Homeಮುಖಪುಟಪತ್ರಕರ್ತ ಮಹೇಶ್ ಲಾಂಗಾ ವಿರುದ್ಧ ಮತ್ತೊಂದು ಪ್ರಕರಣ : ಜೈಲಿನಿಂದಲೇ ಬಂಧಿಸಿದ ಇಡಿ

ಪತ್ರಕರ್ತ ಮಹೇಶ್ ಲಾಂಗಾ ವಿರುದ್ಧ ಮತ್ತೊಂದು ಪ್ರಕರಣ : ಜೈಲಿನಿಂದಲೇ ಬಂಧಿಸಿದ ಇಡಿ

- Advertisement -
- Advertisement -

ವಂಚನೆ ಮತ್ತು ದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ (ಫೆ.25) ಪತ್ರಕರ್ತ ಮಹೇಶ್ ಲಾಂಗಾ ಅವರನ್ನು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌) ಬಂಧಿಸಿದೆ.

ಲಾಂಗಾ ಅವರನ್ನು ಅಹಮದಾಬಾದ್‌ನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಅವರನ್ನು ಫೆಬ್ರವರಿ 28 ರವರೆಗೆ ಇಡಿ ಕಸ್ಟಡಿಗೆ ನೀಡಿದೆ.

ಮತ್ತೊಂದು ಪ್ರಕರಣದಲ್ಲಿ ಮಹೇಶ್ ಲಾಂಗಾ ಅವರು ಸಾಬರಮತಿ ಕೇಂದ್ರ ಕಾರಾಗೃದಲ್ಲಿದ್ದರು. ಅಲ್ಲಿಂದಲೇ ಇಡಿ ಬಂಧಿಸಿದೆ.

ದಿ ಹಿಂದೂ ಪತ್ರಿಕೆಯ ಗುಜರಾತ್ ಆವೃತ್ತಿಯ ಸಹಾಯಕ ಸಂಪಾದಕ ಮಹೇಶ್ ಲಾಂಗಾ ಅವರ ವಿರುದ್ದ ಒಟ್ಟು ಏಳು ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಗುಜರಾತ್ ಪೊಲೀಸರು ದಾಖಲಿಸಿರುವ ಐದು ಎಫ್‌ಐಆರ್‌ಗಳು ಮತ್ತು ಇಡಿ ದಾಖಲಿಸಿದ ಎರಡು ಪ್ರಕರಣಗಳು ಸೇರಿವೆ.

ಅಕ್ಟೋಬರ್‌ನಲ್ಲಿ ಕ್ರೈಂ ಬ್ರ್ಯಾಂಚ್ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಆಧರಿಸಿ ಮಹೇಶ್ ಲಾಂಗಾ ವಿರುದ್ದ ಪ್ರಕರಣ ದಾಖಲಿಸಿಕೊಂಡ ಇಡಿ, ಅವರನ್ನು ಬಂಧಿಸಿದೆ. ಉದ್ಯಮಿಯೊಬ್ಬರಿಗೆ 28.68 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಿ ಈ ಪ್ರಕರಣ ದಾಖಲಿಸಲಾಗಿದೆ.

ವಂಚನೆ ಮತ್ತು ನಷ್ಟಕ್ಕೆ ಕಾರಣವಾದ ಆರೋಪದ ಮೇಲೆ ಅಹಮದಾಬಾದ್‌ನ ಸ್ಯಾಟಲೈಟ್ ಪೊಲೀಸ್ ಠಾಣೆಯಲ್ಲಿ ಲಾಂಗಾ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿರುವುದು ತನಿಖೆಯ ಸಮಯದಲ್ಲಿ ತಿಳಿದುಬಂದಿದೆ ಎಂದು ಇಡಿ ತಿಳಿಸಿದೆ. ಈ ಪ್ರಕರಣವು ಭೂ ದಲ್ಲಾಳಿಯಿಂದ 40 ಲಕ್ಷ ರೂ. ಸುಲಿಗೆ ಮಾಡಿದ ಆರೋಪವನ್ನು ಆಧರಿಸಿದೆ.

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಆರೋಪದ ಮೇಲೆ ಮೇಲೆ ಲಾಂಗಾ ಅವರನ್ನು ಅಕ್ಟೋಬರ್ 7, 2024ರಂದು ಅಹಮದಾಬಾದ್ ಕ್ರೈಂ ಬ್ರ್ಯಾಂಚ್ ಮೊದಲು ಬಂಧಿಸಿತ್ತು.
ಧ್ರುವಿ ಎಂಟರ್‌ಪ್ರೈಸ್ ಎಂಬ ಕಂಪನಿಯು ಇನ್‌ಪುಟ್ ತೆರಿಗೆ ಕ್ರೆಡಿಟ್ ಪಡೆಯಲು ಒಂದೇ ಶಾಶ್ವತ ಖಾತೆ ಸಂಖ್ಯೆಯಿಂದ ಆರು ಸಂಸ್ಥೆಗಳನ್ನು ಸೃಷ್ಟಿಸಿದೆ ಎಂದು ಪೊಲೀಸರು ಆರೋಪಿಸಿದ್ದರು. ಎಫ್‌ಐಆರ್‌ನಲ್ಲಿ ಹೆಸರಿಸಲಾದ ಕಂಪನಿಗಳಲ್ಲಿ ಡಿಎ ಎಂಟರ್‌ಪ್ರೈಸ್ ಕೂಡ ಒಂದು.

ಅಕ್ಟೋಬರ್ 22ರಂದು, ಗುಜರಾತ್ ಕಡಲ ಮಂಡಳಿಗೆ ಸಂಬಂಧಿಸಿದ ಗೌಪ್ಯ ಸರ್ಕಾರಿ ದಾಖಲೆಗಳನ್ನು ಹೊಂದಿದ್ದ ಆರೋಪದ ಮೇಲೆ ಲಾಂಗಾ ವಿರುದ್ಧ ಪೊಲೀಸರು ಎರಡನೇ ಪ್ರಕರಣವನ್ನು ದಾಖಲಿಸಿದ್ದರು. ಮೊದಲ ಪ್ರಕರಣದಲ್ಲಿ ಬಂಧನದ ಸಮಯದಲ್ಲಿ ಅವರಿಂದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಗೌಪ್ಯ ಸರ್ಕಾರಿ ದಾಖಲೆಗಳನ್ನು ಹೊಂದಿದ್ದಕ್ಕಾಗಿ ಲಾಂಗಾ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಹಿಂಪಡೆಯುವಂತೆ ಪತ್ರಿಕಾ ಸಂಸ್ಥೆಗಳು ಪೊಲೀಸರನ್ನು ಒತ್ತಾಯಿಸಿವೆ.

ಅಕ್ಟೋಬರ್ 29ರಂದು, ಅಹಮದಾಬಾದ್‌ನಲ್ಲಿ ಉದ್ಯಮಿಯೊಬ್ಬರಿಗೆ ವಂಚನೆ ಮಾಡಿದ ಆರೋಪದ ಮೇಲೆ ಲಾಂಗಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಅದೇ ದಿನ, ಇಡಿಯ ಅಹಮದಾಬಾದ್ ವಲಯ ಕಚೇರಿಯು ಲಾಂಗಾ ಮತ್ತು ಇತರರ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿತ್ತು.

ಬಿಜೆಪಿ-ಡಿಎಂಕೆ ಸರ್ಕಾರಗಳ ವಿರುದ್ಧ ‘ಗೆಟ್‌ಔಟ್‌’ ಅಭಿಯಾನ ಆರಂಭಿಸಿದ ನಟ ವಿಜಯ್ ನೇತೃತ್ವದ ಟಿವಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...