Homeಚಳವಳಿಮಹಾ ಶಿವರಾತ್ರಿಯಂದು ವಿಶ್ವವಿದ್ಯಾಲಯ ಮೆಸ್‌ನಲ್ಲಿ ಮಾಂಸಹಾರ | ಎಬಿವಿಪಿ ದುಷ್ಕರ್ಮಿಗಳಿಂದ ಗೂಂಡಾಗಿರಿ

ಮಹಾ ಶಿವರಾತ್ರಿಯಂದು ವಿಶ್ವವಿದ್ಯಾಲಯ ಮೆಸ್‌ನಲ್ಲಿ ಮಾಂಸಹಾರ | ಎಬಿವಿಪಿ ದುಷ್ಕರ್ಮಿಗಳಿಂದ ಗೂಂಡಾಗಿರಿ

- Advertisement -
- Advertisement -

ಮಹಾ ಶಿವರಾತ್ರಿಯ ಹಬ್ಬದ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕ್ಯಾಂಟೀನ್‌ನಲ್ಲಿ ಮಾಂಸಹಾರ ಬಡಿಸಲಾಗುತ್ತಿದೆ ಎಂದು ಆರೋಪಿಸಿ ಎಬಿವಿಪಿಯ ದುಷ್ಕರ್ಮಿಗಳು ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಬುಧವಾರ ದೆಹಲಿಯ ದಕ್ಷಿಣ ಏಷ್ಯಾ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಘಟನೆಯ ವಿಡಿಯೊ ವೈರಲ್ ಆಗಿದ್ದು, ಅದರಲ್ಲಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಹೊಡೆದಾಟ ದಾಖಲಾಗಿದೆ. ಮಹಾ ಶಿವರಾತ್ರಿಯಂದು

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಮತ್ತು ಎಬಿವಿಪಿ ಘರ್ಷಣೆಗೆ ಪ್ರಚೋದನೆ ನೀಡಿವೆ ಎಂದು ಪರಸ್ಪರ ಆರೋಪಿಸಿಕೊಂಡಿವೆ. ಎಸ್‌ಎಫ್‌ಐ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಜೊತೆಗೆ ಸಂಯೋಜಿತವಾಗಿದ್ದು, ಎಬಿವಿಪಿಯು ಆರೆಸ್ಸೆಸ್‌ನ ವಿದ್ಯಾರ್ಥಿ ವಿಭಾಗವಾಗಿದೆ.

ಮಹಾ ಶಿವರಾತ್ರಿಯಂದು ಕ್ಯಾಂಟೀನ್‌ನಲ್ಲಿ ಮಾಂಸ ಬಡಿಸಬಾರದು ಎಂಬ ತನ್ನ “ಕಠಿಣ ಮತ್ತು ಪ್ರಜಾಪ್ರಭುತ್ವ ವಿರೋಧಿ ಬೇಡಿಕೆ”ಯನ್ನು ಪಾಲಿಸದ ವಿದ್ಯಾರ್ಥಿಗಳ ಮೇಲೆ ಎಬಿವಿಪಿ ಸದಸ್ಯರು ಹಲ್ಲೆ ನಡೆಸಿದ್ದಾರೆ ಎಂದು ಎಸ್‌ಎಫ್‌ಐ ಹೇಳಿಕೊಂಡಿದೆ. ಎಸ್‌ಎಫ್‌ಐ ಸದಸ್ಯರು ಮಾಂಸಾಹಾರವನ್ನು ಬಲವಂತವಾಗಿ ಬಡಿಸಿ ವಿದ್ಯಾರ್ಥಿಗಳ ಉಪವಾಸ ಮುರಿಯಲು ಪ್ರಯತ್ನಿಸಿದರು ಎಂದು ಎಬಿವಿಪಿ ಆರೋಪಿಸಿದೆ.

ದಿನದ ಹಿಂದೆ, ಶಿವರಾತ್ರಿ ಹಬ್ಬದ ದಿನದಂದು ಕ್ಯಾಂಟೀನ್‌ನಲ್ಲಿ ಸಸ್ಯಾಹಾರಿ ಆಹಾರವನ್ನು ಮಾತ್ರ ನೀಡಬೇಕೆಂದು ಎಬಿವಿಪಿ ಸದಸ್ಯರು ವಿನಂತಿಸಿದ್ದರು ಎಂದು ಎರಡನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಯೊಬ್ಬರು ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ವಿಶ್ವವಿದ್ಯಾಲಯದಲ್ಲಿ ಎರಡು ಮೆಸ್‌ಗಳಿವೆ. ಅವುಗಳಲ್ಲಿ ಒಂದು ಕ್ಯಾಂಟೀನ್‌ನಲ್ಲಿ ಇಂದು ಮೀನಿನ ಕರಿಯನ್ನು ನೀಡಲಾಗುತ್ತಿತ್ತು. ಎಬಿವಿಪಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎನ್ನಲಾದ ಕೆಲವು ವಿದ್ಯಾರ್ಥಿಗಳು ಪ್ರವೇಶಿಸಿ ಮೀನಿನ ಕರಿಯನ್ನು ಕಸಿದುಕೊಳ್ಳಲು ಪ್ರಯತ್ನಿಸಿದರು. ಈ ವೇಳೆ ಮೆಸ್ ಸಮಿತಿಯ ಭಾಗವಾಗಿರುವ ಒಬ್ಬ ವಿದ್ಯಾರ್ಥಿನಿ ಅದನ್ನು ಆಕ್ಷೇಪಿಸಿದ್ದು, ಈ ವೇಳೆ ಎಬಿವಿಪಿ ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ನಡೆಸಿದ್ದಾರೆ.” ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತರು ವಿದ್ಯಾರ್ಥಿಗಳ ಡೀನ್ ಕಚೇರಿಗೆ ದೂರು ನೀಡಿದಾಗ, ಅಧಿಕಾರಿಗಳು ಈ ವಿಷಯವನ್ನು ವಿಲೇವಾರಿ ಮಾಡುವ ಬದಲು ಹಲ್ಲೆಗೊಳಗಾದ ವಿದ್ಯಾರ್ಥಿಗಳ ಮೇಲೆ ಪರೋಕ್ಷವಾಗಿ ಹೊಣೆಯನ್ನು ಹೊರಿಸುವ ಮೂಲಕ ಅದನ್ನು ಅವರ ತಲೆಗೆ ಹೊರಿಸಲು ಪ್ರಯತ್ನಿಸಿದರು ಎಂದು ಎಸ್‌ಎಫ್‌ಐ ಆರೋಪಿಸಿದೆ.

 

ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಕ್ರಮ ಕೈಗೊಳ್ಳಲಾಗುವುದು ಎಂದು ವಿಶ್ವವಿದ್ಯಾಲಯ ತಿಳಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆದಾಗ್ಯೂ, ಎಬಿವಿಪಿ ರಾಜ್ಯ ಕಾರ್ಯದರ್ಶಿ ಸಾರ್ಥಕ್ ಶರ್ಮಾ ಅವರು ವಿದ್ಯಾರ್ಥಿಗಳಿಗೆ ತಮ್ಮ ನಂಬಿಕೆಗಳನ್ನು ಅನುಸರಿಸುವ ಹಕ್ಕಿದೆ ಎಂದು ಹೇಳಿದ್ದಾರೆ. “ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿಯು ಸ್ವತಃ ಮೆಸ್‌ನಲ್ಲಿ ಸಾತ್ವಿಕ ಆಹಾರವನ್ನು ವ್ಯವಸ್ಥೆ ಮಾಡಿತ್ತು. ಆದರೆ ಈ ವೇಳೆ ಮಾಂಸಾಹಾರವನ್ನು ಬಲವಂತವಾಗಿ ಬಡಿಸಲು ಪ್ರಯತ್ನಿಸುವುದು ಅಸಂವೇದನಾಶೀಲ ಮಾತ್ರವಲ್ಲ, ಸೈದ್ಧಾಂತಿಕ ಭಯೋತ್ಪಾದನೆಯೂ ಆಗಿದೆ” ಎಂದು ಅವರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಇಂಟರ್ನೆಟ್ ಸ್ಥಗಿತ | ಮಿಲಿಟರಿ ಆಡಳಿತದ ಮ್ಯಾನ್ಮಾರ್ 1ನೇ, ಭಾರತ 2ನೇ ಸ್ಥಾನ!

ಇಂಟರ್ನೆಟ್ ಸ್ಥಗಿತ | ಮಿಲಿಟರಿ ಆಡಳಿತದ ಮ್ಯಾನ್ಮಾರ್ 1ನೇ, ಭಾರತ 2ನೇ ಸ್ಥಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...