Homeಮುಖಪುಟಶ್ರೀಶೈಲಂ ಸುರಂಗ ಕುಸಿತ : ನಾಲ್ಕು ದಿನ ಕಳೆದರೂ ಸಿಗದ ಕಾರ್ಮಿಕರ ಸುಳಿವು : ತಜ್ಞರ...

ಶ್ರೀಶೈಲಂ ಸುರಂಗ ಕುಸಿತ : ನಾಲ್ಕು ದಿನ ಕಳೆದರೂ ಸಿಗದ ಕಾರ್ಮಿಕರ ಸುಳಿವು : ತಜ್ಞರ ಮೊರೆ ಹೋದ ತೆಲಂಗಾಣ ಸರ್ಕಾರ

- Advertisement -
- Advertisement -

ಶ್ರೀಶೈಲಂ ಎಡದಂಡೆ ಕಾಲುವೆಯ ಸುರಂಗದ ಒಂದು ಭಾಗ ಶನಿವಾರ (ಫೆ.22) ಕುಸಿದು ಬಿದ್ದಿದ್ದು, ಅದರಲ್ಲಿ ಸಿಲುಕಿರುವ ಎಂಟು ಮಂದಿ ಕಾರ್ಮಿಕರನ್ನು ರಕ್ಷಿಸುವ ಬಗ್ಗೆ ಮುಂದಿನ ದಾರಿಯನ್ನು ಸೂಚಿಸಲು ತೆಲಂಗಾಣ ಸರ್ಕಾರ ಜಿಎಸ್‌ಐ ಮತ್ತು ಎನ್‌ಜಿಆರ್‌ಐ ತಜ್ಞರ ಮೊರೆ ಹೋಗಿದೆ.

ಎಂಟು ಮಂದಿ ಕಾರ್ಮಿಕರು ನಾಲ್ಕು ದಿನ ಕಳೆದರೂ ಸುರಂಗದೊಳಗಡೆಯೇ ಸಿಲುಕಿಕೊಂಡಿದ್ದು, ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್‌ಐ) ಮತ್ತು ರಾಷ್ಟ್ರೀಯ ಭೌಗೋಳಿಕ ಸಂಶೋಧನಾ ಸಂಸ್ಥೆ (ಎನ್‌ಜಿಆರ್‌ಐ)ಯ ತಜ್ಞರನ್ನು ರಕ್ಷಣಾ ಕಾರ್ಯಗಳಲ್ಲಿ ಸೇರಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ (ಫೆ.25) ತಿಳಿಸಿದ್ದಾರೆ.

ನಾಗರಕುರ್ನೂಲ್ ಜಿಲ್ಲಾಧಿಕಾರಿ ಬಿ ಸಂತೋಷ್ ಮಂಗಳವಾರ ಮಾತನಾಡಿ, “ಯಾವುದೇ ಹೆಜ್ಜೆ ಮುಂದಿಡುವ ಮುನ್ನ ಸುರಂಗದ ಸ್ಥಿರತೆಯನ್ನು ಪರಿಗಣಿಸಿ ಮುಂದುವರಿಯಲಾಗುತ್ತಿದೆ. ಪ್ರಸ್ತುತ ಸುರಂಗದ ನಿರ್ಜಲೀಕರಣ (ನೀರು ಇಂಗಿಸುವುದು) ಕಾರ್ಯ ನಡೆಯುತ್ತಿದೆ” ಎಂದಿದ್ದಾರೆ.

“ಸದ್ಯಕ್ಕೆ ಕಾರ್ಮಿಕರೊಂದಿಗೆ ಯಾವುದೇ ಸಂವಹನ ನಡೆಸಲು ಸಾಧ್ಯವಾಗುತ್ತಿಲ್ಲ. ನಾವು ಜಿಎಸ್‌ಐ ತಜ್ಞರು ಮತ್ತು ಇತರ ಕೆಲವು ಜನರ ಸಲಹೆಯನ್ನು ಪಡೆಯುತ್ತಿದ್ದೇವೆ. ಪ್ರಸ್ತುತ ನೀರು ಇಂಗಿಸುವ ಕಾರ್ಯ ನಡೆಯುತ್ತಿದೆ. ಸುರಂಗದ ಕೊನೆಯ 40-50 ಮೀಟರ್‌ಗಳವರೆಗೆ ಹೋಗಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಜಿಎಸ್‌ಐ ಮತ್ತು ಎನ್‌ಜಿಆರ್‌ಐ ತಜ್ಞರ ಸಲಹೆಯನ್ನು ಪಡೆಯುತ್ತಿದ್ದೇವೆ. ಎಲ್‌& ಟಿ ಸಂಸ್ಥೆಯ ತಜ್ಞರು ಕೂಡ ಸ್ಥಳಕ್ಕೆ ಬಂದಿದ್ದಾರೆ” ಎಂದು ಜಿಲ್ಲಾಧಿಕಾರಿ ಹೇಳಿದ್ದಾಗಿ ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

“ಎಂಟು ಜನರು ಸಿಲುಕಿಕೊಂಡಿರುವ ಕೊನೆಯ ಐವತ್ತು ಮೀಟರ್‌ ಒಳಗೆ ಹೋಗಲು ರಕ್ಷಣಾ ತಂಡಗಳಿಗೆ ಸಾಧ್ಯವಾಗಿಲ್ಲ. ಅಲ್ಲಿ ಮಣ್ಣು ಮತ್ತು ಅವಶೇಷಗಳು ತುಂಬಿಕೊಂಡಿದೆ” ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಜಿಎಸ್‌ಐ ಮತ್ತು ಎನ್‌ಜಿಆರ್‌ಐ ತಜ್ಞರ ಜೊತೆಗೆ, ಸುರಂಗ ಸಂಬಂಧಿತ ಕಾರ್ಯಾಚರಣೆಗಳಲ್ಲಿ ಅಪಾರ ಅನುಭವ ಹೊಂದಿರುವ ಎಲ್ & ಟಿ ಜೊತೆ ಸಂಬಂಧ ಇರುವ ಆಸ್ಟ್ರೇಲಿಯಾದ ತಜ್ಞರನ್ನು ಅವಘಡ ನಡೆದ ಸ್ಥಳದಲ್ಲಿ ಎಸ್‌ಎಲ್‌ಬಿಸಿ ಸುರಂಗದ ಸ್ಥಿರತೆಯನ್ನು ನಿರ್ಣಯಿಸಲು ನೇಮಿಸಲಾಗಿದೆ ಎಂದು ವರದಿಯಾಗಿದೆ.

ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಮತ್ತು ನೀರಾವರಿ ಸಚಿವ ಉತ್ತಮ್ ಕುಮಾರ್ ರೆಡ್ಡಿ ಇಂದು ಅವಘಡ ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸಿ ಕೆಲವು ನಿರ್ಣಾಯಕ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಭಾರತೀಯ ಸೇನೆ, ನೌಕಾಪಡೆ, ಎನ್‌ಡಿಆರ್‌ಎಫ್ ಮತ್ತು ಇತರ ತಂಡಗಳ ನಿರಂತರ ಪ್ರಯತ್ನಗಳ ಹೊರತಾಗಿಯೂ ರಕ್ಷಣಾ ಕಾರ್ಯಾಚರಣೆಯಲ್ಲಿ ಇದುವರೆಗೆ ಯಾವುದೇ ಪ್ರಗತಿ ಕಂಡು ಬಂದಿಲ್ಲ. ಕಾರ್ಮಿಕರು ಸಿಲುಕೊಂಡಿರುವ ಜಾಗದಲ್ಲಿ ಸಿಮೆಂಟ್, ಕಂಬಿ, ಮಣ್ಣು ಮತ್ತು ಇತರ ಅವಶೇಷಗಳು ಸಿಲುಕೊಂಡಿದೆ. ಅದನ್ನು ದಾಟಿ ಕಾರ್ಮಿಕರನ್ನು ತಲುಪುವುದು ಸವಾಲಾಗಿದೆ.

ಭೂಸೇನೆ, ನೌಕಾಪಡೆ, ಸಿಂಗರೇಣಿ ಕಲ್ಲಿದ್ದಲು ಗಣಿ ಮತ್ತು ಇತರ ಸಂಸ್ಥೆಗಳ 584 ನುರಿತ ಸಿಬ್ಬಂದಿಯ ತಂಡವು ಕೇಂದ್ರ ಮತ್ತು ರಾಜ್ಯ ವಿಪತ್ತು ನಿರ್ವಹಣಾ ತಂಡಗಳೊಂದಿಗೆ ಏಳು ಬಾರಿ ಸುರಂಗ ಪರಿಶೀಲನೆ ನಡೆಸಿದ್ದು, ಲೋಹದ ರಾಡ್ ಕತ್ತರಿಸಲು ಗ್ಯಾಸ್ ಕಟ್ಟರ್‌ಗಳನ್ನು ಬಳಸುವ ಮೂಲಕ ನಿರಂತರ ಪ್ರಯತ್ನ ಪಡುತ್ತಿದೆ ಎಂದು ವರದಿಗಳು ತಿಳಿಸಿವೆ.

“ದುರಂತ ಸ್ಥಳವು ಕೆಸರು ಮತ್ತು ಅವಶೇಷಗಳಿಂದ ತುಂಬಿರುವುದರಿಂದ ಸುರಂಗದೊಳಗಡೆ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಇನ್ನೂ ಕನಿಷ್ಠ ಮೂರರಿಂದ ನಾಲ್ಕು ದಿನಗಳು ಬೇಕಾಗಬಹುದು” ಎಂದು ತೆಲಂಗಾಣ ಸಚಿವ ಜೂಪಲ್ಲಿ ಕೃಷ್ಣ ರಾವ್ ಸೋಮವಾರ (ಫೆ.24) ಹೇಳಿದ್ದಾರೆ.

2023ರಲ್ಲಿ ಉತ್ತರಾಖಂಡದ ಸಿಲ್ಕ್ಯಾರಾ ಬೆಂಡ್-ಬಾರ್ಕೋಟ್ ಸುರಂಗದಲ್ಲಿ ಸಿಲುಕಿದ್ದ ನಿರ್ಮಾಣ ಕಾರ್ಮಿಕರನ್ನು ರಕ್ಷಿಸಿದ್ದ ಇಲಿ ಗಣಿಗಾರರ ತಂಡವು, ಕಾರ್ಮಿಕರನ್ನು ಹೊರತರಲು ರಕ್ಷಣಾ ತಂಡಗಳೊಂದಿಗೆ ಸೇರಿಕೊಂಡಿವೆ ಎಂದು ಕೃಷ್ಣ ರಾವ್ ತಿಳಿಸಿದ್ದಾರೆ.

ಕೇರಳ | ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ ಸೇರಿ ಐವರನ್ನು ಕೊಂದ ಯುವಕ : ವಿಷ ಸೇವಿಸಿ ಪೊಲೀಸರ ಮುಂದೆ ಶರಣು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...