Homeಮುಖಪುಟಕ್ಷಮೆ ಯಾಚಿಸಿದ ಕಂಗನಾ | ಜಾವೇದ್ ಅಖ್ತರ್ ದಯೆ ದಾಕ್ಷಿಣ್ಯ ತೋರಿದರು ಎಂದ ನಟಿ!

ಕ್ಷಮೆ ಯಾಚಿಸಿದ ಕಂಗನಾ | ಜಾವೇದ್ ಅಖ್ತರ್ ದಯೆ ದಾಕ್ಷಿಣ್ಯ ತೋರಿದರು ಎಂದ ನಟಿ!

- Advertisement -
- Advertisement -

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಕೊನೆಗೂ ಹಿರಿಯ ಗೀತರಚನೆಕಾರ ಜಾವೇದ್ ಅಖ್ತರ್ ಅವರೊಂದಿಗೆ ಕ್ಷಮೆ ಕೇಳಿದ್ದಾರೆ. ಸುಮಾರು ನಾಲ್ಕು ವರ್ಷಗಳ ಹಿಂದೆ ನಟಿ ಕಂಗನಾ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ಶುಕ್ರವಾರ ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸಿಕೊಂಡಿದ್ದಾಗಿ ಅವರು ಹೇಳಿದ್ದಾರೆ. ಕ್ಷಮೆ ಯಾಚಿಸಿದ ಕಂಗನಾ

ಮುಂಬೈಯಲ್ಲಿ ಶುಕ್ರವಾರ ಇಬ್ಬರು ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿ ಪರಸ್ಪರರ ವಿರುದ್ಧ ಸಲ್ಲಿಸಿದ್ದ ದೂರುಗಳನ್ನು ಹಿಂಪಡೆಯುವ ನಿರ್ಧಾರವನ್ನು ತಿಳಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರಾದ ನಂತರ, ಅಖ್ತರ್ ಜೊತೆಗೆ ತಾನು ಇರುವ ಪೋಟೋ ಪೋಸ್ಟ್‌ ಮಾಡಿರುವ ಕಂಗನಾ, ಕಾನೂನು ವಿವಾದವನ್ನು ಪರಿಹರಿಸಿದ್ದೇವೆ ಎಂದು ಹೇಳಿದ್ದಾರೆ. ಕ್ಷಮೆ ಯಾಚಿಸಿದ ಕಂಗನಾ

ಈ ಬಗ್ಗೆ ಕಂಗನಾ ಅವರು ತನ್ನ ಇನ್ಸ್‌ಟಾಗ್ರಾಂನಲ್ಲಿ ಬರೆದಿದ್ದು, “ಇಂದು, ಜಾವೇದ್‌ ಅವರು ಮತ್ತು ನಾನು ನಮ್ಮ ನಡುವಿನ ಕಾನೂನು ಪ್ರಕರಣವನ್ನು (ಮಾನನಷ್ಟ ಪ್ರಕರಣ) ಮಧ್ಯಸ್ಥಿಕೆಯ ಮೂಲಕ ಪರಿಹರಿಸಿದ್ದೇವೆ. ಮಧ್ಯಸ್ಥಿಕೆಯಲ್ಲಿ ಜಾವೇದ್ ಅವರು ತುಂಬಾ ದಯೆ ಮತ್ತು ದಾಕ್ಷಿಣ್ಯ ಹೊಂದಿದ್ದರು. ಅವರು ನನ್ನ ಮುಂದಿನ ನಿರ್ದೇಶನದ ಚಿತ್ರಕ್ಕಾಗಿ ಹಾಡುಗಳನ್ನು ಬರೆಯಲು ಕೂಡಾ ಒಪ್ಪಿಕೊಂಡರು” ಎಂದು ಬರೆದಿದ್ದಾರೆ.

ಅದಾಗ್ಯೂ, ನ್ಯಾಯಾಲಯವು ನಂತರ ಈ ಬಗ್ಗೆ ಔಪಚಾರಿಕ ಆದೇಶವನ್ನು ನೀಡಲಿದೆ ಎಂದು ವರದಿಯಾಗಿದೆ. ತಪ್ಪು ತಿಳುವಳಿಕೆಯಿಂದಾಗಿ ಅಖ್ತರ್ ವಿರುದ್ಧ ಹೇಳಿಕೆ ನೀಡಿರುವುದಾಗಿ ನಟ ಹೇಳಿದ್ದು, ಅದರಿಂದ ಅವರಿಗೆ ಉಂಟಾದ ಅನಾನುಕೂಲತೆಗೆ ಕ್ಷಮೆಯಾಚಿಸಿದರು ಎಂದು TNIE ವರದಿ ಹೇಳಿದೆ.

2020 ರಲ್ಲಿ ಜಾವೇದ್ ಅಖ್ತರ್ ಅವರು ಕಂಗನಾ ವಿರುದ್ಧ ದೂರು ದಾಖಲಿಸಿದ್ದರು. ಆ ವರ್ಷದ ಜುಲೈನಲ್ಲಿ ಕಂಗನಾ ಅವರು ಸುದ್ದಿ ಚಾನೆಲ್‌ಗೆ ಸಂದರ್ಶನವೊಂದನ್ನು ನೀಡಿದ್ದರು. ಈ ವೇಳೆ ಅವರು ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ವಿಚಾರದಲ್ಲಿ ಜಾವೇದ್ ಹೆಸರನ್ನು ಎಳೆದು ತಂದಿದ್ದರು. ಈ ಬಗ್ಗೆ ದೂರು ದಾಖಲಿಸಿದ್ದ ಜಾವೇದ್ ಅವರು, ಕಂಗನಾ ತನ್ನ ‘ಖ್ಯಾತಿ’ಗೆ ಹಾನಿ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಇದರ ನಂತರ ಕಂಗನಾ ಅವರು ಕೂಡಾ ಜಾವೇದ್ ಅಖ್ತರ್ ವಿರುದ್ಧ ಕ್ರಿಮಿನಲ್ ಬೆದರಿಕೆ ಮತ್ತು ಘನತೆಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿ ದೂರು ದಾಖಲಿಸಿದ್ದರು. ತನ್ನ ದೂರಿನಲ್ಲಿ ಅವರು, 2016 ರಲ್ಲಿ ಜಾವೇದ್ ಅಖ್ತರ್ ಅವರನ್ನು ತಾನು ಭೇಟಿಯಾಗಿದ್ದೆ. ಈ ವೇಳೆ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಕ್ರಿಮಿನಲ್ ರೀತಿಯಲ್ಲಿ ಬೆದರಿಸಿದ್ದಾರೆ ಎಂದು ಹೇಳಿಕೊಂಡಿದ್ದರು.

ಕಂಗನಾ ಅವರ ಪರ ವಕೀಲ ರಿಜ್ವಾನ್ ಸಿದ್ದಿಕಿ ಮತ್ತು ಜಾವೇದ್ ಅಖ್ತರ್ ಅವರ ವಕೀಲ ಜಯ ಕುಮಾರ್ ಭಾರದ್ವಾಜ್ ಅವರು ಬಾಂದ್ರಾದ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಒಂದು ಗಂಟೆಯ ಮಧ್ಯಸ್ಥಿಕೆಯ ಮೂಲಕ ಈ ವಿಷಯವನ್ನು ಇತ್ಯರ್ಥಪಡಿಸಲಾಗಿದೆ ಎಂದು ಹೇಳಿದ್ದಾರೆ. ತಾನು ತಪ್ಪು ತಿಳುವಳಿಕೆಯಿಂದಾಗಿ ಹೇಳಿಕೆ ನೀಡಿದ್ದೇನೆ ಎಂದು ಮಧ್ಯವರ್ತಿ ಮುಂದೆ ಕಂಗನಾ ಹೇಳಿದ್ದಾರೆ ಮತ್ತು ಅದನ್ನು ಹಿಂಪಡೆಯಲು ನಿರ್ಧರಿಸಿದ್ದಾರೆ ಎಂದು ಭಾರದ್ವಾಜ್ ಪಿಟಿಐಗೆ ತಿಳಿಸಿದ್ದಾರೆ.

ತನ್ನ ಹೇಳಿಕೆಯಿಂದ ಉಂಟಾದ ಅನಾನುಕೂಲತೆಗಾಗಿ ಕಂಗನಾ ಕ್ಷಮೆಯಾಚಿಸಿದ್ದು, ಭವಿಷ್ಯದಲ್ಲಿ ಅಂತಹ ಹೇಳಿಕೆ ನೀಡುವುದಿಲ್ಲ ಎಂದು ಅವರು ಪ್ರತಿಜ್ಞೆ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

ನಾವು ಬಹಳ ಸಮಯದಿಂದ ಮಧ್ಯಸ್ಥಿಕೆಗಾಗಿ ಹುಡುಕುತ್ತಿದ್ದೆವು. ನಾವು ಕರಡುಗಳನ್ನು ಸಹ ವಿನಿಮಯ ಮಾಡಿಕೊಂಡಿದ್ದೇವೆ. ಅಂತಿಮವಾಗಿ ನಾವು ಪ್ರಕರಣವನ್ನು ಪರಿಹರಿಸಿದ್ದೇವೆ ಎಂದು ಕಂಗನಾ ಪರ ವಕೀಲ ಸಿದ್ದಿಕ್ ಹೇಳಿದ್ದಾರೆ. “ಯಾವುದೇ ಸಮಸ್ಯೆಗಳಿರಲಿಲ್ಲ, ಪದಗಳನ್ನು ಮಾತ್ರ ನಿರ್ಧರಿಸಬೇಕಾಗಿತ್ತು, ಅದನ್ನು ಇಂದು ಮಾಡಲಾಯಿತು. ನಾವು ಕರಡನ್ನು ಸಿದ್ಧಪಡಿಸಿದ್ದು, ಅದಕ್ಕೆ ಸಹಿ ಹಾಕಿದ್ದೇವೆ. ಜೊತೆಗೆ ಎರಡೂ ಪ್ರಕರಣಗಳನ್ನು ಇಂದು ಹಿಂತೆಗೆದುಕೊಳ್ಳಲಾಗಿದೆ” ಎಂದು ಅವರು ಹೇಳಿದ್ದಾರೆ.

ಪ್ರಕರಣವನ್ನು ಆರಂಭದಲ್ಲಿ ಅಂಧೇರಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ವಿಚಾರಣೆ ನಡೆಸಿತು. 2024 ರಲ್ಲಿ, ಕಂಗನಾ ಅವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ನಂತರ, ಪ್ರಕರಣವನ್ನು ಸಂಸದ ಮತ್ತು ಶಾಸಕರ ಪ್ರಕರಣಗಳಿಗಾಗಿ ಇರುವ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು.

ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡ ನಂತರ ಬಾಲಿವುಡ್‌ನಲ್ಲಿ ಅಸ್ತಿತ್ವದಲ್ಲಿರುವ ‘ಕೂಟ’ವನ್ನು ಉಲ್ಲೇಖಿಸುವಾಗ ಕಂಗನಾ ಸಂದರ್ಶನವೊಂದರಲ್ಲಿ ತಮ್ಮ ಹೆಸರನ್ನು ಎಳೆದು ತಂದಿದ್ದಾರೆ ಎಂದು ಜಾವೇದ್ ತಮ್ಮ ದೂರಿನಲ್ಲಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೂರು ಮುಸ್ಲಿಂ ಹೆಸರುಗಳ ಬದಲಾವಣೆಗೆ ಬಿಜೆಪಿ ಶಾಸಕರಿಂದ ಒತ್ತಾಯ : ಸರ್ಕಾರಕ್ಕೆ ಪ್ರಸ್ತಾವನೆ

ಮೂರು ಮುಸ್ಲಿಂ ಹೆಸರುಗಳ ಬದಲಾವಣೆಗೆ ಬಿಜೆಪಿ ಶಾಸಕರಿಂದ ಒತ್ತಾಯ : ಸರ್ಕಾರಕ್ಕೆ ಪ್ರಸ್ತಾವನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...