Homeಮುಖಪುಟಡ್ರಗ್ಸ್‌ ಮಾಫಿಯಾ ವಿರುದ್ಧ 'ಬುಲ್ಡೋಜರ್ ನ್ಯಾಯ' ಬಳಸುತ್ತಿರುವ ಪಂಜಾಬ್‌ ಸರ್ಕಾರ

ಡ್ರಗ್ಸ್‌ ಮಾಫಿಯಾ ವಿರುದ್ಧ ‘ಬುಲ್ಡೋಜರ್ ನ್ಯಾಯ’ ಬಳಸುತ್ತಿರುವ ಪಂಜಾಬ್‌ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶ ಮಾಡೆಲ್ ಬಳಸುತ್ತಿರುವ ಪಂಜಾಬ್ ಪೊಲೀಸರು, ಲುಧಿಯಾನ ಮತ್ತು ಸುತ್ತಮುತ್ತಲಿನ ಮಾದಕ ದ್ರವ್ಯ ಮಾಫಿಯಾ ಸೋನು ಮತ್ತು ರಾಹುಲ್ ಹನ್ಸ್ ಅವರ ಮನೆಗಳನ್ನು ಕೆಡವಿದ್ದಾರೆ.

ಇದು ರಾಜ್ಯ ಸರ್ಕಾರದ ಮಾದಕ ದ್ರವ್ಯಗಳ ವಿರುದ್ಧದ ಯುದ್ಧದ ಭಾಗವಾಗಿದೆ. ಪೊಲೀಸ್ ಸಿಬ್ಬಂದಿ ಬುಲ್ಡೋಜರ್‌ಗಳೊಂದಿಗೆ ಬಂದು ಮಾದಕ ದ್ರವ್ಯ ಮಾಫಿಯಾದ ಇಬ್ಬರು ವ್ಯಕ್ತಿಗಳೊಂದಿಗೆ ಸಂಬಂಧ ಹೊಂದಿದ್ದ ಅಕ್ರಮ ಆಸ್ತಿಗಳನ್ನು ನೆಲಸಮ ಮಾಡಿದ್ದಾರೆ.

ಸೋಮವಾರ ರಾತ್ರಿ, ಪೊಲೀಸರು ತಲ್ವಂಡಿ ಗ್ರಾಮದಲ್ಲಿ ಮಾದಕ ದ್ರವ್ಯ ಮಾಫಿಯಾ ಸೋನು ಅವರ ಮನೆಯ ಅಕ್ರಮ ನಿರ್ಮಾಣವನ್ನು ಬುಲ್ಡೋಜರ್‌ಗಳೊಂದಿಗೆ ನೆಲಸಮ ಮಾಡಿದ್ದಾರೆ. ಸೋನು ಮೂರು ವರ್ಷಗಳಿಂದ ಮಾದಕ ದ್ರವ್ಯ ಕಳ್ಳಸಾಗಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಆತನ ವಿರುದ್ಧ ಆರು ಎಫ್‌ಐಆರ್‌ಗಳು ದಾಖಲಾಗಿವೆ.

ಇಂದು ಮುಂಜಾನೆ ಮತ್ತೊಂದು ಘಟನೆಯಲ್ಲಿ, ಪೊಲೀಸರು ಲುಧಿಯಾನದಲ್ಲಿರುವ ರಾಹುಲ್ ಹನ್ಸ್ ಅವರ ಮೆನಯನ್ನು ಸಹ ನೆಲಸಮ ಮಾಡಿದ್ದಾರೆ. ಹನ್ಸ್ ಅವರ ಭವನವು ₹47 ಲಕ್ಷ ಮೌಲ್ಯದ್ದಾಗಿತ್ತು. ಪಂಜಾಬ್ ಸರ್ಕಾರವು ಅಕ್ರಮ ಚಟುವಟಿಕೆಗಳ ವಿರುದ್ಧ ಉತ್ತರ ಪ್ರದೇಶ ಮತ್ತು ಹರಿಯಾಣ ಸರ್ಕಾರಗಳ ಶೈಲಿಯನ್ನು ಅನುಸರಿಸುತ್ತಿರುವಂತೆ ತೋರುತ್ತಿದೆ.

ಪಂಜಾಬ್ ಸರ್ಕಾರವು ರಾಜ್ಯದಲ್ಲಿ ಮಾದಕ ದ್ರವ್ಯ ದುರುಪಯೋಗದ ವಿರುದ್ಧ ಕಠಿಣ ಕ್ರಮವನ್ನು ಘೋಷಿಸಿದೆ. ಸಾಕಷ್ಟು ಪುನರ್ವಸತಿ ಮತ್ತು ವ್ಯಸನ ಮುಕ್ತಿ ಸೌಲಭ್ಯಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ.

ಸರ್ಕಾರವು ತನ್ನ ಕ್ರಮವು ಮಾದಕ ವಸ್ತುಗಳ ಅಭ್ಯಾಸವಿರುವ ಬಳಕೆದಾರರಲ್ಲಿ ತೊಂದರೆಯನ್ನು ಉಂಟುಮಾಡಬಹುದು ಎಂದು ಹೇಳಿಕೆಯಲ್ಲಿ ತಿಳಿಸಿದೆ. “ಮಾದಕ ವಸ್ತುಗಳ ಸೇವನೆಯಿಂದ ನಿಧಾನವಾಗಿ ದೂರವಾಗಲು, ಬುಪ್ರೆನಾರ್ಫಿನ್ ಔಷಧ, ಪರೀಕ್ಷಾ ಕಿಟ್‌ಗಳು, ಅಗತ್ಯವಿರುವ ಸಿಬ್ಬಂದಿ ಇತ್ಯಾದಿ ಸೇರಿದಂತೆ ಅಗತ್ಯ ಉಪಕರಣಗಳು ಮತ್ತು ಔಷಧಿಗಳೊಂದಿಗೆ ಸಾಕಷ್ಟು ಸಂಖ್ಯೆಯ ಪುನರ್ವಸತಿ ಮತ್ತು ಮಾದಕ ವಸ್ತುಗಳ ವ್ಯಸನ ನಿರ್ಮೂಲನಾ ಕೇಂದ್ರಗಳನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಈ ಮೂಲಕ ನಿರ್ದೇಶನ ನೀಡಲಾಗಿದೆ. ಸಿದ್ಧತೆಗಳನ್ನು ಯುದ್ಧೋಪಾದಿಯಲ್ಲಿ ಮಾಡಬೇಕು ಮತ್ತು ಪ್ರತಿ ಜಿಲ್ಲಾ ಪೊಲೀಸ್ ಮುಂದಿನ ಎರಡು ದಿನಗಳಲ್ಲಿ ಸಿದ್ಧರಾಗಿರಬೇಕು” ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

ಕಳೆದ ವಾರ, ಪಂಜಾಬ್ ಪೊಲೀಸರು ನಾಲ್ವರು ಮಾದಕ ವಸ್ತುಗಳ ಕಳ್ಳಸಾಗಣೆದಾರರನ್ನು ಬಂಧಿಸಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಐದು ಕಿಲೋಗ್ರಾಂಗಳಿಗಿಂತ ಹೆಚ್ಚು ಹೆರಾಯಿನ್ ವಶಪಡಿಸಿಕೊಂಡರು. ಆರೋಪಿಗಳನ್ನು ಅಮೃತಸರದ ನಿವಾಸಿಗಳಾದ ಗುರ್ಜಂತ್ ಸಿಂಗ್ ಅಲಿಯಾಸ್ ಕಲು ಮತ್ತು ತರಣ್ ತರಣ್‌ನ ಸಾಹಿಲ್ ಕುಮಾರ್ ಅಲಿಯಾಸ್ ಸಾಹಿಲ್ ಮತ್ತು ಫಿರೋಜ್‌ಪುರದ ರಿಂಕು ಎಂದು ಗುರುತಿಸಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ; ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಪ್ರಸಾದ್, ತೇಜಸ್ವಿ-ತೇಜ್ ಪ್ರತಾಪ್‌ಗೆ ನ್ಯಾಯಾಲಯದಿಂದ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...