Homeಕರ್ನಾಟಕಅಲೆಮಾರಿ ಸಮುದಾಯದ ಯುವತಿಯರ ಅತ್ಯಾಚಾರ-ಕೊಲೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಅಲೆಮಾರಿ ಸಮುದಾಯದ ಯುವತಿಯರ ಅತ್ಯಾಚಾರ-ಕೊಲೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

- Advertisement -
- Advertisement -

ಯಾದಗಿರಿ ಜಿಲ್ಲೆಯ ಗ್ರಾಮವೊಂದರಲ್ಲಿ ಚಿಂದಿ ಆಯಲು ಹೋಗಿದ್ದ ಬುಡ್ಗ ಜಂಗಮ ಅಲೆಮಾರಿ ಸಮುದಾಯದ ಇಬ್ಬರು ಹೆಣ್ಣು ಮಕ್ಕಳ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ (ಫೆ.25) ಸಂಜೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಮುಖಂಡ ವಡ್ಡಗೆರೆ ನಾಗರಾಜಯ್ಯ ಅವರು, “ಇಬ್ಬರು ಹೆಣ್ಣು ಮಕ್ಕಳ ಅತ್ಯಾಚಾರ ಕೊಲೆ ನಡೆದು ಹತ್ತು ದಿನಗಳಾಗಿವೆ. ಆದರೆ, ಈವರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸದಿರುವುದು ಖಂಡನೀಯ. ಇದು ಹಲವು ಅನುಮಾನಗಳಿವೆ ಎಡೆ ಮಾಡಿಕೊಟ್ಟಿದೆ. ಕರ್ನಾಟಕ ಎಂದಲ್ಲ, ಇಡೀ ದೇಶದಲ್ಲಿ ಪ್ರಸ್ತುತ ದಲಿತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ನಡೆಯುತ್ತಿದೆ. ಆದರೆ, ಸರ್ಕಾರಗಳು, ಪೊಲೀಸರು ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಕರಣದಲ್ಲಿ ಸಂತ್ರಸ್ತ ಕುಟುಂಬಗಳ ಪರ ನಿಲ್ಲಬೇಕು. ಅತ್ಯಾಚಾರವೆಸಗಿ, ಕೊಲೆಗೈದವರನ್ನು ತಕ್ಷಣ ಬಂಧಿಸಬೇಕು” ಎಂದು ಒತ್ತಾಯಿಸಿದರು.

ಬರಹಗಾರ, ದಲಿತ ಮುಖಂಡ ಹುಲಿಕುಂಟೆ ಮೂರ್ತಿ ಮಾತನಾಡಿ, “ಆರೋಪಿಗಳು ಸಂತ್ರಸ್ತರ ಮನೆಗಳ ಬಳಿ ಹೋಗಿ ಧಮ್ಕಿ ಹಾಕಿರುವುದು ಗೊತ್ತಾಗಿದೆ. ಆದರೆ, ಪೊಲೀಸರು ಆರೋಪಿಗಳು ಸಿಗುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಿಮಗೆ ಬಾಬಾ ಸಾಹೇಬರ ಮೇಲೆ ನಿಜಕ್ಕೂ ಗೌರವ ಇದ್ದರೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದರು.

ಹಿರಿಯ ಚಿಂತಕ ಜಿ ರಾಮಕೃಷ್ಣ ಅವರು ಮಾತನಾಡಿ, “ಈ ದೇಶದಲ್ಲಿ ನಡೆಯುತ್ತಿರುವ ಅನಾಚಾರ, ಅತ್ಯಾಚಾರ ಗಮನಿಸಿದರೆ ನಾವು ಮನುಷ್ಯರಾಗಿ ಬದುಕುತ್ತಿದ್ದೇವಾ ಎಂಬ ಅನುಮಾನ ಮೂಡುತ್ತಿದೆ. ಉತ್ತರ ಪ್ರದೇಶದಲ್ಲಿ ದಲಿತ ಹೆಣ್ಣು ಮಗಳು ನದಿಯಲ್ಲಿ ಸ್ನಾನ ಮಾಡಲು ಇಳಿದಳೆಂದು ಕ್ರೂರಿಗಳು ಆಕೆಯನ್ನು ಬಡಿಗೆಗಳಿಂದ ಹೊಡೆದು ಸಾಯಿಸಿದ್ದರು. ಇಂಥವರಿಗೆ ರಕ್ಷಣೆ ಕೊಡುವ ಸಂಸ್ಕೃತಿ ನಮ್ಮ ದೇಶದಲ್ಲಿ ಇದೆ. ಇಂತಹ ಸಮಾಜದಲ್ಲಿ ನಾವಿನ್ನೂ ಫ್ಯಾಸಿಸ್ಟ್‌ ಆಗಿದ್ದೀವಾ, ಅರೆ ಫ್ಯಾಸಿಸ್ಟ್ ಆಗಿದ್ದೀವಾ, ಸೆಮಿ ಫ್ಯಾಸಿಸ್ಟ್ ಆಗಿದ್ದೀವಾ ಎಂದು ಚರ್ಚೆ ಮಾಡುತ್ತಿದ್ದೇವೆ. ದೇಶದೆಲ್ಲೆಡೆ ಈಗ ಪುನೀತರಾದ ಜನರೇ ಇರುವುದು. ಯಮುನೆಯಲ್ಲಿ ಸ್ನಾನ ಮಾಡಿ ಬಂದಿದ್ದಾರೆ. ಐವತ್ತು ಕೋಟಿ ಜನರಲ್ಲಿ ನಲುವತ್ತು ಕೋಟಿ ಜನರಿಗೆ ಒಂದು ತರಹದ ನೀರು, ಇನ್ನು ಹತ್ತು ಕೋಟಿ ಜನರಿಗೆ ಒಂದು ತರಹದ ನೀರು. ನಾರಾಯಣ ಮೂರ್ತಿ, ಸುಧಾಮೂರ್ತಿ ತರದವರಿಗೆ ಬೇಲಿ ಕಟ್ಟಿ ಚೆನ್ನಾಗಿ ನೀರು ಹರಿಯುವ ಜಾಗ, ಸಾಮಾನ್ಯ ಜನರಿಗೆ ಚರಂಡಿ ನೀರು ಸೇರುವ ಜಾಗ. ಇದೇ ರೀತಿ ಈ ಅತ್ಯಾಚಾರ ವಿಚಾರದಲ್ಲೂ ಬಡವರಿಗೆ ಒಂದು ನ್ಯಾಯ, ಉಳ್ಳವರಿಗೆ ಮತ್ತೊಂದು ನ್ಯಾಯ ಎಂಬಂತಾಗಿದೆ. ಯಾದಗಿರಿಯೇನು ಬೆಂಗಳೂರಲ್ಲ, ಪುಟ್ಟ ಹಳ್ಳಿ. ಆರೋಪಿಗಳನ್ನು ಪತ್ತೆ ಹಚ್ಚುವುದು ಅಷ್ಟೇನೂ ಕಷ್ಟ ಅಲ್ಲ. ಆದರೆ, ಇದು ಅಧಿಕಾರಿಗಳಿಗೆ ಬಡವರ ಮೇಲೆ ಇರುವ ಅಸಡ್ಡೆ ತೋರಿಸುತ್ತದೆ” ಎಂದು ಹೇಳಿದರು.

“ಇಡೀ ದೇಶದಲ್ಲಿ ಯಾವುದೇ ಸರ್ಕಾರ, ಅಲೆಮಾರಿಗಳಿಗೆ ಇದುವರೆಗೆ ಯಾವುದೇ ರೀತಿಯಲ್ಲಿ ರಕ್ಷಣೆ ಕೊಟ್ಟಿಲ್ಲ, ಮನೆ ಕೊಟ್ಟಿಲ್ಲ. ಯಾಕೆ ಅಲೆಮಾರಿಗಳಾಗಿದ್ದಾರೆ ಎಂಬ ಮೂಲ ಪ್ರಶ್ನೆ ಕೇಳಬೇಕಾಗಿದೆ. ಯಾರೂ ಸರ್ಕಾರಗಳ ಮೇಲೆ ಒತ್ತಡ ಹಾಕುತ್ತಿಲ್ಲ. ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ನಾವು ಯಾಕೆ ಹೀಗಿದ್ದೇವೆ? ನಾವೀಗ ಒಟ್ಟಾಗಿ ಅಲೆಮಾರಿಗಳಿಗೆ ಭೂಮಿ ಕೊಡಿ ನೌಕರಿ ಕೊಡಿ ಎಂದು ಕೇಳಬೇಕಿದೆ. ಯಾದಗಿರಿಯ ಅತ್ಯಾಚಾರ ಪ್ರಕರಣದಲ್ಲಿ ಅರೋಪಿಗಳ ಬಂಧನ ಸರ್ಕಾರದ ಕೈಯಲ್ಲಿ ಆಗಲ್ಲ ಅಂತಲ್ಲ, ಪೊಲೀಸರು ಮನಸ್ಸು ಮಾಡಿದರೆ ಆರೋಪಿಗಳನ್ನು ಬಂಧಿಸುವುದು ಕಷ್ಟವೇನಲ್ಲ. ಹಾಗಾಗಿ, ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು” ಎಂದು ಅಲೆಮಾರಿ ಸಮುದಾಯಗಳ ಹೋರಾಟಗಾರರು ಎಚ್ಚರಿಸಿದರು.

‘ತಮಟೆ ಮೀಡಿಯಾ’ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ಅಲೆಮಾರಿ ಬಡಕಟ್ಟು ಮಹಾಸಭಾ, ಸಫಾಯಿ ಕರ್ಮಚಾರಿ ಕಾವಲು ಸಮಿತಿ ಕರ್ನಾಟ, ಸುಡುಗಾಡು ಸಿದ್ದ ಮಹಾಸಂಘ, ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ದಲಿತ ವಿದ್ಯಾರ್ಥಿ ಪರಿಷತ್ತು, ಕರ್ನಾಟಕ ಜನಶಕ್ತಿ, ನಾವೆದ್ದು ನಿಲ್ಲದಿದ್ದರೆ, ಜಾಗೃತ ಕರ್ನಾಟಕ, AICCTU, AIPWA ಸೇರಿದಂತೆ ಹಲವು ಸಂಘಟನೆಯವರು ಪಾಲ್ಗೊಂಡಿದ್ದರು.

ಕರ್ನಾಟಕಕ್ಕೆ ಸಂಚರಿಸುವ ಬಸ್‌ಗಳಲ್ಲಿ ಪೊಲೀಸ್‌ ನಿಯೋಜನೆಗೆ ಮುಂದಾದ ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...