Homeಅಂತರಾಷ್ಟ್ರೀಯಶ್ವೇತ ಭವನದಲ್ಲಿ ಟ್ರಂಪ್-ಝೆಲೆನ್‌ಸ್ಕಿ ವಾಗ್ವಾದ : ಮಹತ್ವದ ಸಭೆಯಲ್ಲಿ ಆಗಿದ್ದೇನು?

ಶ್ವೇತ ಭವನದಲ್ಲಿ ಟ್ರಂಪ್-ಝೆಲೆನ್‌ಸ್ಕಿ ವಾಗ್ವಾದ : ಮಹತ್ವದ ಸಭೆಯಲ್ಲಿ ಆಗಿದ್ದೇನು?

- Advertisement -
- Advertisement -

ಅಮೆರಿಕ-ಉಕ್ರೇನ್ ನಡುವಿನ ಖನಿಜ ಒಪ್ಪಂದ ಕುರಿತಾದ ಮಾತುಕತೆಯ ವೇಳೆ ಶುಕ್ರವಾರ (ಫೆ.28) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ನಡುವೆ ತೀವ್ರ ವಾಗ್ವಾದ ನಡೆದಿದೆ.

ಖನಿಜ ಒಪ್ಪಂದದ ವಿಚಾರವಾಗಿ ಅಮೆರಿಕದ ಶ್ವೇತ ಭವನದ ಓವಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಷ್ಯಾ, ಉಕ್ರೇನ್ ನಡುವಿನ ಯುದ್ಧ ವಿಚಾರ ಚರ್ಚೆಗೆ ಬಂದಿದೆ. ಈ ವೇಳೆ ಉಭಯ ನಾಯಕರ ನಡುವೆ ತೀವ್ರ ವಾಗ್ವಾದ ನಡೆದಿದೆ. ಖನಿಜ ಒಪ್ಪಂದಕ್ಕೆ ಸಹಿ ಹಾಕದೆ ಝೆಲೆನ್‌ಸ್ಕಿ ಕೂಡಲೇ ಸಭೆಯಿಂದ ಹೊರ ನಡೆದಿದ್ದಾರೆ.

ಶ್ವೇತ ಭವನದಿಂದ ನಿರ್ಗಮಿಸಿದ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಝೆಲೆನ್‌ಸ್ಕಿ, ‘ಅಮೆರಿಕ, ಅದರ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕದ ಜನತೆಗೆ ಉಕ್ರೇನ್‌ಗೆ ಬೆಂಬಲ ನೀಡಿದಕ್ಕಾಗಿ ಧನ್ಯವಾದಗಳು. ಉಕ್ರೇನ್‌ಗೆ ಶಾಶ್ವತವಾದ ಶಾಂತಿ ಬೇಕಾಗಿದೆ. ಅದಕ್ಕಾಗಿ ನಾವು ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಟ್ರಂಪ್-ಝೆಲೆನ್‌ಸ್ಕಿ ನಡುವೆ ಜಟಾಪಟಿ

ಖನಿಜ ಒಪ್ಪಂದ ಸಭೆ ಬಳಿಕ ಟ್ರಂಪ್, ವ್ಯಾನ್ಸ್ ಮತ್ತು ಝೆಲೆನ್‌ಸ್ಕಿ ಮಾಧ್ಯಮಗಳ ಮುಂದೆ ಬಂದು ಮಾತನಾಡುತ್ತಿದ್ದರು. ಈ ವೇಳೆ ಒಂದು ರೀತಿಯಲ್ಲಿ ರಷ್ಯಾ ಮುಂದೆ ಉಕ್ರೇನ್ ಶರಣಾಗುವಂತೆ ಮತ್ತು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕುವಂತೆ ಟ್ರಂಪ್ ಮಾತನಾಡಿದ್ದಾರೆ. ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ ಮಾಡಿದರೂ, ಉಕ್ರೇನ್ ತಪ್ಪು ಮಾಡಿದಂತೆ ರಷ್ಯಾ ಪರ ವಹಿಸಿ ಟ್ರಂಪ್ ಮತ್ತು ವ್ಯಾನ್ಸ್ ಹೇಳಿಕೆ ನೀಡಿದ್ದಾರೆ. ಇದಕ್ಕೆ ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ “ಝೆಲೆನ್‌ಸ್ಕಿ ಪ್ರೊಪಗೊಂಡ ಟೂರ್ ಮಾಡುತ್ತಿದ್ದಾರೆ” ಎಂದಿದ್ದಾರೆ. ಯುದ್ದ ಕೊನೆಗೊಳಿಸಲು ನೀವು ಕದನ ವಿರಾಮಕ್ಕೆ ಸಹಿ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಝೆಲೆನ್‌ಸ್ಕಿ “ರಷ್ಯಾ ನಮ್ಮ ಭೂಭಾಗವನ್ನು ಆಕ್ರಮಿಸಿದೆ. ಆದರೆ, ನೀವು ರಷ್ಯಾ ಪರ ವಹಿಸಿ ಮಾತನಾಡುತ್ತಿದ್ದೀರಿ. ನಿಮ್ಮದು ಯಾವ ರೀತಿಯ ರಾಜತಾಂತ್ರಿಕತೆ?” ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಕೆಂಡಾಮಂಡಲರಾದ ವ್ಯಾನ್ಸ್‌ “ನಿಮಗೆ ಅಮೆರಿಕ ಸಾಕಷ್ಟು ಬೆಂಬಲ ನೀಡಿದೆ. ಅದಕ್ಕೆ ನೀವು ಕೃತಜ್ಞರಾಗಿಬೇಕು, ನೀವು ಓವಲ್ ಕಚೇರಿಯಲ್ಲಿ ಅಮೆರಿಕಕ್ಕೆ ಅಗೌರ ತೋರುತ್ತಿದ್ದೀರಿ” ಎಂದಿದ್ದಾರೆ.

“ರಷ್ಯಾ- ಉಕ್ರೇನ್ ಯುದ್ಧದಲ್ಲಿ ಝೆಲೆನ್‌ಸ್ಕಿ ಚೆಲ್ಲಾಟ ಆಡುತ್ತಿದ್ದಾರೆ. ಉಕ್ರೇನ್ ಜನರ ಜೀವದ ಜೊತೆ ಆಟವಾಡುತ್ತಿದ್ದೀರಿ…3ನೇ ಮಹಾಯುದ್ಧದ ಜೊತೆಯೂ ಆಟವಾಡುತ್ತಿದ್ದೀರಿ” ಎಂದು ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಕಿಡಿಕಾರಿದ್ದಾರೆ.

“ಇಷ್ಟು ವರ್ಷಗಳ ಕಾಲ ನಿಮ್ಮ (ಉಕ್ರೇನ್) ಜೊತೆಗೆ ಅಮೆರಿಕ ಬೆಂಬಲವಾಗಿ ನಿಂತಿದೆ. ಯಾರು ಏನೇ ಹೇಳಿದರೂ ನಿಮಗೆ ಅಮೆರಿಕ ಸಹಾಯ ಮಾಡಿದೆ. ಆದರೆ, ನೀವು ಅಮೆರಿಕ ಜನರಿಗೆ ಅವಮಾನ ಮಾಡುವ ಕೆಲಸ ಮಾಡ್ತಿದ್ದೀರಿ. ನಾವು ಯುದ್ಧವನ್ನು ನಿಲ್ಲಿಸಲು ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಆದರೆ, ನೀವು ಕದನ ವಿರಾಮಕ್ಕೆ ಒಪ್ಪದೆ ವಿತಂಡವಾದ ಮಾಡಿದ್ದೀರಿ. ನಾವು ಸಾವು ತಡೆಗೆ ಯತ್ನಿಸಿದರೆ, ನೀವು ಹೆಣ ನೋಡಲು ಹೋಗುತ್ತೀರಿ” ಎಂದು ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಬೇಸರ ಹೊರಹಾಕಿದ್ದಾರೆ.

ಟ್ರಂಪ್ ಹೇಳಿಕೆಗೆ ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ಕೂಡ ಕೆಂಡಾಮಂಡಲರಾಗಿದ್ದಾರೆ. “ನಾವು ಯಾವುದೇ ದೇಶದ ವ್ಯಾಪ್ತಿಗೆ ಒಳಪಟ್ಟಿಲ್ಲ. ನಾವು ಯಾರ ಮೇಲೂ ದಾಳಿ ಮಾಡಲಿಲ್ಲ. ರಷ್ಯಾದವರೇ ನಮ್ಮ ಮೇಲೆ ದಾಳಿ ಮಾಡಿದ್ದು” ಎಂದು ಗುಡುಗಿದ್ದಾರೆ.

ಸಭೆಯ ಬಳಿಕ ಡೊನಾಲ್ಡ್ ಟ್ರಂಪ್ ಅವರು ಸಾಮಾಜಿಕ ಮಾಧ್ಯಮ ‘ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿದ್ದು, “ಝೆಲೆನ್‌ಸ್ಕಿ ಅವರು ನಿಯಮಗಳನ್ನು ಪಾಲಿಸದೆ ಓವಲ್ ಕಚೇರಿಯಲ್ಲಿ ಅಮೆರಿಕವನ್ನು ಅಗೌರವಿಸಿದ್ದಾರೆ. ಅವರು ಶಾಂತಿ ಪಾಲನೆಗಾಗಿ ಸಿದ್ಧರಿದ್ದರೆ ಮತ್ತೆ ಚರ್ಚೆಗೆ ಹಿಂತಿರುಗಬಹುದು” ಎಂದು ಹೇಳಿದ್ದಾರೆ.

ರಷ್ಯಾ ಪರ ಟ್ರಂಪ್ ವಕಾಲತ್ತು

ಎರಡನೇ ವಿಶ್ವ ಮಹಾಯುದ್ಧದ ಬಳಿಕ ರಷ್ಯಾ ಮತ್ತು ಅಮೆರಿಕ ಬದ್ದ ವೈರಿಗಳು ಎಂದು ಎಲ್ಲರಿಗೂ ಗೊತ್ತು. ಆದರೆ, ಈ ಬಾರಿ ಅಮೆರಿಕದ ಚುಕ್ಕಾಣಿ ಹಿಡಿದ ಬಳಿಕ, ಟ್ರಂಪ್ ರಷ್ಯಾ ಪರ ವಕಾಲತ್ತು ವಹಿಸುತ್ತಿದ್ದಾರೆ. ಇದು ಒಂದು ರೀತಿಯಲ್ಲಿ ದೊಡ್ಡ ರಾಷ್ಟ್ರಗಳು ಸಣ್ಣ ರಾಷ್ಟ್ರಗಳನ್ನು ಹೆದರಿಸಿ ನಿಯಂತ್ರಣದಲ್ಲಿಟ್ಟುಕೊಳ್ಳುವ ಕುತಂತ್ರದಂತೆ ಕಾಣುತ್ತಿದೆ.

ಇತ್ತೀಚೆಗೆ ವಿಶ್ವ ಸಂಸ್ಥೆಯಲ್ಲಿ ರಷ್ಯಾ-ಉಕ್ರೇನ್ ನಡುವಿನ ಯುದ್ದ ಸಂಬಂಧಿತ ನಿರ್ಣಯದ ಸಂದರ್ಭದಲ್ಲೂ ಯುದ್ದಪರಾಧಕ್ಕಾಗಿ ರಷ್ಯಾವನ್ನು ದೂಷಿಸಲು ಅಮೆರಿಕ ಹಿಂಜರಿದಿತ್ತು. ಈ ಕಾರಣಕ್ಕೆ ಗೊಂದಲ ಉಂಟಾಗಿ ಭಾರತ, ಚೀನಾ ಸೇರಿದಂತೆ ಹಲವು ರಾಷ್ಟ್ರಗಳು ನಿರ್ಣಯದ ಮೇಲಿನ ಮತದಾನದಿಂದ ದೂರು ಉಳಿದಿತ್ತು.

ಬಾಂಗ್ಲಾದೇಶ | ಹಸೀನಾ ಸರ್ಕಾರ ಉರುಳಿಸಿದ್ದ ವಿದ್ಯಾರ್ಥಿಗಳಿಂದ ಹೊಸ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...