Homeಅಂತರಾಷ್ಟ್ರೀಯಕಡಿಮೆ ಬುದ್ದಿಯುಳ್ಳವರು ಬಲಪಂಥೀಯ ಬೆಂಬಲಿಗರಾಗುತ್ತಾರೆ ಎನ್ನುತ್ತಿವೆ ಅಮೆರಿಕದ ಸಂಶೋಧನೆಗಳು..!

ಕಡಿಮೆ ಬುದ್ದಿಯುಳ್ಳವರು ಬಲಪಂಥೀಯ ಬೆಂಬಲಿಗರಾಗುತ್ತಾರೆ ಎನ್ನುತ್ತಿವೆ ಅಮೆರಿಕದ ಸಂಶೋಧನೆಗಳು..!

- Advertisement -
- Advertisement -

ಕೆಲವು ಜನರು ಏಕೆ ಪೂರ್ವಾಗ್ರಹ ಪೀಡಿತರಾಗಿದ್ದಾರೆ ಎಂಬುದಕ್ಕೆ ಸಂಶೋಧಕರು ಸಂಭಾವ್ಯ ವಿವರಣೆಯನ್ನು ಕಂಡುಕೊಂಡಿದ್ದಾರೆ. ಅದೆಂದರೆ ಅವರು ಕಡಿಮೆ ಬುದ್ಧಿವಂತರಾಗಿರುತ್ತಾರೆ.

ಕಡಿಮೆ ಸಾಮಾನ್ಯ ಬುದ್ಧಿವಂತಿಕೆ ಹೊಂದಿರುವ ಮಕ್ಕಳು ವಯಸ್ಕರಾದಂತೆ ಪೂರ್ವಾಗ್ರಹ ಪೀಡಿತರಾಗುತ್ತಾರೆ ಎಂದು ಬ್ರಾಕ್ ವಿಶ್ವವಿದ್ಯಾಲಯದ ಅಧ್ಯಯನ ವರದಿ ಹೇಳಿದೆ.

ಸೈಕಲಾಜಿಕಲ್ ಸೈನ್ಸ್ ಜರ್ನಲ್‌ನಲ್ಲಿ ಪ್ರಕಟವಾದ ಈ ಅಧ್ಯಯನವು ಎರಡು ದೊಡ್ಡ-ಪ್ರಮಾಣದ ಬ್ರಿಟಿಷ್ ಅಧ್ಯಯನಗಳ ದತ್ತಾಂಶವನ್ನು ಪರಿಶೀಲಿಸಿದೆ. ಬಾಲ್ಯದಲ್ಲಿ ಕಡಿಮೆ ಬುದ್ದಿಮತೆ ಅಂಕಗಳನ್ನು ಹೊಂದಿದ ಮಕ್ಕಳು ಪ್ರೌಢಾವಸ್ಥೆಯಲ್ಲಿ ಹೆಚ್ಚಿನ ವರ್ಣಭೇದ ನೀತಿಯ ಪ್ರತಿಪಾದಕರಾಗುತ್ತಾರೆ ಎಂದು ಸಂಶೋಧಕರು ವಿವರಿಸಿದ್ದಾರೆ. ಮುಂದೆ ಅವರು ಬಲಪಂಥೀಯ ಸಿದ್ಧಾಂತದತ್ತ ಆಕರ್ಷಿತಗೊಳ್ಳುತ್ತಾರೆ ಎಂಬ ವಿವಾದಾತ್ಮಕ ಅಂಶವನ್ನು ಸಂಶೋಧಕರು  ವಿವರಿಸುತ್ತಾರೆ.

ಯು.ಎಸ್. ಅಧ್ಯಯನದ ದತ್ತಾಂಶದ ದ್ವಿತೀಯ ವಿಶ್ಲೇಷಣೆಯು ಕಳಪೆ ಅಮೂರ್ತ-ತಾರ್ಕಿಕ ಕೌಶಲ್ಯ ಹೊಂದಿರುವವರು ಸಲಿಂಗಕಾಮ ವಿರೋಧಿ ಪೂರ್ವಾಗ್ರಹವನ್ನು ಹೊಂದುವ ಸಾಧ್ಯತೆಯಿದೆ ಎಂದು ತೋರಿಸಿದೆ. ಅವರು ಭಾಗಶಃ ಸರ್ವಾಧಿಕಾರಿ ವರ್ತನೆಗಳೊಂದಿಗೆ ಸಂಬಂಧ ಹೊಂದಿರುತ್ತಾರೆ ಎಂದಿದೆ.

ಅಧ್ಯಯನದ ಫಲಿತಾಂಶಗಳು ಒಂದು ಕೆಟ್ಟ ಚಕ್ರವನ್ನು ಸೂಚಿಸುತ್ತವೆ ಎಂದು ಮುಖ್ಯ ಸಂಶೋಧಕ ಗಾರ್ಡನ್ ಹಾಡ್ಸನ್ ಲೈವ್ ಸೈನ್ಸ್‌ ಪತ್ರಿಕೆಗೆ ತಿಳಿಸಿದ್ದಾರೆ. ಕಡಿಮೆ ಬುದ್ಧಿವಂತಿಕೆಯಿರುವ ಜನರು ಸಾಮಾಜಿಕವಾಗಿ ಸಂಪ್ರದಾಯವಾದಿ ಸಿದ್ಧಾಂತಗಳಿಗೆ ಆಕರ್ಷಿತರಾಗುತ್ತಾರೆ. ಪ್ರತಿಯಾಗಿ, ಆ ಸಿದ್ಧಾಂತಗಳು ಪೂರ್ವಾಗ್ರಹಗಳಿಗೆ ಕಾರಣವಾಗಬಹುದು ಎಂದಿದ್ದಾರೆ.

“ಸಾಮಾಜಿಕವಾಗಿ ಸಂಪ್ರದಾಯವಾದಿ ಸಿದ್ಧಾಂತಗಳು ರಚನೆಯಲ್ಲಿ ಶ್ರೇಣೀಕರಣವನ್ನು ನೀಡಲು ಒಲವು ತೋರುತ್ತವೆ” ಎಂದು ಅವರು ಹೇಳಿದ್ದಾರೆ. “ದುರದೃಷ್ಟವಶಾತ್, ಈ ಹಲವು ಸಂಪ್ರದಾಯವಾದಿ ಅಂಶಗಳು ಪೂರ್ವಾಗ್ರಹಕ್ಕೆ ಕಾರಣವಾಗಬಹುದು.” ಇದು ಕಡಿಮೆ ಬುದ್ಧಿವಂತಿಕೆ ಇರುವವರು ಬಲ ಸಿದ್ದಾಂತದ ಕಡೆಗೆ ಆಕರ್ಷಿತರಾಗಬಹುದು ಎಂದು ವಿವರಿಸಿದ್ದಾರೆ.

ಕಡಿಮೆ ಬುದ್ಧಿವಂತಿಕೆಯಿರುವ ಜನರು ಇತರ ಜನಾಂಗಗಳು ಮತ್ತು ಗುಂಪುಗಳೊಂದಿಗೆ ಕಡಿಮೆ ಸಂಪರ್ಕವನ್ನು ಹೊಂದಿರುತ್ತಾರೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಇತರ ಗುಂಪುಗಳೊಂದಿಗೆ ಅವರಿಗೆ ಸಂವಹನ ನಡೆಸುವುದು ಅರಿವಿನ ಕೊರತೆಯಿಂದಾಗಿ ಮಾನಸಿಕವಾಗಿ ಸವಾಲಿನ ಕೆಲಸವಾಗಿರುತ್ತದೆ.

ಸಂಶೋಧನೆಗಳ ಪ್ರಕಾರ ಎಲ್ಲಾ ಉದಾರವಾದಿಗಳು ಬುದ್ದಿವಂತರು ಮತ್ತು ಎಲ್ಲಾ ಸಂಪ್ರದಾಯವಾದಿಗಳು ಮೂರ್ಖರು ಎಂದು ಅರ್ಥವಲ್ಲ ಎಂದು ಡಾ. ಹಾಡ್ಸನ್ ವಿವರಿಸಿದ್ದಾರೆ. “ಅತ್ಯಂತ ಬುದ್ದಿವಂತರಾದ ಸಂಪ್ರದಾಯವಾದಿಗಳು ಮತ್ತು ಅಷ್ಟು ಬುದ್ದಿವಂತರಲ್ಲದ ಉದಾರವಾದಿಗಳ ಅನೇಕ ಉದಾಹರಣೆಗಳಿವೆ. ಮತ್ತು ಬಹಳ ತತ್ವಬದ್ಧ ಸಂಪ್ರದಾಯವಾದಿಗಳು ಮತ್ತು ಅಸಹಿಷ್ಣು ಉದಾರವಾದಿಗಳ ಅನೇಕ ಉದಾಹರಣೆಗಳು ಸಹ ಅಲ್ಲಲ್ಲಿ ಕಂಡುಬರುತ್ತವೆ ಎಂದು ಹೇಳಿದ್ದಾರೆ. ಆದರೆ ಪೂರ್ಣಜನರನ್ನು ಗಮನದಲ್ಲಿಟ್ಟುಕೊಂಡು ಈ ಸಂಶೋಧನೆ ನಡೆದಿದೆ ಎಂದಿದಾರೆ.

ಈಗ ನಿಮ್ಮ ನಿಮ್ಮ ಬುದ್ದಿಮತ್ತೆ ಮತ್ತು ನೀವು ಪ್ರತಿನಿಧಿಸುವ ರಾಜಕೀಯವನ್ನು ತಾಳೆ ನೋಡಿಕೊಳ್ಳಿ.

ಮೂಲ: ದಿ ಗ್ಲೋಬ್‌ ಅಂಡ್‌ ಮೈಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...