Homeಕರ್ನಾಟಕಜಗ್ಗಿ ವಾಸುದೇವ್ ನೇತೃತ್ವದ ಶಿವರಾತ್ರಿಯಲ್ಲಿ ಪಾಲ್ಗೊಂಡ ಡಿಕೆಶಿ : ಕಾಂಗ್ರೆಸ್ ನಾಯಕರು, ಪ್ರಗತಿಪರರಿಂದ ಆಕ್ಷೇಪ

ಜಗ್ಗಿ ವಾಸುದೇವ್ ನೇತೃತ್ವದ ಶಿವರಾತ್ರಿಯಲ್ಲಿ ಪಾಲ್ಗೊಂಡ ಡಿಕೆಶಿ : ಕಾಂಗ್ರೆಸ್ ನಾಯಕರು, ಪ್ರಗತಿಪರರಿಂದ ಆಕ್ಷೇಪ

- Advertisement -
- Advertisement -

‘ಸದ್ಗುರು’ ಎಂದು ಕರೆಯಲ್ಪಡುವ ಜಗ್ಗಿ ವಾಸುದೇವ್ ನೇತೃತ್ವದ ಕೊಯಮತ್ತೂರಿನ ಇಶಾ‌ ಯೋಗ ಕೇಂದ್ರದಲ್ಲಿ ಬುಧವಾರ (ಫೆ.26) ಆಯೋಜಿಸಿದ್ದ ಅದ್ದೂರಿ ಶಿವರಾತ್ರಿ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪಾಲ್ಗೊಂಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಗ್ಗಿ ವಾಸುದೇವ್ ಜೊತೆ ಡಿಕೆಶಿ, ಅಮಿತ್ ಶಾ ಮತ್ತು ಇತರರು ವೇದಿಕೆ ಹಂಚಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಡಿಕೆಶಿ ನಡೆ ಕೆಲ ಕಾಂಗ್ರೆಸ್ ನಾಯಕರು ಮತ್ತು ಪ್ರಗತಿಪರರ ಟೀಕೆಗೆ ಗುರಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಗ್ಗಿವಾಸುದೇವ್ ನೀಡಿದ್ದ ಆಹ್ವಾನ ಪತ್ರವನ್ನು ಫೆ.25ರಂದು ಡಿ.ಕೆ ಶಿವಕುಮಾರ್ ಅವರು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದರು. ಆಗಲೇ ಡಿಕೆಶಿ ನಡೆಗೆ ಆಕ್ಷೇಪ ವ್ಯಕ್ತವಾಗಿತ್ತು.

ಡಿಕೆಶಿ ಫೇಸ್‌ಬುಕ್‌ನಲ್ಲಿ ಆಹ್ವಾನ ಪತ್ರದೊಂದಿಗೆ ಹಾಕಿದ್ದ ಪೋಸ್ಟ್‌ಗೆ ಪ್ರತಿಕ್ರಿಯೆ ಕೊಟ್ಟಿದ್ದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಾರ್ಯದರ್ಶಿ ಪಿ.ವಿ ಮೋಹನ್ ಅವರು “ಜಾತ್ಯತೀತ ಪಕ್ಷದ ಅಧ್ಯಕ್ಷನಾಗಿ ಮತ್ತು ಜಾತ್ಯತೀತ ಸರ್ಕಾರದ ಡಿಸಿಎಂ ಆಗಿ, ರಾಷ್ಟ್ರದ ಭರವಸೆಯ ಸಂಕೇತವಾಗಿರುವ ನಮ್ಮ ನಾಯಕ ರಾಹುಲ್ ಗಾಂಧಿಯವರನ್ನು ಅಪಹಾಸ್ಯ ಮಾಡಿದ, ಆರ್‌ಎಸ್‌ಎಸ್‌ ಜೊತೆ ಹೊಂದಾಣಿಕೆಯಾಗುವ ಅಭಿಪ್ರಾಯ ಹೊಂದಿರುವ ಯಾರಿಗಾದರೂ ಸಾರ್ವಜನಿಕವಾಗಿ ಧನ್ಯವಾದ ಹೇಳುವುದು ಮತ್ತು ಕೃತಜ್ಞತೆ ವ್ಯಕ್ತಪಡಿಸುವುದು ಪಕ್ಷದ ಕಾರ್ಯಕರ್ತರಿಗೆ ತಪ್ಪು ಸಂದೇಶವನ್ನು ರವಾನಿಸುತ್ತದೆ” ಎಂದಿದ್ದಾರೆ.

“ಪಕ್ಷದ ಪ್ರಗತಿ ಮತ್ತು ಬೆಳವಣಿಗೆಗೆ ರಾಜಿ ಮಾಡಿಕೊಳ್ಳುವ ಬದಲು, ದೃಢ ನಿಶ್ಚಯಕ್ಕೆ ಬದ್ಧತೆ ಅತ್ಯಗತ್ಯ; ಇದನ್ನು ನಿರ್ಲಕ್ಷಿಸುವುದರಿಂದ ಪಕ್ಷದ ಸೈದ್ಧಾಂತಿಕ ನೆಲೆ ದುರ್ಬಲಗೊಳ್ಳಬಹುದು. ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಆರ್‌ಎಸ್‌ಎಸ್ ಹಿನ್ನಲೆಯ ಹಲವಾರು ವ್ಯಕ್ತಿಗಳಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿದು ಆತಂಕವಾಗಿದೆ. ನಮ್ಮ ಪಕ್ಷದ ಅಧ್ಯಕ್ಷರು ಅಮಿತ್ ಶಾ ಅವರೊಂದಿಗೆ ವೇದಿಕೆ ಹಂಚಿಕೊಂಡು ಇಡೀ ರಾತ್ರಿ ಕಳೆಯುವುದನ್ನು ನೋಡಲು ಸಾಧ್ಯವಿಲ್ಲ, ಇದನ್ನು ಗ್ರಹಿಸುವುದು ಕಷ್ಟ” ಎಂದು ಬರೆದುಕೊಂಡಿದ್ದಾರೆ.

ಇನ್ನು, ಜಗ್ಗಿ ವಾಸುದೇವ್ ಜೊತೆ ಡಿ.ಕೆ ಶಿವಕುಮಾರ್ ಮತ್ತು ಅಮಿತ್ ಶಾ ವೇದಿಕೆ ಹಂಚಿಕೊಂಡಿರುವ ಫೋಟೋ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಡಿವೈಎಫ್‌ಐ ನಾಯಕ ಮುನೀರ್ ಕಾಟಿಪಳ್ಳ ಅವರು “ಡಿಕೆಶಿ ಹಿಂದೆ ಮಂಗಳೂರಿನ ಯಾರೆಲ್ಲ ಕಾಂಗ್ರೆಸ್ ಮುಖಂಡರು ಹೋಗಬಹುದು?” ಎಂದು ಪ್ರಶ್ನಿಸಿದ್ದಾರೆ.

“ಈ ಕಾರ್ಯಕ್ರಮಕ್ಕೆ ಡಿಕೆಶಿ ಹೋಗಬಾರದು. ಒಬ್ಬ ಡಿಸಿಎಂ ಆಗಿ, ಅವರು ಅಂತಹ ಕಾರ್ಯಕ್ರಮಗಳಿಗೆ ಹಾಜರಾಗಬಾರದು ಮತ್ತು ಆಹ್ವಾನವನ್ನು ನಿರ್ಲಕ್ಷಿಸಬೇಕು” ಎಂದು ಪ್ರಗತಿಪರ ಚಿಂತಕರಾದ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಹೇಳಿದ್ದರು.

ರಾಜ್ಯ ಕಾಂಗ್ರೆಸ್‌ನಲ್ಲಿ ಒಂದು ಬಣ ಡಿ.ಕೆ ಶಿವಕುಮಾರ್ ನಾಯಕತ್ವದ ವಿರುದ್ದ ಒಳಗೊಳಗೆ ಅಸಮಾಧಾನ ಹೊಂದಿರುವ ನಡುವೆ, ಡಿಕೆಶಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳುತ್ತಿದ್ದಾರೆ.

ಇತ್ತೀಚೆಗೆ ಮಲ್ಲಿಕಾರ್ಜುನ ಖರ್ಗೆ, ಹೆಚ್‌.ಸಿ ಮಹದೇವಪ್ಪ ಅವರಂತಹ ಕಾಂಗ್ರೆಸ್‌ನ ಹಿರಿಯ ನಾಯಕರು ಪ್ರಯಾಗ್‌ರಾಜ್ ಕುಂಭಮೇಳದ ಕುರಿತು ವ್ಯತಿರಿಕ್ತ ಹೇಳಿಕೆ ನೀಡಿದ್ದರು. ಆದರೆ, ಅದಕ್ಕೆ ವಿರುದ್ದವೆಂಬಂತೆ ಡಿ.ಕೆ ಶಿವಕುಮಾರ್ ಕುಟುಂಬ ಸಮೇತರಾಗಿ ಕುಂಭಮೇಳಕ್ಕೆ ತೆರಳಿ ಗಂಗಾಸ್ನಾನ ಮಾಡಿದ್ದರು.

ತಿ.ನರಸೀಪುರದ ಕುಂಭಮೇಳದಲ್ಲೂ ಬಹಳ ಉತ್ಸುಕತೆಯಿಂದ ಡಿಕೆಶಿ ಪಾಲ್ಗೊಂಡಿದ್ದರು. ಇಲ್ಲಿಯೂ ಸಂಗಮದಲ್ಲಿ ಸ್ನಾನ ಮಾಡಿದ್ದರು ಮತ್ತು ಕಾವೇರಿ ಆರತಿ ಮಾಡಿದ್ದರು.

ಆ ಬಳಿಕ, ಫೆ.26ರಂದು ಸದಾಶಿವನಗರದ ಮನೆ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಡಿಕೆಶಿ, “ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿ ಸಾಯುತ್ತೇನೆ ಎಂದಿದ್ದರು. ಈ ಮೂಲಕ ಕುಂಭಮೇಳದಲ್ಲಿ ಭಾಗಿಯಾದ ಬಗ್ಗೆ ಕೆಲವರ ಆಕ್ಷೇಪಕ್ಕೆ ತಿರುಗೇಟು ನೀಡಿದ್ದರು.

ಇನ್ನು, “ಪ್ರಯಾಗ್‌ರಾಜ್ ಕುಂಭಮೇಳವನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಬಹಳ ಅಚ್ಚುಕಟ್ಟಾಗಿ ನಿರ್ವಹಿಸಿದೆ” ಎಂದು ಡಿಕೆಶಿ ಶ್ಲಾಘಿಸಿದ್ದಾಗಿ ವರದಿಯಾಗಿದೆ.

ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಡಿಕೆಶಿಯ ಇತ್ತೀಚಿನ ನಡೆಗಳಿಗೆ ಬಹಳ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಡಿಕೆಶಿ ಬಿಜೆಪಿ ಸೇರಬಹುದು ಎಂಬ ಚರ್ಚೆಗಳೂ ಗದಿಗೆದರಿವೆ.

ಕ್ರಿಕೆಟಿನಲ್ಲಿ ಭಾರತ ಗೆಲ್ಲಬೇಕಾದರೆ ಬಿಜೆಪಿಗೆ ಮತ ಹಾಕಬೇಕು…: ಕೇಂದ್ರ ರಾಜ್ಯ ಖಾತೆ ಸಚಿವ ಬಂಡಿ ಸಂಜಯ್ ಹೇಳಿಕೆಗೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...