Homeಅಂತರಾಷ್ಟ್ರೀಯಶ್ವೇತ ಭವನದಲ್ಲಿ ಟ್ರಂಪ್-ಝೆಲೆನ್‌ಸ್ಕಿ ವಾಗ್ವಾದ : ಮಹತ್ವದ ಸಭೆಯಲ್ಲಿ ಆಗಿದ್ದೇನು?

ಶ್ವೇತ ಭವನದಲ್ಲಿ ಟ್ರಂಪ್-ಝೆಲೆನ್‌ಸ್ಕಿ ವಾಗ್ವಾದ : ಮಹತ್ವದ ಸಭೆಯಲ್ಲಿ ಆಗಿದ್ದೇನು?

- Advertisement -
- Advertisement -

ಅಮೆರಿಕ-ಉಕ್ರೇನ್ ನಡುವಿನ ಖನಿಜ ಒಪ್ಪಂದ ಕುರಿತಾದ ಮಾತುಕತೆಯ ವೇಳೆ ಶುಕ್ರವಾರ (ಫೆ.28) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ನಡುವೆ ತೀವ್ರ ವಾಗ್ವಾದ ನಡೆದಿದೆ.

ಖನಿಜ ಒಪ್ಪಂದದ ವಿಚಾರವಾಗಿ ಅಮೆರಿಕದ ಶ್ವೇತ ಭವನದ ಓವಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಷ್ಯಾ, ಉಕ್ರೇನ್ ನಡುವಿನ ಯುದ್ಧ ವಿಚಾರ ಚರ್ಚೆಗೆ ಬಂದಿದೆ. ಈ ವೇಳೆ ಉಭಯ ನಾಯಕರ ನಡುವೆ ತೀವ್ರ ವಾಗ್ವಾದ ನಡೆದಿದೆ. ಖನಿಜ ಒಪ್ಪಂದಕ್ಕೆ ಸಹಿ ಹಾಕದೆ ಝೆಲೆನ್‌ಸ್ಕಿ ಕೂಡಲೇ ಸಭೆಯಿಂದ ಹೊರ ನಡೆದಿದ್ದಾರೆ.

ಶ್ವೇತ ಭವನದಿಂದ ನಿರ್ಗಮಿಸಿದ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಝೆಲೆನ್‌ಸ್ಕಿ, ‘ಅಮೆರಿಕ, ಅದರ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕದ ಜನತೆಗೆ ಉಕ್ರೇನ್‌ಗೆ ಬೆಂಬಲ ನೀಡಿದಕ್ಕಾಗಿ ಧನ್ಯವಾದಗಳು. ಉಕ್ರೇನ್‌ಗೆ ಶಾಶ್ವತವಾದ ಶಾಂತಿ ಬೇಕಾಗಿದೆ. ಅದಕ್ಕಾಗಿ ನಾವು ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಟ್ರಂಪ್-ಝೆಲೆನ್‌ಸ್ಕಿ ನಡುವೆ ಜಟಾಪಟಿ

ಖನಿಜ ಒಪ್ಪಂದ ಸಭೆ ಬಳಿಕ ಟ್ರಂಪ್, ವ್ಯಾನ್ಸ್ ಮತ್ತು ಝೆಲೆನ್‌ಸ್ಕಿ ಮಾಧ್ಯಮಗಳ ಮುಂದೆ ಬಂದು ಮಾತನಾಡುತ್ತಿದ್ದರು. ಈ ವೇಳೆ ಒಂದು ರೀತಿಯಲ್ಲಿ ರಷ್ಯಾ ಮುಂದೆ ಉಕ್ರೇನ್ ಶರಣಾಗುವಂತೆ ಮತ್ತು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕುವಂತೆ ಟ್ರಂಪ್ ಮಾತನಾಡಿದ್ದಾರೆ. ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ ಮಾಡಿದರೂ, ಉಕ್ರೇನ್ ತಪ್ಪು ಮಾಡಿದಂತೆ ರಷ್ಯಾ ಪರ ವಹಿಸಿ ಟ್ರಂಪ್ ಮತ್ತು ವ್ಯಾನ್ಸ್ ಹೇಳಿಕೆ ನೀಡಿದ್ದಾರೆ. ಇದಕ್ಕೆ ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ “ಝೆಲೆನ್‌ಸ್ಕಿ ಪ್ರೊಪಗೊಂಡ ಟೂರ್ ಮಾಡುತ್ತಿದ್ದಾರೆ” ಎಂದಿದ್ದಾರೆ. ಯುದ್ದ ಕೊನೆಗೊಳಿಸಲು ನೀವು ಕದನ ವಿರಾಮಕ್ಕೆ ಸಹಿ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಝೆಲೆನ್‌ಸ್ಕಿ “ರಷ್ಯಾ ನಮ್ಮ ಭೂಭಾಗವನ್ನು ಆಕ್ರಮಿಸಿದೆ. ಆದರೆ, ನೀವು ರಷ್ಯಾ ಪರ ವಹಿಸಿ ಮಾತನಾಡುತ್ತಿದ್ದೀರಿ. ನಿಮ್ಮದು ಯಾವ ರೀತಿಯ ರಾಜತಾಂತ್ರಿಕತೆ?” ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಕೆಂಡಾಮಂಡಲರಾದ ವ್ಯಾನ್ಸ್‌ “ನಿಮಗೆ ಅಮೆರಿಕ ಸಾಕಷ್ಟು ಬೆಂಬಲ ನೀಡಿದೆ. ಅದಕ್ಕೆ ನೀವು ಕೃತಜ್ಞರಾಗಿಬೇಕು, ನೀವು ಓವಲ್ ಕಚೇರಿಯಲ್ಲಿ ಅಮೆರಿಕಕ್ಕೆ ಅಗೌರ ತೋರುತ್ತಿದ್ದೀರಿ” ಎಂದಿದ್ದಾರೆ.

“ರಷ್ಯಾ- ಉಕ್ರೇನ್ ಯುದ್ಧದಲ್ಲಿ ಝೆಲೆನ್‌ಸ್ಕಿ ಚೆಲ್ಲಾಟ ಆಡುತ್ತಿದ್ದಾರೆ. ಉಕ್ರೇನ್ ಜನರ ಜೀವದ ಜೊತೆ ಆಟವಾಡುತ್ತಿದ್ದೀರಿ…3ನೇ ಮಹಾಯುದ್ಧದ ಜೊತೆಯೂ ಆಟವಾಡುತ್ತಿದ್ದೀರಿ” ಎಂದು ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಕಿಡಿಕಾರಿದ್ದಾರೆ.

“ಇಷ್ಟು ವರ್ಷಗಳ ಕಾಲ ನಿಮ್ಮ (ಉಕ್ರೇನ್) ಜೊತೆಗೆ ಅಮೆರಿಕ ಬೆಂಬಲವಾಗಿ ನಿಂತಿದೆ. ಯಾರು ಏನೇ ಹೇಳಿದರೂ ನಿಮಗೆ ಅಮೆರಿಕ ಸಹಾಯ ಮಾಡಿದೆ. ಆದರೆ, ನೀವು ಅಮೆರಿಕ ಜನರಿಗೆ ಅವಮಾನ ಮಾಡುವ ಕೆಲಸ ಮಾಡ್ತಿದ್ದೀರಿ. ನಾವು ಯುದ್ಧವನ್ನು ನಿಲ್ಲಿಸಲು ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಆದರೆ, ನೀವು ಕದನ ವಿರಾಮಕ್ಕೆ ಒಪ್ಪದೆ ವಿತಂಡವಾದ ಮಾಡಿದ್ದೀರಿ. ನಾವು ಸಾವು ತಡೆಗೆ ಯತ್ನಿಸಿದರೆ, ನೀವು ಹೆಣ ನೋಡಲು ಹೋಗುತ್ತೀರಿ” ಎಂದು ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಬೇಸರ ಹೊರಹಾಕಿದ್ದಾರೆ.

ಟ್ರಂಪ್ ಹೇಳಿಕೆಗೆ ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ಕೂಡ ಕೆಂಡಾಮಂಡಲರಾಗಿದ್ದಾರೆ. “ನಾವು ಯಾವುದೇ ದೇಶದ ವ್ಯಾಪ್ತಿಗೆ ಒಳಪಟ್ಟಿಲ್ಲ. ನಾವು ಯಾರ ಮೇಲೂ ದಾಳಿ ಮಾಡಲಿಲ್ಲ. ರಷ್ಯಾದವರೇ ನಮ್ಮ ಮೇಲೆ ದಾಳಿ ಮಾಡಿದ್ದು” ಎಂದು ಗುಡುಗಿದ್ದಾರೆ.

ಸಭೆಯ ಬಳಿಕ ಡೊನಾಲ್ಡ್ ಟ್ರಂಪ್ ಅವರು ಸಾಮಾಜಿಕ ಮಾಧ್ಯಮ ‘ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿದ್ದು, “ಝೆಲೆನ್‌ಸ್ಕಿ ಅವರು ನಿಯಮಗಳನ್ನು ಪಾಲಿಸದೆ ಓವಲ್ ಕಚೇರಿಯಲ್ಲಿ ಅಮೆರಿಕವನ್ನು ಅಗೌರವಿಸಿದ್ದಾರೆ. ಅವರು ಶಾಂತಿ ಪಾಲನೆಗಾಗಿ ಸಿದ್ಧರಿದ್ದರೆ ಮತ್ತೆ ಚರ್ಚೆಗೆ ಹಿಂತಿರುಗಬಹುದು” ಎಂದು ಹೇಳಿದ್ದಾರೆ.

ರಷ್ಯಾ ಪರ ಟ್ರಂಪ್ ವಕಾಲತ್ತು

ಎರಡನೇ ವಿಶ್ವ ಮಹಾಯುದ್ಧದ ಬಳಿಕ ರಷ್ಯಾ ಮತ್ತು ಅಮೆರಿಕ ಬದ್ದ ವೈರಿಗಳು ಎಂದು ಎಲ್ಲರಿಗೂ ಗೊತ್ತು. ಆದರೆ, ಈ ಬಾರಿ ಅಮೆರಿಕದ ಚುಕ್ಕಾಣಿ ಹಿಡಿದ ಬಳಿಕ, ಟ್ರಂಪ್ ರಷ್ಯಾ ಪರ ವಕಾಲತ್ತು ವಹಿಸುತ್ತಿದ್ದಾರೆ. ಇದು ಒಂದು ರೀತಿಯಲ್ಲಿ ದೊಡ್ಡ ರಾಷ್ಟ್ರಗಳು ಸಣ್ಣ ರಾಷ್ಟ್ರಗಳನ್ನು ಹೆದರಿಸಿ ನಿಯಂತ್ರಣದಲ್ಲಿಟ್ಟುಕೊಳ್ಳುವ ಕುತಂತ್ರದಂತೆ ಕಾಣುತ್ತಿದೆ.

ಇತ್ತೀಚೆಗೆ ವಿಶ್ವ ಸಂಸ್ಥೆಯಲ್ಲಿ ರಷ್ಯಾ-ಉಕ್ರೇನ್ ನಡುವಿನ ಯುದ್ದ ಸಂಬಂಧಿತ ನಿರ್ಣಯದ ಸಂದರ್ಭದಲ್ಲೂ ಯುದ್ದಪರಾಧಕ್ಕಾಗಿ ರಷ್ಯಾವನ್ನು ದೂಷಿಸಲು ಅಮೆರಿಕ ಹಿಂಜರಿದಿತ್ತು. ಈ ಕಾರಣಕ್ಕೆ ಗೊಂದಲ ಉಂಟಾಗಿ ಭಾರತ, ಚೀನಾ ಸೇರಿದಂತೆ ಹಲವು ರಾಷ್ಟ್ರಗಳು ನಿರ್ಣಯದ ಮೇಲಿನ ಮತದಾನದಿಂದ ದೂರು ಉಳಿದಿತ್ತು.

ಬಾಂಗ್ಲಾದೇಶ | ಹಸೀನಾ ಸರ್ಕಾರ ಉರುಳಿಸಿದ್ದ ವಿದ್ಯಾರ್ಥಿಗಳಿಂದ ಹೊಸ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...