Homeಕರ್ನಾಟಕಮಾರ್ಚ್‌ 10ರೊಳಗೆ ಜನಸ್ನೇಹಿ ಬಜೆಟ್‌ ಮಂಡಿಸಿ - ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಮಾರ್ಚ್‌ 10ರೊಳಗೆ ಜನಸ್ನೇಹಿ ಬಜೆಟ್‌ ಮಂಡಿಸಿ – ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

- Advertisement -
- Advertisement -

ಗ್ರಾಮ ಪಂಚಾಯತಿಗಳು ಮಾರ್ಚ್‌ 10ರ ಒಳಗೆ ಜನಸ್ನೇಹಿ ಬಜೆಟ್‌ ಮಂಡಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಶನಿವಾರ ಪಂಚಾಯತ್‌ ರಾಜ್‌ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ನಿರ್ದೇಶನ ನೀಡಿದ್ದಾರೆ. ಮಾರ್ಚ್‌ 10ರೊಳಗೆ

ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್‌ ಅಧಿನಿಯಮ 1993 ರ ಪ್ರಕರಣ 241 ಉಪ ಪ್ರಕರಣ (1)ರ ಅಡಿ ಗ್ರಾಮ ಪಂಚಾಯಿತಿಗಳು ತಮಗೆ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬುಗಳಡಿ ಲಭ್ಯವಾಗುವ ಅನುದಾನ ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಆಯವ್ಯಯ ತಯಾರಿಸಿ ಮಾರ್ಚ್ 10 ನೇ ತಾರೀಖಿನ ಒಳಗೆ ಗ್ರಾಮ ಪಂಚಾಯಿತಿಯ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ಪ್ರಿಯಾಂಕ್‌ ಖರ್ಗೆ ನಿರ್ದೇಶನ ನೀಡಿದ್ದಾರೆ. ಮಾರ್ಚ್‌ 10ರೊಳಗೆ

ಗ್ರಾಮ ಪಂಚಾಯಿತಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುವ ಶಾಸನಬದ್ಧ ಅನುದಾನ, ವಿವಿಧ ಯೋಜನೆಗಳಡಿ ರಾಜ್ಯ ಸರ್ಕಾರ ನೀಡುತ್ತಿರುವ ಆರ್ಥಿಕ ನೆರವು ಮಾತ್ರವಲ್ಲದೆ ಪಂಚಾಯತಿಗಳು ಸ್ವಂತ ಸಂಪನ್ಮೂಲ ಸಂಗ್ರಹಿಸಲು ಅವಕಾಶವಿರುವುದರಿಂದ ಗ್ರಾಮ ಪಂಚಾಯತಿಗಳು ತಮ್ಮ ಆಯವ್ಯಗಳನ್ನು ತಾವೇ ತಯಾರಿಸಿಕೊಂಡು ಅನುಮೋದನೆ ಪಡೆಯಲು ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಸೂಚಿಸಬೇಕೆಂದು ಅವರು ಪಂಚಾಯತ್‌ ರಾಜ್‌ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯತಿಗಳಿಗೆ ವಿಶೇಷವಾದ ಮಹತ್ವವಿದೆ, ಗ್ರಾಮ ಪಂಚಾಯತಿಗಳು ಗ್ರಾಮ ಮಟ್ಟದಲ್ಲಿ ಸ್ಥಳೀಯ ಸರ್ಕಾರಗಳಂತೆ ಕಾರ್ಯ ನಿರ್ವಹಿಸಬೇಕೆಂಬುದು ಸಂವಿಧಾನದ ಆಶಯವಾಗಿದೆ. ಈ ಆಶಯಕ್ಕೆ ಅನುಗುಣವಾಗಿ ಚುನಾಯಿತ ಪ್ರತಿನಿಧಿಗಳನ್ನೊಳಗೊಂಡ ಗ್ರಾಮ ಪಂಚಾಯಿತಿಗಳು ಸ್ಥಳೀಯವಾಗಿ ಜನರಿಗೆ ಅವಶ್ಯವಾಗಿ ಬೇಕಾದ ಮೂಲಸೌಕರ್ಯಗಳನ್ನು ಒದಗಿಸಲು ಹಾಗೂ ದೈನಂದಿನ ಸೇವೆಗಳನ್ನು ನೀಡಲು ತಾವೇ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕೆಂದು ಪ್ರಿಯಾಂಕ್‌ ಖರ್ಗೆ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ಕಾಯ್ದೆಯ ಆಶಯದಂತೆ ಕಡ್ಡಾಯವಾಗಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಈ ವಿಷಯವನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ನಿಯಮಾನುಸಾರ ಆಯವ್ಯಯ ಸಿದ್ದಪಡಿಸಿ ಅನುಮೋದನೆ ಪಡೆದು ವೆಚ್ಚ ಭರಿಸುವ ಮೂಲಕ ಗ್ರಾಮ ಪಂಚಾಯತಿಗಳು ಇನ್ನಷ್ಟು ಉತ್ತರದಾಯಿಯಾಗಿ ಕಾರ್ಯನಿರ್ವಹಿಸಬೇಕೆಂದು ಸಚಿವರು ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ – ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ

ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ – ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...