Homeಕರ್ನಾಟಕವಕ್ಫ್‌ ತಿದ್ದುಪಡಿ ವಿರುದ್ಧ ಶಾಹೀನ್ ಬಾಗ್, ರೈತ ಹೋರಾಟದ ಮಾದರಿಯ ಚಳವಳಿ ಕಟ್ಟಬೇಕು - ಶಿವಸುಂದರ್

ವಕ್ಫ್‌ ತಿದ್ದುಪಡಿ ವಿರುದ್ಧ ಶಾಹೀನ್ ಬಾಗ್, ರೈತ ಹೋರಾಟದ ಮಾದರಿಯ ಚಳವಳಿ ಕಟ್ಟಬೇಕು – ಶಿವಸುಂದರ್

- Advertisement -
- Advertisement -

ಹೋರಾಟದ ಕಾರಣಕ್ಕೆ, ಬಿಜೆಪಿ ಆಡಳಿತ ನಡೆಸುವ ರಾಜ್ಯಗಳು ಸೇರಿದಂತೆ ದೇಶದ ಹಲವು ರಾಜ್ಯಗಳು ಈಗಲೂ ಸಿಎಎ ಕಾಯ್ದೆಯನ್ನು ಜಾರಿ ಮಾಡಿಲ್ಲ, ಆದ್ದರಿಂದ ಸಿಎಎ ವಿರೋಧಿ ಶಾಹೀನ್ ಬಾಗ್ ಮತ್ತು ರೈತರ ಹೋರಾಟದ ಮಾದರಿಯಲ್ಲಿ ವಕ್ಫ್‌ ತಿದ್ದುಪಡಿ ವಿರೋಧಿ ಹೋರಾಟ ಕಟ್ಟಬೇಕು ಎಂದು ಚಿಂತಕ ಶಿವಸುಂದರ್ ಅವರು ಹೇಳಿದರು. ಕರ್ನಾಟಕ ಮುಸ್ಲಿಂ ಮತ್ತು ಬ್ಯಾರಿ ಸಂಘಟನೆಗಳ ಒಕ್ಕೂಟಗಳ ಅಡಿಯಲ್ಲಿ ಕೇಂದ್ರ ಸರ್ಕಾರದ ಅಸಂವಿಧಾನಿಕ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡುತ್ತಿದ್ದರು. ವಕ್ಫ್‌ ತಿದ್ದುಪಡಿ ವಿರುದ್ಧ

ಕೇಂದ್ರ ಸರ್ಕಾರ ಮಾಡುತ್ತಿರುವ ವಕ್ಫ್ ತಿದ್ದುಪಡಿ ವಿರುದ್ಧ ಹೋರಾಟ ಕಟ್ಟಬೇಕಿದೆ ನಿಜವಾದರೂ, ಅದಕ್ಕೂ ಮೊದಲು ನಾವು ವಕ್ಫ್ ಬಗ್ಗೆ ತಿಳಿದು, ಹೋರಾಟದಲ್ಲಿ ಮುಸ್ಲಿಮೇತರರನ್ನು ಇದರಲ್ಲಿ ಒಳಗೊಳ್ಳಿಸಬೇಕು ಎಂದು ಅವರು ಹೇಳಿದರು. “ಬಿಜೆಪಿ ಮುಸ್ಲಿಮರ ಬಗ್ಗೆ ಅನುಮಾನಗಳನ್ನು ಹುಟ್ಟು ಹಾಕುವ ಮೂಲಕ ಅಪಪ್ರಚಾರ ಮಾಡುತ್ತಿದೆ. ಈ ಹಿಂದಿನಿಂದಲೂ ಮುಸ್ಲಿಮರು ಎಂದರೆ ಹೊರಗಿನವರು ಮತ್ತು ದಾಳಿಕೋರರು ಎಂಬಂತೆ ಬಿಂಬಿಸಿದ್ದರು. ಈಗ ವಕ್ಫ್ ಮೂಲಕ ಅದನ್ನು ಮುಂದುವರೆಸುತ್ತಾ ಇದ್ದಾರೆ” ಎಂದು ಶಿವಸುಂದರ್ ಹೇಳಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಮಾರ್ಚ್ 10ಕ್ಕೆ ಸಂಸತ್ತಿನಲ್ಲಿ ಜೆಪಿಸಿ ಕೊಟ್ಟ ವರದಿಯನ್ನು ಮಂಡಿಸಲು ಸರ್ಕಾರ ಪ್ರಯತ್ನಿಸುತ್ತಾ ಇದೆ. ಯಾಕೆಂದರೆ ಮುಸ್ಲಿಮರು ಆಗ ರಂಜಾನ್ ಉಪವಾಸ ಆಚರಣೆ ಮಾಡುವುದರಿಂದ ಪ್ರತಿಭಟನೆ ಕಡಿಮೆ ಇರಬಹುದು ಎಂಬುದು ಅವರ ಲೆಕ್ಕಾಚಾರ. ಆದರೆ ನಾವು ಅವರ ಲೆಕ್ಕಾಚಾರವನ್ನು ತಲೆಕೆಳಗು ಮಾಡಬೇಕು.‌ ವಕ್ಫ್ ತಿದ್ದುಪಡಿ ಮಾಡುವುದು ಮುಸ್ಲಿಮರಿಗೆ ಮಾತ್ರ ಮಾಡುತ್ತಿರುವ ಅನ್ಯಾಯ ಮಾತ್ರವಲ್ಲ, ಜೊತೆಗೆ ಮುಸ್ಲಿಮರ ಮೂಲಕ ಅಲ್ಪಸಂಖ್ಯಾತರ ವಿರುದ್ಧದ ದಬ್ಬಾಳಿಕೆಯ ಪ್ರಾರಂಭ ಇದಾಗಿದೆ” ಎಂದು ಅವರು ಪ್ರತಿಪಾದಿಸಿದರು.

“ವಕ್ಫ್‌ ಎಂದರೆ, ಭಗವಂತನ ಒಡೆತನದಲ್ಲಿ ಸಮುದಾಯದ ಸೇವೆಗೆ ತಮ್ಮ ಆಸ್ತಿಯನ್ನು ಬಿಟ್ಟು ಕೊಡುವುದಾಗಿದೆ. ಇಂತಹ ಉದಾತ್ತ ಮೌಲ್ಯಗಳನ್ನು ಸಾವಿರ ವರ್ಷಗಳಿಂದ ಮುಸ್ಲಿಮರು ಆಚರಿಸುತ್ತಲೇ ಬಂದಿದ್ದಾರೆ. ಭಾರತದಲ್ಲಿ ಮುಸ್ಲಿಮೇತರ ರಾಜರು, ಶ್ರೀಮಂತರು ಕೂಡಾ ವಕ್ಫ್ ಆಸ್ತಿಗಳನ್ನು ಬಿಟ್ಟುಕೊಟ್ಟಿದ್ದಾರೆ. ಅಲ್ಲದೆ, ಧರ್ಮದ ಹೆಸರಿನಲ್ಲ ದಾನ ದತ್ತಿಗಳು ಹಿಂದಿನಿಂದಲೂ ನಡೆದುಕೊಂಡೆ ಬಂದಿದೆ. ಆದ್ದರಿಂದ, ವಕ್ಫ್ ವಕ್ಫ್ ತಿದ್ದುಪಡಿ ವಿವಾದವು ಕೇವಲ ಮುಸ್ಲಿಮರ ಮಾತ್ರ ಸಮಸ್ಯೆ ಅಲ್ಲ. ಅದು ಎಲ್ಲರ ಸಮಸ್ಯೆ” ಎಂದು ಅವರು ಹೇಳಿದರು.

“ಈ ದತ್ತಿಯನ್ನು ಅವರು ಬಿಟ್ಟು ಕೊಟ್ಟ ಉದ್ದೇಶಗಳಿಗಾಗಿ ವಿನಿಯೋಗಿಸಲಾಗುತ್ತದೆಯೆ ಎಂದು ಪರಿಶೀಲಿಸಲು ವಕ್ಫ್ ಬೋರ್ಡ್ ಅನ್ನು ಬ್ರಿಟಿಷರು ರೂಪಿಸಿದರು. ಸಮುದಾಯದ ಸೇವೆಗಾಗಿ ವಕ್ಫ್ ಕೊಡಲು, ಅದನ್ನು ನಿರ್ವಹಿಸಲು ನಮಗೆ ಸಂವಿಧಾನ ಹಕ್ಕು ಕೊಟ್ಟಿದೆ. ಆದರೆ ವಕ್ಫ್ ಆಸ್ತಿ ರಕ್ಷಣೆ ಮಾಡುತ್ತೇವೆ ಎಂದು ಬಿಜೆಪಿ ವಕ್ಫ್ ಬೋರ್ಡ್‌ ವಿಚಾರವನ್ನು ಕೋಮುವಾದಿಕರಣ ಮಾಡುದ ಉದ್ದೇಶದಿಂದ ಅದಕ್ಕೆ ತಿದ್ದುಪಡಿ ಮಾಡುತ್ತಿದೆ” ಎಂದರು.

“ವಕ್ಫ್ ಕಾಯ್ದೆಗೆ 2013ರ ವರೆಗೆ ಬಂದ ಎಲ್ಲಾ ತಿದ್ದುಪಡಿಗಳು ವಕ್ಫ್ ಆಸ್ತಿಗಳನ್ನು ಉಳಿಸಲು, ಅದನ್ನು ಸರಿಯಾಗಿ ನಡೆಸಿಕೊಳ್ಳಲು ಅಥವಾ ಅದರಲ್ಲಿನ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಮಾಡಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಮಾತ್ರ ವಕ್ಫ್ ಉಳಿಸುತ್ತೇವೆ ಎಂದು ನಾಶ ಮಾಡಲು ಹೊರಟಿದೆ. ಸಿಎಎ ಹೋರಾಟದ ಕಾರಣಕ್ಕೆ ಹಲವಾರು ರಾಜ್ಯಗಳು  ಸಿಎಎ ಜಾರಿ ಮಾಡಿಲ್ಲ. ಅದರಂತೆ ಸಿಎಎ ವಿರೋಧಿ ಶಹೀನ್ ಭಾಗ್ ಮತ್ತು ರೈತರ ಹೋರಾಟದ ಮಾದರಿಯಲ್ಲಿ ಹೋರಾಟ ಕಟ್ಟಬೇಕು” ಎಂದು ಶಿವಸುಂದರ್ ಅವರು ಹೇಳಿದರು.

ಸಾಮಾಜಿಕ ಹೋರಾಟಗಾರ್ತಿ ಅಖಿಲಾ ವಿದ್ಯಾಸಂದ್ರ ಮಾತನಾಡಿ, “ವಕ್ಫ್ ಬೋರ್ಡ್‌ನಲ್ಲಿ ಚುನಾವಣೆ ಬೇಡ ಎಂದು ಕೇಂದ್ರ ಸರ್ಕಾರ ಹೇಳುತ್ತಾ ಇದೆ. ಮುಸ್ಲಿಮೇತರರನ್ನು ವಕ್ಫ್ ಬೋರ್ಡ್‌ನಲ್ಲಿ ಸೇರಿಸುವುದು ಸರಿಯಲ್ಲ. ವಕ್ಫ್‌ನಲ್ಲಿ ಈಗ ಎಂತಹ ಮುಸ್ಲಿಮೇತರ ಸದಸ್ಯರನ್ನು ತರುತ್ತಿದೆ ಎಂಬ ವಿಚಾರವಿದೆ. ವಕ್ಫ್ ಆಸ್ತಿ ಕಬಳಿಸಿದವರಿಗೆ ನೀಡುವ ಶಿಕ್ಷೆಯನ್ನು ಇಳಿಸಲಾಗಿದೆ. ಹಾಗಾದರೆ ಈ ಕಾಯ್ದೆ ವಕ್ಫ್ ಆಸ್ತಿಗಳನ್ನು ಉಳಿಸಲೆ ಅಥವಾ ನಾಶ ಮಾಡಲೆ” ಎಂದು ಅವರು ಕೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಭಾಲ್‌ ಮಸೀದಿ ಸ್ವಚ್ಛಗೊಳಿಸುವಂತೆ ಪುರಾತತ್ವ ಇಲಾಖೆಗೆ ಹೈಕೋರ್ಟ್ ಸೂಚನೆ

ಸಂಭಾಲ್‌ ಮಸೀದಿ ಸ್ವಚ್ಛಗೊಳಿಸುವಂತೆ ಪುರಾತತ್ವ ಇಲಾಖೆಗೆ ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...