Homeಮುಖಪುಟಈ ವರ್ಷ ಕನ್ನಡದಲ್ಲಿ ಗೆದ್ದುದ್ದಕ್ಕಿಂತ ಬಿದ್ದ ಸಿನಿಮಾಗಳೇ ಹೆಚ್ಚು...

ಈ ವರ್ಷ ಕನ್ನಡದಲ್ಲಿ ಗೆದ್ದುದ್ದಕ್ಕಿಂತ ಬಿದ್ದ ಸಿನಿಮಾಗಳೇ ಹೆಚ್ಚು…

- Advertisement -
- Advertisement -

ಸಿನಿಮಾ ಇಂಡಸ್ಟ್ರಿ ಆರಂಭಗೊಂಡಾಗಿನಿಂದಲೂ ತನ್ನ ಬೇಡಿಕೆಯನ್ನೂ ಎಂದೂ ಕಳೆದುಕೊಂಡಿಲ್ಲ. ಸಿನಿಮಾ ಪ್ರೇಕ್ಷಕರಲ್ಲಿ ಎಂದೂ ಸಿನಿಮಾ ನೋಡುವ ಗೀಳು ಕಡಿಮೆಯಾಗಿದ್ದೇ ಇಲ್ಲ. ಕಳೆದ ಒಂದು ದಶಕದ ಹಿಂದೆ
ಕನ್ನಡ ಸಿನಿಮಾಗಳ ನಿರ್ಮಾಣ ತೀರಾ ಕಡಿಮೆ ಅಲ್ಲದಿದ್ದರೂ, ಇಂದಿಗೆ ಹೋಲಿಸಿದರೆ ಅಂದು ತಿಂಗಳಲ್ಲಿ ತೆರೆಕಾಣುತ್ತಿದ್ದ ಸಿನಿಮಾಗಳು ನಾಲ್ಕೈದಕ್ಕಿಂತ ಹೆಚ್ಚೇನೂ ಇರುತ್ತಿರಲಿಲ್ಲ. ಅವುಗಳಲ್ಲಿ ಒಳ್ಳೆಯ ಸಿನಿಮಾಗಳು ಬಂದರಂತೂ ವರ್ಷಾನುಗಟ್ಟಲೇ ಬದಲಾಗದೇ ಪ್ರದರ್ಶನವಾಗುತ್ತಿದ್ದವು. ಅಂತಹ ಸಿನಿಮಾಗಳನ್ನು ನೋಡಲು ಹೋಗುವುದೇ ಸಿನಿ ಪ್ರೇಕ್ಷಕರಲ್ಲಿ ಸಡಗರವನ್ನು ತಂದಿಡುತ್ತಿತ್ತು. ಹಳ್ಳಿಗಾಡಿನ ಜನರೋ ಆಟೋ ಮಾಡಿಕೊಂಡೋ ಅಥವಾ ಎತ್ತಿನ ಬಂಡಿ ಕಟ್ಟಿಕೊಂಡೋ ದೌಡಾಯಿಸುತ್ತಿದ್ದರು. ಈಗ ಆ ಟ್ರೆಂಡ್ ಬದಲಾಗಿದ್ದರೂ ಸಿನಿ ಪ್ರೇಕ್ಷಕರ ಸಂಖ್ಯೆಯಂತೂ ದುಪ್ಪಟ್ಟಾಗಿದೆ.

ಅಂದಹಾಗೆ ಈ ವರ್ಷದಲ್ಲಿ 163 ಕನ್ನಡ ಸಿನಿಮಾಗಳು ಥಿಯೇಟರ್‌ಗಳ ಮುಂದೆ ಬಂದು ನಿಂತಿದ್ದವು. ಅಂದರೆ ತಿಂಗಳಿಗೆ ಬರೋಬ್ಬರಿ 13-14 ಸಿನಿಮಾಗಳು ಬಿಡುಗಡೆಗೊಂಡಿವೆ. ಅವುಗಳಲ್ಲಿ ಸಕ್ಷಸ್ ಕಂಡಿದ್ದು ಮಾತ್ರ ಎರಡೇ ಸಿನಿಮಾಗಳು. ಟಿ.ಕೆ.ದಯನಂದ್‍ರವರ ಕ್ರಿಯೇಟಿವಿಯೊಂದಿಗೆ ಹೊಸ ರೀತಿಯಲ್ಲಿ ಕತೆ ಎಣೆಯಲಾಗಿದ್ದ, ರಿಷಬ್ ಶೆಟ್ಟಿ ಅಭಿನಯದ “ಬೆಲ್ ಬಾಟಂ” ಮತ್ತು ದರ್ಶನ್ ಅಭಿನಯದ ‘ಯಜಮಾನ’ ಸಿನಿಮಾಗಳು ನೂರು ದಿನಗಳ ಗಡಿ ಮುಟ್ಟಿದ್ದವು. ಸಿನಿಮಾದಲ್ಲಿನ ಹೊಸತನದೊಂದಿಗೆ ಈ ವರ್ಷದ ಬೆಸ್ಟ್ ಸಿನಿಮಾ ಎನಿಸಿಕೊಂಡಿರುವ ಬೆಲ್ ಬಾಟಂ ಕಥೆ ಬಾಲಿವುಡ್‍ಗೂ ರಿಮೇಕ್ ಆಗುತ್ತಿರುವುದು ವಿಶೇಷ.

ಉಳಿದಂತೆ ಭಾರಿ ನಿರೀಕ್ಷೆ ಹುಟ್ಟಿಸಿದ್ದ, ಬಿಡುಗಡೆಗೂ ಮುನ್ನ ಭಾರಿ ಸದ್ದು ಮಾಡಿದ್ದ ಪೈಲ್ವಾನ್, ನಟಸಾರ್ವಭೌಮ, ಕುರುಕ್ಷೇತ್ರ ಸಿನಿಮಾಗಳು ಬಿಡುಗಡೆಯಾದ ನಂತರ ಸದ್ದು-ಸುದ್ದಿಯಿಲ್ಲದೆ ತೆರೆಹಿಂದೆ ಸರಿದವು. ಅದರಲ್ಲೂ ಪೈಲ್ವಾನ್ ಸದ್ದು ಮಾಡಿದ್ದು ಮಾತ್ರ ಪೈರಸಿ ವಿಚಾರಕ್ಕಷ್ಟೇ. ಅಲ್ಲದೆ ಸದ್ದೇ ಮಾಡದೆ ಬಂದ ‘ಕೆಮಿಸ್ಟ್ರಿ ಆಫ್ ಕರಿಯಪ್ಪಾ’ ಸಿನಿಮಾ ಮಾತ್ರ 75 ದಿನಗದ ಗಡಿ ಮುಟ್ಟಿತ್ತಷ್ಟೇ.

ಹಿಂದೆ ಒಂದೊಳ್ಳೆ ಎಮೋಷನಲ್ ಫ್ಯಾಮಿಲಿ ಸೆಂಟಿಮೆಂಟ್ ಕತೆಯಿಟ್ಟು ಸಿನಿಮಾ ಮಾಡಿದರೆ ಸಾಕು ಸಿನಿ ಪ್ರೇಮಿಗಳ ಭಾವ ಉಕ್ಕಿದಂತೆ, ನಿರ್ಮಾಪಕರ ಖಜಾನೆಯೂ ಉಕ್ಕುತ್ತಿತ್ತು. ಅದನ್ನೇ ನೆಚ್ಚಿ ಕೊಂಡಿದ್ದ ಸೆಂಟಿಮೆಂಟಲ್ ಸಿನಿಮಾಗಳಿಗೆ ಹೆಸರಾಗಿದ್ದ ಶಿವರಾಜ್‍ಕುಮಾರ್ ಅಭಿನಯದ ‘ಕವಚ’ ಸಿನಿಮಾ ಒಳ್ಳೆ ಹೆಸರು ಪಡೆದುಕೊಂಡರೂ ಈಗಿನ ಜನರೇಷನ್‍ನಲ್ಲಿ ಸೆಂಟಿಮೆಂಟ್ ವರ್ಕ್ ಔಟ್ ಆಗೋದಿಲ್ಲ ಎಂಬ ಪಾಠ ಕಲಿಸಿದೆ. ಅಲ್ಲದೆ 99, ಗೀತಾ, ರಂಗನಾಯಕಿಯಂತಹ ಕೆಲವು ಸಿನಿಮಾಗಳು ಫಲ ಕೊಡಲಿಲ್ಲ ಪಾಪ.

ಒಟ್ಟಿನಲ್ಲಿ ಬದಲಾಗುತ್ತಿರುವ ಸಿನಿ ಪ್ರಿಯರ ನಿರೀಕ್ಷೆ ಏನೆಂಬುದನ್ನು ಅರ್ಥ ಮಾಡಿಕೊಳ್ಳದ ಕನ್ನಡ ಚಿತ್ರರಂಗದ 163 ಸಿನಿಮಾಗಳ ಪೈಕಿ 160 ಸಿನಿಮಾಗಳು ಮಕಾಡೆಯಾಗಿರುವುದು ಬೇಸರದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...