Homeಕರ್ನಾಟಕವಕ್ಫ್‌ ತಿದ್ದುಪಡಿ ವಿರುದ್ಧ ಶಾಹೀನ್ ಬಾಗ್, ರೈತ ಹೋರಾಟದ ಮಾದರಿಯ ಚಳವಳಿ ಕಟ್ಟಬೇಕು - ಶಿವಸುಂದರ್

ವಕ್ಫ್‌ ತಿದ್ದುಪಡಿ ವಿರುದ್ಧ ಶಾಹೀನ್ ಬಾಗ್, ರೈತ ಹೋರಾಟದ ಮಾದರಿಯ ಚಳವಳಿ ಕಟ್ಟಬೇಕು – ಶಿವಸುಂದರ್

- Advertisement -
- Advertisement -

ಹೋರಾಟದ ಕಾರಣಕ್ಕೆ, ಬಿಜೆಪಿ ಆಡಳಿತ ನಡೆಸುವ ರಾಜ್ಯಗಳು ಸೇರಿದಂತೆ ದೇಶದ ಹಲವು ರಾಜ್ಯಗಳು ಈಗಲೂ ಸಿಎಎ ಕಾಯ್ದೆಯನ್ನು ಜಾರಿ ಮಾಡಿಲ್ಲ, ಆದ್ದರಿಂದ ಸಿಎಎ ವಿರೋಧಿ ಶಾಹೀನ್ ಬಾಗ್ ಮತ್ತು ರೈತರ ಹೋರಾಟದ ಮಾದರಿಯಲ್ಲಿ ವಕ್ಫ್‌ ತಿದ್ದುಪಡಿ ವಿರೋಧಿ ಹೋರಾಟ ಕಟ್ಟಬೇಕು ಎಂದು ಚಿಂತಕ ಶಿವಸುಂದರ್ ಅವರು ಹೇಳಿದರು. ಕರ್ನಾಟಕ ಮುಸ್ಲಿಂ ಮತ್ತು ಬ್ಯಾರಿ ಸಂಘಟನೆಗಳ ಒಕ್ಕೂಟಗಳ ಅಡಿಯಲ್ಲಿ ಕೇಂದ್ರ ಸರ್ಕಾರದ ಅಸಂವಿಧಾನಿಕ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡುತ್ತಿದ್ದರು. ವಕ್ಫ್‌ ತಿದ್ದುಪಡಿ ವಿರುದ್ಧ

ಕೇಂದ್ರ ಸರ್ಕಾರ ಮಾಡುತ್ತಿರುವ ವಕ್ಫ್ ತಿದ್ದುಪಡಿ ವಿರುದ್ಧ ಹೋರಾಟ ಕಟ್ಟಬೇಕಿದೆ ನಿಜವಾದರೂ, ಅದಕ್ಕೂ ಮೊದಲು ನಾವು ವಕ್ಫ್ ಬಗ್ಗೆ ತಿಳಿದು, ಹೋರಾಟದಲ್ಲಿ ಮುಸ್ಲಿಮೇತರರನ್ನು ಇದರಲ್ಲಿ ಒಳಗೊಳ್ಳಿಸಬೇಕು ಎಂದು ಅವರು ಹೇಳಿದರು. “ಬಿಜೆಪಿ ಮುಸ್ಲಿಮರ ಬಗ್ಗೆ ಅನುಮಾನಗಳನ್ನು ಹುಟ್ಟು ಹಾಕುವ ಮೂಲಕ ಅಪಪ್ರಚಾರ ಮಾಡುತ್ತಿದೆ. ಈ ಹಿಂದಿನಿಂದಲೂ ಮುಸ್ಲಿಮರು ಎಂದರೆ ಹೊರಗಿನವರು ಮತ್ತು ದಾಳಿಕೋರರು ಎಂಬಂತೆ ಬಿಂಬಿಸಿದ್ದರು. ಈಗ ವಕ್ಫ್ ಮೂಲಕ ಅದನ್ನು ಮುಂದುವರೆಸುತ್ತಾ ಇದ್ದಾರೆ” ಎಂದು ಶಿವಸುಂದರ್ ಹೇಳಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಮಾರ್ಚ್ 10ಕ್ಕೆ ಸಂಸತ್ತಿನಲ್ಲಿ ಜೆಪಿಸಿ ಕೊಟ್ಟ ವರದಿಯನ್ನು ಮಂಡಿಸಲು ಸರ್ಕಾರ ಪ್ರಯತ್ನಿಸುತ್ತಾ ಇದೆ. ಯಾಕೆಂದರೆ ಮುಸ್ಲಿಮರು ಆಗ ರಂಜಾನ್ ಉಪವಾಸ ಆಚರಣೆ ಮಾಡುವುದರಿಂದ ಪ್ರತಿಭಟನೆ ಕಡಿಮೆ ಇರಬಹುದು ಎಂಬುದು ಅವರ ಲೆಕ್ಕಾಚಾರ. ಆದರೆ ನಾವು ಅವರ ಲೆಕ್ಕಾಚಾರವನ್ನು ತಲೆಕೆಳಗು ಮಾಡಬೇಕು.‌ ವಕ್ಫ್ ತಿದ್ದುಪಡಿ ಮಾಡುವುದು ಮುಸ್ಲಿಮರಿಗೆ ಮಾತ್ರ ಮಾಡುತ್ತಿರುವ ಅನ್ಯಾಯ ಮಾತ್ರವಲ್ಲ, ಜೊತೆಗೆ ಮುಸ್ಲಿಮರ ಮೂಲಕ ಅಲ್ಪಸಂಖ್ಯಾತರ ವಿರುದ್ಧದ ದಬ್ಬಾಳಿಕೆಯ ಪ್ರಾರಂಭ ಇದಾಗಿದೆ” ಎಂದು ಅವರು ಪ್ರತಿಪಾದಿಸಿದರು.

“ವಕ್ಫ್‌ ಎಂದರೆ, ಭಗವಂತನ ಒಡೆತನದಲ್ಲಿ ಸಮುದಾಯದ ಸೇವೆಗೆ ತಮ್ಮ ಆಸ್ತಿಯನ್ನು ಬಿಟ್ಟು ಕೊಡುವುದಾಗಿದೆ. ಇಂತಹ ಉದಾತ್ತ ಮೌಲ್ಯಗಳನ್ನು ಸಾವಿರ ವರ್ಷಗಳಿಂದ ಮುಸ್ಲಿಮರು ಆಚರಿಸುತ್ತಲೇ ಬಂದಿದ್ದಾರೆ. ಭಾರತದಲ್ಲಿ ಮುಸ್ಲಿಮೇತರ ರಾಜರು, ಶ್ರೀಮಂತರು ಕೂಡಾ ವಕ್ಫ್ ಆಸ್ತಿಗಳನ್ನು ಬಿಟ್ಟುಕೊಟ್ಟಿದ್ದಾರೆ. ಅಲ್ಲದೆ, ಧರ್ಮದ ಹೆಸರಿನಲ್ಲ ದಾನ ದತ್ತಿಗಳು ಹಿಂದಿನಿಂದಲೂ ನಡೆದುಕೊಂಡೆ ಬಂದಿದೆ. ಆದ್ದರಿಂದ, ವಕ್ಫ್ ವಕ್ಫ್ ತಿದ್ದುಪಡಿ ವಿವಾದವು ಕೇವಲ ಮುಸ್ಲಿಮರ ಮಾತ್ರ ಸಮಸ್ಯೆ ಅಲ್ಲ. ಅದು ಎಲ್ಲರ ಸಮಸ್ಯೆ” ಎಂದು ಅವರು ಹೇಳಿದರು.

“ಈ ದತ್ತಿಯನ್ನು ಅವರು ಬಿಟ್ಟು ಕೊಟ್ಟ ಉದ್ದೇಶಗಳಿಗಾಗಿ ವಿನಿಯೋಗಿಸಲಾಗುತ್ತದೆಯೆ ಎಂದು ಪರಿಶೀಲಿಸಲು ವಕ್ಫ್ ಬೋರ್ಡ್ ಅನ್ನು ಬ್ರಿಟಿಷರು ರೂಪಿಸಿದರು. ಸಮುದಾಯದ ಸೇವೆಗಾಗಿ ವಕ್ಫ್ ಕೊಡಲು, ಅದನ್ನು ನಿರ್ವಹಿಸಲು ನಮಗೆ ಸಂವಿಧಾನ ಹಕ್ಕು ಕೊಟ್ಟಿದೆ. ಆದರೆ ವಕ್ಫ್ ಆಸ್ತಿ ರಕ್ಷಣೆ ಮಾಡುತ್ತೇವೆ ಎಂದು ಬಿಜೆಪಿ ವಕ್ಫ್ ಬೋರ್ಡ್‌ ವಿಚಾರವನ್ನು ಕೋಮುವಾದಿಕರಣ ಮಾಡುದ ಉದ್ದೇಶದಿಂದ ಅದಕ್ಕೆ ತಿದ್ದುಪಡಿ ಮಾಡುತ್ತಿದೆ” ಎಂದರು.

“ವಕ್ಫ್ ಕಾಯ್ದೆಗೆ 2013ರ ವರೆಗೆ ಬಂದ ಎಲ್ಲಾ ತಿದ್ದುಪಡಿಗಳು ವಕ್ಫ್ ಆಸ್ತಿಗಳನ್ನು ಉಳಿಸಲು, ಅದನ್ನು ಸರಿಯಾಗಿ ನಡೆಸಿಕೊಳ್ಳಲು ಅಥವಾ ಅದರಲ್ಲಿನ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಮಾಡಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಮಾತ್ರ ವಕ್ಫ್ ಉಳಿಸುತ್ತೇವೆ ಎಂದು ನಾಶ ಮಾಡಲು ಹೊರಟಿದೆ. ಸಿಎಎ ಹೋರಾಟದ ಕಾರಣಕ್ಕೆ ಹಲವಾರು ರಾಜ್ಯಗಳು  ಸಿಎಎ ಜಾರಿ ಮಾಡಿಲ್ಲ. ಅದರಂತೆ ಸಿಎಎ ವಿರೋಧಿ ಶಹೀನ್ ಭಾಗ್ ಮತ್ತು ರೈತರ ಹೋರಾಟದ ಮಾದರಿಯಲ್ಲಿ ಹೋರಾಟ ಕಟ್ಟಬೇಕು” ಎಂದು ಶಿವಸುಂದರ್ ಅವರು ಹೇಳಿದರು.

ಸಾಮಾಜಿಕ ಹೋರಾಟಗಾರ್ತಿ ಅಖಿಲಾ ವಿದ್ಯಾಸಂದ್ರ ಮಾತನಾಡಿ, “ವಕ್ಫ್ ಬೋರ್ಡ್‌ನಲ್ಲಿ ಚುನಾವಣೆ ಬೇಡ ಎಂದು ಕೇಂದ್ರ ಸರ್ಕಾರ ಹೇಳುತ್ತಾ ಇದೆ. ಮುಸ್ಲಿಮೇತರರನ್ನು ವಕ್ಫ್ ಬೋರ್ಡ್‌ನಲ್ಲಿ ಸೇರಿಸುವುದು ಸರಿಯಲ್ಲ. ವಕ್ಫ್‌ನಲ್ಲಿ ಈಗ ಎಂತಹ ಮುಸ್ಲಿಮೇತರ ಸದಸ್ಯರನ್ನು ತರುತ್ತಿದೆ ಎಂಬ ವಿಚಾರವಿದೆ. ವಕ್ಫ್ ಆಸ್ತಿ ಕಬಳಿಸಿದವರಿಗೆ ನೀಡುವ ಶಿಕ್ಷೆಯನ್ನು ಇಳಿಸಲಾಗಿದೆ. ಹಾಗಾದರೆ ಈ ಕಾಯ್ದೆ ವಕ್ಫ್ ಆಸ್ತಿಗಳನ್ನು ಉಳಿಸಲೆ ಅಥವಾ ನಾಶ ಮಾಡಲೆ” ಎಂದು ಅವರು ಕೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಭಾಲ್‌ ಮಸೀದಿ ಸ್ವಚ್ಛಗೊಳಿಸುವಂತೆ ಪುರಾತತ್ವ ಇಲಾಖೆಗೆ ಹೈಕೋರ್ಟ್ ಸೂಚನೆ

ಸಂಭಾಲ್‌ ಮಸೀದಿ ಸ್ವಚ್ಛಗೊಳಿಸುವಂತೆ ಪುರಾತತ್ವ ಇಲಾಖೆಗೆ ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...