Homeಕರ್ನಾಟಕಅಲೆಮಾರಿ ಸಮುದಾಯದ ಯುವತಿಯರ ಅತ್ಯಾಚಾರ-ಕೊಲೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಅಲೆಮಾರಿ ಸಮುದಾಯದ ಯುವತಿಯರ ಅತ್ಯಾಚಾರ-ಕೊಲೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

- Advertisement -
- Advertisement -

ಯಾದಗಿರಿ ಜಿಲ್ಲೆಯ ಗ್ರಾಮವೊಂದರಲ್ಲಿ ಚಿಂದಿ ಆಯಲು ಹೋಗಿದ್ದ ಬುಡ್ಗ ಜಂಗಮ ಅಲೆಮಾರಿ ಸಮುದಾಯದ ಇಬ್ಬರು ಹೆಣ್ಣು ಮಕ್ಕಳ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ (ಫೆ.25) ಸಂಜೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಮುಖಂಡ ವಡ್ಡಗೆರೆ ನಾಗರಾಜಯ್ಯ ಅವರು, “ಇಬ್ಬರು ಹೆಣ್ಣು ಮಕ್ಕಳ ಅತ್ಯಾಚಾರ ಕೊಲೆ ನಡೆದು ಹತ್ತು ದಿನಗಳಾಗಿವೆ. ಆದರೆ, ಈವರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸದಿರುವುದು ಖಂಡನೀಯ. ಇದು ಹಲವು ಅನುಮಾನಗಳಿವೆ ಎಡೆ ಮಾಡಿಕೊಟ್ಟಿದೆ. ಕರ್ನಾಟಕ ಎಂದಲ್ಲ, ಇಡೀ ದೇಶದಲ್ಲಿ ಪ್ರಸ್ತುತ ದಲಿತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ನಡೆಯುತ್ತಿದೆ. ಆದರೆ, ಸರ್ಕಾರಗಳು, ಪೊಲೀಸರು ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಕರಣದಲ್ಲಿ ಸಂತ್ರಸ್ತ ಕುಟುಂಬಗಳ ಪರ ನಿಲ್ಲಬೇಕು. ಅತ್ಯಾಚಾರವೆಸಗಿ, ಕೊಲೆಗೈದವರನ್ನು ತಕ್ಷಣ ಬಂಧಿಸಬೇಕು” ಎಂದು ಒತ್ತಾಯಿಸಿದರು.

ಬರಹಗಾರ, ದಲಿತ ಮುಖಂಡ ಹುಲಿಕುಂಟೆ ಮೂರ್ತಿ ಮಾತನಾಡಿ, “ಆರೋಪಿಗಳು ಸಂತ್ರಸ್ತರ ಮನೆಗಳ ಬಳಿ ಹೋಗಿ ಧಮ್ಕಿ ಹಾಕಿರುವುದು ಗೊತ್ತಾಗಿದೆ. ಆದರೆ, ಪೊಲೀಸರು ಆರೋಪಿಗಳು ಸಿಗುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಿಮಗೆ ಬಾಬಾ ಸಾಹೇಬರ ಮೇಲೆ ನಿಜಕ್ಕೂ ಗೌರವ ಇದ್ದರೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದರು.

ಹಿರಿಯ ಚಿಂತಕ ಜಿ ರಾಮಕೃಷ್ಣ ಅವರು ಮಾತನಾಡಿ, “ಈ ದೇಶದಲ್ಲಿ ನಡೆಯುತ್ತಿರುವ ಅನಾಚಾರ, ಅತ್ಯಾಚಾರ ಗಮನಿಸಿದರೆ ನಾವು ಮನುಷ್ಯರಾಗಿ ಬದುಕುತ್ತಿದ್ದೇವಾ ಎಂಬ ಅನುಮಾನ ಮೂಡುತ್ತಿದೆ. ಉತ್ತರ ಪ್ರದೇಶದಲ್ಲಿ ದಲಿತ ಹೆಣ್ಣು ಮಗಳು ನದಿಯಲ್ಲಿ ಸ್ನಾನ ಮಾಡಲು ಇಳಿದಳೆಂದು ಕ್ರೂರಿಗಳು ಆಕೆಯನ್ನು ಬಡಿಗೆಗಳಿಂದ ಹೊಡೆದು ಸಾಯಿಸಿದ್ದರು. ಇಂಥವರಿಗೆ ರಕ್ಷಣೆ ಕೊಡುವ ಸಂಸ್ಕೃತಿ ನಮ್ಮ ದೇಶದಲ್ಲಿ ಇದೆ. ಇಂತಹ ಸಮಾಜದಲ್ಲಿ ನಾವಿನ್ನೂ ಫ್ಯಾಸಿಸ್ಟ್‌ ಆಗಿದ್ದೀವಾ, ಅರೆ ಫ್ಯಾಸಿಸ್ಟ್ ಆಗಿದ್ದೀವಾ, ಸೆಮಿ ಫ್ಯಾಸಿಸ್ಟ್ ಆಗಿದ್ದೀವಾ ಎಂದು ಚರ್ಚೆ ಮಾಡುತ್ತಿದ್ದೇವೆ. ದೇಶದೆಲ್ಲೆಡೆ ಈಗ ಪುನೀತರಾದ ಜನರೇ ಇರುವುದು. ಯಮುನೆಯಲ್ಲಿ ಸ್ನಾನ ಮಾಡಿ ಬಂದಿದ್ದಾರೆ. ಐವತ್ತು ಕೋಟಿ ಜನರಲ್ಲಿ ನಲುವತ್ತು ಕೋಟಿ ಜನರಿಗೆ ಒಂದು ತರಹದ ನೀರು, ಇನ್ನು ಹತ್ತು ಕೋಟಿ ಜನರಿಗೆ ಒಂದು ತರಹದ ನೀರು. ನಾರಾಯಣ ಮೂರ್ತಿ, ಸುಧಾಮೂರ್ತಿ ತರದವರಿಗೆ ಬೇಲಿ ಕಟ್ಟಿ ಚೆನ್ನಾಗಿ ನೀರು ಹರಿಯುವ ಜಾಗ, ಸಾಮಾನ್ಯ ಜನರಿಗೆ ಚರಂಡಿ ನೀರು ಸೇರುವ ಜಾಗ. ಇದೇ ರೀತಿ ಈ ಅತ್ಯಾಚಾರ ವಿಚಾರದಲ್ಲೂ ಬಡವರಿಗೆ ಒಂದು ನ್ಯಾಯ, ಉಳ್ಳವರಿಗೆ ಮತ್ತೊಂದು ನ್ಯಾಯ ಎಂಬಂತಾಗಿದೆ. ಯಾದಗಿರಿಯೇನು ಬೆಂಗಳೂರಲ್ಲ, ಪುಟ್ಟ ಹಳ್ಳಿ. ಆರೋಪಿಗಳನ್ನು ಪತ್ತೆ ಹಚ್ಚುವುದು ಅಷ್ಟೇನೂ ಕಷ್ಟ ಅಲ್ಲ. ಆದರೆ, ಇದು ಅಧಿಕಾರಿಗಳಿಗೆ ಬಡವರ ಮೇಲೆ ಇರುವ ಅಸಡ್ಡೆ ತೋರಿಸುತ್ತದೆ” ಎಂದು ಹೇಳಿದರು.

“ಇಡೀ ದೇಶದಲ್ಲಿ ಯಾವುದೇ ಸರ್ಕಾರ, ಅಲೆಮಾರಿಗಳಿಗೆ ಇದುವರೆಗೆ ಯಾವುದೇ ರೀತಿಯಲ್ಲಿ ರಕ್ಷಣೆ ಕೊಟ್ಟಿಲ್ಲ, ಮನೆ ಕೊಟ್ಟಿಲ್ಲ. ಯಾಕೆ ಅಲೆಮಾರಿಗಳಾಗಿದ್ದಾರೆ ಎಂಬ ಮೂಲ ಪ್ರಶ್ನೆ ಕೇಳಬೇಕಾಗಿದೆ. ಯಾರೂ ಸರ್ಕಾರಗಳ ಮೇಲೆ ಒತ್ತಡ ಹಾಕುತ್ತಿಲ್ಲ. ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ನಾವು ಯಾಕೆ ಹೀಗಿದ್ದೇವೆ? ನಾವೀಗ ಒಟ್ಟಾಗಿ ಅಲೆಮಾರಿಗಳಿಗೆ ಭೂಮಿ ಕೊಡಿ ನೌಕರಿ ಕೊಡಿ ಎಂದು ಕೇಳಬೇಕಿದೆ. ಯಾದಗಿರಿಯ ಅತ್ಯಾಚಾರ ಪ್ರಕರಣದಲ್ಲಿ ಅರೋಪಿಗಳ ಬಂಧನ ಸರ್ಕಾರದ ಕೈಯಲ್ಲಿ ಆಗಲ್ಲ ಅಂತಲ್ಲ, ಪೊಲೀಸರು ಮನಸ್ಸು ಮಾಡಿದರೆ ಆರೋಪಿಗಳನ್ನು ಬಂಧಿಸುವುದು ಕಷ್ಟವೇನಲ್ಲ. ಹಾಗಾಗಿ, ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು” ಎಂದು ಅಲೆಮಾರಿ ಸಮುದಾಯಗಳ ಹೋರಾಟಗಾರರು ಎಚ್ಚರಿಸಿದರು.

‘ತಮಟೆ ಮೀಡಿಯಾ’ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ಅಲೆಮಾರಿ ಬಡಕಟ್ಟು ಮಹಾಸಭಾ, ಸಫಾಯಿ ಕರ್ಮಚಾರಿ ಕಾವಲು ಸಮಿತಿ ಕರ್ನಾಟ, ಸುಡುಗಾಡು ಸಿದ್ದ ಮಹಾಸಂಘ, ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ದಲಿತ ವಿದ್ಯಾರ್ಥಿ ಪರಿಷತ್ತು, ಕರ್ನಾಟಕ ಜನಶಕ್ತಿ, ನಾವೆದ್ದು ನಿಲ್ಲದಿದ್ದರೆ, ಜಾಗೃತ ಕರ್ನಾಟಕ, AICCTU, AIPWA ಸೇರಿದಂತೆ ಹಲವು ಸಂಘಟನೆಯವರು ಪಾಲ್ಗೊಂಡಿದ್ದರು.

ಕರ್ನಾಟಕಕ್ಕೆ ಸಂಚರಿಸುವ ಬಸ್‌ಗಳಲ್ಲಿ ಪೊಲೀಸ್‌ ನಿಯೋಜನೆಗೆ ಮುಂದಾದ ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...