Homeಮುಖಪುಟಈ ವರ್ಷ ಕನ್ನಡದಲ್ಲಿ ಗೆದ್ದುದ್ದಕ್ಕಿಂತ ಬಿದ್ದ ಸಿನಿಮಾಗಳೇ ಹೆಚ್ಚು...

ಈ ವರ್ಷ ಕನ್ನಡದಲ್ಲಿ ಗೆದ್ದುದ್ದಕ್ಕಿಂತ ಬಿದ್ದ ಸಿನಿಮಾಗಳೇ ಹೆಚ್ಚು…

- Advertisement -
- Advertisement -

ಸಿನಿಮಾ ಇಂಡಸ್ಟ್ರಿ ಆರಂಭಗೊಂಡಾಗಿನಿಂದಲೂ ತನ್ನ ಬೇಡಿಕೆಯನ್ನೂ ಎಂದೂ ಕಳೆದುಕೊಂಡಿಲ್ಲ. ಸಿನಿಮಾ ಪ್ರೇಕ್ಷಕರಲ್ಲಿ ಎಂದೂ ಸಿನಿಮಾ ನೋಡುವ ಗೀಳು ಕಡಿಮೆಯಾಗಿದ್ದೇ ಇಲ್ಲ. ಕಳೆದ ಒಂದು ದಶಕದ ಹಿಂದೆ
ಕನ್ನಡ ಸಿನಿಮಾಗಳ ನಿರ್ಮಾಣ ತೀರಾ ಕಡಿಮೆ ಅಲ್ಲದಿದ್ದರೂ, ಇಂದಿಗೆ ಹೋಲಿಸಿದರೆ ಅಂದು ತಿಂಗಳಲ್ಲಿ ತೆರೆಕಾಣುತ್ತಿದ್ದ ಸಿನಿಮಾಗಳು ನಾಲ್ಕೈದಕ್ಕಿಂತ ಹೆಚ್ಚೇನೂ ಇರುತ್ತಿರಲಿಲ್ಲ. ಅವುಗಳಲ್ಲಿ ಒಳ್ಳೆಯ ಸಿನಿಮಾಗಳು ಬಂದರಂತೂ ವರ್ಷಾನುಗಟ್ಟಲೇ ಬದಲಾಗದೇ ಪ್ರದರ್ಶನವಾಗುತ್ತಿದ್ದವು. ಅಂತಹ ಸಿನಿಮಾಗಳನ್ನು ನೋಡಲು ಹೋಗುವುದೇ ಸಿನಿ ಪ್ರೇಕ್ಷಕರಲ್ಲಿ ಸಡಗರವನ್ನು ತಂದಿಡುತ್ತಿತ್ತು. ಹಳ್ಳಿಗಾಡಿನ ಜನರೋ ಆಟೋ ಮಾಡಿಕೊಂಡೋ ಅಥವಾ ಎತ್ತಿನ ಬಂಡಿ ಕಟ್ಟಿಕೊಂಡೋ ದೌಡಾಯಿಸುತ್ತಿದ್ದರು. ಈಗ ಆ ಟ್ರೆಂಡ್ ಬದಲಾಗಿದ್ದರೂ ಸಿನಿ ಪ್ರೇಕ್ಷಕರ ಸಂಖ್ಯೆಯಂತೂ ದುಪ್ಪಟ್ಟಾಗಿದೆ.

ಅಂದಹಾಗೆ ಈ ವರ್ಷದಲ್ಲಿ 163 ಕನ್ನಡ ಸಿನಿಮಾಗಳು ಥಿಯೇಟರ್‌ಗಳ ಮುಂದೆ ಬಂದು ನಿಂತಿದ್ದವು. ಅಂದರೆ ತಿಂಗಳಿಗೆ ಬರೋಬ್ಬರಿ 13-14 ಸಿನಿಮಾಗಳು ಬಿಡುಗಡೆಗೊಂಡಿವೆ. ಅವುಗಳಲ್ಲಿ ಸಕ್ಷಸ್ ಕಂಡಿದ್ದು ಮಾತ್ರ ಎರಡೇ ಸಿನಿಮಾಗಳು. ಟಿ.ಕೆ.ದಯನಂದ್‍ರವರ ಕ್ರಿಯೇಟಿವಿಯೊಂದಿಗೆ ಹೊಸ ರೀತಿಯಲ್ಲಿ ಕತೆ ಎಣೆಯಲಾಗಿದ್ದ, ರಿಷಬ್ ಶೆಟ್ಟಿ ಅಭಿನಯದ “ಬೆಲ್ ಬಾಟಂ” ಮತ್ತು ದರ್ಶನ್ ಅಭಿನಯದ ‘ಯಜಮಾನ’ ಸಿನಿಮಾಗಳು ನೂರು ದಿನಗಳ ಗಡಿ ಮುಟ್ಟಿದ್ದವು. ಸಿನಿಮಾದಲ್ಲಿನ ಹೊಸತನದೊಂದಿಗೆ ಈ ವರ್ಷದ ಬೆಸ್ಟ್ ಸಿನಿಮಾ ಎನಿಸಿಕೊಂಡಿರುವ ಬೆಲ್ ಬಾಟಂ ಕಥೆ ಬಾಲಿವುಡ್‍ಗೂ ರಿಮೇಕ್ ಆಗುತ್ತಿರುವುದು ವಿಶೇಷ.

ಉಳಿದಂತೆ ಭಾರಿ ನಿರೀಕ್ಷೆ ಹುಟ್ಟಿಸಿದ್ದ, ಬಿಡುಗಡೆಗೂ ಮುನ್ನ ಭಾರಿ ಸದ್ದು ಮಾಡಿದ್ದ ಪೈಲ್ವಾನ್, ನಟಸಾರ್ವಭೌಮ, ಕುರುಕ್ಷೇತ್ರ ಸಿನಿಮಾಗಳು ಬಿಡುಗಡೆಯಾದ ನಂತರ ಸದ್ದು-ಸುದ್ದಿಯಿಲ್ಲದೆ ತೆರೆಹಿಂದೆ ಸರಿದವು. ಅದರಲ್ಲೂ ಪೈಲ್ವಾನ್ ಸದ್ದು ಮಾಡಿದ್ದು ಮಾತ್ರ ಪೈರಸಿ ವಿಚಾರಕ್ಕಷ್ಟೇ. ಅಲ್ಲದೆ ಸದ್ದೇ ಮಾಡದೆ ಬಂದ ‘ಕೆಮಿಸ್ಟ್ರಿ ಆಫ್ ಕರಿಯಪ್ಪಾ’ ಸಿನಿಮಾ ಮಾತ್ರ 75 ದಿನಗದ ಗಡಿ ಮುಟ್ಟಿತ್ತಷ್ಟೇ.

ಹಿಂದೆ ಒಂದೊಳ್ಳೆ ಎಮೋಷನಲ್ ಫ್ಯಾಮಿಲಿ ಸೆಂಟಿಮೆಂಟ್ ಕತೆಯಿಟ್ಟು ಸಿನಿಮಾ ಮಾಡಿದರೆ ಸಾಕು ಸಿನಿ ಪ್ರೇಮಿಗಳ ಭಾವ ಉಕ್ಕಿದಂತೆ, ನಿರ್ಮಾಪಕರ ಖಜಾನೆಯೂ ಉಕ್ಕುತ್ತಿತ್ತು. ಅದನ್ನೇ ನೆಚ್ಚಿ ಕೊಂಡಿದ್ದ ಸೆಂಟಿಮೆಂಟಲ್ ಸಿನಿಮಾಗಳಿಗೆ ಹೆಸರಾಗಿದ್ದ ಶಿವರಾಜ್‍ಕುಮಾರ್ ಅಭಿನಯದ ‘ಕವಚ’ ಸಿನಿಮಾ ಒಳ್ಳೆ ಹೆಸರು ಪಡೆದುಕೊಂಡರೂ ಈಗಿನ ಜನರೇಷನ್‍ನಲ್ಲಿ ಸೆಂಟಿಮೆಂಟ್ ವರ್ಕ್ ಔಟ್ ಆಗೋದಿಲ್ಲ ಎಂಬ ಪಾಠ ಕಲಿಸಿದೆ. ಅಲ್ಲದೆ 99, ಗೀತಾ, ರಂಗನಾಯಕಿಯಂತಹ ಕೆಲವು ಸಿನಿಮಾಗಳು ಫಲ ಕೊಡಲಿಲ್ಲ ಪಾಪ.

ಒಟ್ಟಿನಲ್ಲಿ ಬದಲಾಗುತ್ತಿರುವ ಸಿನಿ ಪ್ರಿಯರ ನಿರೀಕ್ಷೆ ಏನೆಂಬುದನ್ನು ಅರ್ಥ ಮಾಡಿಕೊಳ್ಳದ ಕನ್ನಡ ಚಿತ್ರರಂಗದ 163 ಸಿನಿಮಾಗಳ ಪೈಕಿ 160 ಸಿನಿಮಾಗಳು ಮಕಾಡೆಯಾಗಿರುವುದು ಬೇಸರದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...