Homeಕರ್ನಾಟಕಜಗ್ಗಿ ವಾಸುದೇವ್‌ ಕಾರ್ಯಕ್ರಮಕ್ಕೆ ಶಿವಕುಮಾರ್ ಭೇಟಿ; ರಾಜ್ಯ ಕಾಂಗ್ರೆಸ್‌ನೊಳಗೆ ಭಿನ್ನಾಭಿಪ್ರಾಯ!

ಜಗ್ಗಿ ವಾಸುದೇವ್‌ ಕಾರ್ಯಕ್ರಮಕ್ಕೆ ಶಿವಕುಮಾರ್ ಭೇಟಿ; ರಾಜ್ಯ ಕಾಂಗ್ರೆಸ್‌ನೊಳಗೆ ಭಿನ್ನಾಭಿಪ್ರಾಯ!

- Advertisement -
- Advertisement -

ಮಹಾಶಿವರಾತ್ರಿ ಆಚರಣೆಗಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮಿಳುನಾಡಿನ ‘ಸದ್ಗುರು’ ಜಗ್ಗಿ ವಾಸುದೇವ್‌ ಅವರ ಈಶ ಯೋಗ ಕೇಂದ್ರಕ್ಕೆ ಭೇಟಿ ನೀಡಿದ ನಂತರ ರಾಜ್ಯ ಕಾಂಗ್ರೆಸ್‌ನೊಳಗೆ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸುವವರೊಂದಿಗೆ ಶಿವಕುಮಾರ್ ವೇದಿಕೆ ಹಂಚಿಕೊಂಡಿರುವುದರ ಹಿಂದಿನ ಸಮರ್ಥನೆಯನ್ನು ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಪ್ರಶ್ನಿಸಿದ್ದಾರೆ.

“ರಾಹುಲ್ ಗಾಂಧಿಯನ್ನು ನನಗೆ ಗೊತ್ತಿಲ್ಲ ಎಂದು ಸದ್ಗುರು ಹೇಳಿದ್ದರು. ಅಲ್ಲವೇ? ಲೋಕಸಭೆಯಲ್ಲಿ ನಮ್ಮ ನಾಯಕ ರಾಹುಲ್ ಗಾಂಧಿ ಬಗ್ಗೆ ಜನರು ಏನು ಮಾತನಾಡುತ್ತಾರೆಂದು ಅವರಿಗೆ (ಶಿವಕುಮಾರ್) ನನಗಿಂತ ಚೆನ್ನಾಗಿ ತಿಳಿದಿದೆ. ಅಂತಹ ಜನರೊಂದಿಗೆ ವೇದಿಕೆ ಹಂಚಿಕೊಳ್ಳುವುದು ಎಷ್ಟು ಸಮರ್ಥನೀಯ ಎಂದು ಅವರು ಉತ್ತರಿಸಲಿ” ಎಂದು ರಾಜಣ್ಣ ಹಾಸನದಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆದಾಗ್ಯೂ, ಮಾಜಿ ಸಂಸದ ಡಿ.ಕೆ. ಸುರೇಶ್ ತಮ್ಮ ಸಹೋದರನನ್ನು ಬೆಂಬಲಿಸಿದರು, ಶಿವಕುಮಾರ್ ಯಾವುದೇ ಕಾರ್ಯಕ್ರಮಕ್ಕೆ ಹಾಜರಾಗುವ ಮೊದಲು ಯಾವಾಗಲೂ ಪಕ್ಷಕ್ಕೆ ಮಾಹಿತಿ ನೀಡಿಯೆ ಹೋಗುತ್ತಾರೆ ಎಂದು ಹೇಳಿದ್ದಾರೆ.

“ಶಿವಕುಮಾರ್ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದಾಗಲೆಲ್ಲಾ ಅವರು ಪಕ್ಷದ ಹೈಕಮಾಂಡ್‌ಗೆ ಮಾಹಿತಿ ನೀಡಿದ್ದಾರೆ. ಇಶಾ ಫೌಂಡೇಶನ್‌ನ ಮಹಾ ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಅವರು ಹೈಕಮಾಂಡ್‌ಗೆ ಮಾಹಿತಿ ನೀಡಿದ್ದರು” ಎಂದು ಸುರೇಶ್ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಶಿವಕುಮಾರ್ ಅವರ ಕಾರ್ಯಕ್ರಮಕ್ಕೆ ಭೇಟಿ ರಹಸ್ಯವಾಗಿರಲಿಲ್ಲ ಎಂದು ಅವರು ಜಗ್ಗಿ ವಾಸುದೇವ್‌ ಅವರೊಂದಿಗಿನ ಭೇಟಿಯನ್ನು ಸಮರ್ಥಿಸಿಕೊಂಡಿದ್ದಾರೆ. ಕೊಯಮತ್ತೂರಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಶಿವಕುಮಾರ್ ಅವರನ್ನು ವೈಯಕ್ತಿಕವಾಗಿ ಆಹ್ವಾನಿಸಲಾಗಿದ್ದು, ಅದನ್ನು ಅವರು ಸ್ವೀಕರಿಸಿ ಭಾಗವಹಿಸಿದ್ದರು ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ರಾಜ್ಯ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಬುಧವಾರ ಕೊಯಮತ್ತೂರಿನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಹಾಜರಿದ್ದರು. ತಮ್ಮ ಭೇಟಿಯನ್ನು ಸಮರ್ಥಿಸಿಕೊಂಡ ಶಿವಕುಮಾರ್ ಅವರು, “ನಾನು ಹಿಂದೂವಾಗಿ ಹುಟ್ಟಿದ್ದೇನೆ ಮತ್ತು ಹಿಂದೂವಾಗಿ ಸಾಯುತ್ತೇನೆ” ಎಂದು ಹೇಳಿದ್ದರು.

ಪ್ರಸ್ತುತ ಘಟನೆ ರಾಜ್ಯವನ್ನು ಮೀರಿ ಈಗ ರಾಷ್ಟ್ರೀಯ ವಿಷಯವಾಗಿದ್ದು, ಆದ್ದರಿಂದ ಪಕ್ಷದ ಹೈಕಮಾಂಡ್ ಅದನ್ನು ಗಮನಿಸಬೇಕು ಎಂದು ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. “ಇದು ಈಗ ಅಂತರರಾಜ್ಯ ಸಮಸ್ಯೆಯಾಗಿದ್ದು, ಹೈಕಮಾಂಡ್‌ಗೆ ಸಂಬಂಧಿಸಿದೆ. ದೆಹಲಿಯ ನಾಯಕರು ಇದನ್ನು ಗಮನಿಸಬೇಕು ಏಕೆಂದರೆ ನಮಗೆ ಯಾವುದು ಸರಿ ಮತ್ತು ಯಾವುದು ತಪ್ಪು ಎಂದು ತಿಳಿದಿಲ್ಲ” ಎಂದು ಅವರು ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ಸಚಿವ ಎಂ.ಬಿ. ಪಾಟೀಲ್ ಕೂಡ ಶಿವಕುಮಾರ್ ಅವರ ಕೊಯಮತ್ತೂರಿನ ಭೇಟಿಯನ್ನು ಸಮರ್ಥಿಸಿಕೊಂಡಿದ್ದು, ಅವರು ಪಕ್ಷದ ನೀತಿಯನ್ನು ಉಲ್ಲಂಘಿಸಿಲ್ಲ ಎಂದು ಪ್ರತಿಪಾದಿಸಿದ್ದಾರೆ. “ಶಿವಕುಮಾರ್ ಹಿಂದೂ ಅಲ್ಲವೇ? ಶಿವರಾತ್ರಿ ಆಚರಣೆಗಳಲ್ಲಿ ಭಾಗವಹಿಸುವುದರಲ್ಲಿ ತಪ್ಪೇನು? ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಪಕ್ಷದ ಉಲ್ಲಂಘನೆಯೇ? ನಾನು ಶಿವನ ದೇವಸ್ಥಾನಕ್ಕೆ ಹೋವುವುದಿಲ್ಲವೇ?” ಎಂದು ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪಾಟೀಲ್ ಕೇಳಿದ್ದಾರೆ.

ಶಿವಕುಮಾರ್ ಒಬ್ಬ ಕಟ್ಟಾ ಕಾಂಗ್ರೆಸ್ ನಾಯಕ ಎಂದು ಒತ್ತಿ ಹೇಳಿದ ಅವರು, ಕೊಯಮತ್ತೂರಿಗೆ ಅವರ ಭೇಟಿಯ ಬಗ್ಗೆ ಇರುವ ಊಹಾಪೋಹಗಳನ್ನು “ಮಾಧ್ಯಮ ಸೃಷ್ಟಿ” ಎಂದು ಕರೆದಿದ್ದಾರೆ. ಅಮಿತ್ ಶಾ ಅವರೊಂದಿಗೆ ವೇದಿಕೆ ಹಂಚಿಕೊಂಡಿರುವ ಬಗ್ಗೆಗಿನ ಆತಂಕದ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, “ಅದರಲ್ಲಿ ಏನು ತಪ್ಪಿದೆ? ನಾವು ಕಾಂಗ್ರೆಸ್ ನಾಯಕರು ಅವರೊಂದಿಗೆ (ಬಿಜೆಪಿ ನಾಯಕರು) ಒಟ್ಟಿಗೆ ಕುಳಿತುಕೊಳ್ಳಲಿಲ್ಲವೇ?” ಎಂದು ಕೇಳಿದ್ದಾರೆ.

ಜಗ್ಗಿ ವಾಸುದೇವ್ ಪ್ರತಿ ವರ್ಷವೂ ಅದ್ಧೂರಿಯಾಗಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ ಮತ್ತು ಈ ಕಾರ್ಯಕ್ರಮ ರಾಜಕೀಯ ಕಾರ್ಯಕ್ರಮವಾಗಿರಲಿಲ್ಲ ಎಂದು ಸಚಿವ ಪಾಟೀಲ್ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕ್ಷೇತ್ರ ಪುನರ್ವಿಂಗಡಣೆ ವಿವಾದ | ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾದರೆ ದಂಗೆ ನಡೆಯಲಿದೆ: ಸಿಎಂ ರೇವಂತ್ ರೆಡ್ಡಿ ಎಚ್ಚರಿಕೆ

ಕ್ಷೇತ್ರ ಪುನರ್ವಿಂಗಡಣೆ ವಿವಾದ | ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾದರೆ ದಂಗೆ ನಡೆಯಲಿದೆ: ಸಿಎಂ ರೇವಂತ್ ರೆಡ್ಡಿ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...