Homeಮುಖಪುಟಉತ್ತರ ಪ್ರದೇಶ| ಪ್ರೀತಿಯಿಂದ ಸಾಕಿದ್ದ ಬೆಕ್ಕಿನ ಮರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ

ಉತ್ತರ ಪ್ರದೇಶ| ಪ್ರೀತಿಯಿಂದ ಸಾಕಿದ್ದ ಬೆಕ್ಕಿನ ಮರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ

- Advertisement -
- Advertisement -

ತಾನು ಪ್ರೀತಿಯಿಂದ ಸಾಕಿದ್ದ ಬೆಕ್ಕಿನ ಸಾವಿನಿಂದ ಕಂಗಾಲಾದ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಮಹಿಳೆಯೊಬ್ಬರು, ಅದು ಮತ್ತೆ ಜೀವಕ್ಕೆ ಬರುತ್ತದೆ ಎಂಬ ಆಶಯದೊಂದಿಗೆ ಎರಡು ದಿನಗಳ ಕಾಲ ಅದರ ಶವವನ್ನು ತನ್ನ ಹತ್ತಿರದಲ್ಲೇ ಇಟ್ಟುಕೊಂಡಿದ್ದರು. ಆಕೆಯ ಭರವಸೆಗಳು ಭಗ್ನಗೊಂಡಾಗ, ಮರುದಿನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಅಮ್ರೋಹಾದ ಹಸನ್‌ಪುರ ನಿವಾಸಿಯಾಗಿದ್ದ 32 ವರ್ಷದ ಪೂಜಾ, ಸುಮಾರು ಎಂಟು ವರ್ಷಗಳ ಹಿಂದೆ ದೆಹಲಿಯ ವ್ಯಕ್ತಿಯನ್ನು ವಿವಾಹವಾದರು. ಆದರೆ, ಎರಡು ವರ್ಷಗಳ ನಂತರ ವಿವಾಹ ವಿಚ್ಛೇದನದಲ್ಲಿ ಕೊನೆಗೊಂಡಿತು. ಅಂದಿನಿಂದ ಅವರು ತಮ್ಮ ತಾಯಿ ಗಜ್ರಾ ದೇವಿಯೊಂದಿಗೆ ತಮ್ಮ ಪೋಷಕರ ಮನೆಯಲ್ಲಿ ವಾಸಿಸುತ್ತಿದ್ದರು.

ಒಂಟಿತನವನ್ನು ನಿಭಾಯಿಸಲು, ಪೂಜಾ ಒಂದು ಸಾಕು ಬೆಕ್ಕನ್ನು ದತ್ತು ಪಡೆದಿದ್ದು, ದರಾದೃಷ್ಟವಶಾತ್ ಅದು ಗುರುವಾರ ಸತ್ತುಹೋಯಿತು. ಆಕೆಯ ತಾಯಿ ಪ್ರಾಣಿಯನ್ನು ಹೂಳಲು ಸೂಚಿಸಿದಾಗ, ಪೂಜಾ ನಿರಾಕರಿಸಿದರು. ಅದು ಮತ್ತೆ ಜೀವಂತವಾಗುತ್ತದೆ ಎಂದು ಪಟ್ಟುಹಿಡಿದಿದ್ದರು. ಪೂಜಾ ಎರಡು ದಿನಗಳ ಕಾಲ ಬೆಕ್ಕಿನ ಶವವನ್ನು ಬಿಡಲು ಇಷ್ಟವಿರಲಿಲ್ಲ. ಆಕೆಯ ತಾಯಿ ಮತ್ತು ಇತರ ಕುಟುಂಬ ಸದಸ್ಯರು ಅದನ್ನು ಹೂಳಲು ಮನವೊಲಿಸಲು ಪ್ರಯತ್ನಿಸಿದ್ದರು ಎನ್ನಲಾಗಿದೆ.

ಶನಿವಾರ ಮಧ್ಯಾಹ್ನ, ಮೃತ ಮಹಿಳೆ ತಮ್ಮ ಮನೆಯ ಮೂರನೇ ಮಹಡಿಯಲ್ಲಿರುವ ತನ್ನ ಕೋಣೆಯಲ್ಲಿ ಬೀಗ ಹಾಕಿಕೊಂಡರು. ಆ ರಾತ್ರಿ 8 ಗಂಟೆ ಸುಮಾರಿಗೆ, ಗಜ್ರಾ ದೇವಿ ತನ್ನ ಮಗಳನ್ನು ನೋಡಲು ಹೋದರು. ಪೂಜಾಳ ಶವ ಸೀಲಿಂಗ್ ಫ್ಯಾನ್‌ಗೆ ನೇತಾಡುತ್ತಿರುವುದನ್ನು ಹಾಗೂ ಹತ್ತಿರದಲ್ಲಿ ಸತ್ತ ಬೆಕ್ಕು ಬಿದ್ದಿರುವುದನ್ನು ಅವರು ಕಂಡರು. ಆಕೆಯ ಕಿರುಚಾಟದಿಂದ ಎಚ್ಚೆತ್ತುಕೊಂಡ ನೆರೆಹೊರೆಯವರು, ತಕ್ಷಣ ಸ್ಥಳಕ್ಕೆ ಬಂದು ಪೊಲೀಸರಿಗೆ ಮಾಹಿತಿ ನೀಡಿದರು.

ಪೊಲೀಸರು ಮನೆಗೆ ಆಗಮಿಸಿದರು ಮತ್ತು ವಿಧಿವಿಜ್ಞಾನ ತಂಡವು ಸಾಕ್ಷ್ಯಗಳನ್ನು ಸಂಗ್ರಹಿಸಿತು. ಈ ವಿಷಯದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ನಕಲಿ ಮತದಾರರ ಗುರುತಿನ ಚೀಟಿಗಳು ನಕಲಿ ಮತದಾರರನ್ನು ಸೂಚಿಸುವುದಿಲ್ಲ: ಭಾರತೀಯ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...