Homeಕರ್ನಾಟಕJNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ರಾಜ್ಯದ್ಯಂತ ವಿದ್ಯಾರ್ಥಿಗಳಿಂದ ಪ್ರತಿಭಟನೆ..

JNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ರಾಜ್ಯದ್ಯಂತ ವಿದ್ಯಾರ್ಥಿಗಳಿಂದ ಪ್ರತಿಭಟನೆ..

94 ಸಾವಿರ ಕೋಟಿ ಶಿಕ್ಷಣ ಸೆಸ್‌ ಸಂಗ್ರಹವಾಗಿದೆ. ಸಂಶೋಧನೆ ಮತ್ತು ಅಭಿವೃದ್ದಿಗಾಗಿ ಎಂಟು ಸಾವಿರ ಕೋಟಿ ರೂ ಸಂಗ್ರಹಿಸಲಾಗಿದೆ. ಈ ಹಣವೆಲ್ಲ ಎಲ್ಲಿ ಹೋಯಿತು ಎಂದು ಬಿ.ಶ್ರೀಪಾದ್‌ ಭಟ್‌ ಪ್ರಶ್ನಿಸಿದ್ದಾರೆ.

- Advertisement -
- Advertisement -

JNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆದಿದೆ. ಆ ಮೂಲಕ ಜೆಎನ್‌ಯು ವಿದ್ಯಾರ್ಥಿಗಳ ಪರ ನಾವಿದ್ದೇವೆ ಎಂದು ಸಂದೇಶ ಸಾರಿದ್ದಾರೆ.

ಬೆಂಗಳೂರು

SFI, AISF, AIDSO, KVS ಸೇರಿದಂತೆ ಹಲವು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಲಾಯಿತು.

ಸಾಮಾಜಿಕ ಚಿಂತಕರಾದ ಬಿ.ಶ್ರೀಪಾದ್‌ ಭಟ್‌ ಮಾತನಾಡಿ “ಈಗಿರುವ ಕೇಂದ್ರ ಸರ್ಕಾರ ಜೆಎನ್‌ಯುವನ್ನು ಇತರ ಸಂಸ್ಥೆಗಳ ರೀತಿ ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಆದರೆ ಈ ಕಬ್ಜಕ್ಕೆ ಜೆಎನ್‌ಯು ಒಳಗಾಗದೇ ಪ್ರತಿರೋಧಿಸುತ್ತಿದೆ. ಹಾಗಾಗಿ ಜೆಎನ್‌ಯು ನಾಶಕ್ಕೆ ಕೇಂದ್ರ ಮುಂದಾಗಿದೆ ಎಂದರು.

94 ಸಾವಿರ ಕೋಟಿ ಶಿಕ್ಷಣ ಸೆಸ್‌ ಸಂಗ್ರಹವಾಗಿದೆ. ಸಂಶೋಧನೆ ಮತ್ತು ಅಭಿವೃದ್ದಿಗಾಗಿ ಎಂಟು ಸಾವಿರ ಕೋಟಿ ರೂ ಸಂಗ್ರಹಿಸಲಾಗಿದೆ. ಈ ಹಣವೆಲ್ಲ ಎಲ್ಲಿ ಹೋಯಿತು ಎಂದು ನಾವು ಕೇಂದ್ರ ಸರ್ಕಾರವನ್ನು ಪ್ರಶ್ನಿಸಬೇಕಾಗಿದೆ. ಪ್ರತಿವರ್ಷ ಒಂದು ಸಾವಿರದಷ್ಟು ಸಂಶೋಧನಾ ಪ್ರಬಂಧಗಳು ಜೆಎನ್‌ಯುವಿನಿಂದ ಹೊರಬರುತ್ತವೆ. 8 ಸಾವಿರ ವಿದ್ಯಾರ್ಥಿಗಳು ಅಲ್ಲಿ ಓದುತ್ತಿದ್ದು ವಾರ್ಷಿಕ ಸುಮಾರು 500 ಕೋಟಿಯಷ್ಟೇ ಖರ್ಚಾಗುತ್ತಿದೆ. ಹೀಗಿರುವಾಗ ಒಂದು ವರ್ಷಕ್ಕೆ ತನ್ನ ಪ್ರಚಾರಕ್ಕಾಗಿ 2000 ಸಾವಿರ ಕೋಟಿಗೂ ಅಧಿಕ ಖರ್ಚು ಮಾಡುವ ಕೇಂದ್ರ ಸರ್ಕಾರ ಈ ವಿದ್ಯಾರ್ಥಿಗಳ ಮೇಲೆ ಶುಲ್ಕ ಹೆಚ್ಚಿಸುವುದು ಅನ್ಯಾಯವಲ್ಲವೇ ಎಂದು ಪ್ರಶ್ನಿಸಿದರು.

ಬನಾರಸ್‌ ವಿ.ವಿಯಲ್ಲಿ ಫಿರೋಜ್‌ ಖಾನ್‌ ಎಂಬ ಸಂಸ್ಕೃತ ಶಿಕ್ಷಕ ಪಾಠ ಮಾಡಬಾರದೆಂದು ಪ್ರತಿಭಟನೆ ನಡೆದರೆ ಅದಕ್ಕೆ ಪೊಲೀಸರ ಸರ್ಕಾರದ ಬೆಂಬಲವಿದೆ. ವಿದ್ಯಾರ್ಥಿಗಳು ಯಜ್ಞ ಮಾಡಿ ತೊಂದರೆ ಕೊಡುತ್ತಿದ್ದಾರೆ. ಇದು ಸ್ವತಃ ನರೇಂದ್ರ ಮೋದಿಯವರ ಕ್ಷೇತ್ರವಾಗಿದ್ದು ಅವರು ಸಹ ಬಾಯಿ ಬಿಟ್ಟಿಲ್ಲ. ಆದರೆ ಇಲ್ಲಿ ಜೆಎನ್‌ಯುನಲ್ಲಿ ಪ್ರಜಾತಂತ್ರದ ಉಳಿವಿಗಾಗಿ ವಿದ್ಯಾರ್ಥಿಗಳ ಹೋರಾಟ ನಡೆಸಿದರೆ ಅವರ ಮೇಲೆ ಪೊಲೀಸರು ಲಾಠಿ ಬೀಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಯುಜಿಸಿ ರದ್ದು ಮಾಡಿ ಆ ಮೂಲಕ ಉನ್ನತ ಶಿಕ್ಷಣಕ್ಕೆ ನೀಡುವ ಅನುದಾನವನ್ನು ತನ್ನ ವ್ಯಾಪ್ತಿಗೆ ತೆಗೆದುಕೊಳ್ಳಲು ಕೇಂದ್ರ ನಿರ್ಧರಿಸಿದೆ. ಈ ಜೆಎನ್‌ಯು ಶುಲ್ಕ ಹೆಚ್ಚಳದ ಹಿಂದೆಯೂ ಇದೇ ಹುನ್ನಾರವಿದೆ ಎಂದು ಕಿಡಿಕಾರಿದರು.

ಎಸ್‌ಎಫ್‌ಐ ವಿ.ಅಂಬರೀಶ್, ಗುರುರಾಜ ದೇಸಾಯಿ, ಎಐಎಸ್‌ಎಫ್‌ನ ಜ್ಯೋತಿ, ಎಐಡಿಎಸ್‌ಓನ ಅಶ್ವಿನಿ ಕೆ.ಎಸ್, ಅಜಯ್‌ಕಾಮತ್‌, ಕೆವಿಎಸ್‌ನ ಸರೋವರ್‌ ಬೆಂಕಿಕೆರೆ, ಗುರುಮೂರ್ತಿ ಮತ್ತಿತರರು ಭಾಗವಹಿಸಿದ್ದರು.

ರಾಯಚೂರು

ಹೊಸ ಶಿಕ್ಷಣ ನೀತಿ ಮತ್ತು ಶಿಕ್ಷಣ ಖಾಸಗಿಕರಣದ ಭಾಗವಾಗಿ JNU ವಿದ್ಯಾರ್ಥಿಗಳ ಶುಲ್ಕ ಹೆಚ್ಚಳವನ್ನು ವಿರೋಧಿಸಿ ರಾಯಚೂರಿನಲ್ಲಿ KVS, SFI ಮತ್ತು ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟಿನೆ ನಡೆಯಿತು.

ವಿದ್ಯಾರ್ಥಿಗಳು ಶಾಂತಿಯುತವಾಗಿ ಸಂಸತ್ತಿಗೆ ಪ್ರತಿಭಟನೆ ಮೆರವಣಿಗೆ ಹೋಗುವಾಗ ರಕ್ಷಣೆ ಮಾಡುವಂಥ ಪೋಲೀಸರೇ ಕೇಂದ್ರ ಸರ್ಕಾರದ ಕುಮ್ಮಕ್ಕುನಿಂದ ಜೆಎನ್ಯೂ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್, ಜಲ ಪ್ರಹಾರ ಮಾಡಿರುವ ಕ್ರೌರ್ಯವನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು.

ಸಿಂಧನೂರು

JNU ವಿದ್ಯಾರ್ಥಿಗಳ ಮೇಲೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಆರ್ಥಿಕ ಹಾಗೂ ದೈಹಿಕ ಹಲ್ಲೆ ಖಂಡಿಸಿ ಸಿಂಧನೂರಿನಲ್ಲಿ ಪ್ರತಿಭಟನೆ ನಡೆಯಿತು.

ಸಿಂಧನೂರಿನ ತಾಲ್ಲೂಕು ಕಚೇರಿ ಎದುರು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಸಮದ್‌ ಚೌದ್ರಿ, ನಾಗರಾಜ್‌ ಪುಜಾರ್‌ ಸೇರಿದಂತೆ ಹಲವರು ಭಾಗವಹಿಸಿದ್ದರು.

ದಾವಣಗೆರೆ

JNU ವಿದ್ಯಾರ್ಥಿ ಗಳ ಮೇಲಿನ ದಾಳಿಯನ್ನು ಖಂಡಿಸಿ ಅವರ ಹೋರಾಟಕ್ಕೆ ಬೆಂಬಲಿಸಿ ಇಂದು ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ನಡೆದ ಪ್ರತಿಭಟನೆ ನಡೆಯಿತು. AISF ನ ವೀಣಾ ಮತ್ತು SFI ಮುಖಂಡರು ಹಾಜರಿದ್ದರು

ಕಲಬುರಗಿ

ಕಲಬರುಗಿಯಲ್ಲಿ ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ ಮೆರವಣಿಗೆ ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಚಿಂತಕಿ, ಹೋರಾಟಗಾರ್ತಿ, ಕೆ.ನೀಲಾ, ಕೆವಿಎಸ್‌ನ ರಾಜೇಂದ್ರ ರಾಜವಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಜೆ.ಎನ್.ಯು ಹೋರಾಟಕ್ಕೆ ಬೆಂಬಲಿಸಿ ಮೊಟ್ಟಮೊದಲು ಪ್ರತಿಭಟನೆ ಮಾಡಿದ್ದು ಮೈಸೂರು ವಿಶ್ವವಿದ್ಯಾನಿಲಯದಲ್ಲಿ, ಅದನ್ನು ನೀವು Mention ಮಾಡಿಲ್ಲ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...