Homeಕರ್ನಾಟಕಉದ್ಯೋಗಿಗಳ ಸಾಮೂಹಿಕ ವಜಾ : ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ಕೊಟ್ಟ ಕರ್ನಾಟಕ ಸರ್ಕಾರ ; ವರದಿ

ಉದ್ಯೋಗಿಗಳ ಸಾಮೂಹಿಕ ವಜಾ : ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ಕೊಟ್ಟ ಕರ್ನಾಟಕ ಸರ್ಕಾರ ; ವರದಿ

- Advertisement -
- Advertisement -

ಇತ್ತೀಚೆಗೆ ಸುಮಾರು 700 ಉದ್ಯೋಗಿಗಳನ್ನು (ಕೆಲ ವರದಿಗಳು 400-500 ಎಂದಿವೆ) ಏಕಾಏಕಿ ವಜಾಗೊಳಿಸಿದ ಪ್ರಕರಣದಲ್ಲಿ ಇನ್ಫೋಸಿಸ್‌ ಕಂಪನಿಗೆ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ಕ್ಲೀನ್ ಚಿಟ್ ಕೊಟ್ಟಿದೆ ಎಂದು ವರದಿಯಾಗಿದೆ.

ಈ ಕುರಿತು ತನಿಖೆ ನಡೆಸಿದ ಕಾರ್ಮಿಕ ಇಲಾಖೆ ಇನ್ಫೋಸಿಸ್ ಕಂಪನಿ ಉದ್ಯೋಗಿಗಳ ವಜಾ ವೇಳೆ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ. ಏಕೆಂದರೆ ‘ವಜಾಗೊಂಡವರು ಖಾಯಂ ನೌಕರರು ಅಲ್ಲ, ಬದಲಾಗಿ ತರಬೇತಿಯಲ್ಲಿದ್ದವರು’ ಎಂದಿರುವುದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

“ನಮ್ಮ ತನಿಖೆಯಲ್ಲಿ ಇನ್ಫೋಸಿಸ್‌ ಕಂಪನಿ ಯಾವುದೇ ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿರುವುದು ಕಂಡು ಬಂದಿಲ್ಲ. ಮೊದಲನೆಯದಾಗಿ ವಜಾಗೊಂಡವರು ಮತ್ತು ಕಂಪನಿ ನಡುವೆ ಉದ್ಯೋಗಿ ಮತ್ತು ಉದ್ಯೋಗದಾತ ಎಂಬ ಸಂಬಂಧವೇ ಇರಲಿಲ್ಲ. ವಜಾಗೊಂಡವರನ್ನು ನೌಕರರು ಎಂದು ಕರೆಯಲು ನೇಮಕಾತಿ ಪತ್ರಗಳನ್ನೂ ನೀಡಿರಲಿಲ್ಲ. ಅವರು ಮೂರು ತಿಂಗಳ ಕಾಲ ತರಬೇತಿಯಲ್ಲಿದ್ದರು. ಅದಕ್ಕೆ ಸ್ಟೈಫಂಡ್ ನೀಡಲಾಗಿದೆ. ಅಲ್ಲದೆ ಅವರು ಅಪ್ರೆಂಟಿಸ್‌ಶಿಪ್ ಕಾರ್ಯಕ್ರಮದ ಭಾಗವಾಗಿದ್ದರು” ಎಂದು ಸರ್ಕಾರಿ ಅಧಿಕಾರಿಯೊಬ್ಬರು ದೃಢಪಡಿಸಿದ್ದಾಗಿ ವರದಿ ವಿವರಿಸಿದೆ.

ಕಳೆದ ಫೆಬ್ರವರಿ 7ರಂದು ಇನ್ಫೋಸಿಸ್ ಕಂಪನಿ ಸುಮಾರು 700 ಉದ್ಯೋಗಿಗಳನ್ನು ಏಕಾಏಕಿ ವಜಾಗೊಳಿಸಿದೆ ಎಂಬ ಆರೋಪ ಕೇಳಿ ಬಂದಿತ್ತು. (ಕೆಲ ವರದಿಗಳು 400-500 ಎಂದಿವೆ). ವಜಾಗೊಂಡವರು ಇನ್ಫೋಸಿಸ್‌ನಲ್ಲಿ ಕೆಲಸಕ್ಕೆ ಆಯ್ಕೆಯಾಗಿ ಎರಡೂವರೆ ವರ್ಷ ಕಾದಿದ್ದರು. ಕೊನೆಗೂ ಸೆಪ್ಟೆಂಬರ್ 2024ರಲ್ಲಿ ಇವರು ಮೈಸೂರು ಕ್ಯಾಂಪಸ್‌ನಲ್ಲಿ ಕೆಲಸ ಆರಂಭಿಸಿದ್ದರು. ಇದಾಗಿ 6 ತಿಂಗಳಿಗೆ ‘ಆಂತರಿಕ ಪರೀಕ್ಷೆಯಲ್ಲಿ ವಿಫಲ’ ಎಂಬ ಕಾರಣ ನೀಡಿ ವಜಾಗೊಳಿಸಲಾಗಿದೆ. ವಜಾಗೊಂಡವರು ಮನೆಗೆ ಮರಳಲು ಟ್ಯಾಕ್ಸಿ, ಬಸ್‌ ಬುಕ್‌ ಮಾಡಲೂ ಪರದಾಡಿದ್ದರು. ಕೆಲವರು ಈ ವಿಚಾರವನ್ನು ಮನೆಯವರೆಗೆ ಹೇಗೆ ತಿಳಿಸುವುದು ಎಂಬ ಚಿಂತೆಯಲ್ಲಿದ್ದರು ಎಂದು ಮಾಧ್ಯಮ ವರದಿಗಳು ಹೇಳಿತ್ತು.

ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿ ಉದ್ಯೋಗಿಗಳನ್ನು ವಜಾ ಮಾಡಲಾಗಿದೆ ಎಂದು ಐಟಿ ಉದ್ಯೋಗಿಗಳ ಒಕ್ಕೂಟವಾದ ನಾಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಎಂಪ್ಲಾಯೀಸ್ ಸೆನೆಟ್ (ಎನ್‌ಐಟಿಇಎಸ್) ಫೆಬ್ರವರಿ 10ರ ವೇಳೆಗೆ ಆರೋಪಿಸಿತ್ತು.

ಈ ವಿಚಾರ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆ ಫೆಬ್ರವರಿ 13ರಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಗೆ ಈ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿತ್ತು. ಅದರಂತೆ ತನಿಖೆ ನಡೆಸಿದ ಕಾರ್ಮಿಕ ಇಲಾಖೆ, ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ನೀಡಿದೆ ಎಂದು ವರದಿಯಾಗಿದೆ.

ಕರ್ನಾಟಕ ಕಾರ್ಮಿಕ ಇಲಾಖೆ ತನ್ನ ಮಧ್ಯಂತರ ವರದಿಯಲ್ಲಿ, ಖಾಸಗಿ ಕಂಪನಿಗಳ ಆಯ್ಕೆ ಅಥವಾ ಮೌಲ್ಯಮಾಪನ ಪ್ರಕ್ರಿಯೆಗಳಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಕೆಲಸದಿಂದ ವಜಾಗೊಂಡ ತರಬೇತಿದಾರರಿಗೆ ಔಟ್‌ಪ್ಲೇಸ್‌ಮೆಂಟ್ ಸೇವೆಗಳು, ಬೇರ್ಪಡಿಕೆ ವೇತನ ಮತ್ತು ಕೌನ್ಸೆಲಿಂಗ್ ನೀಡುವ ಮೂಲಕ ಇನ್ಫೋಸಿಸ್ ತನ್ನ ನೀತಿಗಳಿಗೆ ಬದ್ಧವಾಗಿದೆ ಎಂಬುವುದಾಗಿದೆ ತಿಳಿಸಿದೆ ಎಂದು ವರದಿ ಹೇಳಿದೆ.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೈಸೂರು ಮತ್ತು ಬೆಂಗಳೂರಿನಲ್ಲಿರುವ ಇನ್ಫೋಸಿಸ್ ಕ್ಯಾಂಪಸ್‌ಗಳ ಪರಿಶೀಲನೆಗೆ ಆದೇಶಿಸಿದ್ದರು. ಇದನ್ನು ಜಿ ಮಂಜುನಾಥ್ ನೇತೃತ್ವದ ತಂಡ ನಡೆಸಿದೆ. ನೇಮಕಾತಿ ದಾಖಲೆಗಳ ಪರಿಶೀಲನೆಯು 2022ರ ಬ್ಯಾಚ್‌ನ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮುಂದುವರಿದರೆ, 329 ಜನರು ಅಗತ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾರೆ ಎಂದು ಬಹಿರಂಗಪಡಿಸಿದೆ. ಸರ್ಕಾರಿ ಅಧಿಕಾರಿಗಳು ಇನ್ಫೋಸಿಸ್‌ನ ಪರಿಭಾಷೆಯ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಕ್ಲೀನ್ ಚಿಟ್ ಕುರಿತು ಪ್ರತಿಕ್ರಿಯಿಸಿರುವ ಎನ್‌ಐಟಿಇಎಸ್, ತನಿಖೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದೆ ಮತ್ತು ಪ್ರತಿಭಟನೆಯ ಎಚ್ಚರಿಕೆ ನೀಡಿದೆ. ಐಟಿ ವಲಯದಲ್ಲಿ ತರಬೇತಿ ಪಡೆಯುವವರು ಮತ್ತು ಉದ್ಯೋಗಿಗಳಿಗೆ ರಕ್ಷಣೆ ಒದಗಿಸುವಂತೆ ಎನ್‌ಐಟಿಇಎಸ್ ಆಗ್ರಹಿಸಿದೆ. ನೇಮಕಾತಿ ಮತ್ತು ಮೌಲ್ಯಮಾಪನ ಪದ್ಧತಿಗಳಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆ ಒತ್ತಾಯಿಸಿದೆ.

ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ – ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...