Homeಕರ್ನಾಟಕಉದ್ಯೋಗಿಗಳ ಸಾಮೂಹಿಕ ವಜಾ : ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ಕೊಟ್ಟ ಕರ್ನಾಟಕ ಸರ್ಕಾರ ; ವರದಿ

ಉದ್ಯೋಗಿಗಳ ಸಾಮೂಹಿಕ ವಜಾ : ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ಕೊಟ್ಟ ಕರ್ನಾಟಕ ಸರ್ಕಾರ ; ವರದಿ

- Advertisement -
- Advertisement -

ಇತ್ತೀಚೆಗೆ ಸುಮಾರು 700 ಉದ್ಯೋಗಿಗಳನ್ನು (ಕೆಲ ವರದಿಗಳು 400-500 ಎಂದಿವೆ) ಏಕಾಏಕಿ ವಜಾಗೊಳಿಸಿದ ಪ್ರಕರಣದಲ್ಲಿ ಇನ್ಫೋಸಿಸ್‌ ಕಂಪನಿಗೆ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ಕ್ಲೀನ್ ಚಿಟ್ ಕೊಟ್ಟಿದೆ ಎಂದು ವರದಿಯಾಗಿದೆ.

ಈ ಕುರಿತು ತನಿಖೆ ನಡೆಸಿದ ಕಾರ್ಮಿಕ ಇಲಾಖೆ ಇನ್ಫೋಸಿಸ್ ಕಂಪನಿ ಉದ್ಯೋಗಿಗಳ ವಜಾ ವೇಳೆ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ. ಏಕೆಂದರೆ ‘ವಜಾಗೊಂಡವರು ಖಾಯಂ ನೌಕರರು ಅಲ್ಲ, ಬದಲಾಗಿ ತರಬೇತಿಯಲ್ಲಿದ್ದವರು’ ಎಂದಿರುವುದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

“ನಮ್ಮ ತನಿಖೆಯಲ್ಲಿ ಇನ್ಫೋಸಿಸ್‌ ಕಂಪನಿ ಯಾವುದೇ ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿರುವುದು ಕಂಡು ಬಂದಿಲ್ಲ. ಮೊದಲನೆಯದಾಗಿ ವಜಾಗೊಂಡವರು ಮತ್ತು ಕಂಪನಿ ನಡುವೆ ಉದ್ಯೋಗಿ ಮತ್ತು ಉದ್ಯೋಗದಾತ ಎಂಬ ಸಂಬಂಧವೇ ಇರಲಿಲ್ಲ. ವಜಾಗೊಂಡವರನ್ನು ನೌಕರರು ಎಂದು ಕರೆಯಲು ನೇಮಕಾತಿ ಪತ್ರಗಳನ್ನೂ ನೀಡಿರಲಿಲ್ಲ. ಅವರು ಮೂರು ತಿಂಗಳ ಕಾಲ ತರಬೇತಿಯಲ್ಲಿದ್ದರು. ಅದಕ್ಕೆ ಸ್ಟೈಫಂಡ್ ನೀಡಲಾಗಿದೆ. ಅಲ್ಲದೆ ಅವರು ಅಪ್ರೆಂಟಿಸ್‌ಶಿಪ್ ಕಾರ್ಯಕ್ರಮದ ಭಾಗವಾಗಿದ್ದರು” ಎಂದು ಸರ್ಕಾರಿ ಅಧಿಕಾರಿಯೊಬ್ಬರು ದೃಢಪಡಿಸಿದ್ದಾಗಿ ವರದಿ ವಿವರಿಸಿದೆ.

ಕಳೆದ ಫೆಬ್ರವರಿ 7ರಂದು ಇನ್ಫೋಸಿಸ್ ಕಂಪನಿ ಸುಮಾರು 700 ಉದ್ಯೋಗಿಗಳನ್ನು ಏಕಾಏಕಿ ವಜಾಗೊಳಿಸಿದೆ ಎಂಬ ಆರೋಪ ಕೇಳಿ ಬಂದಿತ್ತು. (ಕೆಲ ವರದಿಗಳು 400-500 ಎಂದಿವೆ). ವಜಾಗೊಂಡವರು ಇನ್ಫೋಸಿಸ್‌ನಲ್ಲಿ ಕೆಲಸಕ್ಕೆ ಆಯ್ಕೆಯಾಗಿ ಎರಡೂವರೆ ವರ್ಷ ಕಾದಿದ್ದರು. ಕೊನೆಗೂ ಸೆಪ್ಟೆಂಬರ್ 2024ರಲ್ಲಿ ಇವರು ಮೈಸೂರು ಕ್ಯಾಂಪಸ್‌ನಲ್ಲಿ ಕೆಲಸ ಆರಂಭಿಸಿದ್ದರು. ಇದಾಗಿ 6 ತಿಂಗಳಿಗೆ ‘ಆಂತರಿಕ ಪರೀಕ್ಷೆಯಲ್ಲಿ ವಿಫಲ’ ಎಂಬ ಕಾರಣ ನೀಡಿ ವಜಾಗೊಳಿಸಲಾಗಿದೆ. ವಜಾಗೊಂಡವರು ಮನೆಗೆ ಮರಳಲು ಟ್ಯಾಕ್ಸಿ, ಬಸ್‌ ಬುಕ್‌ ಮಾಡಲೂ ಪರದಾಡಿದ್ದರು. ಕೆಲವರು ಈ ವಿಚಾರವನ್ನು ಮನೆಯವರೆಗೆ ಹೇಗೆ ತಿಳಿಸುವುದು ಎಂಬ ಚಿಂತೆಯಲ್ಲಿದ್ದರು ಎಂದು ಮಾಧ್ಯಮ ವರದಿಗಳು ಹೇಳಿತ್ತು.

ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿ ಉದ್ಯೋಗಿಗಳನ್ನು ವಜಾ ಮಾಡಲಾಗಿದೆ ಎಂದು ಐಟಿ ಉದ್ಯೋಗಿಗಳ ಒಕ್ಕೂಟವಾದ ನಾಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಎಂಪ್ಲಾಯೀಸ್ ಸೆನೆಟ್ (ಎನ್‌ಐಟಿಇಎಸ್) ಫೆಬ್ರವರಿ 10ರ ವೇಳೆಗೆ ಆರೋಪಿಸಿತ್ತು.

ಈ ವಿಚಾರ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆ ಫೆಬ್ರವರಿ 13ರಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಗೆ ಈ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿತ್ತು. ಅದರಂತೆ ತನಿಖೆ ನಡೆಸಿದ ಕಾರ್ಮಿಕ ಇಲಾಖೆ, ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ನೀಡಿದೆ ಎಂದು ವರದಿಯಾಗಿದೆ.

ಕರ್ನಾಟಕ ಕಾರ್ಮಿಕ ಇಲಾಖೆ ತನ್ನ ಮಧ್ಯಂತರ ವರದಿಯಲ್ಲಿ, ಖಾಸಗಿ ಕಂಪನಿಗಳ ಆಯ್ಕೆ ಅಥವಾ ಮೌಲ್ಯಮಾಪನ ಪ್ರಕ್ರಿಯೆಗಳಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಕೆಲಸದಿಂದ ವಜಾಗೊಂಡ ತರಬೇತಿದಾರರಿಗೆ ಔಟ್‌ಪ್ಲೇಸ್‌ಮೆಂಟ್ ಸೇವೆಗಳು, ಬೇರ್ಪಡಿಕೆ ವೇತನ ಮತ್ತು ಕೌನ್ಸೆಲಿಂಗ್ ನೀಡುವ ಮೂಲಕ ಇನ್ಫೋಸಿಸ್ ತನ್ನ ನೀತಿಗಳಿಗೆ ಬದ್ಧವಾಗಿದೆ ಎಂಬುವುದಾಗಿದೆ ತಿಳಿಸಿದೆ ಎಂದು ವರದಿ ಹೇಳಿದೆ.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೈಸೂರು ಮತ್ತು ಬೆಂಗಳೂರಿನಲ್ಲಿರುವ ಇನ್ಫೋಸಿಸ್ ಕ್ಯಾಂಪಸ್‌ಗಳ ಪರಿಶೀಲನೆಗೆ ಆದೇಶಿಸಿದ್ದರು. ಇದನ್ನು ಜಿ ಮಂಜುನಾಥ್ ನೇತೃತ್ವದ ತಂಡ ನಡೆಸಿದೆ. ನೇಮಕಾತಿ ದಾಖಲೆಗಳ ಪರಿಶೀಲನೆಯು 2022ರ ಬ್ಯಾಚ್‌ನ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮುಂದುವರಿದರೆ, 329 ಜನರು ಅಗತ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾರೆ ಎಂದು ಬಹಿರಂಗಪಡಿಸಿದೆ. ಸರ್ಕಾರಿ ಅಧಿಕಾರಿಗಳು ಇನ್ಫೋಸಿಸ್‌ನ ಪರಿಭಾಷೆಯ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಕ್ಲೀನ್ ಚಿಟ್ ಕುರಿತು ಪ್ರತಿಕ್ರಿಯಿಸಿರುವ ಎನ್‌ಐಟಿಇಎಸ್, ತನಿಖೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದೆ ಮತ್ತು ಪ್ರತಿಭಟನೆಯ ಎಚ್ಚರಿಕೆ ನೀಡಿದೆ. ಐಟಿ ವಲಯದಲ್ಲಿ ತರಬೇತಿ ಪಡೆಯುವವರು ಮತ್ತು ಉದ್ಯೋಗಿಗಳಿಗೆ ರಕ್ಷಣೆ ಒದಗಿಸುವಂತೆ ಎನ್‌ಐಟಿಇಎಸ್ ಆಗ್ರಹಿಸಿದೆ. ನೇಮಕಾತಿ ಮತ್ತು ಮೌಲ್ಯಮಾಪನ ಪದ್ಧತಿಗಳಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆ ಒತ್ತಾಯಿಸಿದೆ.

ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ – ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...