Homeಕರ್ನಾಟಕಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ : ಉಭಯ ಪಕ್ಷಗಳ ವಾಗ್ಯುದ್ಧಕ್ಕೆ ವೇದಿಕೆ ಸಜ್ಜು

ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ : ಉಭಯ ಪಕ್ಷಗಳ ವಾಗ್ಯುದ್ಧಕ್ಕೆ ವೇದಿಕೆ ಸಜ್ಜು

- Advertisement -
- Advertisement -

ಇಂದಿನಿಂದ (ಮಾ.3) ಮಾರ್ಚ್ 21ರವರೆಗೆ ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ನಡೆಯಲಿದೆ.

ಇಂದು ಬೆಳಿಗ್ಗೆ 11 ಗಂಟೆಗೆ ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ.

ಆ ಬಳಿಕ ಅಧಿವೇಶನ ಮುಂಡೂಡಿಕೆಯಾಗಲಿದ್ದು, ವಿಧಾನಸಭೆ ಹಾಗೂ ವಿಧಾನಪರಿಷತ್ತಿನ ಕಾರ್ಯಕಲಾಪಗಳ ಸಲಹಾ ಸಮಿತಿಗಳ ಜಂಟಿ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿದೆ.

ಮಾರ್ಚ್ 7ರಂದು ಬಜೆಟ್ ಮಂಡನೆ : ಮಾರ್ಚ್ 6 ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ 2025-26ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಬಳಿಕ ಬಜೆಟ್ ಮೇಲಿನ ಚರ್ಚೆಗಳು ನಡೆಯಲಿವೆ.

ದಾಖಲೆಯ 16ನೇ ಬಜೆಟ್ ಮಂಡಿಸಲಿರುವ ಸಿದ್ದರಾಮಯ್ಯ : ರಾಜ್ಯದ ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಈ ಬಾರಿ 16ನೇ ಬಜೆಟ್ ಮಂಡಿಸಲು ಅಣಿಯಾಗಿದ್ದಾರೆ. ಈ ಮೂಲಕ ಹೊಸ ದಾಖಲೆ ಸೃಷ್ಟಿಸಲಿದ್ದಾರೆ.

ಈ ಬಾರಿಯ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂಪಾಯಿ ಮೀರುವ ಸಾಧ್ಯತೆ ಇದೆ. ವೆಚ್ಚದ ಒತ್ತಡ ಹಾಗೂ ಸೀಮಿತ ಆದಾಯ ಸಂಗ್ರಹದ ಹಿನ್ನೆಲೆ ಸಿಎಂ ರಾಜಸ್ವ ಕೊರೆತಯ ಬಜೆಟ್ ಮಂಡಿಸುವ ಸಾಧ್ಯತೆ ಹೆಚ್ಚಿದೆ.

ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ತಂತ್ರ : ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಕಲಾಪದಲ್ಲಿ ಆಡಳಿತ ಪಕ್ಷವನ್ನು ಕಟ್ಟಿಹಾಕಲು ಪ್ರತಿಪಕ್ಷಗಳು ತಂತ್ರ ರೂಪಿಸಿವೆ.

ದರ ಏರಿಕೆ, ಅಭಿವೃದ್ದಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ವಿಳಂಬ, ಕಾನೂನು ಸುವ್ಯವಸ್ಥೆ ರಕ್ಷಣೆಯಲ್ಲಿ ವೈಫಲ್ಯ, ಭ್ರಷ್ಟಾಚಾರ ಆರೋಪಗಳು, ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಇತ್ಯಾದಿಗಳು ಸದನದಲ್ಲಿ ಗದ್ದಲಕ್ಕೆ ಕಾರಣವಾಗಬಹುದು.

ಪ್ರಮುಖವಾಗಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟ ವಿಷಯವನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಸಜ್ಜಾಗಿದೆ.

ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಗೆ ಕಡಿವಾಣ ಹಾಕಲು ಸರ್ಕಾರ ಸುಗ್ರಿವಾಜ್ಞೆ ಮೂಲಕ ಕಾನೂನು ಜಾರಿ ಮಾಡಿದೆ. ಅದನ್ನು ಮುಂದಿಟ್ಟುಕೊಂಡು ಸಮರ್ಥಿಸಿಕೊಳ್ಳಬಹುದು.

ಹಕ್ಕೊತ್ತಾಯ ಪರಿಗಣಿಸುತ್ತಾ ಸರ್ಕಾರ? ಬಜೆಟ್ ಪೂರ್ವ ಸುದ್ದಿಗೋಷ್ಟಿ ನಡೆಸಿರುವ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ ಮತ್ತು ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾದ ಸಂಯುಕ್ತ ಹೋರಾಟ ಸರ್ಕಾರದ ಮುಂದೆ 15 ಹಕ್ಕೊತ್ತಾಯಗಳನ್ನು ಮಂಡಿಸಿದೆ. ಈ ಬಾರಿಯ ಬಜೆಟ್ ಬರೀ ಘೋಷಣೆ ಸೀಮಿತವಾಗದೆ ಹಕ್ಕೊತ್ತಾಯಗಳಲ್ಲಿ ಇರುವ ವಿಷಯಗಳ ಸಂಬಂಧ ಗಟ್ಟಿ ನಿಲುವು ತೆಗೆದುಕೊಳ್ಳುವಂತೆ ಸಿಎಂಗೆ ಆಗ್ರಹಿಸಿದೆ. ಸರ್ಕಾರ ಈ ಹಕ್ಕೊತ್ತಾಯಗಳ ಸಂಬಂಧ ಏನು ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

‘ಸಾಮಾಜಿಕ ಸಮಸ್ಯೆಗಳಿಗೆ ಸಿನಿಮಾ ಪರಿಹಾರ ಹುಡುಕಬೇಕು..’; ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ಕೊಟ್ಟ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...