Homeಅಂತರಾಷ್ಟ್ರೀಯಉಕ್ರೇನ್ ಯುದ್ಧಕ್ಕೆ ರಷ್ಯಾ ದೂಷಿಸಲು ಅಮೆರಿಕ ನಿರಾಕರಣೆ : ಕದನ ವಿರಾಮ ನಿರ್ಣಯಗಳ ಮತದಾನದಿಂದ ದೂರ...

ಉಕ್ರೇನ್ ಯುದ್ಧಕ್ಕೆ ರಷ್ಯಾ ದೂಷಿಸಲು ಅಮೆರಿಕ ನಿರಾಕರಣೆ : ಕದನ ವಿರಾಮ ನಿರ್ಣಯಗಳ ಮತದಾನದಿಂದ ದೂರ ಉಳಿದ ಭಾರತ

- Advertisement -
- Advertisement -

ರಷ್ಯಾ-ಉಕ್ರೇನ್‌ ನಡುವಿನ ಯುದ್ಧ ಮೂರು ವರ್ಷ ಪೂರೈಸಿರುವ ಹಿನ್ನೆಲೆ, ಶಾಂತಿ ಸ್ಥಾಪಿಸುವ ಸಂಬಂಧ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುನ್‌ಜಿಎ) ಮಂಡಿಸಿದ ನಿರ್ಣಯದ ಮೇಲಿನ ಮತದಾನ ಸೋಮವಾರ (ಫೆ.24) ನಾಟಕೀಯ ಬೆಳವಣಿಗೆಗೆ ಕಾರಣವಾಯಿತು.

ಉಕ್ರೇನ್ ಮೇಲಿನ ದಾಳಿಗೆ ರಷ್ಯಾವನ್ನು ದೂಷಿಸಲು ನಿರಾಕರಿಸಿದ ಡೊನಾಲ್ಡ್ ಟ್ರಂಪ್ ಆಡಳಿತ, ಈ ಹಿಂದೆ ಬೈಡೆನ್ ಆಡಳಿತದಲ್ಲಿ ರಷ್ಯಾ ವಿರುದ್ದ ನೀಡಿದ್ದ ಹೇಳಿಕೆಯನ್ನು ಹಿಂಪಡೆಯಿತು.

ವರದಿಗಳ ಪ್ರಕಾರ, ರಷ್ಯಾಗೆ ಪೂರಕವಾದ ರೀತಿಯಲ್ಲಿ ಯುದ್ಧ ಕೊನೆಗೊಳಿಸಲು ಅಮೆರಿಕ ಮುಂದಾಗಿದೆ. ಉಕ್ರೇನ್ ಹೊರಗಿಟ್ಟು ರಷ್ಯಾ ಜೊತೆ ಮಾತ್ರ ಚರ್ಚಿಸಿ ಏಕಪಕ್ಷೀಯ ನಿರ್ಣಯ ತೆಗೆದುಕೊಳ್ಳುತ್ತಿದೆ. ಇದಕ್ಕೆ ಯುರೋಪಿಯನ್ ಒಕ್ಕೂಟದ ಅದರ ಮಿತ್ರ ರಾಷ್ಟ್ರಗಳೇ ವಿರೋಧ ವ್ಯಕ್ತಪಡಿಸಿವೆ.

ಸೋಮವಾರ ವಿಶ್ವಸಂಸ್ಥೆಯಲ್ಲಿ, ಅಮೆರಿಕ ಮತ್ತು ರಷ್ಯಾ ಎರಡೂ ಯುರೋಪಿಯನ್ ಒಕ್ಕೂಟ ಬೆಂಬಲಿತ ನಿರ್ಣಯವನ್ನು ವಿರೋಧಿಸಿದವು. ಏಕೆಂದರೆ, ಆ ನಿರ್ಣಯದಲ್ಲಿ ಉಕ್ರೇನ್ ಮೇಲಿನ ದಾಳಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ನೇರವಾಗಿ ದೂಷಿಸಲಾಗಿದೆ.

ರಷ್ಯಾ-ಉಕ್ರೇನ್ ಯುದ್ಧದ ಕುರಿತಾದ ಹಿಂದಿನ ನಿರ್ಣಯಗಳಿಗೆ ಹೋಲಿಸಿದರೆ ಕಡಿಮೆ ಬೆಂಬಲವನ್ನು ಗಳಿಸಿದ ಈ ನಿರ್ಣಯವು, ರಷ್ಯಾವನ್ನು ಬಲವಾಗಿ ಟೀಕಿಸಿದೆ ಮತ್ತು ಉಕ್ರೇನ್‌ನ ಪ್ರಾದೇಶಿಕ ಸಮಗ್ರತೆ ಮತ್ತು ಅದರ ಗಡಿಗಳ ಉಲ್ಲಂಘನೆಯನ್ನು ಒತ್ತಿ ಹೇಳಿದೆ.

ಅಮೆರಿದಕ ದ್ವಂದ್ವ ನೀತಿಯ ಕಾರಣ, ಉದ್ವಿಗ್ನತೆ ಕಡಿಮೆ ಮಾಡಲು, ಬೇಗನೆ ಕದನ ವಿರಾಮವನ್ನು ಘೋಷಿಸಲು ಮತ್ತು ಯುದ್ಧಕ್ಕೆ ಶಾಂತಿಯುತ ಪರಿಹಾರವನ್ನು ಕೋರುವ ಪ್ರತ್ಯೇಕ ನಿರ್ಣಯದಿಂದ ಭಾರತ ಮತ್ತು ಚೀನಾ ದೂರ ಉಳಿದವು.

ಭಾರತ ಮತ್ತು ಚೀನಾ ಜೊತೆಗೆ, ಬ್ರೆಝಿಲ್, ಇರಾನ್, ಇರಾಕ್, ಪಾಕಿಸ್ತಾನ, ಬಾಂಗ್ಲಾದೇಶ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಯುಎಇ, ವಿಯೆಟ್ನಾಂ ಸೇರಿದಂತೆ 65 ಯುಎನ್‌ ಸದಸ್ಯ ರಾಷ್ಟ್ರಗಳು ನಿರ್ಣಯದಿಂದ ದೂರ ಉಳಿದವು.

ನಂತರ, ಅಮೆರಿಕ ಮತ್ತು ರಷ್ಯಾ ಎರಡೂ ರಾಷ್ಟ್ರಗಳು ರಷ್ಯಾದ ಕಡೆಗೆ ಬೆರಳು ತೋರಿಸದೆ ಯುದ್ಧವನ್ನು ತ್ವರಿತವಾಗಿ ಕೊನೆಗೊಳಿಸಲು ಕರೆ ನೀಡುವ ಭದ್ರತಾ ಮಂಡಳಿಯ ನಿರ್ಣಯವನ್ನು ಬೆಂಬಲಿಸಿದವು.

ರಷ್ಯಾವನ್ನು ದೂಷಿಸುವ ನಿರ್ಣಯವನ್ನು ಅಮೆರಿಕ ಮತ್ತು ರಷ್ಯಾ ವಿರೋಧಿಸಿದ ಬಳಿಕ, ಜಿ-7 ರಾಷ್ಟ್ರಗಳು ನಿರ್ಣಯ ತೆಗೆದುಕೊಳ್ಳಲು ಹೆಣಗಾಡಿದವು. ಅದರ ಪರಿಣಾಮವಾಗಿ ತಟಸ್ಥ ನಿಲುವು ಅನುಸರಿವೆ.

ಯುರೋಪಿಯನ್ ರಾಷ್ಟ್ರಗಳು ಮತ್ತು ಯುರೋಪಿಯನ್ ಒಕ್ಕೂಟದಿಂದ ಯಾವುದೇ ಸಲಹೆ ಪಡೆಯದೆ, ಕೇವಲ ರಷ್ಯಾದ ವಿಷಯಗಳನ್ನು ಪರಿಣಿಸಿ ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಟ್ರಂಪ್ ಅತ್ಯಂತ ವೇಗದಿಂದು ಮುಂದುವರಿಯುತ್ತಿದ್ದಾರೆ. ” ಸೋಮವಾರ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಅವರು ” ಯುದ್ದ ಕೊನೆಗೊಳಿಸುವ ನಿಟ್ಟಿನಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಾನು ಗಂಭೀರ ಚರ್ಚೆಗಳಲ್ಲಿ ತೊಡಗಿದ್ದೇನೆ” ಎಂದಿದ್ದರು.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಈ ವಾರದಲ್ಲೇ ವಾಷಿಂಗ್ಟನ್‌ಗೆ ಪ್ರಯಾಣಿಸಿ ನೈಸರ್ಗಿಕ ಸಂಪನ್ಮೂಲಗಳ ಒಪ್ಪಂದಕ್ಕೆ ಸಹಿ ಹಾಕಬಹುದು ಎಂದು ಟ್ರಂಪ್ ಶ್ವೇತಭವನದಲ್ಲಿ ಹೇಳಿದ್ದರು. ಯುದ್ಧವನ್ನು ಕೊನೆಗೊಳಿಸಲು ಮತ್ತು ಅಮೆರಿಕ ನೀಡಿದ ಬೆಂಬಲದ ಋಣ ತೀರಿಸಲು ಟ್ರಂಪ್ ಈ ಒಪ್ಪಂದ ಅಗತ್ಯವೆಂದು ಹೇಳಿದ್ದಾರೆ.

ಆದರೆ, ಟ್ರಂಪ್ ಅವರ ಈ ನಡೆ ಉಕ್ರೇನ್ ಮೇಲೆ ಬೆದರಿಕೆ ಹಾಕಿ, ಯುದ್ಧ ನಿಲ್ಲಿಸುವ ನೆಪದಲ್ಲಿ ಲಾಭ ಪಡೆಯುವುದು ಮತ್ತು ರಷ್ಯಾ ಪರ ವಕಾಲತ್ತು ವಹಿಸಿದಂತೆ ಕಾಣುತ್ತಿದೆ.

ಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...