HomeUncategorizedಐಎಂಎ ಹಗರಣದಲ್ಲಿ ಹಣ ಕಳೆದುಕೊಂಡವರಿಗೆ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರ - ಕಂದಾಯ ಇಲಾಖೆ

ಐಎಂಎ ಹಗರಣದಲ್ಲಿ ಹಣ ಕಳೆದುಕೊಂಡವರಿಗೆ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರ – ಕಂದಾಯ ಇಲಾಖೆ

- Advertisement -
- Advertisement -

ಐಎಂಎ ಹಗರಣದಲ್ಲಿ ಹಣ ಕಳೆದುಕೊಂಡ ಎಲ್ಲಾ ಜನರಿಗೂ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರದ ಮೊತ್ತವನ್ನು ನೀಡುವುದಾಗಿ ಕಂದಾಯ ಇಲಾಖೆ ಸೋಮವಾರ ಘೋಷಿಸಿದೆ. ಬಹುಕೋಟಿ ಹಗರಣ ನಡೆದ ನಂತರ ಸಂಸ್ಥೆಯ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಈ ಎಲ್ಲಾ ಆಸ್ತಿಗಳನ್ನೂ ಮಾರಿ ರಂಜಾನ್ ಹಬ್ಬಕ್ಕೆ ಮುನ್ನ ಮೋಸ ಹೋದವರಿಗೆ ಹಣ ಹಿಂತಿರುಗಿಸುವ ಸಂಬಂಧ ಸಚಿವ ಕೃಷ್ಣ ಬೈರೇಗೌಡ ಅವರು ಸಭೆ ನಡೆಸಿ ಹಲವು ತೀರ್ಮಾನಗಳನ್ನು ಕೈಗೊಂಡಿದ್ದಾರೆ.

ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಿಂದಾಗಿ ಹಣ ಕಳೆದುಕೊಂಡ ಎಲ್ಲಾ ಠೇವಣಿದಾರರಿಗೂ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರದ ಹಣವನ್ನು ನೀಡಲು ಸೂಕ್ತ ಕ್ರಮವಹಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದು, ಐಎಂಎ ಹಗರಣದ ಮೊತ್ತ ಎಷ್ಟು? ಈ ವರೆಗೆ ಈ ಸಂಸ್ಥೆಯ ಎಷ್ಟು ಕೋಟಿ ಮೌಲ್ಯದ ಸ್ಥಿರಾಸ್ತಿ/ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ? ಕಳೆದ ಏಳು ವರ್ಷದಲ್ಲಿ ಈ ಕಂಪೆನಿಯಲ್ಲಿ ಹಣ ಹೂಡಿ ಕಳೆದುಕೊಂಡ ಎಷ್ಟು ಜನರಿಗೆ ಎಷ್ಟು ಪ್ರಮಾಣದಲ್ಲಿ ಹಣ ಹಿಂತಿರುಗಿಸಲಾಗಿದೆ ಮತ್ತು ಉಳಿದ ಸಂತ್ರಸ್ತರಿಗೆ ಯಾವಾಗ ಮತ್ತು ಹೇಗೆ ಹಣ ಹಿಂತಿರುಗಿಸಬೇಕು? ಎಂಬ ಕುರಿತು ಸೋಮವಾರ ವಿಕಾಸಸೌಧ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಸಚಿವರಾದ ಜಮೀರ್ ಅಹ್ಮದ್, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಜೊತೆಗೆ ಐಎಂಎ ಹಗರಣದಿಂದ ಹಣ ಕಳೆದುಕೊಂಡ ಹಲವರು ಭಾಗಿಯಾಗಿದ್ದರು.

ಈ ವೇಳೆ ಸಂತ್ರಸ್ತರಿಗೆ ಭರವಸೆ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ರಂಜಾನ್ ಹಬ್ಬಕ್ಕೂ ಹತ್ತು ದಿನ ಮೊದಲೇ ಐಎಂಎನಲ್ಲಿ ಹಣ ಹೂಡಿ ಮೋಸ ಹೋದವರಿಗೆ ಅವರ ಹೂಡಿಕೆಯ ಅನುಪಾತದ ಆಧಾರದಲ್ಲಿ ಪರಿಹಾರ ನೀಡಲು ಕ್ರಮವಹಿಸಲಾಗುವುದು ಎಂದು ಹೇಳಿದ್ದಾರೆ.

ಹಣ ಡಬ್ಲಿಂಗ್ ಆಸೆಯಿಂದಾಗಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಠೇವಣಿದಾರರ ಖಾತೆಗಳ ಮೂಲಕ 3213.58 ಕೋಟಿ ರೂ.ಗಳನ್ನು ಐಎಂಎ ಕಂಪೆನಿಯಲ್ಲಿ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ. ಕಂಪೆನಿಯ ಒಟ್ಟು ಠೇವಣಿದಾರರ ಸಂಖ್ಯೆ 69069 ಆಗಿದ್ದು, ಈ ಪೈಕಿ 1400 ಕೋಟಿ ರೂ.ಗಳನ್ನು ಲಾಭಾಂಶದ ಮಾದರಿಯಲ್ಲಿ ಐಎಂಎ ಕಾಲಕಾಲಕ್ಕೆ ಠೇವಣಿದಾರರಿಗೆ ನೀಡುತ್ತಾ ಬಂದಿದೆ. ಹಗರಣ ಬೆಳಕಿಗೆ ಬಂದ ನಂತರ ವಿಶೇಷ ನ್ಯಾಯಾಲಯದ ಆದೇಶದಂತೆ ಕಂಪೆನಿ ಖಾತೆಯಲ್ಲಿದ್ದ 19.12 ಕೋಟಿ ರೂ.ಗಳನ್ನು 50,000 ರೂ.ಗಳಂತೆ 6858 ಜನ ಸಂತ್ರಸ್ತರ ಖಾತೆಗಳಿಗೆ 2022 ಏಪ್ರಿಲ್‌ನಲ್ಲಿ ಜಮೆ ಮಾಡಲಾಗಿತ್ತು.

66.66 ಕೋಟಿ ರೂ.ಗಳನ್ನು 53,142 ಜನ ಸಂತ್ರಸ್ತರ ಖಾತೆಗಳಿಗೆ 8/11/2023 ರಂದು ಜಮೆ ಮಾಡಲಾಗಿತ್ತು. 1.28 ಕೋಟಿ ರೂ.ಗಳನ್ನು 626 ಸಂತ್ರಸ್ತರ ಖಾತೆಗಳಿಗೆ 23/5/2024 ರಂದು ಜಮೆ ಮಾಡಲಾಗಿತ್ತು. 276 ಜನ ಸಂತ್ರಸ್ತರಿಗೆ 36.14 ಲಕ್ಷ ರೂ.ಗಳನ್ನು 7/11/2024 ರಂದು ಜಮೆ ಮಾಡಲಾಗಿತ್ತು. ಒಟ್ಟಾರೆ ಈವರೆಗೆ 87.43 ಕೋಟಿ ರೂ.ಗಳನ್ನು 60902 ಜನ ಸಂತ್ರಸ್ತರ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದು ಸಭೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಯಿತು ಎಂದು ಕಂದಾಯ ಇಲಾಖೆ ಪ್ರಕಟನೆ ನೀಡಿದೆ.

ಐಎಂಎ ಕಂಪೆನಿಗೆ ಸಂಬಂಧಿಸಿದ ಹತ್ತಕ್ಕೂ ಹೆಚ್ಚು ಆಸ್ತಿಗಳನ್ನು ಈಗಾಗಲೇ ಸರ್ಕಾರ ವಶಕ್ಕೆ ಪಡೆದಿದೆ. ಚರಾಸ್ಥಿಗಳ ಮೌಲ್ಯ 106.92 ಕೋಟಿ ಹಾಗೂ ಸ್ಥಿರಾಸ್ತಿಗಳ ಮೌಲ್ಯ 401.92 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದಲ್ಲದೆ, ಕಂಪೆನಿಗೆ ಸಂಬಂಧಿಸಿದ ವಿವಿಧ ಬ್ಯಾಂಕ್ ಖಾತೆಗಳಿಂದ 2.88 ಕೋಟಿ ರೂ., ನಗದು ಹಣ 11.72 ರೂ. ಹೂಡಿಕೆ ಪತ್ರ 11.06 ಕೋಟಿ ರೂ. ಸೇರಿದಂತೆ ಒಟ್ಟಾರೆ 534.5 ಕೋಟಿ ರೂ.ಗಳನ್ನು ಸರ್ಕಾರ ಮುಟ್ಟುಗೋಲು ಈಗಾಗಲೇ ಹಾಕಿದೆ ಎಂದು ಇಲಾಖೆ ಹೇಳಿದೆ.

ನ್ಯಾಯಮೂರ್ತಿ ಜಸ್ಟೀಸ್ ನಾಗಪ್ರಸನ್ನ ಪೀಠದ ಆದೇಶದಂತೆ ಶೀಘ್ರವೇ ಈ ಆಸ್ತಿಗಳನ್ನು ಹರಾಜಿಗೊಳಪಡಿಸಿ ಇದರಿಂದ ಬಂದ ಹಣವನ್ನು ಹೂಡಿಕೆದಾರರಿಗೆ ಹಿಂತಿರುಗಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸಭೆಯಲ್ಲಿ ತಿಳಿಸಿದ್ದಾರೆ.

ಅರ್ಹ ಸಂತ್ರಸ್ತರಿಗೆ ಹರಿಹಾರ

ಐಎಂಎ ಹಗರಣ ಬೆಳಕಿಗೆ ಬಂದಾಗಲೇ ಸರ್ಕಾರ ಸಂತ್ರಸ್ತರನ್ನು ಗುರುತಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶ ನೀಡಿತ್ತು. ಈ ವೇಳೆ ಐಎಂಎ ಜೊತೆ ಆರ್ಥಿಕ ವ್ಯವಹಾರ ಮಾಡಿದ ಬ್ಯಾಂಕ್ ಖಾತೆ ಚಾಲ್ತಿಯಲ್ಲಿದ್ದರೆ ಅದನ್ನೇ ಅಧಿಕೃತ ಎಂದು ಪರಿಗಣಿಸಲಾಯಿತು. ಒಂದು ವೇಳೆ ಖಾತೆ ನಿಷ್ಕ್ರಿಯವಾಗಿದ್ದರೆ ಠೇವಣಿಪತ್ರ, ಷೇರುಪ್ರಮಾಣ ಪತ್ರದಂತಹ ದಾಖಲಾತಿಗಳನ್ನು ಕೋರಿತ್ತು.

ಅರ್ಜಿ ಸಲ್ಲಿಸುವವರ ಮಾಹಿತಿಗಳನ್ನು ಐಎಂಎ ಸಂಸ್ಥೆಯಲ್ಲಿರುವ ದತ್ತಾಂಶಗಳೊಂದಿಗೆ ಹೊಂದಾಣಿಕೆ ಮಾಡಿ ಹಾಗೂ ಆಧಾರ್ ಕಾರ್ಡ್, ಇತರ ಮಾಹಿತಿಗಳನ್ನು ಸಮೀಕರಿಸಿ ಅರ್ಹ ಫಲಾನುಭವಿಗಳನ್ನು ಗುರುತಿಸಲಾಗಿದೆ. ಒಂದು ವೇಳೆ ಫಲಾನುಭವಿಗಳು ಮೃತಪಟ್ಟಿದ್ದರೆ ಠೇವಣಿದಾರರು ಸೂಚಿಸಿರುವ ನಾಮನಿರ್ದೇಶಿತ ವ್ಯಕ್ತಿಗಳಿಗೆ ಆ ಹಣವನ್ನು ನೀಡಲು ಕ್ರಮವಹಿಸಲಾಗಿದೆ ಎಂದು ಕಂದಾಯ ಇಲಾಖೆ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...