Homeಮುಖಪುಟಮಣಿಪುರ | ಆರು ಜಿಲ್ಲೆಗಳಲ್ಲಿ 104 ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಿದ ನಾಗರಿಕರು

ಮಣಿಪುರ | ಆರು ಜಿಲ್ಲೆಗಳಲ್ಲಿ 104 ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಿದ ನಾಗರಿಕರು

- Advertisement -
- Advertisement -

ಮಣಿಪುರದ ಆರು ಜಿಲ್ಲೆಗಳಲ್ಲಿ ಒಟ್ಟು 104 ಬಂದೂಕುಗಳು ಮತ್ತು ಮದ್ದುಗುಂಡುಗಳನ್ನು ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಒಪ್ಪಿಸಿದ್ದಾರೆ ಎಂದು ಪೊಲೀಸರು ಗುರುವಾರ (ಫೆ.27) ತಿಳಿಸಿದ್ದಾರೆ.

ಬಂದೂಕುಗಳನ್ನು ತ್ಯಜಿಸಲು ಅಧಿಕಾರಿಗಳು ನೀಡಿದ ಏಳು ದಿನಗಳ ಅವಧಿ ಮುಗಿಯುವ ಒಂದು ದಿನ ಮೊದಲು, ಬುಧವಾರ ಕಾಂಗ್‌ಪೋಕ್ಪಿ, ಇಂಫಾಲ್ ಪೂರ್ವ, ಬಿಷ್ಣುಪುರ, ತೌಬಲ್, ಇಂಫಾಲ್ ಪಶ್ಚಿಮ ಮತ್ತು ಕಾಕ್ಚಿಂಗ್ ಜಿಲ್ಲೆಗಳಲ್ಲಿ ಶಸ್ತ್ರಾಸ್ತ್ರಗಳನ್ನು ಶರಣು ಮಾಡಲಾಗಿದೆ ಎಂದು ವರದಿಯಾಗಿದೆ.

ಫೆಬ್ರವರಿ 20ರಂದು ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು, ಜನರು ಏಳು ದಿನಗಳ ಒಳಗೆ ಲೂಟಿ ಮಾಡಿದ ಮತ್ತು ಅಕ್ರಮವಾಗಿ ಹೊಂದಿರುವ ಶಸ್ತ್ರಾಸ್ತ್ರಗಳನ್ನು ಸ್ವಯಂಪ್ರೇರಣೆಯಿಂದ ತಂದ ಒಪ್ಪಿಸಿ ಎಂದು ಮನವಿ ಮಾಡಿದ್ದರು. ಈ ಅವಧಿಯಲ್ಲಿ ಶಸ್ತ್ರಾಸ್ತ್ರಗಳನ್ನು ತ್ಯಜಿಸುವವರ ವಿರುದ್ಧ ಯಾವುದೇ ದಂಡನಾತ್ಮಕ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಭರವಸೆ ನೀಡಿದ್ದರು.

ಶಸ್ತ್ರಾಸ್ತ್ರಗಳನ್ನು ತ್ಯಜಿಸಲು ಬಯಸಿದರೆ ಸ್ವಯಂ ಪ್ರೇರಣೆಯಿಂದ ಶಸ್ತ್ರಾಸ್ತ್ರಗಳನ್ನು ತಂದೊಪ್ಪಿಸಲು ಏಳು ದಿನಗಳ ಸಮಯವಕಾಶ ಸಾಕು ಎಂದು ಮುಖ್ಯ ಕಾರ್ಯದರ್ಶಿ ಪಿ.ಕೆ. ಸಿಂಗ್ ಫೆಬ್ರವರಿ 23ರಂದು ಹೇಳಿದ್ದರು. ಅವಧಿ ಮುಗಿದ ನಂತರ ಅಂತಹ ಬಂದೂಕುಗಳನ್ನು ವಶಪಡಿಸಿಕೊಳ್ಳಲು ಪಡೆಗಳು ಕ್ರಮ ಕೈಗೊಳ್ಳುತ್ತವೆ ಎಂದು ತಿಳಿಸಿದ್ದರು.

ಮೇ 2023ರಿಂದ ಮಣಿಪುರದ ಇಂಫಾಲ್ ಕಣಿವೆ ಮೂಲದ ಮೈತೇಯಿ ಮತ್ತು ಪಕ್ಕದ ಬೆಟ್ಟಗಳ ಮೂಲದ ಕುಕಿ-ಝೋ ಗುಂಪುಗಳ ನಡುವೆ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಇದುವರೆಗೆ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಈಶಾನ್ಯ ರಾಜ್ಯದಲ್ಲಿ ರಾಜಕೀಯ ಅನಿಶ್ಚಿತತೆಗೆ ಕಾರಣವಾದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ, ಫೆಬ್ರವರಿ 13ರಂದು ಕೇಂದ್ರ ಸರ್ಕಾರ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಿದೆ.

2027ರವರೆಗೆ ಇದ್ದ ಮಣಿಪುರ ವಿಧಾನಸಭೆಯನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ನಿಷೇಧಿತ ಸಂಘಟನೆಯ ಇಬ್ಬರ ಬಂಧನ

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳ ಇಬ್ಬರು ಸದಸ್ಯರನ್ನು ಸುಲಿಗೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ (ಫೆ.27) ತಿಳಿಸಿದ್ದಾರೆ.

ಇಂಫಾಲ್ ಪಶ್ಚಿಮ ಜಿಲ್ಲೆಯ ಸಿಂಗ್ಜಮೇಯಿ ಮಖಾ ಕಾಕ್ವಾ ಅಸೆಮ್ ಲೈಕೈಯಿಂದ ನಿಷೇಧಿತ ಸಜ್ಜು ಪ್ರೆಪಕ್ (ಪಿಆರ್‌ಒ)ನ ಕೇಡರ್ ಅನ್ನು ಬಂಧಿಸಲಾಗಿದೆ.

ಬಂಧಿತ ವ್ಯಕ್ತಿಯನ್ನು ಸಪಮ್ ಜೇಮ್ಸ್‌ಬಾಂಡ್ (25) ಎಂದು ಗುರುತಿಸಲಾಗಿದೆ. ಈತ ಸಾರ್ವಜನಿಕರು, ಸರ್ಕಾರಿ ಕಚೇರಿಗಳು, ಗಣ್ಯ ವ್ಯಕ್ತಿಗಳು, ಉದ್ಯಮಿಗಳು ಮತ್ತು ಅಂಗಡಿ ಮಾಲೀಕರಿಂದ ಸುಲಿಗೆ ಮತ್ತು ಹಣ ಸಂಗ್ರಹಿಸುವಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನ ಬಳಿಯಿಂದ ಎರಡು ಮೊಬೈಲ್ ಹ್ಯಾಂಡ್‌ಸೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬುಧವಾರ ಇಂಫಾಲ್ ಪಶ್ಚಿಮ ಜಿಲ್ಲೆಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ನಿಷೇಧಿತ ಕಾಂಗ್ಲೇ ಯಾವೋಲ್ ಕನ್ನಾ ಲುಪ್‌ನ ಸಕ್ರಿಯ ಸದಸ್ಯನನ್ನು ಬಂಧಿಸಿದ್ದಾರೆ.

ಈತನನ್ನು ಶಮ್ಜೇತ್ಸಾಬಮ್ ರೊಮಾನಂದ ಸಿಂಗ್ (23) ಎಂದು ಗುರುತಿಸಲಾಗಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಯೋಗಿ ಆದಿತ್ಯನಾಥ್ ಅವರ ‘ಉರ್ದು ವಿರೋಧಿ’ ಹೇಳಿಕೆ: ಮೌಲಾನಾ ವಿವಿಯ ವಿದ್ಯಾರ್ಥಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...