Homeಕರ್ನಾಟಕಅಕ್ರಮ ಡಿನೋಟಿಫಿಕೇಶನ್ ಪ್ರಕರಣ : ಕುಮಾರಸ್ವಾಮಿಗೆ ಮತ್ತೆ ಸಂಕಷ್ಟ

ಅಕ್ರಮ ಡಿನೋಟಿಫಿಕೇಶನ್ ಪ್ರಕರಣ : ಕುಮಾರಸ್ವಾಮಿಗೆ ಮತ್ತೆ ಸಂಕಷ್ಟ

ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಅಕ್ರಮ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಹಾಲಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಅಕ್ರಮ ಡಿನೋಟಿಫಿಕೇಶನ್‌ಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡುವಂತೆ ಕೋರಿ ಕುಮಾರಸ್ವಾಮಿ ಸಲ್ಲಿಸಿದ್ದ ಮನವಿಯನ್ನು 2020ರಲ್ಲಿ ಹೈಕೋರ್ಟ್ ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು.  ಈ ಮೇಲ್ಮನವಿಯನ್ನು ಪರಿಗಣಿಸಲು ನ್ಯಾಯಮೂರ್ತಿಗಳಾದ ದೀಂಪಕರ್ ದತ್ತಾ ಮತ್ತು ರಾಜೇಶ್ ಬಿಂದಾಲ್ ಅವರ ಸುಪ್ರೀಂ ಕೋರ್ಟ್ ಪೀಠ ಮಂಗಳವಾರ (ಫೆ.25) ನಿರಾಕರಿಸಿದೆ.

“ಅಕ್ರಮ ಡಿನೋಟಿಫಿಕೇಶನ್ ಮತ್ತು ಅಧಿಕಾರ ದುರುಪಯೋಗ ಆರೋಪವನ್ನು ವಿಚಾರಣೆ ಇಲ್ಲದೆ ಬಿ ರಿಪೋರ್ಟ್‌ ಹಾಕಲು ಸಾಧ್ಯವಿಲ್ಲವೆಂದು” ನ್ಯಾಯಲಯವು ಅಭಿಪ್ರಾಯಪಟ್ಟಿದೆ ಎಂದು ವರದಿಯಾಗಿದೆ.

ಪ್ರಕರಣದ ವಿವರಣೆ : ಬೆಂಗಳೂರಿನ ಬನಶಂಕರಿ 5ನೇ ಹಂತದ ಹಳ್ಳಗೆ ವಡೇರಹಳ್ಳಿ ಗ್ರಾಮದ ಸರ್ವೆ ನಂಬರ್ 128 ಮತ್ತು 137 (ಒಟ್ಟು 2 ಎಕರೆ 24 ಗುಂಟೆ) ಅಕ್ರಮ ಡಿ ನೋಟಿಫಿಕೇಶನ್‌ಗೆ ಸಂಬಂಧಿಸಿದೆ. 1997ರ ಸೆಪ್ಟೆಂಬರ್ 12ರಂದು ಕರ್ನಾಟಕ ಸರ್ಕಾರ ಈ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು. 1998ರ ಎಪ್ರಿಲ್ 28 ರಂದು ಈ ಕುರಿತು ಆದೇಶ ಹೊರಡಿಸಿತ್ತು. ನಂತರ 1999ರ ಸಪ್ಟೆಂಬರ್‌ 29ರಂದು, ಈ ಜಾಗವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಗೆ ಅಭಿವೃದ್ಧಿ ಯೋಜನೆಗಳಿಗಾಗಿ ಹಸ್ತಾಂತರಿಸಲಾಗಿತ್ತು. ಈ ಮಧ್ಯೆ ಭೂಮಿಯ ಮೂಲ ಮಾಲಕರಾಗಿದ್ದ ಪದ್ಮಾ ಎಂಬವರು, ಭೂಮಿಯನ್ನು ಮೂರನೇ ವ್ಯಕ್ತಿಗೆ ಮಾರಾಟ ಮಾಡಿದ್ದರು.

ಕಾನೂನು ಬಾಹಿರವಾಗಿ ಮೂರನೇ ವ್ಯಕ್ತಿಗೆ ಮಾರಾಟ ಮಾಡಿದ ಪದ್ಮಾ ಅವರು ಆಗಿನ ಮುಖ್ಯಮಂತ್ರಿಯವರ ಬಳಿ ಭೂಮಿಯನ್ನು ಡಿನೋಟಿಫೈ ಮಾಡುವಂತೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ 2005ರ ಡಿಸೆಂಬರ್‌ 30ರಂದು, ಭೂಮಿಯು ತನ್ನ ಸ್ವಾಧೀನದಲ್ಲಿರುವುದರಿಂದ, ಡಿನೋಡಿಫೈ ಪ್ರಸ್ತಾವನೆಗೆ ಬಿಡಿಎ ತೀವ್ರ ವಿರೋಧ ವ್ಯಕ್ತಪಡಿಸಿತ್ತು. 2007ರ ಅಕ್ಟೋಬರ್ 10ರಂದು ಆಗಿನ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿಯವರು ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡು, ಭೂಮಿಯನ್ನು ಡಿನೋಟಿಫಿಕೇಶನ್ ಮಾಡುವ ಸಮಿತಿಯ ಮುಂದಿಡದೇ ಏಕಪಕ್ಷೀಯವಾಗಿ ಡಿನೋಟಿಫಿಕೇಶನ್ ಮಾಡಲು ಆದೇಶಿಸಿದ ಆರೋಪವಿದೆ. ಈ ಅಕ್ರಮ ಡಿನೋಟಿಫಿಕೇಶನ್ ಆದ ಬಳಿಕ 2010ರ ಮಾರ್ಚ್ 10ರಂದು ಭೂಮಿಯನ್ನು 4.14 ಕೋಟಿ ರೂ.ಗೆ ಮೂರನೇ ವ್ಯಕ್ತಿಗಳಿಗೆ ಮಾರಾಟ ಮಾಡಲಾಗಿದೆ.

ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಈ ಕುರಿತು 2012ರ ಜುಲೈ 4ರಂದು ಹೆಚ್‌.ಡಿ ಕುಮಾರಸ್ವಾಮಿಯವರ ವಿರುದ್ಧ ಖಾಸಗಿ ದೂರು ದಾಖಲಿಸಲಾಗಿತ್ತು. ನ್ಯಾಯಾಲಯ ಪ್ರಕರಣವನ್ನು ತನಿಖೆ ಮಾಡುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿತ್ತು. ಅದರಂತೆ ಕುಮಾರಸ್ವಾಮಿಯವರ ವಿರುದ್ಧ ಜುಲೈ 10, 2012ರಂದು ಐಪಿಸಿ ಸೆಕ್ಷನ್ 120 ಬಿ ಯಡಿ 420, 463, 468, 471 ಹಾಗೂ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ 13 1c, 13 1dಯ ಅಡಿ ಆರೋಪಗಳನ್ನು ಹೊರಿಸಿ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ಲೋಕಾಯುಕ್ತ ಪೊಲೀಸ್‌ ದಾಖಲಿಸಿದ್ದ ಎಫ್‌ಐಆರ್‌ ಪ್ರಶ್ನಿಸಿ ಹೆಚ್‌.ಡಿ ಕುಮಾರಸ್ವಾಮಿ ಹೈಕೋರ್ಟ್‌ ಮೊರೆ ಹೋಗಿದ್ದರು. 2015ರ ಜುಲೈ 27ರಂದು ಹೈಕೋರ್ಟ್ ತನ್ನ ಆದೇಶದಲ್ಲಿ ಎಫ್‌ಐಆರ್‌ ರದ್ದುಪಡಿಸಲು ನಿರಾಕರಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ ಅಕ್ಟೋಬರ್‌ 3,2016ರಂದು ತಿರಸ್ಕರಿಸಿತ್ತು.

ಆ ಬಳಿಕ ಮೇ 23, 2018ರಿಂದ ಜುಲೈ 23, 2019ರ ಅವಧಿಯಲ್ಲಿ ಕುಮಾರಸ್ವಾಮಿಯವರು ಎರಡನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು. ಈ ವೇಳೆ ತಮ್ಮ ಪ್ರಭಾವ ಬಳಸಿ ಪ್ರಕರಣವನ್ನು ಮುಕ್ತಾಯಗೊಳಿಸುವ ಬಿ ರಿಪೋರ್ಟ್‌ ಸಲ್ಲಿಸಲಾಗಿತ್ತು ಎಂದು ಆರೋಪಿಸಲಾಗಿದೆ.

ಆದರೆ, 2019ರ ಸಪ್ಟೆಂಬರ್‌ 4 ರಂದು ಜನಪ್ರತಿನಿಧಿಗಳ ನ್ಯಾಯಾಲಯದ ವಿಶೇಷ ನ್ಯಾಯಾಧೀಶರು ಬಿ ರಿಪೋರ್ಟ್‌ ತಿರಸ್ಕರಿಸಿ, ಹೆಚ್‌.ಡಿ ಕುಮಾರಸ್ವಾಮಿಯವರ ವಿಚಾರಣೆಗೆ ಆದೇಶ ನೀಡಿದ್ದರು. ಕೆಳ ನ್ಯಾಯಾಲಯದ ಸಮನ್ಸ್ ಅನ್ನು ಕುಮಾರಸ್ವಾಮಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದಾಗ, “ಪ್ರಕರಣ ಗಂಭೀರವಾಗಿದ್ದು, ಈ ಹಂತದಲ್ಲಿ ವಿಚಾರಣೆಗೆ ತಡೆ ನೀಡಲು ನ್ಯಾಯಾಲಯವು ಮಧ್ಯ ಪ್ರವೇಶಿಸುವುದಿಲ್ಲ” ಎಂದು ಹೈಕೋರ್ಟ್ ಹೇಳಿತ್ತು.

ಹೈಕೋರ್ಟ್‌ ಆದೇಶ ಪ್ರಶ್ನಿಸಿ, ತಮ್ಮ ವಕೀಲ ಮುಕುಲ್‌ ರೋಹಟಗಿಯವರ ಮೂಲಕ ಕುಮಾರಸ್ವಾಮಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. 1988 ರ ಭ್ರಷ್ಟಾಚಾರ ತಡೆ ಕಾಯ್ದೆಯ 2018ರ ತಿದ್ದುಪಡಿಯನ್ನು (ಪೂರ್ವಾನುಮತಿ ಪಡೆಯುವುದು) ಗಮನದಲ್ಲಿಟ್ಟುಕೊಂಡು ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿದ್ದರು.

ಈ ಕುರಿತು ಮಂಗಳವಾರ (ಫೆ.25) ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಆರೋಪಗಳ ಗಂಭೀರತೆ ಹಾಗೂ ಮುಖ್ಯಮಂತ್ರಿ ಹುದ್ದೆಯನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡಿರುವುದನ್ನು ಗಮನಿಸಿ ಅರ್ಜಿಯನ್ನು ತಿರಸ್ಕರಿಸಿದೆ.

ಪ್ರಕರಣದಿಂದ ರಕ್ಷಣೆ ಪಡೆಯಲು 2018ರ ತಿದ್ದುಪಡಿಯನ್ನು ಬಳಸಲು ಸಾಧ್ಯವಿಲ್ಲ. ಪ್ರಕರಣವು ತಿದ್ದುಪಡಿ ಜಾರಿಗೆ ಬರುವ ಮೊದಲು ನಡೆದಿದೆ ಎಂದು ಕರ್ನಾಟಕ ಸರ್ಕಾರದ ಪರ ಹಿರಿಯ ವಕೀಲ ಹರಿನ್‌ ರಾವಲ್‌, ಅಸಿಸ್ಟೆಂಟ್‌ ಅಡ್ವೊಕೇಟ್‌ ಜನರಲ್‌ ಅಮನ್‌ ಪವಾರ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು.

ಅತ್ಯಾಚಾರ, ಕೊಲೆ ಪ್ರಕರಣ : ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...