Homeಮುಖಪುಟಮೋದಿ ಕಾರ್ಟೂನ್ ವಿವಾದ : 'ವಿಕಟನ್ ವೆಬ್‌ಸೈಟ್‌' ಮೇಲಿನ ನಿರ್ಬಂಧ ಮುಂದುವರಿಕೆ, ಕಾನೂನು ಹೋರಾಟಕ್ಕೆ ಸಿದ್ದತೆ

ಮೋದಿ ಕಾರ್ಟೂನ್ ವಿವಾದ : ‘ವಿಕಟನ್ ವೆಬ್‌ಸೈಟ್‌’ ಮೇಲಿನ ನಿರ್ಬಂಧ ಮುಂದುವರಿಕೆ, ಕಾನೂನು ಹೋರಾಟಕ್ಕೆ ಸಿದ್ದತೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಕುರಿತ ವ್ಯಂಗ್ಯ ಚಿತ್ರ (ಕಾರ್ಟೂನ್‌) ಪ್ರಕಟಿಸಿದ್ದಕ್ಕೆ ತಮಿಳು ನಿಯತಕಾಲಿಕೆ ‘ಆನಂದ ವಿಕಟನ್‌’ನ ವೆಬ್‌ಸೈಟ್‌ ಮೇಲೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ವಿಧಿಸಿರುವ ನಿರ್ಬಂಧ ಮುಂದುವರಿದಿದೆ.

ಈ ಕುರಿತು ಗುರುವಾರ (ಫೆ.27) ಪ್ರತಿಕ್ರಿಯೆ ನೀಡಿರುವ ವಿಕಟನ್ ಸಂಸ್ಥೆ, “ನಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ರಕ್ಷಿಸಲು ಮತ್ತು ವೆಬ್‌ಸೈಟ್‌ ಪ್ರವೇಶವನ್ನು ಪುನಃಸ್ಥಾಪಿಸಲು ಕಾನೂನು ಆಯ್ಕೆಗಳನ್ನು ಅನ್ವೇಷಿಸುತ್ತೇವೆ” ಎಂದು ಹೇಳಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಕ್ಕದಲ್ಲಿ ಕೈಗೆ ಸರಪಳಿ ಬಿಗಿದ ರೀತಿಯ ಮೋದಿ ಭಯಭೀತರಾಗಿ ಕುಳಿತಿರುವ ವ್ಯಂಗ್ಯ ಚಿತ್ರವನ್ನು ಫೆಬ್ರವರಿ 15ರಂದು ವಿಕಟನ್ ವೆಬ್‌ಸೈಟ್‌ ಪ್ರಕಟಿಸಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ, ಕೇಂದ್ರ ಸರ್ಕಾರಕ್ಕೆ ದೂರು ನೀಡಿದ್ದರು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ವೆಬ್‌ಸೈಟ್‌ ಮೇಲೆ ನಿರ್ಬಂಧ ವಿಧಿಸಿದೆ.

ಟ್ರಂಪ್‌ ಆಡಳಿತ ಅಕ್ರಮ ವಲಸಿಗರೆಂದು ನೂರಾರು ಭಾರತೀಯರನ್ನು ಕೈ, ಕಾಲಿಗೆ ಸರಪಳಿ ಬಿಗಿದು, ಸೇನಾ ವಿಮಾನದಲ್ಲಿ ಕರೆ ತಂದು ಬಿಟ್ಟಾಗ ಏನೂ ಮಾತನಾಡದೆ ಟ್ರಂಪ್ ಮುಂದೆ ಪ್ರಧಾನಿ ಮೋದಿ ತಲೆಬಾಗಿ ನಿಂತಿದ್ದನ್ನು ವಿಕಟನ್ ವ್ಯಂಗ್ಯ ಚಿತ್ರದ ಮೂಲಕ ಅಭಿವ್ಯಕ್ತಿಪಡಿಸಿತ್ತು.

“ಯಾವುದೇ ಮುನ್ಸೂಚನೆ ನೀಡದೆ ನಮ್ಮ ವೆಬ್‌ಸೈಟ್ ಮೇಲೆ ನಿರ್ಬಂಧ ವಿಧಿಸಲಾಗಿದೆ. ವಿಚಾರಣೆಯ ನಂತರ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನ ಅಡಿಯಲ್ಲಿ ವ್ಯಂಗ್ಯ ಚಿತ್ರ ಪ್ರಕಟಿಸಿರುವ ಕುರಿತು ಸರ್ಕಾರಕ್ಕೆ ನಾವು ವಿವರಣೆ ನೀಡಿದ್ದೇವೆ” ಎಂದು ವಿಕಟನ್ ತಿಳಿಸಿದೆ.

“ಫೆಬ್ರವರಿ 25ರ ರಾತ್ರಿ, ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಈ ವಿಷಯಕ್ಕೆ ಸಂಬಂಧಿಸಿದಂತೆ ಅಂತಿಮ ಆದೇಶ ಹೊರಡಿಸಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಮುಂದಿನ ಹಂತಗಳನ್ನು ನಿರ್ಧರಿಸಲು ನಾವು ಕಾನೂನು ತಜ್ಞರೊಂದಿಗೆ ಸಮಾಲೋಚಿಸುತ್ತೇವೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸಲು ಮತ್ತು ವೆಬ್‌ಸೈಟ್‌ಗೆ ಪ್ರವೇಶವನ್ನು ಪುನಃಸ್ಥಾಪಿಸಲು ನಾವು ಎಲ್ಲಾ ಕಾನೂನು ಮಾರ್ಗಗಳನ್ನು ಅನುಸರಿಸುತ್ತೇವೆ” ಎಂದು ವಿಕಟನ್ ಪ್ರಕಟಣೆಯಲ್ಲಿ ಹೇಳಿದೆ.

ವಿಕಟನ್ ವಿವರಣೆಯಿಂದ ಕೇಂದ್ರ ಸರ್ಕಾರ ತೃಪ್ತಿಗೊಂಡಿಲ್ಲ ಎಂಬುವುದು, ಅದರ ಪ್ರಕಟಣೆಯಿಂದ ಗೊತ್ತಾಗಿದೆ.

“ಒಂದು ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕಾಗಿ ಶತಮಾನದಷ್ಟು ಹಳೆಯದಾದ ನಿಯತಕಾಲಿಕೆ ಗುಂಪಿನ ವೆಬ್‌ಸೈಟ್ ಅನ್ನು ನಿರ್ಬಂಧಿಸುವುದು ನೂರು ವ್ಯಂಗ್ಯಚಿತ್ರಕಾರರಿಗೆ ಶ್ರೀಮಂತ ವಿಷಯವನ್ನು ಒದಗಿಸುತ್ತದೆ. ಈ ಪ್ರತಿಭಾನ್ವಿತ ಆರ್.ಕೆ. ಲಕ್ಷ್ಮಣ್ ಈ ಮೂಲಕ ಏನು ಮಾಡಿದ್ದಾರೆ ಎಂದು ಊಹಿಸಿ!” ಎಂದು ಹೇಳುವ ಮೂಲಕ ದಿ ಹಿಂದೂ ಪಬ್ಲಿಷಿಂಗ್ ಗ್ರೂಪ್‌ನ ನಿರ್ದೇಶಕ ಮತ್ತು ಪತ್ರಕರ್ತ ಎನ್. ರಾಮ್ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ.

“ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯವು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಡೆಸುತ್ತಿರುವ ಅನಿಯಂತ್ರಿತ ಮತ್ತು ಕಾನೂನುಬಾಹಿರ ದಾಳಿಯನ್ನು ವಿರೋಧಿಸಿ. VikatanForFreedomOfExpressionನೊಂದಿಗೆ ಒಗ್ಗಟ್ಟಿನಿಂದ ನಿಲ್ಲೋಣ” ಎಂದಿದ್ದಾರೆ.

ಇಂಟರ್‌ನೆಟ್‌ನಲ್ಲಿ ವಿಕಟನ್ ಎಂದು ಹುಡುಕಿದಾಗ ವಿಕಟನ್ ವೆಬ್‌ಸೈಟ್‌ಗೆ ಪ್ರವೇಶಿಸಲು ನಮಗೆ ಸಾಧ್ಯವಾಗಿದೆ.ಆದರೆ ದಿ ಹಿಂದೂ ವರದಿಯ ಪ್ರಕಾರ, ಫೆಬ್ರವರಿ 15 ರಿಂದ ನಿಯತಕಾಲಿಕೆಯ ಪ್ರಾಥಮಿಕ ಡೊಮೇನ್ vikatan.comಗೆ ಕೆಲವು ಬಳಕೆದಾರರಿಗೆ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ. ನಿಯತಕಾಲಿಕೆಯ ಎರಡನೇ ಡೊಮೇನ್ anandavikatan.com ಗೆ ಪ್ರವೇಶಿಸಲು ಸಾಧ್ಯವಾಗುತ್ತಿದೆ. ನಮಗೆ ಎರಡೂ ವೆಬ್‌ಸೈಟ್‌ಗಳಿಗೆ ಪ್ರವೇಶಿಸಲು ಸಾಧ್ಯವಾಗಿದೆ.

ಪ್ರಧಾನಿ ಮೋದಿ ಪದವಿ ವಿವಾದದ ಪ್ರಕರಣ | ತೀರ್ಪು ಕಾಯ್ದಿರಿಸಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...