Homeಕರ್ನಾಟಕಬಲ್ದೋಟಾ ಸ್ಟೀಲ್‌ ಕಾರ್ಖಾನೆ ವಿರುದ್ಧ ಕೊಪ್ಪಳ ಬಂದ್‌ ಯಶಸ್ವಿ

ಬಲ್ದೋಟಾ ಸ್ಟೀಲ್‌ ಕಾರ್ಖಾನೆ ವಿರುದ್ಧ ಕೊಪ್ಪಳ ಬಂದ್‌ ಯಶಸ್ವಿ

- Advertisement -
- Advertisement -

ಕೊಪ್ಪಳ ಜಿಲ್ಲಾ ಕೇಂದ್ರದ ಸಮೀಪವೇ ಬಲ್ಲೋಟಾ ಸ್ಟೀಲ್ ಮತ್ತು ಪವರ್ ಲಿಮಿಟೆಡ್ (ಬಿಎಸ್‌ಪಿಎಲ್) ಕಂಪನಿಯು 1.50 ಕೋಟಿ ಟನ್ ಉತ್ಪಾದನಾ ಸಾಮರ್ಥ್ಯದ ಇಂಟಿಗ್ರೇಟೆಡ್ ಉಕ್ಕಿನ ಕಾರ್ಖಾನೆ ಸ್ಥಾಪನೆ ಮಾಡಲು ಮುಂದಾಗಿರುವುದನ್ನು ವಿರೋಧಿಸಿ ಕೊಪ್ಪಳ ತಾಲ್ಲೂಕು ಪರಿಸರ ಹಿತರಕ್ಷಣಾ ವೇದಿಕೆ ಕರೆ ನೀಡಿದ್ದ ಕೊಪ್ಪಳ ಬಂದ್ ಸೋಮವಾರ ಯಶಸ್ವಿಯಾಗಿದೆ. ಬಲ್ದೋಟಾ ಸ್ಟೀಲ್‌ ಕಾರ್ಖಾನೆ

ಬಂದ್ ಪರಿಣಾಮ ಅಂಗಡಿಗಳು ಬಂದ್ ಆಗಿದ್ದು, ಕೊಪ್ಪಳ ಮಾರುಕಟ್ಟೆ ಬಿಕೋ ಎನ್ನುತ್ತಿತ್ತು. ಮುನ್ನೆಚ್ಚರಿಕೆಯ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ವಕೀಲರು ಕೋರ್ಟ್‌ ಕಲಾಪಗಳನ್ನು ಬಹಿಷ್ಕರಿಸಿದ್ದರು. ನಗರದ ಲೇಬ‌ರ್ ವೃತ್ತ, ಜವಾಹರ ರಸ್ತೆ, ಗಂಜ್ ಸರ್ಕಲ್, ಅಶೋಕ ಸರ್ಕಲ್‌ನಲ್ಲಿ ಜನ ಓಡಾಟವಿಲ್ಲದೆ ಬಣಗುಟ್ಟುತ್ತಿತ್ತು. ಬಲ್ದೋಟಾ ಸ್ಟೀಲ್‌ ಕಾರ್ಖಾನೆ

ಬಂದ್ ಹಿನ್ನಲೆ, ಗವಿಮಠದ ಎದುರಿನ ಕ್ರೀಡಾಂಗಣದಿಂದ ಮೆರವಣಿಗೆ ಆರಂಭವಾಗಿ ತಾಲ್ಲೂಕು ಕ್ರೀಡಾಂಗಣದಲ್ಲಿ ಬಹಿರಂಗ ಸಭೆ ನಡೆಯಿತು. ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಸೇರಿದಂತೆ ಎಲ್ಲ ಧರ್ಮಗಳ ಗುರುಗಳು, ಎಲ್ಲ ಪಕ್ಷಗಳ ಜನಪ್ರತಿನಿಧಿಗಳು ಮತ್ತು ಬೆಂಬಲ ನೀಡಿರುವ ನೂರಕ್ಕೂ ಹೆಚ್ಚು ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಗವಿಮಠದ ಆವರಣದಲ್ಲಿ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಜಾಥಾಕ್ಕೆ ಚಾಲನೆ ನೀಡಿದ್ದರು. ಗವಿಮಠ ಆವರಣ ಗಡಿಯಾರ ಕಂಬ, ಜವಾಹರ ರಸ್ತೆ ಹಾಗೂ ಅಶೋಕ ಸರ್ಕಲ್ ಮೂಲಕ ತಾಲ್ಲೂಕು ಕ್ರೀಡಾಂಗಣದ ತನಕ ಜಾಥಾ ಜರುಗಿತು. ಕಾರ್ಖಾನೆ ಓಡಿಸಿ ಕೊಪ್ಪಳ ಉಳಿಸಿ, ದೂಳು ಮುಕ್ತ ಕೊಪ್ಪಳ ನಮ್ಮ ಗುರಿ ಎನ್ನುವ ಘೋಷಣೆಗಳನ್ನು ಜಾಥಾದಲ್ಲಿ ಪಾಲ್ಗೊಂಡಿದ್ದ ವಿವಿಧ ಸಂಘ ಸಂಸ್ಥೆಗಳ ಮುಖಂಡರು, ರಾಜಕೀಯ ಪಕ್ಷಗಳ ನಾಯಕರು ಹಾಗೂ ಹಲವು ಧರ್ಮಗಳ ಗುರುಗಳು ಕೂಗಿದರು.

ಬಂದ್ ಹಿನ್ನೆಲೆಯಲ್ಲಿ ನಗರದ ವಕೀಲರು ನ್ಯಾಯಾಲಯದ ಕಲಾಪದಿಂದ ದೂರ ಉಳಿದು ಬಂದ್ ಗೆ ಬೆಂಬಲ ಸೂಚಿಸಿದರು. ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ, ಸಂಸದ ರಾಜಶೇಖರ ಹಿಟ್ನಾಳ, ಬಿಜೆಪಿ ಶಾಸಕ ಜನಾರ್ದನ ರೆಡ್ಡಿ, ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖ‌ರ್, ವಿಧಾನ ಪರಿಷತ್‌ ಸದಸ್ಯೆ ಹೇಮಲತಾ ನಾಯಕ, ಮಾಜಿ ಸಂಸದ ಸಂಗಣ್ಣ ಕರಡಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾಂಟರ್ ಸೇರಿದಂತೆ ಎಲ್ಲ ಪಕ್ಷಗಳ ಮುಖಂಡರು ಪಾಲ್ಗೊಂಡಿದ್ದರು ಎಂದು ಕನ್ನಡ ಪ್ಲಾನೆಟ್ ವರದಿ ಮಾಡಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಜಿಪಂ, ತಾಪಂ ಚುನಾವಣೆಗಳವರೆಗೆ ನಾಯಕತ್ವ ಬದಲಾವಣೆ ಅಸಂಭವ: ಟಿ.ಬಿ. ಜಯಚಂದ್ರ

ಜಿಪಂ, ತಾಪಂ ಚುನಾವಣೆಗಳವರೆಗೆ ನಾಯಕತ್ವ ಬದಲಾವಣೆ ಅಸಂಭವ: ಟಿ.ಬಿ. ಜಯಚಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...