Homeಮುಖಪುಟಡ್ರಗ್ಸ್‌ ಮಾಫಿಯಾ ವಿರುದ್ಧ 'ಬುಲ್ಡೋಜರ್ ನ್ಯಾಯ' ಬಳಸುತ್ತಿರುವ ಪಂಜಾಬ್‌ ಸರ್ಕಾರ

ಡ್ರಗ್ಸ್‌ ಮಾಫಿಯಾ ವಿರುದ್ಧ ‘ಬುಲ್ಡೋಜರ್ ನ್ಯಾಯ’ ಬಳಸುತ್ತಿರುವ ಪಂಜಾಬ್‌ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶ ಮಾಡೆಲ್ ಬಳಸುತ್ತಿರುವ ಪಂಜಾಬ್ ಪೊಲೀಸರು, ಲುಧಿಯಾನ ಮತ್ತು ಸುತ್ತಮುತ್ತಲಿನ ಮಾದಕ ದ್ರವ್ಯ ಮಾಫಿಯಾ ಸೋನು ಮತ್ತು ರಾಹುಲ್ ಹನ್ಸ್ ಅವರ ಮನೆಗಳನ್ನು ಕೆಡವಿದ್ದಾರೆ.

ಇದು ರಾಜ್ಯ ಸರ್ಕಾರದ ಮಾದಕ ದ್ರವ್ಯಗಳ ವಿರುದ್ಧದ ಯುದ್ಧದ ಭಾಗವಾಗಿದೆ. ಪೊಲೀಸ್ ಸಿಬ್ಬಂದಿ ಬುಲ್ಡೋಜರ್‌ಗಳೊಂದಿಗೆ ಬಂದು ಮಾದಕ ದ್ರವ್ಯ ಮಾಫಿಯಾದ ಇಬ್ಬರು ವ್ಯಕ್ತಿಗಳೊಂದಿಗೆ ಸಂಬಂಧ ಹೊಂದಿದ್ದ ಅಕ್ರಮ ಆಸ್ತಿಗಳನ್ನು ನೆಲಸಮ ಮಾಡಿದ್ದಾರೆ.

ಸೋಮವಾರ ರಾತ್ರಿ, ಪೊಲೀಸರು ತಲ್ವಂಡಿ ಗ್ರಾಮದಲ್ಲಿ ಮಾದಕ ದ್ರವ್ಯ ಮಾಫಿಯಾ ಸೋನು ಅವರ ಮನೆಯ ಅಕ್ರಮ ನಿರ್ಮಾಣವನ್ನು ಬುಲ್ಡೋಜರ್‌ಗಳೊಂದಿಗೆ ನೆಲಸಮ ಮಾಡಿದ್ದಾರೆ. ಸೋನು ಮೂರು ವರ್ಷಗಳಿಂದ ಮಾದಕ ದ್ರವ್ಯ ಕಳ್ಳಸಾಗಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಆತನ ವಿರುದ್ಧ ಆರು ಎಫ್‌ಐಆರ್‌ಗಳು ದಾಖಲಾಗಿವೆ.

ಇಂದು ಮುಂಜಾನೆ ಮತ್ತೊಂದು ಘಟನೆಯಲ್ಲಿ, ಪೊಲೀಸರು ಲುಧಿಯಾನದಲ್ಲಿರುವ ರಾಹುಲ್ ಹನ್ಸ್ ಅವರ ಮೆನಯನ್ನು ಸಹ ನೆಲಸಮ ಮಾಡಿದ್ದಾರೆ. ಹನ್ಸ್ ಅವರ ಭವನವು ₹47 ಲಕ್ಷ ಮೌಲ್ಯದ್ದಾಗಿತ್ತು. ಪಂಜಾಬ್ ಸರ್ಕಾರವು ಅಕ್ರಮ ಚಟುವಟಿಕೆಗಳ ವಿರುದ್ಧ ಉತ್ತರ ಪ್ರದೇಶ ಮತ್ತು ಹರಿಯಾಣ ಸರ್ಕಾರಗಳ ಶೈಲಿಯನ್ನು ಅನುಸರಿಸುತ್ತಿರುವಂತೆ ತೋರುತ್ತಿದೆ.

ಪಂಜಾಬ್ ಸರ್ಕಾರವು ರಾಜ್ಯದಲ್ಲಿ ಮಾದಕ ದ್ರವ್ಯ ದುರುಪಯೋಗದ ವಿರುದ್ಧ ಕಠಿಣ ಕ್ರಮವನ್ನು ಘೋಷಿಸಿದೆ. ಸಾಕಷ್ಟು ಪುನರ್ವಸತಿ ಮತ್ತು ವ್ಯಸನ ಮುಕ್ತಿ ಸೌಲಭ್ಯಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ.

ಸರ್ಕಾರವು ತನ್ನ ಕ್ರಮವು ಮಾದಕ ವಸ್ತುಗಳ ಅಭ್ಯಾಸವಿರುವ ಬಳಕೆದಾರರಲ್ಲಿ ತೊಂದರೆಯನ್ನು ಉಂಟುಮಾಡಬಹುದು ಎಂದು ಹೇಳಿಕೆಯಲ್ಲಿ ತಿಳಿಸಿದೆ. “ಮಾದಕ ವಸ್ತುಗಳ ಸೇವನೆಯಿಂದ ನಿಧಾನವಾಗಿ ದೂರವಾಗಲು, ಬುಪ್ರೆನಾರ್ಫಿನ್ ಔಷಧ, ಪರೀಕ್ಷಾ ಕಿಟ್‌ಗಳು, ಅಗತ್ಯವಿರುವ ಸಿಬ್ಬಂದಿ ಇತ್ಯಾದಿ ಸೇರಿದಂತೆ ಅಗತ್ಯ ಉಪಕರಣಗಳು ಮತ್ತು ಔಷಧಿಗಳೊಂದಿಗೆ ಸಾಕಷ್ಟು ಸಂಖ್ಯೆಯ ಪುನರ್ವಸತಿ ಮತ್ತು ಮಾದಕ ವಸ್ತುಗಳ ವ್ಯಸನ ನಿರ್ಮೂಲನಾ ಕೇಂದ್ರಗಳನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಈ ಮೂಲಕ ನಿರ್ದೇಶನ ನೀಡಲಾಗಿದೆ. ಸಿದ್ಧತೆಗಳನ್ನು ಯುದ್ಧೋಪಾದಿಯಲ್ಲಿ ಮಾಡಬೇಕು ಮತ್ತು ಪ್ರತಿ ಜಿಲ್ಲಾ ಪೊಲೀಸ್ ಮುಂದಿನ ಎರಡು ದಿನಗಳಲ್ಲಿ ಸಿದ್ಧರಾಗಿರಬೇಕು” ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

ಕಳೆದ ವಾರ, ಪಂಜಾಬ್ ಪೊಲೀಸರು ನಾಲ್ವರು ಮಾದಕ ವಸ್ತುಗಳ ಕಳ್ಳಸಾಗಣೆದಾರರನ್ನು ಬಂಧಿಸಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಐದು ಕಿಲೋಗ್ರಾಂಗಳಿಗಿಂತ ಹೆಚ್ಚು ಹೆರಾಯಿನ್ ವಶಪಡಿಸಿಕೊಂಡರು. ಆರೋಪಿಗಳನ್ನು ಅಮೃತಸರದ ನಿವಾಸಿಗಳಾದ ಗುರ್ಜಂತ್ ಸಿಂಗ್ ಅಲಿಯಾಸ್ ಕಲು ಮತ್ತು ತರಣ್ ತರಣ್‌ನ ಸಾಹಿಲ್ ಕುಮಾರ್ ಅಲಿಯಾಸ್ ಸಾಹಿಲ್ ಮತ್ತು ಫಿರೋಜ್‌ಪುರದ ರಿಂಕು ಎಂದು ಗುರುತಿಸಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ; ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಪ್ರಸಾದ್, ತೇಜಸ್ವಿ-ತೇಜ್ ಪ್ರತಾಪ್‌ಗೆ ನ್ಯಾಯಾಲಯದಿಂದ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...