Homeಮುಖಪುಟಕೇರಳ | ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ ಸೇರಿ ಐವರನ್ನು ಕೊಂದ ಯುವಕ : ವಿಷ ಸೇವಿಸಿ...

ಕೇರಳ | ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ ಸೇರಿ ಐವರನ್ನು ಕೊಂದ ಯುವಕ : ವಿಷ ಸೇವಿಸಿ ಪೊಲೀಸರ ಮುಂದೆ ಶರಣು!

- Advertisement -
- Advertisement -

ಯುವಕನೋರ್ವ ತನ್ನ ಗೆಳತಿ, ಕುಟುಂಬ ಸದಸ್ಯರು ಸೇರಿ ಐವರನ್ನು ಹತ್ಯೆಗೈದು, ತಾನೂ ವಿಷ ಸೇವಿಸಿ ಪೊಲೀಸರ ಮುಂದೆ ಹಾಜರಾದ ಭಯಾನಕ ಘಟನೆ ಕೇರಳದ ತಿರುವನಂತಪುರ ಜಿಲ್ಲೆಯ ವೆಂಜರಮೂಡು ಮತ್ತು ಪಾಂಗೋಡ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸೋಮವಾರ (ಫೆ.24) ನಡೆದಿದೆ.

ಆರೋಪಿ 23 ವರ್ಷದ ಅಫಾನ್ ಎಂದು ತಿಳಿದು ಬಂದಿದೆ. ಅಫಾನ್ ಸೋಮವಾರ ಸಂಜೆ 6.15ರ ಸುಮಾರಿಗೆ ವೆಂಜರಮೂಡು ಪೊಲೀಸ್ ಠಾಣೆಗೆ ತೆರಳಿ, “ತನ್ನ ಗೆಳತಿ ಸೇರಿ 6 ಮಂದಿಯನ್ನು ಹತ್ಯೆಗೈದಿದ್ದೇನೆ. ಮನೆಯಲ್ಲಿ ಗ್ಯಾಸ್ ಆನ್ ಮಾಡಿಟ್ಟಿದ್ದೇನೆ. ತಾನೂ ವಿಷ ಸೇವಿಸಿದ್ದೇನೆ” ಎಂದಿದ್ದಾನೆ.

ಯುವಕನ ಮಾತು ಕೇಳಿ ದಂಗಾದ ಪೊಲೀಸರು, ತಕ್ಷಣ ಆತನ ಮನೆಗೆ ಧಾವಿಸಿದ್ದಾರೆ. ಅಲ್ಲಿ ಆತನ 13 ವರ್ಷದ ಸಹೋದರ ಅಹ್ಸಾನ್ ಮತ್ತು ಗೆಳತಿ ಫರ್ಝಾನಾಳ ಮೃತದೇಹ ಕಂಡು ಬಂದಿದೆ. ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಶೆಮಿ ಜೀವನ್ಮರಣ ಹೋರಾಟದಲ್ಲಿದ್ದರು. ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಪಿ ಅಫಾನ್, ತನ್ನ ಸಹೋದರ ಅಹ್ಸಾನ್, ಗೆಳತಿ ಫರ್ಝಾನಾ, ಅಜ್ಜಿ ಸಲ್ಮಾ ಬೀವಿ, ಚಿಕ್ಕಪ್ಪ ಲತೀಫ್, ಚಿಕ್ಕಮ್ಮ ಶಾಹಿದಾ (ಲತೀಫ್ ಅವರ ಪತ್ನಿ) ಮತ್ತು ತಾಯಿ ಶೆಮಿ ಸೇರಿ 6 ಮಂದಿಯ ಮೇಲೆ ದಾಳಿ ಮಾಡಿದ್ದಾನೆ. ಈ ಪೈಕಿ ಐವರು ಸಾವನ್ನಪ್ಪಿದ್ದು, ತಾಯಿ ಶೆಮಿ ಬದುಕುಳಿದಿದ್ದಾರೆ.

ವರದಿಗಳ ಪ್ರಕಾರ, ಆರೋಪಿ ಅಫಾನ್ ಸುತ್ತಿಗೆಯಿಂದ ಹೊಡೆದು ಎಲ್ಲರನ್ನೂ ಹತ್ಯೆ ಮಾಡಿದ್ದಾನೆ. ಆತನ ಚಿಕ್ಕಪ್ಪ ಲತೀಫ್ ಅವರ ದೇಹ ಅವರ ಮನೆಯ ಲಿವಿಂಗ್ ರೂಮಿನ ಸೋಫಾದಲ್ಲಿ ಕುಳಿತ ಸ್ಥಿತಿಯಲ್ಲಿ ಕಂಡು ಬಂದಿದೆ. ಲತೀಫ್ ಅವನ ಪತ್ನಿ ಶಾಹಿದಾ ಅವರ ದೇಹ ಅಡುಗೆ ಮನೆಯಲ್ಲಿ ಪತ್ತೆಯಾಗಿದೆ. ಗೆಳತಿ ಫರ್ಝಾನಾ ಅವರ ದೇಹ ಕೂಡ ಸೋಫಾದಲ್ಲಿ ಪತ್ತೆಯಾಗಿದ್ದು, ಅವರ ಮುಖವನ್ನು ಗುರುತಿಸಲಾಗದಷ್ಟು ವಿರೂಪಗೊಳಿಸಲಾಗಿತ್ತು.

ವೆಂಜರಮೂಡು ಮತ್ತು ಪಾಂಗೋಡ್ ಪೊಲೀಸ್ ಠಾಣೆಗಳ ವ್ಯಾಪ್ತಿಯ ಮೂರು ಪ್ರದೇಶಗಳಾದ ವೆಂಜರಮೂಡು, ಎಸ್‌.ಎನ್‌ ಪುರಂ ಮತ್ತು ಪಾಂಗೋಡ್‌ನಲ್ಲಿ ಕೊಲೆಗಳು ನಡೆದಿವೆ. ಪೊಲೀಸರ ಪ್ರಕಾರ, ಆರೋಪಿ ಅಫಾನ್ ವೆಂಜರಮೂಡಿನಲ್ಲಿರುವ ತನ್ನ ಮನೆಯಿಂದ ಪಾಂಗೋಡಿಗೆ ಸುಮಾರು 25 ಕಿ.ಮೀ ದೂರ ಪ್ರಯಾಣಿಸಿ, ಅಲ್ಲಿ ಮೊದಲು ತನ್ನ ಅಜ್ಜಿಯನ್ನು ಕೊಂದಿದ್ದಾನೆ. ನಂತರ 4 ಕಿ.ಮೀ ಪ್ರಯಾಣಿಸಿ ಎಸ್‌.ಎನ್‌ ಪುರಂನ ಕೂನನ್‌ವೆಂಗದಲ್ಲಿ ಚಿಕ್ಕಪ್ಪ ಮತ್ತು ಚಿಕ್ಕಮ್ಮರನ್ನು ಅವರ ಮನೆಯಲ್ಲೇ ಹತ್ಯೆ ಮಾಡಿದ್ದಾರೆ. ಅಲ್ಲಿಂದ ವೆಂಜರಮೂಡಿನ ಮನೆ ಕಡೆಗೆ ಪ್ರಯಾಣಿಸಿದ ಆತ, ದಾರಿ ಮಧ್ಯೆ ಗೆಳತಿ ಫರ್ಝಾನಳನ್ನು ಕರೆದುಕೊಂಡು ಬಂದಿದ್ದಾನೆ. ಮನೆಗೆ ತಲುಪಿದ ನಂತರ, ಸಹೋದರ ಅಹ್ಸಾನ್, ಗೆಳತಿ ಫರ್ಝಾನ ಮತ್ತು ತಾಯಿ ಶೆಮಿ ಮೇಲೆ ದಾಳಿ ಮಾಡಿದ್ದಾನೆ.

ಘಟನೆ ಸಂಬಂಧ ವೆಂಜರಮೂಡು ಮತ್ತು ಪಾಂಗೋಡ್ ಪೊಲೀಸ್ ಠಾಣೆಗಳಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ. ಸೋಮವಾರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯ ನಡುವೆ ಸರಣಿ ಕೊಲೆಗಳು ನಡೆದಿವೆ. ಆದರೆ, ಆರೋಪಿಯ ಸರಿಯಾದ ಹೇಳಿಕೆಯನ್ನು ಪಡೆಯಲು ಸದ್ಯಕ್ಕೆ ಸಾಧ್ಯವಾಗದ ಕಾರಣ ಪ್ರತಿ ಕೊಲೆಯ ನಿಖರವಾದ ಸಮಯವನ್ನು ನಾವು ನಿರ್ಧರಿಸಲು ಸಾಧ್ಯವಿಲ್ಲ. ಆರೋಪಿ ವಿಷ ಸೇವಿಸಿದ್ದ ಕಾರಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿರುವನಂತಪುರಂ ಗ್ರಾಮೀಣ ಎಸ್ಪಿ ಸುದರ್ಶನ್ ಕೆ.ಎಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಆರೋಪಿ ಅಫಾನ್ ಪೊಲೀಸರ ಮುಂದೆ ಶರಣಾಗುವ ಮೊದಲು ವಿಷ ಸೇವಿಸಿದ್ದರು. ಅವರನ್ನು ಪ್ರಸ್ತುತ ತಿರುವನಂತಪುರಂನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ವಾಮನಪುರಂ ಶಾಸಕ ಡಿ.ಕೆ. ಮುರಳಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ನಮ್ಮ ಕುಟುಂಬವು ತೀವ್ರ ಆರ್ಥಿಕ ಸಂಕಷ್ಟದಲ್ಲಿತ್ತು. ಒಟ್ಟಿಗೆ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೆವು. ಆದರೆ, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿ, ಅದು ವಿಫಲವಾದರೆ ಯಾರಾದರು ಬದುಕುಳಿಯಬಹುದೆಂಬ ಭಯದಿಂದ, ಸ್ವತಃ ನಾನೇ ಕೊಲ್ಲುವ ತೀರ್ಮಾನ ಮಾಡಿದೆ” ಎಂಬುವುದಾಗಿ ಆರೋಪಿ ಪೊಲೀಸರ ಮುಂದೆ ಹೇಳಿದ್ದಾನೆ ಎಂದು ಶಾಸಕ ಡಿ.ಕೆ. ಮುರಳಿ ಹೇಳಿದ್ದಾರೆ.

ವಿದೇಶದಲ್ಲಿ ವಾಹನಗಳ ಬಿಡಿಭಾಗಗಳ ವ್ಯವಹಾರ ನಡೆಸುತ್ತಿದ್ದ ಅಫಾನ್‌ನ ತಂದೆ, ಇತ್ತೀಚೆಗೆ ವಿಸಿಟಿಂಗ್ ವೀಸಾದಲ್ಲಿ ತೆರಳಿದ್ದರು. ಅವರ ವ್ಯವಹಾರ ಕುಸಿದು ಕುಟುಂಬ ಭಾರೀ ಸಾಲದಲ್ಲಿ ಸಿಲುಕಿತ್ತು. ಅಫಾನ್‌ನ ತಾಯಿ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕಿರಿಯ ಸಹೋದರ ಅಹ್ಸಾನ್ ವೆಂಜರಮೂಡು ಶಾಲೆಯಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕುಟುಂಬಸ್ಥರು ತನಗೆ ಹಣ ನೀಡದ ಕಾರಣ ಅಫಾನ್‌ ಅಸಮಾಧಾನಗೊಂಡಿದ್ದ ಎಂದು ಸಂಬಂಧಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದರೆ, ಪೊಲೀಸರು ಇದನ್ನು ಇನ್ನೂ ದೃಢಪಡಿಸಿಲ್ಲ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಸೌಜನ್ಯ : thenewsminute.com

ಮೂವರು ಅಪ್ರಾಪ್ತ ಆದಿವಾಸಿ ಬಾಲಕಿಯರ ಮೇಲೆ 18 ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...