Homeಮುಖಪುಟಯಾತ್ರೆಯಲ್ಲಿ ತನ್ನ ಮಗಳಿಗೆ ಕಿರುಕುಳ: ದುಷ್ಕರ್ಮಿಗಳ ವಿರುದ್ಧ ದೂರು ನೀಡಿದ ಕ್ರೀಡಾ ರಾಜ್ಯ ಸಚಿವೆ ರಕ್ಷಾ...

ಯಾತ್ರೆಯಲ್ಲಿ ತನ್ನ ಮಗಳಿಗೆ ಕಿರುಕುಳ: ದುಷ್ಕರ್ಮಿಗಳ ವಿರುದ್ಧ ದೂರು ನೀಡಿದ ಕ್ರೀಡಾ ರಾಜ್ಯ ಸಚಿವೆ ರಕ್ಷಾ ಖಾಡ್ಸೆ

- Advertisement -
- Advertisement -

ಮಹಾರಾಷ್ಟ್ರ: ಜಲಗಾಂವ್‌ನ ಕೊಥಲಿ ಗ್ರಾಮದಲ್ಲಿ ಯಾತ್ರೆಯ ಸಂದರ್ಭದಲ್ಲಿ ತನ್ನ ಮಗಳು ಮತ್ತು ಇತರ ಹಲವಾರು ಹುಡುಗಿಯರಿಗೆ ಕಿರುಕುಳ ನೀಡಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ರಾಜ್ಯ ಸಚಿವೆ ರಕ್ಷಾ ಖಾಡ್ಸೆ ಭಾನುವಾರ ಒತ್ತಾಯಿಸಿದರು.

ಮುಕ್ತೈನಗರದಲ್ಲಿ ನಡೆದ ಮಹಾ ಶಿವರಾತ್ರಿ ಮೇಳದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಯುವಕರ ಗುಂಪೊಂದು ಸಚಿವರ ಮಗಳು ಮತ್ತು ಇತರ ಹುಡುಗಿಯರಿಗೆ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಆರೋಪಿಗಳು ಮೊಬೈಲ್ ಫೋನ್‌ಗಳಲ್ಲಿ ಅವರ ಚಿತ್ರಗಳನ್ನು ತೆಗೆದುಕೊಳ್ಳಲು ಸಹ ಪ್ರಯತ್ನಿಸಿದರು. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದರು, ಆದರೆ ಅಪರಾಧಿಗಳು ಈಗಾಗಲೇ ಪರಾರಿಯಾಗಿದ್ದರು.

ಘಟನೆಯ ನಂತರ, ಖಾಡ್ಸೆ ತಮ್ಮ ಮಗಳು, ಹೆಚ್ಚಿನ ಸಂಖ್ಯೆಯ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರೊಂದಿಗೆ ದೂರು ದಾಖಲಿಸಲು ಪೊಲೀಸ್ ಠಾಣೆಗೆ ಬಂದರು.

ವರದಿಗಾರರೊಂದಿಗೆ ಮಾತನಾಡಿದ ಖಾಡ್ಸೆ, ಸ್ಪಷ್ಟವಾಗಿ ಅಸಮಾಧಾನಗೊಂಡು ಮರಾಠಿಯಲ್ಲಿ ಮಾತನಾಡುತ್ತಾ, “ನಾನು ಕೇಂದ್ರ ಸಚಿವೆ ಮತ್ತು ಸಂಸದೆಯಾಗಿ ಪೊಲೀಸ್ ಠಾಣೆಗೆ ಬಂದಿಲ್ಲ, ನ್ಯಾಯವನ್ನು ಬಯಸುವ ತಾಯಿಯಾಗಿ ಬಂದಿದ್ದೇನೆ.” ಎಂದಿದ್ದಾರೆ.

ಮಹಿಳೆಯರ ಸುರಕ್ಷತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಅವರು, “ನಮ್ಮಂತಹ ಕುಟುಂಬಗಳ ಹೆಣ್ಣುಮಕ್ಕಳು ಸುರಕ್ಷಿತವಾಗಿಲ್ಲದಿದ್ದರೆ, ಉಳಿದವರ ಬಗ್ಗೆ ಏನು? ನನ್ನ ಸ್ವಂತ ಮಗಳು ಸುರಕ್ಷಿತವಾಗಿಲ್ಲದಿದ್ದರೆ, ಇತರರ ಸ್ಥಿತಿ ಏನು? ಕಾನೂನಿನ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರದಿಂದ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆ.” ಎಂದಿದ್ದಾರೆ.

“ಸಾರ್ವಜನಿಕ ಪ್ರತಿನಿಧಿಯ ಮಗಳ ಮೇಲೆ ಕಿರುಕುಳ ನಡೆಯುತ್ತಿದ್ದರೆ, ಸಾಮಾನ್ಯ ನಾಗರಿಕರ ಸುರಕ್ಷತೆಯ ಬಗ್ಗೆ ಏನು? ನಾನು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಅಂತಹ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ” ಎಂದು ಅವರು ಮತ್ತಷ್ಟು ಹೇಳಿದರು.

ಆರೋಪಿಗಳ ಬಗ್ಗೆ ಈಗಾಗಲೇ ಪೊಲೀಸರಿಗೆ ದೂರುಗಳು ವರದಿಯಾಗಿವೆ ಎಂದು ಖಾಡ್ಸೆ ಬಹಿರಂಗಪಡಿಸಿದರು.

“ಅವರು ನಾಲ್ಕು ಅಥವಾ ಐದು ಹುಡುಗಿಯರ ವೀಡಿಯೊಗಳನ್ನು ತೆಗೆದುಕೊಂಡಿದ್ದಾರೆ. ರಾಜ್ಯಾದ್ಯಂತ ಮಹಿಳೆಯರ ವಿರುದ್ಧದ ಅಪರಾಧಗಳು ಹೆಚ್ಚಿವೆ ಮತ್ತು ಇಂತಹ ಪ್ರಕರಣಗಳಲ್ಲಿ ಮೌನವಹಿಸಿದರೆ ಆರೋಪಿಗಳು ಇನ್ನು ಮುಂದೆ ಕಾನೂನಿಗೆ ಹೆದರುವುದಿಲ್ಲ. ಇಂತಹ ಸಂದರ್ಭದಲ್ಲಿ ಅನೇಕ ಹುಡುಗಿಯರು ದೂರು ನೀಡುವುದಕ್ಕಾಗಿ ಮುಂದೆ ಬರಲು ಹಿಂಜರಿಯುತ್ತಾರೆ, ಆದರೆ ನಾವು ಮೌನವಾಗಿರಬಾರದು. ಅದಕ್ಕಾಗಿಯೇ ನಾನು ದೂರು ದಾಖಲಿಸಿದ್ದೇನೆ” ಎಂದು ಅವರು ಹೇಳಿದರು.

ರಾವರ್ ಲೋಕಸಭಾ ಸ್ಥಾನದಿಂದ ಮೂರು ಬಾರಿ ಸಂಸತ್ ಸದಸ್ಯೆಯಾಗಿರುವ ರಕ್ಷಾ ಖಾಡ್ಸೆ, ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿ. ಅವರು 2014, 2019 ಮತ್ತು 2024ರ ಲೋಕಸಭಾ ಚುನಾವಣೆಗಳಲ್ಲಿ ಜಯಗಳಿಸಿದರು ಮತ್ತು ಪ್ರಸ್ತುತ ಮೋದಿ ಸರ್ಕಾರದಲ್ಲಿ ಅತ್ಯಂತ ಕಿರಿಯ ಮಹಿಳಾ ಸಚಿವೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇತ್ತೀಚೆಗೆ ರಚನೆಯಾದ ಮೋದಿ 3.0 ಸಂಪುಟದಲ್ಲಿ, ಅವರಿಗೆ ಯುವ ವ್ಯವಹಾರ ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವೆಯ ಸ್ಥಾನವನ್ನು ನೀಡಲಾಗಿದೆ.

ಸಂಭಾಲ್ ಹಿಂಸಾಚಾರ: 17 ಆರೋಪಿಗಳಿಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...