Homeಮುಖಪುಟಡ್ರಗ್ಸ್‌ ಮಾಫಿಯಾ ವಿರುದ್ಧ 'ಬುಲ್ಡೋಜರ್ ನ್ಯಾಯ' ಬಳಸುತ್ತಿರುವ ಪಂಜಾಬ್‌ ಸರ್ಕಾರ

ಡ್ರಗ್ಸ್‌ ಮಾಫಿಯಾ ವಿರುದ್ಧ ‘ಬುಲ್ಡೋಜರ್ ನ್ಯಾಯ’ ಬಳಸುತ್ತಿರುವ ಪಂಜಾಬ್‌ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶ ಮಾಡೆಲ್ ಬಳಸುತ್ತಿರುವ ಪಂಜಾಬ್ ಪೊಲೀಸರು, ಲುಧಿಯಾನ ಮತ್ತು ಸುತ್ತಮುತ್ತಲಿನ ಮಾದಕ ದ್ರವ್ಯ ಮಾಫಿಯಾ ಸೋನು ಮತ್ತು ರಾಹುಲ್ ಹನ್ಸ್ ಅವರ ಮನೆಗಳನ್ನು ಕೆಡವಿದ್ದಾರೆ.

ಇದು ರಾಜ್ಯ ಸರ್ಕಾರದ ಮಾದಕ ದ್ರವ್ಯಗಳ ವಿರುದ್ಧದ ಯುದ್ಧದ ಭಾಗವಾಗಿದೆ. ಪೊಲೀಸ್ ಸಿಬ್ಬಂದಿ ಬುಲ್ಡೋಜರ್‌ಗಳೊಂದಿಗೆ ಬಂದು ಮಾದಕ ದ್ರವ್ಯ ಮಾಫಿಯಾದ ಇಬ್ಬರು ವ್ಯಕ್ತಿಗಳೊಂದಿಗೆ ಸಂಬಂಧ ಹೊಂದಿದ್ದ ಅಕ್ರಮ ಆಸ್ತಿಗಳನ್ನು ನೆಲಸಮ ಮಾಡಿದ್ದಾರೆ.

ಸೋಮವಾರ ರಾತ್ರಿ, ಪೊಲೀಸರು ತಲ್ವಂಡಿ ಗ್ರಾಮದಲ್ಲಿ ಮಾದಕ ದ್ರವ್ಯ ಮಾಫಿಯಾ ಸೋನು ಅವರ ಮನೆಯ ಅಕ್ರಮ ನಿರ್ಮಾಣವನ್ನು ಬುಲ್ಡೋಜರ್‌ಗಳೊಂದಿಗೆ ನೆಲಸಮ ಮಾಡಿದ್ದಾರೆ. ಸೋನು ಮೂರು ವರ್ಷಗಳಿಂದ ಮಾದಕ ದ್ರವ್ಯ ಕಳ್ಳಸಾಗಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಆತನ ವಿರುದ್ಧ ಆರು ಎಫ್‌ಐಆರ್‌ಗಳು ದಾಖಲಾಗಿವೆ.

ಇಂದು ಮುಂಜಾನೆ ಮತ್ತೊಂದು ಘಟನೆಯಲ್ಲಿ, ಪೊಲೀಸರು ಲುಧಿಯಾನದಲ್ಲಿರುವ ರಾಹುಲ್ ಹನ್ಸ್ ಅವರ ಮೆನಯನ್ನು ಸಹ ನೆಲಸಮ ಮಾಡಿದ್ದಾರೆ. ಹನ್ಸ್ ಅವರ ಭವನವು ₹47 ಲಕ್ಷ ಮೌಲ್ಯದ್ದಾಗಿತ್ತು. ಪಂಜಾಬ್ ಸರ್ಕಾರವು ಅಕ್ರಮ ಚಟುವಟಿಕೆಗಳ ವಿರುದ್ಧ ಉತ್ತರ ಪ್ರದೇಶ ಮತ್ತು ಹರಿಯಾಣ ಸರ್ಕಾರಗಳ ಶೈಲಿಯನ್ನು ಅನುಸರಿಸುತ್ತಿರುವಂತೆ ತೋರುತ್ತಿದೆ.

ಪಂಜಾಬ್ ಸರ್ಕಾರವು ರಾಜ್ಯದಲ್ಲಿ ಮಾದಕ ದ್ರವ್ಯ ದುರುಪಯೋಗದ ವಿರುದ್ಧ ಕಠಿಣ ಕ್ರಮವನ್ನು ಘೋಷಿಸಿದೆ. ಸಾಕಷ್ಟು ಪುನರ್ವಸತಿ ಮತ್ತು ವ್ಯಸನ ಮುಕ್ತಿ ಸೌಲಭ್ಯಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ.

ಸರ್ಕಾರವು ತನ್ನ ಕ್ರಮವು ಮಾದಕ ವಸ್ತುಗಳ ಅಭ್ಯಾಸವಿರುವ ಬಳಕೆದಾರರಲ್ಲಿ ತೊಂದರೆಯನ್ನು ಉಂಟುಮಾಡಬಹುದು ಎಂದು ಹೇಳಿಕೆಯಲ್ಲಿ ತಿಳಿಸಿದೆ. “ಮಾದಕ ವಸ್ತುಗಳ ಸೇವನೆಯಿಂದ ನಿಧಾನವಾಗಿ ದೂರವಾಗಲು, ಬುಪ್ರೆನಾರ್ಫಿನ್ ಔಷಧ, ಪರೀಕ್ಷಾ ಕಿಟ್‌ಗಳು, ಅಗತ್ಯವಿರುವ ಸಿಬ್ಬಂದಿ ಇತ್ಯಾದಿ ಸೇರಿದಂತೆ ಅಗತ್ಯ ಉಪಕರಣಗಳು ಮತ್ತು ಔಷಧಿಗಳೊಂದಿಗೆ ಸಾಕಷ್ಟು ಸಂಖ್ಯೆಯ ಪುನರ್ವಸತಿ ಮತ್ತು ಮಾದಕ ವಸ್ತುಗಳ ವ್ಯಸನ ನಿರ್ಮೂಲನಾ ಕೇಂದ್ರಗಳನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಈ ಮೂಲಕ ನಿರ್ದೇಶನ ನೀಡಲಾಗಿದೆ. ಸಿದ್ಧತೆಗಳನ್ನು ಯುದ್ಧೋಪಾದಿಯಲ್ಲಿ ಮಾಡಬೇಕು ಮತ್ತು ಪ್ರತಿ ಜಿಲ್ಲಾ ಪೊಲೀಸ್ ಮುಂದಿನ ಎರಡು ದಿನಗಳಲ್ಲಿ ಸಿದ್ಧರಾಗಿರಬೇಕು” ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

ಕಳೆದ ವಾರ, ಪಂಜಾಬ್ ಪೊಲೀಸರು ನಾಲ್ವರು ಮಾದಕ ವಸ್ತುಗಳ ಕಳ್ಳಸಾಗಣೆದಾರರನ್ನು ಬಂಧಿಸಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಐದು ಕಿಲೋಗ್ರಾಂಗಳಿಗಿಂತ ಹೆಚ್ಚು ಹೆರಾಯಿನ್ ವಶಪಡಿಸಿಕೊಂಡರು. ಆರೋಪಿಗಳನ್ನು ಅಮೃತಸರದ ನಿವಾಸಿಗಳಾದ ಗುರ್ಜಂತ್ ಸಿಂಗ್ ಅಲಿಯಾಸ್ ಕಲು ಮತ್ತು ತರಣ್ ತರಣ್‌ನ ಸಾಹಿಲ್ ಕುಮಾರ್ ಅಲಿಯಾಸ್ ಸಾಹಿಲ್ ಮತ್ತು ಫಿರೋಜ್‌ಪುರದ ರಿಂಕು ಎಂದು ಗುರುತಿಸಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ; ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಪ್ರಸಾದ್, ತೇಜಸ್ವಿ-ತೇಜ್ ಪ್ರತಾಪ್‌ಗೆ ನ್ಯಾಯಾಲಯದಿಂದ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...