Homeಮುಖಪುಟಗುಜರಾತ್‌ | 2 ವರ್ಷಗಳಲ್ಲಿ ನಿಯಮ ಉಲ್ಲಂಘಿಸಿದ 55 ಆಸ್ಪತ್ರೆಗಳು ಕಪ್ಪುಪಟ್ಟಿಗೆ

ಗುಜರಾತ್‌ | 2 ವರ್ಷಗಳಲ್ಲಿ ನಿಯಮ ಉಲ್ಲಂಘಿಸಿದ 55 ಆಸ್ಪತ್ರೆಗಳು ಕಪ್ಪುಪಟ್ಟಿಗೆ

- Advertisement -
- Advertisement -

ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಆಯುಷ್ಮಾನ್ ಭಾರತ್ (ಪಿಎಂ ಜಯ್ ಆಯುಷ್ಮಾನ್ ಭಾರತ್) ಯೋಜನೆ ಅಡಿಯಲ್ಲಿ ನಿಯಮಗಳನ್ನು ಪಾಲಿಸದ 55 ಆಸ್ಪತ್ರೆಗಳನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಗುಜರಾತ್‌ ಸರ್ಕಾರ ವಿಧಾನಸಭೆಯಲ್ಲಿ ಸೋಮವಾರ ಒಪ್ಪಿಕೊಂಡಿದೆ. 32 ಆಸ್ಪತ್ರೆಗಳನ್ನು 2023 ರಲ್ಲಿ ಮತ್ತು 23 ಆಸ್ಪತ್ರೆಗಳನ್ನು 2024 ರಲ್ಲಿ ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ವಿರೋಧ ಪಕ್ಷದ ನಾಯಕ ಅಮಿತ್ ಚಾವ್ಡಾ ಅವರ ಪ್ರಶ್ನೆಗೆ ಉತ್ತರಿಸಿದ ಸರ್ಕಾರ, ಕ್ರಮ ಎದುರಿಸಿದ ನಂತರ ಕಾರ್ಯಾಚರಣೆಯನ್ನು ಪುನರಾರಂಭಿಸಲು 19 ಆಸ್ಪತ್ರೆಗಳು ಮತ್ತೆ ಅನುಮೋದನೆ ಪಡೆದಿವೆ ಎಂದು ಬಹಿರಂಗಪಡಿಸಿದೆ. ಗುಜರಾತ್‌

ಪಿಎಂ ಜಯ್ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಅಮಾನತುಗೊಳಿಸಲಾದ ಅಥವಾ ಕಪ್ಪುಪಟ್ಟಿಗೆ ಸೇರಿಸಲಾದ ಆಸ್ಪತ್ರೆಗಳ ಸಂಖ್ಯೆಯ ಬಗ್ಗೆ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಅಮಿತ್ ಚಾವ್ಡಾ ಸೋಮವಾರ ಗುಜರಾತ್ ಸರ್ಕಾರವನ್ನು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಡಿಸೆಂಬರ್ 31, 2024 ರ ಹೊತ್ತಿಗೆ 55 ಆಸ್ಪತ್ರೆಗಳು ಕ್ರಮವನ್ನು ಎದುರಿಸಿವೆ ಎಂದು ಸರ್ಕಾರ ಒಪ್ಪಿಕೊಂಡಿತು.

2024 ರಲ್ಲಿ, ಅಗ್ನಿಶಾಮಕ ಸುರಕ್ಷತೆ, ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಮತ್ತು ಯೋಜನೆಯ ಮಾರ್ಗಸೂಚಿಗಳ ಉಲ್ಲಂಘನೆಯನ್ನು ಉಲ್ಲೇಖಿಸಿ ಸರ್ಕಾರ ಡಿಸೆಂಬರ್ 5 ರಂದು ಅರಾವಳಿ ಜಿಲ್ಲೆಯ ಶ್ರೀ ಜಲರಾಮ್ ಮಕ್ಕಳ ಆಸ್ಪತ್ರೆಯನ್ನು ಸ್ಥಗಿತಗೊಳಿಸಿತ್ತು. ಆದಾಗ್ಯೂ, ಕೇವಲ 25 ದಿನಗಳ ನಂತರ, ಅನುಸರಣೆಯನ್ನು ಪುನಃಸ್ಥಾಪಿಸಲಾಗಿದೆ ಎಂದು ಹೇಳುವ ಮೂಲಕ ಅಧಿಕಾರಿಗಳು ಆಸ್ಪತ್ರೆಯ ಪುನರಾರಂಭಕ್ಕೆ ಅನುಮತಿ ನೀಡಿದೆ.

ಅದೇ ರೀತಿ, 2023 ರಲ್ಲಿ, ಇತರ 18 ಆಸ್ಪತ್ರೆಗಳು ಪುನರಾರಂಭಿಸಲು ಹಸಿರು ನಿಶಾನೆ ತೋರಿಸಿಸಲಾಗಿತ್ತು. ಈ ಆಸ್ಪತ್ರೆಗಳು ಈ ಹಿಂದಿನ ಉಲ್ಲಂಘನೆಗಳನ್ನು ಸರಿಪಡಿಸಿದ್ದು, ಈಗ ನಿಯಮಗಳಿಗೆ ಬದ್ಧವಾಗಿವೆ ಎಂದು ಸರ್ಕಾರವು ಪ್ರತಿಪಾದಿಸುವ ಮೂಲಕ ತಮ್ಮ ಪುನಃಸ್ಥಾಪನೆಯನ್ನು ಸಮರ್ಥಿಸಿಕೊಂಡಿದೆ.

ಕಳೆದ ಎರಡು ವರ್ಷಗಳಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಳಪೆ ಪ್ರದರ್ಶನ ನೀಡುವ ಅಧಿಕಾರಿಗಳನ್ನು ಪರಿಶೀಲಿಸುತ್ತಿದೆ ಎಂದು ಸರ್ಕಾರ ಒಪ್ಪಿಕೊಂಡಿದೆ. ಈ ಪರಿಶೀಲನೆಯ ಕಾರಣಕ್ಕೆ ಈ ಅಧಿಕಾರಿಗಳನ್ನು ಕಡ್ಡಾಯ ನಿವೃತ್ತಿ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹೈದರಾಬಾದ್‌: ಸಂಚಾರ ನಿರ್ವಹಣೆಯಲ್ಲಿ ಹೊಸ ಜೀವನ ಕಂಡುಕೊಂಡ ಟ್ರಾನ್ಸ್‌ಜೆಂಡರ್ ಸಮುದಾಯ

ಹೈದರಾಬಾದ್‌: ಸಂಚಾರ ನಿರ್ವಹಣೆಯಲ್ಲಿ ಹೊಸ ಜೀವನ ಕಂಡುಕೊಂಡ ಟ್ರಾನ್ಸ್‌ಜೆಂಡರ್ ಸಮುದಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...