Homeಮುಖಪುಟಯುಎಸ್‌ಏಡ್‌ ವಿದೇಶಿ ನೆರವು ಸ್ಥಗಿತಗೊಳಿಸಿದ ಟ್ರಂಪ್ : ಬಾಗಿಲು ಮುಚ್ಚಿದ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಕ್ಲಿನಿಕ್

ಯುಎಸ್‌ಏಡ್‌ ವಿದೇಶಿ ನೆರವು ಸ್ಥಗಿತಗೊಳಿಸಿದ ಟ್ರಂಪ್ : ಬಾಗಿಲು ಮುಚ್ಚಿದ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಕ್ಲಿನಿಕ್

- Advertisement -
- Advertisement -

ಎಲ್ಲಾ ರೀತಿಯ ಯುಎಸ್‌ಏಡ್‌ ವಿದೇಶಿ ನೆರವನ್ನು 90 ದಿನಗಳ ಕಾಲ ಸ್ಥಗಿತಗೊಳಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿದ ಬಳಿಕ ಹೈದರಾಬಾದ್‌ನಲ್ಲಿ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳಿಗೆ ಆರೋಗ್ಯ ಸೌಲಭ್ಯ ಒದಗಿಸುತ್ತಿದ್ದ ‘ಮಿತ್ರ್ ಕ್ಲಿನಿಕ್’ ಮುಚ್ಚಲ್ಪಟ್ಟಿದೆ ಎಂದು ವರದಿಯಾಗಿದೆ.

ಡೊನಾಲ್ಡ್ ಟ್ರಂಪ್ ನೇತೃತ್ವದ ಸರ್ಕಾರ ಅಮೆರಿಕದಿಂದ ಇತರ ರಾಷ್ಟ್ರಗಳಿಗೆ ನೀಡಲಾಗುತ್ತಿರುವ ವಿವಿಧ ರೀತಿಯ ನೆರವುಗಳ ಕುರಿತು ಪರಿಶೀಲನೆಗೆ ಮುಂದಾಗಿದ್ದು, ಯುಎಸ್‌ಏಡ್‌ ಮೂಲಕ ನೀಡಲಾಗುತ್ತಿದ್ದ ಹಲವು ವಿದೇಶಿ ನೆರವುಗಳನ್ನು ಸ್ಥಗಿತಗೊಳಿಸಿದೆ.

ಉದ್ಯಮಿ ಎಲಾನ್‌ ಮಸ್ಕ್‌ ನೇತೃತ್ವದ ಅಮೆರಿಕದ ಸರ್ಕಾರಿ ದಕ್ಷತೆಯ ಇಲಾಖೆಯು ವೆಚ್ಚಗಳಲ್ಲಿ ಕಡಿತ ಮಾಡಲು ಈ ಕ್ರಮ ಕೈಗೊಂಡಿದೆ. ಟ್ರಂಪ್ ಮತ್ತು ಎಲಾನ್‌ ಮಸ್ಕ್‌ ಇಬ್ಬರೂ ಅಮೆರಿಕದಿಂದ ಇತರ ರಾಷ್ಟ್ರಗಳಿಗೆ ಹಣ ಹರಿಯುವುದನ್ನು ತಡೆಯಲು ಮುಂದಾಗಿದ್ದಾರೆ.

ಇದರಿಂದ ಯುಎಸ್‌ಏಡ್‌ ಮೂಲಕ ಜಗತ್ತಿನ ವಿವಿಧ ರಾಷ್ಟ್ರಗಳಲ್ಲಿ ನಡೆಯುತ್ತಿದ್ದ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ. ಹೈದರಾಬಾದ್‌ನ ಟ್ರಾನ್ಸ್‌ಜೆಂಡರ್ ಕ್ಲಿನಿಕ್‌ ಕೂಡ ಅದರಲ್ಲಿ ಒಂದು. ಯುಎಸ್‌ಏಡ್‌ ಸ್ಥಗಿತದಿಂದ ಈ ಕ್ಲಿನಿಕ್‌ನಲ್ಲಿ ಹೆಚ್‌ಐವಿಗೆ ಚಿಕಿತ್ಸೆ ನೀಡುವ ಪ್ರಾಜೆಕ್ಟ್ ಅಕ್ಸೆಲರೇಟ್ ಕೂಡ ಬಂದ್ ಆಗಿದೆ.

ಜನವರಿ 2021ರಲ್ಲಿ ಸ್ಥಾಪನೆಯಾದ ‘ಮಿತ್ರ್ ಕ್ಲಿನಿಕ್’ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಕೇಂದ್ರಿತ ಆರೋಗ್ಯ ಕೇಂದ್ರಗಳಲ್ಲಿ ಒಂದಾಗಿದ್ದು, ಸಾಮಾನ್ಯ ಆರೋಗ್ಯ ಸಮಾಲೋಚನೆಗಳು, ಹೆಚ್ಐವಿ ಸಮಾಲೋಚನೆ ಮತ್ತು ಚಿಕಿತ್ಸೆ, ಮಾನಸಿಕ ಆರೋಗ್ಯ ಸಹಾಯ, ಲಿಂಗ ದೃಢೀಕರಣ ಸೇವೆಗಳು ಮತ್ತು ಕಾನೂನು ಮತ್ತು ಸಾಮಾಜಿಕ ಯೋಜನೆಗಳನ್ನು ಪಡೆಯಲು ಸಹಾಯದಂತಹ ಅಗತ್ಯ ಸೇವೆಗಳನ್ನು ಇದು ಒದಗಿಸುತ್ತಿತ್ತು.

LGBTQIA+ ಸಮುದಾಯದ ಆರೋಗ್ಯ ಅಗತ್ಯಗಳನ್ನು ಪೂರೈಸುವಲ್ಲಿ, ವಿಶೇಷವಾಗಿ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳಲ್ಲಿನ ಹೆಚ್‌ಐವಿ ಸಮಸ್ಯೆಯನ್ನು ಎದುರಿಸುವಲ್ಲಿ ಈ ಚಿಕಿತ್ಸಾಲಯವು ಪ್ರಮುಖ ಪಾತ್ರ ವಹಿಸುತ್ತಿತ್ತು.

2024ರ ಮಧ್ಯದ ವೇಳೆಗೆ, ಸುಮಾರು 4,900 ಕ್ಕೂ ಹೆಚ್ಚು ವ್ಯಕ್ತಿಗಳು ಈ ಕ್ಲಿನಿಕ್‌ನಲ್ಲಿ ನೋಂದಾಯಿಸಿಕೊಂಡಿದ್ದರು. ಮಾಸಿಕ 150–200 ವ್ಯಕ್ತಿಗಳಿಗೆ ಕ್ಲಿನಿಕ್ ಸೇವೆ ಒದಗಿಸುತ್ತಿತ್ತು. ಗಮನಾರ್ಹವಾಗಿ, ಕ್ಲಿನಿಕ್ ಏಳು ಟ್ರಾನ್ಸ್‌ಜೆಂಡರ್ ಸಿಬ್ಬಂದಿಯನ್ನು ನೇಮಿಸಿಕೊಂಡಿತ್ತು. ಅವರಿಗೆ ಉದ್ಯೋಗ ಮತ್ತು ಸಮುದಾಯದ ಪ್ರಜ್ಞೆಯನ್ನು ನೀಡಿತ್ತು.

ಟ್ರಾನ್ಸ್‌ಜೆಂಡರ್ ಕ್ಲಿನಿಕ್ ನೋಂದಾಯಿಸಿಕೊಂಡ ಒಟ್ಟು ರೋಗಿಗಳಲ್ಲಿ ಶೇಖಡ 6ರಷ್ಟು ಜನರು ಹೆಚ್‌ಐವಿ ಪಾಸಿಟಿವ್ ದೃಢಪಟ್ಟವರು ಇದ್ದರು. ಈ ಪೈಕಿ ಶೇಖಡ 83ರಷ್ಟು ಮಂದಿ ಆಂಟಿರೆಟ್ರೋವೈರಲ್ ಥೆರಪಿ (ಎಆರ್‌ಟಿ) ಚಿಕಿತ್ಸೆ ಪಡೆಯುತ್ತಿದ್ದರು. ಈ ಮಾಹಿತಿ ಕ್ಲಿನಿಕ್‌ನ ಮಹತ್ವವನ್ನು ಒತ್ತಿ ಹೇಳುತ್ತದೆ.

ಯುಎಸ್‌ಏಡ್‌ನ ಎಲ್ಲಾ ವಿದೇಶಿ ನೆರವುಗಳನ್ನು ಸ್ಥಗಿತಗೊಳಿಸುವ ಟ್ರಂಪ್ ಆದೇಶ ಜಗತ್ತಿನಾದ್ಯಂತ ವಿವಿಧ ಮಹತ್ವದ ಯೋಜನೆಗಳ ಮೇಲೆ ಭವಿಷ್ಯದಲ್ಲಿ ದೊಡ್ಡ ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗಿದೆ.

ಟ್ರಂಪ್‌ ಅವರ ಇಂತಹ ನೀತಿಗಳು ವಿಶ್ವದಾದ್ಯಂತ ದುರ್ಬಲ ಜನಸಂಖ್ಯೆಯ ಮೇಲೆ ವಿನಾಶಕಾರಿ ಪರಿಣಾಮಗಳನ್ನು ಬೀರುತ್ತವೆ. ‘ಮಿತ್ರ್ ಕ್ಲಿನಿಕ್’ ಮುಚ್ಚುವಿಕೆಯು ಅದನ್ನು ಎತ್ತಿ ತೋರಿಸಿದೆ. ಕ್ಲಿನಿಕ್ ಮುಚ್ಚಿದ್ದರಿಂದ ಸಾವಿರಾರು ಜನರು ನಿರ್ಣಾಯಕ ಆರೋಗ್ಯ ಸೇವೆಗಳಿಂದ ವಂಚಿತರಾಗುತ್ತಿದ್ದಾರೆ. ಅದರ ಸಿಬ್ಬಂದಿ ನಿರುದ್ಯೋಗಿಗಳಾಗಿದ್ದಾರೆ.

ಕ್ಲಿನಿಕ್‌ನಲ್ಲಿ ಕೆಲವು ಜೀವ ಉಳಿಸುವ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಮುಂದುವರಿಸಲು ಅನುಮತಿಸಲಾಗಿದೆಯಾದರೂ, ಟ್ರಾನ್ಸ್‌ಜೆಂಡರ್ ಸಮುದಾಯದ ಮೇಲೆ ಕ್ಲಿನಿಕ್ ಮುಚ್ಚುವಿಕೆ ದೀರ್ಘಕಾಲೀನ ಪರಿಣಾಮ ಬೀರಿಲಿದೆ ಎಂದು ವರದಿಗಳು ಹೇಳಿವೆ.

ಕ್ಲಿನಿಕ್ ಸ್ಥಗಿತಕ್ಕೆ ಎಲಾನ್‌ ಮಸ್ಕ್ ಪ್ರತಿಕ್ರಿಯೆ

ಭಾರತದ ಮೊಟ್ಟ ಮೊದಲ ಟ್ರಾನ್ಸ್‌ಜೆಂಡರ್ ಆರೋಗ್ಯ ಸೌಲಭ್ಯ, ‘ಮಿತ್ರ್ ಕ್ಲಿನಿಕ್’ ಮುಚ್ಚಿದೆ ಎಂಬ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಉದ್ಯಮಿ ಹಾಗೂ ಅಮೆರಿಕದ ಸರ್ಕಾರಿ ದಕ್ಷತೆಯ ಇಲಾಖೆಯ ಮುಖ್ಯಸ್ಥ ಎಲಾನ್‌ ಮಸ್ಕ್‌, “ಅದಕ್ಕೆ ಅಮೆರಿಕದ ತೆರಿಗೆದಾರರ ಹಣವನ್ನು ಬಳಸಲಾಗುತ್ತಿತ್ತು” ಎಂದು ಹೇಳಿದ್ದಾರೆ. ಇದು ಭಾರೀ ಟೀಕೆಗೆ ಕಾರಣವಾಗಿದೆ. ” “ಹಾಗಾದರೆ ಆರೋಗ್ಯ ಸೇವೆಗೆ ಹಣ ವ್ಯಯಿಸುವುದು ವ್ಯರ್ಥವೇ?” ಎಂದು ಹಲವು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...