Homeಮುಖಪುಟಯುಎಸ್‌ಏಡ್‌ ವಿದೇಶಿ ನೆರವು ಸ್ಥಗಿತಗೊಳಿಸಿದ ಟ್ರಂಪ್ : ಬಾಗಿಲು ಮುಚ್ಚಿದ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಕ್ಲಿನಿಕ್

ಯುಎಸ್‌ಏಡ್‌ ವಿದೇಶಿ ನೆರವು ಸ್ಥಗಿತಗೊಳಿಸಿದ ಟ್ರಂಪ್ : ಬಾಗಿಲು ಮುಚ್ಚಿದ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಕ್ಲಿನಿಕ್

- Advertisement -
- Advertisement -

ಎಲ್ಲಾ ರೀತಿಯ ಯುಎಸ್‌ಏಡ್‌ ವಿದೇಶಿ ನೆರವನ್ನು 90 ದಿನಗಳ ಕಾಲ ಸ್ಥಗಿತಗೊಳಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿದ ಬಳಿಕ ಹೈದರಾಬಾದ್‌ನಲ್ಲಿ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳಿಗೆ ಆರೋಗ್ಯ ಸೌಲಭ್ಯ ಒದಗಿಸುತ್ತಿದ್ದ ‘ಮಿತ್ರ್ ಕ್ಲಿನಿಕ್’ ಮುಚ್ಚಲ್ಪಟ್ಟಿದೆ ಎಂದು ವರದಿಯಾಗಿದೆ.

ಡೊನಾಲ್ಡ್ ಟ್ರಂಪ್ ನೇತೃತ್ವದ ಸರ್ಕಾರ ಅಮೆರಿಕದಿಂದ ಇತರ ರಾಷ್ಟ್ರಗಳಿಗೆ ನೀಡಲಾಗುತ್ತಿರುವ ವಿವಿಧ ರೀತಿಯ ನೆರವುಗಳ ಕುರಿತು ಪರಿಶೀಲನೆಗೆ ಮುಂದಾಗಿದ್ದು, ಯುಎಸ್‌ಏಡ್‌ ಮೂಲಕ ನೀಡಲಾಗುತ್ತಿದ್ದ ಹಲವು ವಿದೇಶಿ ನೆರವುಗಳನ್ನು ಸ್ಥಗಿತಗೊಳಿಸಿದೆ.

ಉದ್ಯಮಿ ಎಲಾನ್‌ ಮಸ್ಕ್‌ ನೇತೃತ್ವದ ಅಮೆರಿಕದ ಸರ್ಕಾರಿ ದಕ್ಷತೆಯ ಇಲಾಖೆಯು ವೆಚ್ಚಗಳಲ್ಲಿ ಕಡಿತ ಮಾಡಲು ಈ ಕ್ರಮ ಕೈಗೊಂಡಿದೆ. ಟ್ರಂಪ್ ಮತ್ತು ಎಲಾನ್‌ ಮಸ್ಕ್‌ ಇಬ್ಬರೂ ಅಮೆರಿಕದಿಂದ ಇತರ ರಾಷ್ಟ್ರಗಳಿಗೆ ಹಣ ಹರಿಯುವುದನ್ನು ತಡೆಯಲು ಮುಂದಾಗಿದ್ದಾರೆ.

ಇದರಿಂದ ಯುಎಸ್‌ಏಡ್‌ ಮೂಲಕ ಜಗತ್ತಿನ ವಿವಿಧ ರಾಷ್ಟ್ರಗಳಲ್ಲಿ ನಡೆಯುತ್ತಿದ್ದ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ. ಹೈದರಾಬಾದ್‌ನ ಟ್ರಾನ್ಸ್‌ಜೆಂಡರ್ ಕ್ಲಿನಿಕ್‌ ಕೂಡ ಅದರಲ್ಲಿ ಒಂದು. ಯುಎಸ್‌ಏಡ್‌ ಸ್ಥಗಿತದಿಂದ ಈ ಕ್ಲಿನಿಕ್‌ನಲ್ಲಿ ಹೆಚ್‌ಐವಿಗೆ ಚಿಕಿತ್ಸೆ ನೀಡುವ ಪ್ರಾಜೆಕ್ಟ್ ಅಕ್ಸೆಲರೇಟ್ ಕೂಡ ಬಂದ್ ಆಗಿದೆ.

ಜನವರಿ 2021ರಲ್ಲಿ ಸ್ಥಾಪನೆಯಾದ ‘ಮಿತ್ರ್ ಕ್ಲಿನಿಕ್’ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಕೇಂದ್ರಿತ ಆರೋಗ್ಯ ಕೇಂದ್ರಗಳಲ್ಲಿ ಒಂದಾಗಿದ್ದು, ಸಾಮಾನ್ಯ ಆರೋಗ್ಯ ಸಮಾಲೋಚನೆಗಳು, ಹೆಚ್ಐವಿ ಸಮಾಲೋಚನೆ ಮತ್ತು ಚಿಕಿತ್ಸೆ, ಮಾನಸಿಕ ಆರೋಗ್ಯ ಸಹಾಯ, ಲಿಂಗ ದೃಢೀಕರಣ ಸೇವೆಗಳು ಮತ್ತು ಕಾನೂನು ಮತ್ತು ಸಾಮಾಜಿಕ ಯೋಜನೆಗಳನ್ನು ಪಡೆಯಲು ಸಹಾಯದಂತಹ ಅಗತ್ಯ ಸೇವೆಗಳನ್ನು ಇದು ಒದಗಿಸುತ್ತಿತ್ತು.

LGBTQIA+ ಸಮುದಾಯದ ಆರೋಗ್ಯ ಅಗತ್ಯಗಳನ್ನು ಪೂರೈಸುವಲ್ಲಿ, ವಿಶೇಷವಾಗಿ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳಲ್ಲಿನ ಹೆಚ್‌ಐವಿ ಸಮಸ್ಯೆಯನ್ನು ಎದುರಿಸುವಲ್ಲಿ ಈ ಚಿಕಿತ್ಸಾಲಯವು ಪ್ರಮುಖ ಪಾತ್ರ ವಹಿಸುತ್ತಿತ್ತು.

2024ರ ಮಧ್ಯದ ವೇಳೆಗೆ, ಸುಮಾರು 4,900 ಕ್ಕೂ ಹೆಚ್ಚು ವ್ಯಕ್ತಿಗಳು ಈ ಕ್ಲಿನಿಕ್‌ನಲ್ಲಿ ನೋಂದಾಯಿಸಿಕೊಂಡಿದ್ದರು. ಮಾಸಿಕ 150–200 ವ್ಯಕ್ತಿಗಳಿಗೆ ಕ್ಲಿನಿಕ್ ಸೇವೆ ಒದಗಿಸುತ್ತಿತ್ತು. ಗಮನಾರ್ಹವಾಗಿ, ಕ್ಲಿನಿಕ್ ಏಳು ಟ್ರಾನ್ಸ್‌ಜೆಂಡರ್ ಸಿಬ್ಬಂದಿಯನ್ನು ನೇಮಿಸಿಕೊಂಡಿತ್ತು. ಅವರಿಗೆ ಉದ್ಯೋಗ ಮತ್ತು ಸಮುದಾಯದ ಪ್ರಜ್ಞೆಯನ್ನು ನೀಡಿತ್ತು.

ಟ್ರಾನ್ಸ್‌ಜೆಂಡರ್ ಕ್ಲಿನಿಕ್ ನೋಂದಾಯಿಸಿಕೊಂಡ ಒಟ್ಟು ರೋಗಿಗಳಲ್ಲಿ ಶೇಖಡ 6ರಷ್ಟು ಜನರು ಹೆಚ್‌ಐವಿ ಪಾಸಿಟಿವ್ ದೃಢಪಟ್ಟವರು ಇದ್ದರು. ಈ ಪೈಕಿ ಶೇಖಡ 83ರಷ್ಟು ಮಂದಿ ಆಂಟಿರೆಟ್ರೋವೈರಲ್ ಥೆರಪಿ (ಎಆರ್‌ಟಿ) ಚಿಕಿತ್ಸೆ ಪಡೆಯುತ್ತಿದ್ದರು. ಈ ಮಾಹಿತಿ ಕ್ಲಿನಿಕ್‌ನ ಮಹತ್ವವನ್ನು ಒತ್ತಿ ಹೇಳುತ್ತದೆ.

ಯುಎಸ್‌ಏಡ್‌ನ ಎಲ್ಲಾ ವಿದೇಶಿ ನೆರವುಗಳನ್ನು ಸ್ಥಗಿತಗೊಳಿಸುವ ಟ್ರಂಪ್ ಆದೇಶ ಜಗತ್ತಿನಾದ್ಯಂತ ವಿವಿಧ ಮಹತ್ವದ ಯೋಜನೆಗಳ ಮೇಲೆ ಭವಿಷ್ಯದಲ್ಲಿ ದೊಡ್ಡ ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗಿದೆ.

ಟ್ರಂಪ್‌ ಅವರ ಇಂತಹ ನೀತಿಗಳು ವಿಶ್ವದಾದ್ಯಂತ ದುರ್ಬಲ ಜನಸಂಖ್ಯೆಯ ಮೇಲೆ ವಿನಾಶಕಾರಿ ಪರಿಣಾಮಗಳನ್ನು ಬೀರುತ್ತವೆ. ‘ಮಿತ್ರ್ ಕ್ಲಿನಿಕ್’ ಮುಚ್ಚುವಿಕೆಯು ಅದನ್ನು ಎತ್ತಿ ತೋರಿಸಿದೆ. ಕ್ಲಿನಿಕ್ ಮುಚ್ಚಿದ್ದರಿಂದ ಸಾವಿರಾರು ಜನರು ನಿರ್ಣಾಯಕ ಆರೋಗ್ಯ ಸೇವೆಗಳಿಂದ ವಂಚಿತರಾಗುತ್ತಿದ್ದಾರೆ. ಅದರ ಸಿಬ್ಬಂದಿ ನಿರುದ್ಯೋಗಿಗಳಾಗಿದ್ದಾರೆ.

ಕ್ಲಿನಿಕ್‌ನಲ್ಲಿ ಕೆಲವು ಜೀವ ಉಳಿಸುವ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಮುಂದುವರಿಸಲು ಅನುಮತಿಸಲಾಗಿದೆಯಾದರೂ, ಟ್ರಾನ್ಸ್‌ಜೆಂಡರ್ ಸಮುದಾಯದ ಮೇಲೆ ಕ್ಲಿನಿಕ್ ಮುಚ್ಚುವಿಕೆ ದೀರ್ಘಕಾಲೀನ ಪರಿಣಾಮ ಬೀರಿಲಿದೆ ಎಂದು ವರದಿಗಳು ಹೇಳಿವೆ.

ಕ್ಲಿನಿಕ್ ಸ್ಥಗಿತಕ್ಕೆ ಎಲಾನ್‌ ಮಸ್ಕ್ ಪ್ರತಿಕ್ರಿಯೆ

ಭಾರತದ ಮೊಟ್ಟ ಮೊದಲ ಟ್ರಾನ್ಸ್‌ಜೆಂಡರ್ ಆರೋಗ್ಯ ಸೌಲಭ್ಯ, ‘ಮಿತ್ರ್ ಕ್ಲಿನಿಕ್’ ಮುಚ್ಚಿದೆ ಎಂಬ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಉದ್ಯಮಿ ಹಾಗೂ ಅಮೆರಿಕದ ಸರ್ಕಾರಿ ದಕ್ಷತೆಯ ಇಲಾಖೆಯ ಮುಖ್ಯಸ್ಥ ಎಲಾನ್‌ ಮಸ್ಕ್‌, “ಅದಕ್ಕೆ ಅಮೆರಿಕದ ತೆರಿಗೆದಾರರ ಹಣವನ್ನು ಬಳಸಲಾಗುತ್ತಿತ್ತು” ಎಂದು ಹೇಳಿದ್ದಾರೆ. ಇದು ಭಾರೀ ಟೀಕೆಗೆ ಕಾರಣವಾಗಿದೆ. ” “ಹಾಗಾದರೆ ಆರೋಗ್ಯ ಸೇವೆಗೆ ಹಣ ವ್ಯಯಿಸುವುದು ವ್ಯರ್ಥವೇ?” ಎಂದು ಹಲವು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...