Homeಮುಖಪುಟಈ ವರ್ಷ ಕನ್ನಡದಲ್ಲಿ ಗೆದ್ದುದ್ದಕ್ಕಿಂತ ಬಿದ್ದ ಸಿನಿಮಾಗಳೇ ಹೆಚ್ಚು...

ಈ ವರ್ಷ ಕನ್ನಡದಲ್ಲಿ ಗೆದ್ದುದ್ದಕ್ಕಿಂತ ಬಿದ್ದ ಸಿನಿಮಾಗಳೇ ಹೆಚ್ಚು…

- Advertisement -
- Advertisement -

ಸಿನಿಮಾ ಇಂಡಸ್ಟ್ರಿ ಆರಂಭಗೊಂಡಾಗಿನಿಂದಲೂ ತನ್ನ ಬೇಡಿಕೆಯನ್ನೂ ಎಂದೂ ಕಳೆದುಕೊಂಡಿಲ್ಲ. ಸಿನಿಮಾ ಪ್ರೇಕ್ಷಕರಲ್ಲಿ ಎಂದೂ ಸಿನಿಮಾ ನೋಡುವ ಗೀಳು ಕಡಿಮೆಯಾಗಿದ್ದೇ ಇಲ್ಲ. ಕಳೆದ ಒಂದು ದಶಕದ ಹಿಂದೆ
ಕನ್ನಡ ಸಿನಿಮಾಗಳ ನಿರ್ಮಾಣ ತೀರಾ ಕಡಿಮೆ ಅಲ್ಲದಿದ್ದರೂ, ಇಂದಿಗೆ ಹೋಲಿಸಿದರೆ ಅಂದು ತಿಂಗಳಲ್ಲಿ ತೆರೆಕಾಣುತ್ತಿದ್ದ ಸಿನಿಮಾಗಳು ನಾಲ್ಕೈದಕ್ಕಿಂತ ಹೆಚ್ಚೇನೂ ಇರುತ್ತಿರಲಿಲ್ಲ. ಅವುಗಳಲ್ಲಿ ಒಳ್ಳೆಯ ಸಿನಿಮಾಗಳು ಬಂದರಂತೂ ವರ್ಷಾನುಗಟ್ಟಲೇ ಬದಲಾಗದೇ ಪ್ರದರ್ಶನವಾಗುತ್ತಿದ್ದವು. ಅಂತಹ ಸಿನಿಮಾಗಳನ್ನು ನೋಡಲು ಹೋಗುವುದೇ ಸಿನಿ ಪ್ರೇಕ್ಷಕರಲ್ಲಿ ಸಡಗರವನ್ನು ತಂದಿಡುತ್ತಿತ್ತು. ಹಳ್ಳಿಗಾಡಿನ ಜನರೋ ಆಟೋ ಮಾಡಿಕೊಂಡೋ ಅಥವಾ ಎತ್ತಿನ ಬಂಡಿ ಕಟ್ಟಿಕೊಂಡೋ ದೌಡಾಯಿಸುತ್ತಿದ್ದರು. ಈಗ ಆ ಟ್ರೆಂಡ್ ಬದಲಾಗಿದ್ದರೂ ಸಿನಿ ಪ್ರೇಕ್ಷಕರ ಸಂಖ್ಯೆಯಂತೂ ದುಪ್ಪಟ್ಟಾಗಿದೆ.

ಅಂದಹಾಗೆ ಈ ವರ್ಷದಲ್ಲಿ 163 ಕನ್ನಡ ಸಿನಿಮಾಗಳು ಥಿಯೇಟರ್‌ಗಳ ಮುಂದೆ ಬಂದು ನಿಂತಿದ್ದವು. ಅಂದರೆ ತಿಂಗಳಿಗೆ ಬರೋಬ್ಬರಿ 13-14 ಸಿನಿಮಾಗಳು ಬಿಡುಗಡೆಗೊಂಡಿವೆ. ಅವುಗಳಲ್ಲಿ ಸಕ್ಷಸ್ ಕಂಡಿದ್ದು ಮಾತ್ರ ಎರಡೇ ಸಿನಿಮಾಗಳು. ಟಿ.ಕೆ.ದಯನಂದ್‍ರವರ ಕ್ರಿಯೇಟಿವಿಯೊಂದಿಗೆ ಹೊಸ ರೀತಿಯಲ್ಲಿ ಕತೆ ಎಣೆಯಲಾಗಿದ್ದ, ರಿಷಬ್ ಶೆಟ್ಟಿ ಅಭಿನಯದ “ಬೆಲ್ ಬಾಟಂ” ಮತ್ತು ದರ್ಶನ್ ಅಭಿನಯದ ‘ಯಜಮಾನ’ ಸಿನಿಮಾಗಳು ನೂರು ದಿನಗಳ ಗಡಿ ಮುಟ್ಟಿದ್ದವು. ಸಿನಿಮಾದಲ್ಲಿನ ಹೊಸತನದೊಂದಿಗೆ ಈ ವರ್ಷದ ಬೆಸ್ಟ್ ಸಿನಿಮಾ ಎನಿಸಿಕೊಂಡಿರುವ ಬೆಲ್ ಬಾಟಂ ಕಥೆ ಬಾಲಿವುಡ್‍ಗೂ ರಿಮೇಕ್ ಆಗುತ್ತಿರುವುದು ವಿಶೇಷ.

ಉಳಿದಂತೆ ಭಾರಿ ನಿರೀಕ್ಷೆ ಹುಟ್ಟಿಸಿದ್ದ, ಬಿಡುಗಡೆಗೂ ಮುನ್ನ ಭಾರಿ ಸದ್ದು ಮಾಡಿದ್ದ ಪೈಲ್ವಾನ್, ನಟಸಾರ್ವಭೌಮ, ಕುರುಕ್ಷೇತ್ರ ಸಿನಿಮಾಗಳು ಬಿಡುಗಡೆಯಾದ ನಂತರ ಸದ್ದು-ಸುದ್ದಿಯಿಲ್ಲದೆ ತೆರೆಹಿಂದೆ ಸರಿದವು. ಅದರಲ್ಲೂ ಪೈಲ್ವಾನ್ ಸದ್ದು ಮಾಡಿದ್ದು ಮಾತ್ರ ಪೈರಸಿ ವಿಚಾರಕ್ಕಷ್ಟೇ. ಅಲ್ಲದೆ ಸದ್ದೇ ಮಾಡದೆ ಬಂದ ‘ಕೆಮಿಸ್ಟ್ರಿ ಆಫ್ ಕರಿಯಪ್ಪಾ’ ಸಿನಿಮಾ ಮಾತ್ರ 75 ದಿನಗದ ಗಡಿ ಮುಟ್ಟಿತ್ತಷ್ಟೇ.

ಹಿಂದೆ ಒಂದೊಳ್ಳೆ ಎಮೋಷನಲ್ ಫ್ಯಾಮಿಲಿ ಸೆಂಟಿಮೆಂಟ್ ಕತೆಯಿಟ್ಟು ಸಿನಿಮಾ ಮಾಡಿದರೆ ಸಾಕು ಸಿನಿ ಪ್ರೇಮಿಗಳ ಭಾವ ಉಕ್ಕಿದಂತೆ, ನಿರ್ಮಾಪಕರ ಖಜಾನೆಯೂ ಉಕ್ಕುತ್ತಿತ್ತು. ಅದನ್ನೇ ನೆಚ್ಚಿ ಕೊಂಡಿದ್ದ ಸೆಂಟಿಮೆಂಟಲ್ ಸಿನಿಮಾಗಳಿಗೆ ಹೆಸರಾಗಿದ್ದ ಶಿವರಾಜ್‍ಕುಮಾರ್ ಅಭಿನಯದ ‘ಕವಚ’ ಸಿನಿಮಾ ಒಳ್ಳೆ ಹೆಸರು ಪಡೆದುಕೊಂಡರೂ ಈಗಿನ ಜನರೇಷನ್‍ನಲ್ಲಿ ಸೆಂಟಿಮೆಂಟ್ ವರ್ಕ್ ಔಟ್ ಆಗೋದಿಲ್ಲ ಎಂಬ ಪಾಠ ಕಲಿಸಿದೆ. ಅಲ್ಲದೆ 99, ಗೀತಾ, ರಂಗನಾಯಕಿಯಂತಹ ಕೆಲವು ಸಿನಿಮಾಗಳು ಫಲ ಕೊಡಲಿಲ್ಲ ಪಾಪ.

ಒಟ್ಟಿನಲ್ಲಿ ಬದಲಾಗುತ್ತಿರುವ ಸಿನಿ ಪ್ರಿಯರ ನಿರೀಕ್ಷೆ ಏನೆಂಬುದನ್ನು ಅರ್ಥ ಮಾಡಿಕೊಳ್ಳದ ಕನ್ನಡ ಚಿತ್ರರಂಗದ 163 ಸಿನಿಮಾಗಳ ಪೈಕಿ 160 ಸಿನಿಮಾಗಳು ಮಕಾಡೆಯಾಗಿರುವುದು ಬೇಸರದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...