿದಾರರನ್ನು ಹೊಣೆ ಮಾಡಲಾಗದು. ಹೀಗಾಗಿ, ಅನುಮತಿ ನೀಡಬಾರದು” ಎಂದಿದ್ದಾರೆ.

ಅರ್ಜಿದಾರರಿಗೆ ಸಭೆ ನಡೆಸಲು ಅನುಮತಿಸುವ ಮತ್ತು ಕಾನೂನು ಸುವ್ಯವಸ್ಥೆ ಪರಿಸ್ಥಿತಿಯ ಕುರಿತು ಸಾಕಷ್ಟು ಯೋಚಿಸಿದ ನ್ಯಾಯಾಲಯ ರಾಜ್ಯ ಸರ್ಕಾರ ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ಸಭೆ ನಡೆಸಲು ಅನುಮತಿಸುವ ಸಂಬಂಧ ಸೂಚನೆ ಪಡೆಯಲು ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ (ಎಎಜಿ) ಭಾನುಪ್ರಕಾಶ್ ಅವರಿಗೆ ಸೂಚಿಸಿತ್ತು. ಇದರ ಆಧಾರದಲ್ಲಿ ನ್ಯಾಯಾಲಯಕ್ಕೆ ಮಾಹಿತಿ ಒದಗಿಸಿದ ಎಎಜಿ ಅವರು ಫುಟ್‌ಬಾಲ್‌ ಕ್ರೀಡಾಂಗಣದಲ್ಲಿ ಅತ್ಯಂತ ಕಡಿಮೆ ಸಂಖ್ಯೆಯ ಜನರೊಂದಿಗೆ ಸಭೆ ಮಾಡಲು ಅನುಮತಿಸಬಹುದು” ಎಂದಿದ್ದಾರೆ.

ಇದನ್ನು ಆಲಿಸಿದ ಪೀಠವು ಅರ್ಜಿದಾರರ ನಿರಂತರ ಕೋರಿಕೆಯ ಮೇರೆಗೆ ಸೀಮಿತ ಅವಧಿಗೆ ಸಭೆ/ಸಮಾವೇಶ ನಡೆಸಲು ಷರತ್ತುಗಳನ್ನು ವಿಧಿಸಿ, ಅನುಮತಿಸಿದೆ ಎಂದು ಬಾರ್ & ಬೆಂಚ್ ವರದಿ ತಿಳಿಸಿದೆ.

ಕೆಎಸ್‌ಆರ್‌ಟಿಸಿ ಕಂಡಕ್ಟರ್ ಹಲ್ಲೆ ಪ್ರಕರಣ | ಆರೋಪಿ ವಿರುದ್ಧ ಗೂಂಡಾ ಕಾಯ್ದೆ: ಸಚಿವ ರಾಮಲಿಂಗಾ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...