Homeಮುಖಪುಟಮೂರೂವರೆ ವರ್ಷದ ಬಾಲಕಿಯ ವರ್ತನೆಯೇ ಲೈಂಗಿಕ ದೌರ್ಜನ್ಯಕ್ಕೆ ಕಾರಣ ಎಂದ ತಮಿಳುನಾಡು ಜಿಲ್ಲಾಧಿಕಾರಿ!

ಮೂರೂವರೆ ವರ್ಷದ ಬಾಲಕಿಯ ವರ್ತನೆಯೇ ಲೈಂಗಿಕ ದೌರ್ಜನ್ಯಕ್ಕೆ ಕಾರಣ ಎಂದ ತಮಿಳುನಾಡು ಜಿಲ್ಲಾಧಿಕಾರಿ!

- Advertisement -
- Advertisement -

“ಬಾಲಕಿ ತೋರಿದ ವರ್ತನೆಯೇ ಲೈಂಗಿಕ ದೌರ್ಜನ್ಯಕ್ಕೆ ಕಾರಣವಾಗಿದೆ” ಎಂದು ಮೂರೂವರೆ ವರ್ಷದ ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡಿನ ಮೈಲಾಡುತುರೈ ಜಿಲ್ಲಾಧಿಕಾರಿ   ಎ.ಪಿ ಮಹಾಭಾರತಿ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಸರ್ಕಾರ ಅವರನ್ನು ವರ್ಗಾವಣೆ ಮಾಡಿದೆ.

ಫೆಬ್ರವರಿ 28, ಶುಕ್ರವಾರ ನಡೆದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯ ಜಾಗೃತಿ ಸಭೆಯಲ್ಲಿ ಮಾತನಾಡಿದ ಮಹಾಭಾರತಿ, “ನನಗೆ ಬಂದ ವರದಿಯ ಪ್ರಕಾರ, ಮಗು (ಸಂತ್ರಸ್ತೆ) ಆರೋಪಿಯ ಮುಖದ ಮೇಲೆ ಉಗುಳಿದೆ. ಅದು ಆಕೆಯ ಮೇಲೆ ದೌರ್ಜನ್ಯ ನಡೆಸಲು ಪ್ರಚೋದಿಸಿರಬಹುದು. ಆದ್ದರಿಂದ, ನಾವು ಯಾವುದೇ ಪ್ರಕರಣವನ್ನು ಎರಡೂ ಕಡೆಯಿಂದ ನೋಡಬೇಕು. ‘ತಡೆಗಟ್ಟುವಿಕೆ’ ಎಲ್ಲಕ್ಕಿಂತ ಉತ್ತಮವಾದದು. ನಾವು ಮಕ್ಕಳ ಪೋಷಕರನ್ನು ಸಂವೇದನಾಶೀಲಗೊಳಿಸಬೇಕಾಗಿದೆ” ಎಂದು ಹೇಳಿದ್ದರು.

ಫೆಬ್ರವರಿ 24ರಂದು ಮೈಲಾಡುತುರೈನ ಸಿರ್ಕಾಝಿಯಲ್ಲಿರುವ ಅಂಗನವಾಡಿಯ ಹೊರಗೆ ಮೂರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಬಾಲಕಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ 17 ವರ್ಷದ ಆರೋಪಿ ಆಕೆಯ ಮೇಲೆ ಹಲ್ಲೆ ನಡೆಸಿದ್ದ. ಘಟನೆಯಲ್ಲಿ ಬಾಲಕಿಯ ತಲೆಗೆ ಗಂಭೀರ ಗಾಯಗಳಾಗಿದ್ದು, ಪುದುಚೇರಿಯ ಜಿಪ್ಮರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಜಿಲ್ಲಾಧಿಕಾರಿ ಮಹಾಭಾರತಿ ಸಂತ್ರಸ್ತೆಯ ಕುರಿತು ನೀಡಿರುವ ಹೇಳಿಕೆ ಭಾರೀ ಟೀಕೆಗೆ ಗುರಿಯಾದ ಬಳಿಕ, ರಾಜ್ಯಪಾಲರ ಕಚೇರಿ ಶುಕ್ರವಾರ (ಫೆ.28) ಈರೋಡ್ ಜಿಲ್ಲಾಧಿಕಾರಿ ಹೆಚ್.ಎಸ್. ಶ್ರೀಕಾಂತ್ ಅವರನ್ನು ಮಹಾಭಾರತಿಯಯ ಜಾಗಕ್ಕೆ, ಅಂದರೆ ಮೈಲಾಡುತುರೈ ಜಿಲ್ಲಾಧಿಕಾರಿ ಆಗಿ ನೇಮಿಸಿ ಆದೇಶಿಸಿದೆ.

ಈ ನಡುವೆ ಸಿಪಿಐ(ಎಂ) ಮಾರ್ಚ್ 1 ರ ಶನಿವಾರ ಮೈಲಾಡುತುರೈ ಕಲೆಕ್ಟರೇಟ್ ಹೊರಗೆ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದೆ.

“ಮೈಲಾಡುತುರೈ ಜಿಲ್ಲಾಧಿಕಾರಿ ಸಂಪೂರ್ಣವಾಗಿ ಬೇಜವಾಬ್ದಾರಿಯಿಂದ ಮಗು ಕೂಡ ತಪ್ಪಿತಸ್ಥೆ ಎಂದು ಹೇಳಿದ್ದಾರೆ. ತಮಿಳುನಾಡು ಬಿಜೆಪಿ ಪರವಾಗಿ ನಾವು ಇದನ್ನು ಖಂಡಿಸುತ್ತಿದ್ದೇವೆ. ತಮಿಳುನಾಡಿನಾದ್ಯಂತ ಮಹಿಳೆಯರು ಮತ್ತು ಶಾಲಾ ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿರುವುದು, ಮುಖ್ಯಮಂತ್ರಿ ಮತ್ತು ಇತರ ಮಂತ್ರಿಗಳು ಸಂತ್ರಸ್ತರನ್ನೇ ದೂಷಿಸುವುದು, ಅವರ ವೈಯಕ್ತಿಕ ವಿವರಗಳನ್ನು ಬಹಿರಂಗಪಡಿಸುತ್ತಿರುವು ಮುಂದುವರೆಸುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಮೂರ್ಖತನದ ಭಾಷಣ ಮಾಡಿದ್ದಾರೆ” ಎಂದು ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ.

ಇನ್ನು, ಬಾಲಕಿಯ ಮೇಲಿನ ಲೈಂಗಿನ ದೌರ್ಜನ್ಯದ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಆತನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಿ, ನಂತರ ತಂಜಾವೂರಿನ ಅಪ್ರಾಪ್ತ ವಯಸ್ಕರ ವೀಕ್ಷಣಾ ಗೃಹಕ್ಕೆ ಸ್ಥಳಾಂತರಿಸಲಾಗಿದೆ.

ಯುಎಸ್‌ಏಡ್‌ ವಿದೇಶಿ ನೆರವು ಸ್ಥಗಿತಗೊಳಿಸಿದ ಟ್ರಂಪ್ : ಬಾಗಿಲು ಮುಚ್ಚಿದ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಕ್ಲಿನಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...