HomeUncategorizedಐಎಂಎ ಹಗರಣದಲ್ಲಿ ಹಣ ಕಳೆದುಕೊಂಡವರಿಗೆ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರ - ಕಂದಾಯ ಇಲಾಖೆ

ಐಎಂಎ ಹಗರಣದಲ್ಲಿ ಹಣ ಕಳೆದುಕೊಂಡವರಿಗೆ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರ – ಕಂದಾಯ ಇಲಾಖೆ

- Advertisement -
- Advertisement -

ಐಎಂಎ ಹಗರಣದಲ್ಲಿ ಹಣ ಕಳೆದುಕೊಂಡ ಎಲ್ಲಾ ಜನರಿಗೂ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರದ ಮೊತ್ತವನ್ನು ನೀಡುವುದಾಗಿ ಕಂದಾಯ ಇಲಾಖೆ ಸೋಮವಾರ ಘೋಷಿಸಿದೆ. ಬಹುಕೋಟಿ ಹಗರಣ ನಡೆದ ನಂತರ ಸಂಸ್ಥೆಯ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಈ ಎಲ್ಲಾ ಆಸ್ತಿಗಳನ್ನೂ ಮಾರಿ ರಂಜಾನ್ ಹಬ್ಬಕ್ಕೆ ಮುನ್ನ ಮೋಸ ಹೋದವರಿಗೆ ಹಣ ಹಿಂತಿರುಗಿಸುವ ಸಂಬಂಧ ಸಚಿವ ಕೃಷ್ಣ ಬೈರೇಗೌಡ ಅವರು ಸಭೆ ನಡೆಸಿ ಹಲವು ತೀರ್ಮಾನಗಳನ್ನು ಕೈಗೊಂಡಿದ್ದಾರೆ.

ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಿಂದಾಗಿ ಹಣ ಕಳೆದುಕೊಂಡ ಎಲ್ಲಾ ಠೇವಣಿದಾರರಿಗೂ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರದ ಹಣವನ್ನು ನೀಡಲು ಸೂಕ್ತ ಕ್ರಮವಹಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದು, ಐಎಂಎ ಹಗರಣದ ಮೊತ್ತ ಎಷ್ಟು? ಈ ವರೆಗೆ ಈ ಸಂಸ್ಥೆಯ ಎಷ್ಟು ಕೋಟಿ ಮೌಲ್ಯದ ಸ್ಥಿರಾಸ್ತಿ/ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ? ಕಳೆದ ಏಳು ವರ್ಷದಲ್ಲಿ ಈ ಕಂಪೆನಿಯಲ್ಲಿ ಹಣ ಹೂಡಿ ಕಳೆದುಕೊಂಡ ಎಷ್ಟು ಜನರಿಗೆ ಎಷ್ಟು ಪ್ರಮಾಣದಲ್ಲಿ ಹಣ ಹಿಂತಿರುಗಿಸಲಾಗಿದೆ ಮತ್ತು ಉಳಿದ ಸಂತ್ರಸ್ತರಿಗೆ ಯಾವಾಗ ಮತ್ತು ಹೇಗೆ ಹಣ ಹಿಂತಿರುಗಿಸಬೇಕು? ಎಂಬ ಕುರಿತು ಸೋಮವಾರ ವಿಕಾಸಸೌಧ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಸಚಿವರಾದ ಜಮೀರ್ ಅಹ್ಮದ್, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಜೊತೆಗೆ ಐಎಂಎ ಹಗರಣದಿಂದ ಹಣ ಕಳೆದುಕೊಂಡ ಹಲವರು ಭಾಗಿಯಾಗಿದ್ದರು.

ಈ ವೇಳೆ ಸಂತ್ರಸ್ತರಿಗೆ ಭರವಸೆ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ರಂಜಾನ್ ಹಬ್ಬಕ್ಕೂ ಹತ್ತು ದಿನ ಮೊದಲೇ ಐಎಂಎನಲ್ಲಿ ಹಣ ಹೂಡಿ ಮೋಸ ಹೋದವರಿಗೆ ಅವರ ಹೂಡಿಕೆಯ ಅನುಪಾತದ ಆಧಾರದಲ್ಲಿ ಪರಿಹಾರ ನೀಡಲು ಕ್ರಮವಹಿಸಲಾಗುವುದು ಎಂದು ಹೇಳಿದ್ದಾರೆ.

ಹಣ ಡಬ್ಲಿಂಗ್ ಆಸೆಯಿಂದಾಗಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಠೇವಣಿದಾರರ ಖಾತೆಗಳ ಮೂಲಕ 3213.58 ಕೋಟಿ ರೂ.ಗಳನ್ನು ಐಎಂಎ ಕಂಪೆನಿಯಲ್ಲಿ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ. ಕಂಪೆನಿಯ ಒಟ್ಟು ಠೇವಣಿದಾರರ ಸಂಖ್ಯೆ 69069 ಆಗಿದ್ದು, ಈ ಪೈಕಿ 1400 ಕೋಟಿ ರೂ.ಗಳನ್ನು ಲಾಭಾಂಶದ ಮಾದರಿಯಲ್ಲಿ ಐಎಂಎ ಕಾಲಕಾಲಕ್ಕೆ ಠೇವಣಿದಾರರಿಗೆ ನೀಡುತ್ತಾ ಬಂದಿದೆ. ಹಗರಣ ಬೆಳಕಿಗೆ ಬಂದ ನಂತರ ವಿಶೇಷ ನ್ಯಾಯಾಲಯದ ಆದೇಶದಂತೆ ಕಂಪೆನಿ ಖಾತೆಯಲ್ಲಿದ್ದ 19.12 ಕೋಟಿ ರೂ.ಗಳನ್ನು 50,000 ರೂ.ಗಳಂತೆ 6858 ಜನ ಸಂತ್ರಸ್ತರ ಖಾತೆಗಳಿಗೆ 2022 ಏಪ್ರಿಲ್‌ನಲ್ಲಿ ಜಮೆ ಮಾಡಲಾಗಿತ್ತು.

66.66 ಕೋಟಿ ರೂ.ಗಳನ್ನು 53,142 ಜನ ಸಂತ್ರಸ್ತರ ಖಾತೆಗಳಿಗೆ 8/11/2023 ರಂದು ಜಮೆ ಮಾಡಲಾಗಿತ್ತು. 1.28 ಕೋಟಿ ರೂ.ಗಳನ್ನು 626 ಸಂತ್ರಸ್ತರ ಖಾತೆಗಳಿಗೆ 23/5/2024 ರಂದು ಜಮೆ ಮಾಡಲಾಗಿತ್ತು. 276 ಜನ ಸಂತ್ರಸ್ತರಿಗೆ 36.14 ಲಕ್ಷ ರೂ.ಗಳನ್ನು 7/11/2024 ರಂದು ಜಮೆ ಮಾಡಲಾಗಿತ್ತು. ಒಟ್ಟಾರೆ ಈವರೆಗೆ 87.43 ಕೋಟಿ ರೂ.ಗಳನ್ನು 60902 ಜನ ಸಂತ್ರಸ್ತರ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದು ಸಭೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಯಿತು ಎಂದು ಕಂದಾಯ ಇಲಾಖೆ ಪ್ರಕಟನೆ ನೀಡಿದೆ.

ಐಎಂಎ ಕಂಪೆನಿಗೆ ಸಂಬಂಧಿಸಿದ ಹತ್ತಕ್ಕೂ ಹೆಚ್ಚು ಆಸ್ತಿಗಳನ್ನು ಈಗಾಗಲೇ ಸರ್ಕಾರ ವಶಕ್ಕೆ ಪಡೆದಿದೆ. ಚರಾಸ್ಥಿಗಳ ಮೌಲ್ಯ 106.92 ಕೋಟಿ ಹಾಗೂ ಸ್ಥಿರಾಸ್ತಿಗಳ ಮೌಲ್ಯ 401.92 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದಲ್ಲದೆ, ಕಂಪೆನಿಗೆ ಸಂಬಂಧಿಸಿದ ವಿವಿಧ ಬ್ಯಾಂಕ್ ಖಾತೆಗಳಿಂದ 2.88 ಕೋಟಿ ರೂ., ನಗದು ಹಣ 11.72 ರೂ. ಹೂಡಿಕೆ ಪತ್ರ 11.06 ಕೋಟಿ ರೂ. ಸೇರಿದಂತೆ ಒಟ್ಟಾರೆ 534.5 ಕೋಟಿ ರೂ.ಗಳನ್ನು ಸರ್ಕಾರ ಮುಟ್ಟುಗೋಲು ಈಗಾಗಲೇ ಹಾಕಿದೆ ಎಂದು ಇಲಾಖೆ ಹೇಳಿದೆ.

ನ್ಯಾಯಮೂರ್ತಿ ಜಸ್ಟೀಸ್ ನಾಗಪ್ರಸನ್ನ ಪೀಠದ ಆದೇಶದಂತೆ ಶೀಘ್ರವೇ ಈ ಆಸ್ತಿಗಳನ್ನು ಹರಾಜಿಗೊಳಪಡಿಸಿ ಇದರಿಂದ ಬಂದ ಹಣವನ್ನು ಹೂಡಿಕೆದಾರರಿಗೆ ಹಿಂತಿರುಗಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸಭೆಯಲ್ಲಿ ತಿಳಿಸಿದ್ದಾರೆ.

ಅರ್ಹ ಸಂತ್ರಸ್ತರಿಗೆ ಹರಿಹಾರ

ಐಎಂಎ ಹಗರಣ ಬೆಳಕಿಗೆ ಬಂದಾಗಲೇ ಸರ್ಕಾರ ಸಂತ್ರಸ್ತರನ್ನು ಗುರುತಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶ ನೀಡಿತ್ತು. ಈ ವೇಳೆ ಐಎಂಎ ಜೊತೆ ಆರ್ಥಿಕ ವ್ಯವಹಾರ ಮಾಡಿದ ಬ್ಯಾಂಕ್ ಖಾತೆ ಚಾಲ್ತಿಯಲ್ಲಿದ್ದರೆ ಅದನ್ನೇ ಅಧಿಕೃತ ಎಂದು ಪರಿಗಣಿಸಲಾಯಿತು. ಒಂದು ವೇಳೆ ಖಾತೆ ನಿಷ್ಕ್ರಿಯವಾಗಿದ್ದರೆ ಠೇವಣಿಪತ್ರ, ಷೇರುಪ್ರಮಾಣ ಪತ್ರದಂತಹ ದಾಖಲಾತಿಗಳನ್ನು ಕೋರಿತ್ತು.

ಅರ್ಜಿ ಸಲ್ಲಿಸುವವರ ಮಾಹಿತಿಗಳನ್ನು ಐಎಂಎ ಸಂಸ್ಥೆಯಲ್ಲಿರುವ ದತ್ತಾಂಶಗಳೊಂದಿಗೆ ಹೊಂದಾಣಿಕೆ ಮಾಡಿ ಹಾಗೂ ಆಧಾರ್ ಕಾರ್ಡ್, ಇತರ ಮಾಹಿತಿಗಳನ್ನು ಸಮೀಕರಿಸಿ ಅರ್ಹ ಫಲಾನುಭವಿಗಳನ್ನು ಗುರುತಿಸಲಾಗಿದೆ. ಒಂದು ವೇಳೆ ಫಲಾನುಭವಿಗಳು ಮೃತಪಟ್ಟಿದ್ದರೆ ಠೇವಣಿದಾರರು ಸೂಚಿಸಿರುವ ನಾಮನಿರ್ದೇಶಿತ ವ್ಯಕ್ತಿಗಳಿಗೆ ಆ ಹಣವನ್ನು ನೀಡಲು ಕ್ರಮವಹಿಸಲಾಗಿದೆ ಎಂದು ಕಂದಾಯ ಇಲಾಖೆ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...