Homeಎಕಾನಮಿಜಿಡಿಪಿ 5 ಟ್ರಿಲಿಯನ್ ಆಗಲು ಇನ್ನು 22 ವರ್ಷಗಳು ಬೇಕು: ಮಾಜಿ RBI ಗವರ್ನರ್‌ ಸಿ.ರಂಗರಾಜನ್

ಜಿಡಿಪಿ 5 ಟ್ರಿಲಿಯನ್ ಆಗಲು ಇನ್ನು 22 ವರ್ಷಗಳು ಬೇಕು: ಮಾಜಿ RBI ಗವರ್ನರ್‌ ಸಿ.ರಂಗರಾಜನ್

- Advertisement -
- Advertisement -

ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಕೆಟ್ಟ ಸ್ಥಿತಿಯಲ್ಲಿದೆ. ಹೀಗಾಗಿ 2025ಕ್ಕೆ 5 ಟ್ರಿಲಿಯನ್ ಗುರಿ ಸಾಧಿಸುತ್ತೇವೆ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಸಿ.ರಂಗರಾಜನ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದ ಮೇಲೆ ಮುಂದಿನ ಐದು ವರ್ಷಗಳಲ್ಲಿ 5 ಟ್ರಿಲಿಯನ್ ಆರ್ಥಿಕ ಬೆಳವಣಿಗೆಯ ಗುರಿ ಹೊಂದಿದೆ. ಆದರೆ ದೇಶದ ಆರ್ಥಿಕತೆಯ ಮೇಲೆ ಕಾರ್ಮೋಡಗಳು ಕವಿದಿದ್ದು ಗುರಿ ನಿರ್ವಹಣೆಯ ಬಗ್ಗೆ ಹಲವು ಪ್ರಶ್ನೆಗಳು ಉದ್ಭವಿಸಿವೆ ಎಂದು ಆರ್ಥಿಕತೆಯ ಕುರಿತು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ.

ಆರ್ಥಿಕ ಬೆಳವಣಿಗೆಯ ದರ ಕುಸಿದಿದೆ. 2016ರಲ್ಲಿ 8.2ರಷ್ಟಿದ್ದುದು 2019 ಭೌತಿಕ ವರ್ಷಕ್ಕೆ 6.8ಕ್ಕೆ ಕುಸಿದು ನಿಂತಿದೆ. ಈ ನಡುವೆ ಮೊದಲ ಕ್ವಾರ್ಟರ್ ನಲ್ಲಿ ಜಿಡಿಪಿ 5ಕ್ಕೆ ಕುಸಿದು ಆರು ವರ್ಷ ಹಿಂದಕ್ಕೆ ಹೋಗಿದೆ. ಎರಡನೇ ಕ್ವಾರ್ಟರ್ ನಲ್ಲಿ ಅಂದರೆ ಈಗ ಅದು 4.3ರಷ್ಟಿದೆ. ಆರ್.ಬಿ.ಐ ಅಕ್ಟೋಬರ್ ನಲ್ಲಿ ನೀತಿ ಪರಿಷ್ಕರಣೆ ಮಾಡಿದ ಬಳಿಕ ಎರಡು ತಿಂಗಳಲ್ಲಿ 90ಬಿಪಿಎಸ್ ಪಾಯಿಂಟ್ ಗೆ ಏರಿ 6.1ಕ್ಕೆ ನಿಂತಿದೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ಟ್ರಿಲಿಯನ್‌ಗೆ ಎಷ್ಟು ಸೊನ್ನೆ ಎಂದು ಕೇಳಿ ಗಮನಸೆಳೆದಿದ್ದ ಗೌರವ್‌ ವಲ್ಲಭ್‌ ಈಗ ಜಾರ್ಖಂಡ್‌ ಸಿಎಂ ಎದುರು ಕಣಕ್ಕೆ…

ಪ್ರಸ್ತುತ ನಮ್ಮ ಆರ್ಥಿಕತೆ 2.7 ಮಿಲಿಯನ್ ಮೇಲಿದೆ ಮತ್ತು ನಾವು ಇದನ್ನು ಮುಂದಿನ ಐದು ವರ್ಷದಲ್ಲಿ ದ್ವಿಗುಣಗೊಳಿಸುವ ಮಾತನಾಡುತ್ತಿದ್ದೇವೆ. 2025ರ ವೇಳೆಗೆ ನಾವು ಆ ಗುರಿ ಮುಟ್ಟಲು ವಾರ್ಷಿಕ 9ರಷ್ಟು ಹೆಚ್ಚುವರಿ ಗುರಿ ತಲುಪಬೇಕು. ಹೀಗಾಗಿ 5 ಟ್ರಿಲಿಯನ್ ಗುರಿ ಸಾಧಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಖಚಿತಪಡಿಸಿದ್ದಾರೆ.

ನೀವು (ಸರ್ಕಾರ) ಇನ್ನು ಎರಡು ವರ್ಷಗಳನ್ನು ಮಾತ್ರ ಹೊಂದಿದ್ದೀರಿ. ಈ ವರ್ಷ ಜಿಡಿಪಿ 6ರರೊಳಗೆ ಇದೆ. ಮುಂದಿನ ವರ್ಷ ಅದು 7ರ ಗುರಿ ಮುಟ್ಟಬಹುದು. ಆನಂತರ ಆರ್ಥಿಕತೆ ವೃದ್ದಿಯಾಗಬಹುದು ಎಂದು ಅಹಮದಾಬಾದ್ ನಲ್ಲಿ ಜೆಬಿಎಸ್-ಐಸಿಎಫ್ಐ ಬ್ಯುಸಿನೆಸ್ ಶಾಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಜಿಡಿಪಿ 5 ಟ್ರಿಲಿಯನ್ ಆದರೆ ಕೆಳಮಧ್ಯಮ ವರ್ಗದ ಪ್ರತಿಯೊಬ್ಬರ ಈಗಿನ ತಲಾ ಆದಾಯ 1800 ಡಾಲರ್ ನಿಂದ 3600 ಡಾಲರ್ ಆಗಬಹುದು. ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಪ್ರತಿಯೊಬ್ಬರ ತಲಾ ಆದಾಯ 12,000 ಡಾಲರ್ ಇದೆ.  ಈ ಗುರಿ ಮುಟ್ಟಲು ನಮಗೆ 22 ವರ್ಷಗಳು ಬೇಕಾಗುತ್ತದೆ. ಅಷ್ಟೇ ಅಲ್ಲ ಜಿಡಿಪಿ ದರ ವಾರ್ಷಿಕ 9ರಷ್ಟು ಬೆಳವಣಿಯಾಗಬೇಕಾಗುತ್ತದೆ ಎಂದು ಹೇಳುವ ಮೂಲಕ ಮೋದಿ ಸರ್ಕಾರ ಮುಂದಿನ ಐದು ವರ್ಷಗಳಲ್ಲಿ 5 ಟ್ರಿಲಿಯನ್ ಡಾಲರ್ ಗುರಿ ಸಾಧಿಸಲು ಆಗುವುದಿಲ್ಲ ಎಂಬುದನ್ನು ಅಂಕಿಅಂಶಗಳ ಮೂಲಕ ದೃಢಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...