Homeಮುಖಪುಟಈ ವರ್ಷ ಕನ್ನಡದಲ್ಲಿ ಗೆದ್ದುದ್ದಕ್ಕಿಂತ ಬಿದ್ದ ಸಿನಿಮಾಗಳೇ ಹೆಚ್ಚು...

ಈ ವರ್ಷ ಕನ್ನಡದಲ್ಲಿ ಗೆದ್ದುದ್ದಕ್ಕಿಂತ ಬಿದ್ದ ಸಿನಿಮಾಗಳೇ ಹೆಚ್ಚು…

- Advertisement -
- Advertisement -

ಸಿನಿಮಾ ಇಂಡಸ್ಟ್ರಿ ಆರಂಭಗೊಂಡಾಗಿನಿಂದಲೂ ತನ್ನ ಬೇಡಿಕೆಯನ್ನೂ ಎಂದೂ ಕಳೆದುಕೊಂಡಿಲ್ಲ. ಸಿನಿಮಾ ಪ್ರೇಕ್ಷಕರಲ್ಲಿ ಎಂದೂ ಸಿನಿಮಾ ನೋಡುವ ಗೀಳು ಕಡಿಮೆಯಾಗಿದ್ದೇ ಇಲ್ಲ. ಕಳೆದ ಒಂದು ದಶಕದ ಹಿಂದೆ
ಕನ್ನಡ ಸಿನಿಮಾಗಳ ನಿರ್ಮಾಣ ತೀರಾ ಕಡಿಮೆ ಅಲ್ಲದಿದ್ದರೂ, ಇಂದಿಗೆ ಹೋಲಿಸಿದರೆ ಅಂದು ತಿಂಗಳಲ್ಲಿ ತೆರೆಕಾಣುತ್ತಿದ್ದ ಸಿನಿಮಾಗಳು ನಾಲ್ಕೈದಕ್ಕಿಂತ ಹೆಚ್ಚೇನೂ ಇರುತ್ತಿರಲಿಲ್ಲ. ಅವುಗಳಲ್ಲಿ ಒಳ್ಳೆಯ ಸಿನಿಮಾಗಳು ಬಂದರಂತೂ ವರ್ಷಾನುಗಟ್ಟಲೇ ಬದಲಾಗದೇ ಪ್ರದರ್ಶನವಾಗುತ್ತಿದ್ದವು. ಅಂತಹ ಸಿನಿಮಾಗಳನ್ನು ನೋಡಲು ಹೋಗುವುದೇ ಸಿನಿ ಪ್ರೇಕ್ಷಕರಲ್ಲಿ ಸಡಗರವನ್ನು ತಂದಿಡುತ್ತಿತ್ತು. ಹಳ್ಳಿಗಾಡಿನ ಜನರೋ ಆಟೋ ಮಾಡಿಕೊಂಡೋ ಅಥವಾ ಎತ್ತಿನ ಬಂಡಿ ಕಟ್ಟಿಕೊಂಡೋ ದೌಡಾಯಿಸುತ್ತಿದ್ದರು. ಈಗ ಆ ಟ್ರೆಂಡ್ ಬದಲಾಗಿದ್ದರೂ ಸಿನಿ ಪ್ರೇಕ್ಷಕರ ಸಂಖ್ಯೆಯಂತೂ ದುಪ್ಪಟ್ಟಾಗಿದೆ.

ಅಂದಹಾಗೆ ಈ ವರ್ಷದಲ್ಲಿ 163 ಕನ್ನಡ ಸಿನಿಮಾಗಳು ಥಿಯೇಟರ್‌ಗಳ ಮುಂದೆ ಬಂದು ನಿಂತಿದ್ದವು. ಅಂದರೆ ತಿಂಗಳಿಗೆ ಬರೋಬ್ಬರಿ 13-14 ಸಿನಿಮಾಗಳು ಬಿಡುಗಡೆಗೊಂಡಿವೆ. ಅವುಗಳಲ್ಲಿ ಸಕ್ಷಸ್ ಕಂಡಿದ್ದು ಮಾತ್ರ ಎರಡೇ ಸಿನಿಮಾಗಳು. ಟಿ.ಕೆ.ದಯನಂದ್‍ರವರ ಕ್ರಿಯೇಟಿವಿಯೊಂದಿಗೆ ಹೊಸ ರೀತಿಯಲ್ಲಿ ಕತೆ ಎಣೆಯಲಾಗಿದ್ದ, ರಿಷಬ್ ಶೆಟ್ಟಿ ಅಭಿನಯದ “ಬೆಲ್ ಬಾಟಂ” ಮತ್ತು ದರ್ಶನ್ ಅಭಿನಯದ ‘ಯಜಮಾನ’ ಸಿನಿಮಾಗಳು ನೂರು ದಿನಗಳ ಗಡಿ ಮುಟ್ಟಿದ್ದವು. ಸಿನಿಮಾದಲ್ಲಿನ ಹೊಸತನದೊಂದಿಗೆ ಈ ವರ್ಷದ ಬೆಸ್ಟ್ ಸಿನಿಮಾ ಎನಿಸಿಕೊಂಡಿರುವ ಬೆಲ್ ಬಾಟಂ ಕಥೆ ಬಾಲಿವುಡ್‍ಗೂ ರಿಮೇಕ್ ಆಗುತ್ತಿರುವುದು ವಿಶೇಷ.

ಉಳಿದಂತೆ ಭಾರಿ ನಿರೀಕ್ಷೆ ಹುಟ್ಟಿಸಿದ್ದ, ಬಿಡುಗಡೆಗೂ ಮುನ್ನ ಭಾರಿ ಸದ್ದು ಮಾಡಿದ್ದ ಪೈಲ್ವಾನ್, ನಟಸಾರ್ವಭೌಮ, ಕುರುಕ್ಷೇತ್ರ ಸಿನಿಮಾಗಳು ಬಿಡುಗಡೆಯಾದ ನಂತರ ಸದ್ದು-ಸುದ್ದಿಯಿಲ್ಲದೆ ತೆರೆಹಿಂದೆ ಸರಿದವು. ಅದರಲ್ಲೂ ಪೈಲ್ವಾನ್ ಸದ್ದು ಮಾಡಿದ್ದು ಮಾತ್ರ ಪೈರಸಿ ವಿಚಾರಕ್ಕಷ್ಟೇ. ಅಲ್ಲದೆ ಸದ್ದೇ ಮಾಡದೆ ಬಂದ ‘ಕೆಮಿಸ್ಟ್ರಿ ಆಫ್ ಕರಿಯಪ್ಪಾ’ ಸಿನಿಮಾ ಮಾತ್ರ 75 ದಿನಗದ ಗಡಿ ಮುಟ್ಟಿತ್ತಷ್ಟೇ.

ಹಿಂದೆ ಒಂದೊಳ್ಳೆ ಎಮೋಷನಲ್ ಫ್ಯಾಮಿಲಿ ಸೆಂಟಿಮೆಂಟ್ ಕತೆಯಿಟ್ಟು ಸಿನಿಮಾ ಮಾಡಿದರೆ ಸಾಕು ಸಿನಿ ಪ್ರೇಮಿಗಳ ಭಾವ ಉಕ್ಕಿದಂತೆ, ನಿರ್ಮಾಪಕರ ಖಜಾನೆಯೂ ಉಕ್ಕುತ್ತಿತ್ತು. ಅದನ್ನೇ ನೆಚ್ಚಿ ಕೊಂಡಿದ್ದ ಸೆಂಟಿಮೆಂಟಲ್ ಸಿನಿಮಾಗಳಿಗೆ ಹೆಸರಾಗಿದ್ದ ಶಿವರಾಜ್‍ಕುಮಾರ್ ಅಭಿನಯದ ‘ಕವಚ’ ಸಿನಿಮಾ ಒಳ್ಳೆ ಹೆಸರು ಪಡೆದುಕೊಂಡರೂ ಈಗಿನ ಜನರೇಷನ್‍ನಲ್ಲಿ ಸೆಂಟಿಮೆಂಟ್ ವರ್ಕ್ ಔಟ್ ಆಗೋದಿಲ್ಲ ಎಂಬ ಪಾಠ ಕಲಿಸಿದೆ. ಅಲ್ಲದೆ 99, ಗೀತಾ, ರಂಗನಾಯಕಿಯಂತಹ ಕೆಲವು ಸಿನಿಮಾಗಳು ಫಲ ಕೊಡಲಿಲ್ಲ ಪಾಪ.

ಒಟ್ಟಿನಲ್ಲಿ ಬದಲಾಗುತ್ತಿರುವ ಸಿನಿ ಪ್ರಿಯರ ನಿರೀಕ್ಷೆ ಏನೆಂಬುದನ್ನು ಅರ್ಥ ಮಾಡಿಕೊಳ್ಳದ ಕನ್ನಡ ಚಿತ್ರರಂಗದ 163 ಸಿನಿಮಾಗಳ ಪೈಕಿ 160 ಸಿನಿಮಾಗಳು ಮಕಾಡೆಯಾಗಿರುವುದು ಬೇಸರದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...