ಅಕ್ಟೋಬರ್-ನವೆಂಬರ್ನಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನರು ಎನ್ಡಿಎ ಆಡಳಿತವನ್ನು ತೊಡೆದುಹಾಕುತ್ತಾರೆ ಎಂದು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರಿಗೆ ಅಭಿವೃದ್ಧಿಗಾಗಿ ಯಾವುದೇ ದೃಷ್ಟಿಕೋನ ಅಥವಾ ಮಾರ್ಗಸೂಚಿ ಇಲ್ಲ ಎಂದು ಅವರು ಹೇಳಿದ್ದಾರೆ.
ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಭಾಗವಹಿಸಲು ರಾಜ್ಯ ವಿಧಾನಸಭೆಗೆ ತೆರಳುವ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ತೇಜಸ್ವಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, “ನಿತೀಶ್ ಬಗ್ಗೆ ತಮಗೆ ಅಪಾರ ಗೌರವವಿದೆ. ಆದರೆ ಅವರಿಗೆ ಈಗ ಸರ್ಕಾರ ನಡೆಸಲು ಸಾಧ್ಯವಾಗುತ್ತಿಲ್ಲ. ಅವರು ದಣಿದ ವ್ಯಕ್ತಿ” ಎಂದು ಅವರು ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ ಮಹಾಮೈತ್ರಿಕೂಟವು ಮುಂದಿನ ಸರ್ಕಾರವನ್ನು ರಚಿಸುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಜನತಾದಳ (ಆರ್ಜೆಡಿ) ಬಿಹಾರದಲ್ಲಿ ಮಹಾಮೈತ್ರಿಕೂಟದ ಪ್ರಮುಖ ಮಿತ್ರಪಕ್ಷವಾಗಿದೆ. “ಬಿಹಾರದ ಜನರು ನಿತೀಶ್ ಕುಮಾರ್ ಅವರಿಗೆ 20 ವರ್ಷಗಳನ್ನು ಕೊಟ್ಟರು. ಆದರೆ ಈಗ ಅವರು ಅವರಿಂದ ಬೇಸತ್ತಿದ್ದಾರೆ ಮತ್ತು ಅವರನ್ನು ತೆಗೆದುಹಾಕಲು ಬಯಸುತ್ತಿದ್ದಾರೆ. ಅವರು ಸಾಕು ಎಂದು ಜನರು ಹೇಳುತ್ತಿದ್ದಾರೆ” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇತ್ತೀಚಿನ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗೆ ಅಗತ್ಯ ಬಿದ್ದಾಗಲೆಲ್ಲಾ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸುವುದು ಅವರ ಹಕ್ಕು ಎಂದು ಹೇಳಿದ್ದಾರೆ. “2025 ರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ನಾಶವಾಗಲಿದೆ. ಇದು ಅವರ ಕೊನೆಯ ಸಂಪುಟ ವಿಸ್ತರಣೆಯಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.
ಇದು ಎನ್ಡಿಎ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಲ್ಲ, ಬದಲಾಗಿ ಬಿಜೆಪಿಯ ವಿಸ್ತರಣೆ ಎಂದು ಅವರು ಆರೋಪಿಸಿದ್ದಾರೆ. ಜೆಡಿ(ಯು)ನ ಭವಿಷ್ಯವನ್ನು ಹಾನಿಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದ್ದಾರೆ. “ಜೆಡಿ(ಯು)ನ ಹಲವಾರು ನಾಯಕರು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರು ನಿತೀಶ್ ಕುಮಾರ್ ಅವರ ಪಕ್ಷಕ್ಕೆ ನಿಜವಾದ ಬೆದರಿಕೆಯಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.
ಬಿಹಾರವು ಕಳೆದ 10 ವರ್ಷಗಳಿಂದ ಡಬಲ್-ಎಂಜಿನ್ ಸರ್ಕಾರವನ್ನು ಹೊಂದಿದೆ ಎಂದು ತೇಜಸ್ವಿ ಆರೋಪಿಸಿದ್ದಾರೆ. (17 ತಿಂಗಳ ಮಹಾಮೈತ್ರಿಕೂಟದ ಆಡಳಿತವನ್ನು ಹೊರತುಪಡಿಸಿ). ಆದಾಗ್ಯೂ, ಜನರು ಇನ್ನೂ ನಿರುದ್ಯೋಗ, ವಲಸೆ, ಹಣದುಬ್ಬರ ಮತ್ತು ರೈತರ ಕಳಪೆ ಆದಾಯದಂತಹ ಸಮಸ್ಯೆಗಳು ಇನ್ನೂ ಇದೆ ಎಂದು ಅವರು ಹೇಳಿದ್ದಾರೆ.
“ಜನರೊಂದಿಗೆ ಸಂವಹನ ನಡೆಸಲು ನಿತೀಶ್ಗೆ ಸಾಧ್ಯವಾಗುತ್ತಿಲ್ಲ. ಮುಖ್ಯಮಂತ್ರಿ ಮತ್ತು ಜನಸಾಮಾನ್ಯರ ನಡುವೆ ಸಂವಹನ ಅಂತರವಿದೆ. ಅವರು ಸಾಮಾನ್ಯ ಜನರಿಂದ ದೂರವಾಗಿದ್ದಾರೆ. ಅವರು ಇನ್ನು ಮುಂದೆ ಜನಪ್ರಿಯ ನಾಯಕರಲ್ಲ” ಎಂದು ಅವರು ಹೇಳಿಕೊಂಡಿದ್ದಾರೆ. ವಿಧಾನಸಭಾ ಚುನಾವಣೆಯ ನಂತರ ಎನ್ಡಿಎ ಕನಿಷ್ಠ 10 ವರ್ಷಗಳ ಕಾಲ ಅಧಿಕಾರದಿಂದ ಹೊರಗುಳಿಯುತ್ತದೆ ಎಂಬ ವಿಶ್ವಾಸವನ್ನೂ ಅವರು ವ್ಯಕ್ತಪಡಿಸಿದ್ದಾರೆ.
ನಿತೀಶ್ ಅವರ ಮಗ ನಿಶಾಂತ್ ಕುಮಾರ್ ರಾಜಕೀಯ ಪ್ರವೇಶಕ್ಕೆ ಪ್ರತಿಕ್ರಿಯಿಸಿದ ತೇಜಶ್ವಿ, ಅವರು (ನಿಶಾಂತ್) ರಾಜಕೀಯಕ್ಕೆ ಸೇರಬೇಕು ಎಂದು ಹೇಳಿದ್ದಾರೆ. “ಆದಾಗ್ಯೂ, ಜೆಡಿ (ಯು)-ಬಿಜೆಪಿಯ ಹಲವಾರು ನಾಯಕರು ಇದನ್ನು ಬೆಂಬಲಿಸಲಿಲ್ಲ” ಎಂದು ಅವರು ಆರೋಪಿಸಿದ್ದಾರೆ.
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಸಂಭಾಲ್ ಮಸೀದಿ ಸ್ವಚ್ಛಗೊಳಿಸುವಂತೆ ಪುರಾತತ್ವ ಇಲಾಖೆಗೆ ಹೈಕೋರ್ಟ್ ಸೂಚನೆ
ಸಂಭಾಲ್ ಮಸೀದಿ ಸ್ವಚ್ಛಗೊಳಿಸುವಂತೆ ಪುರಾತತ್ವ ಇಲಾಖೆಗೆ ಹೈಕೋರ್ಟ್ ಸೂಚನೆ

