Homeಕರ್ನಾಟಕನಾಯಿ ಕಡಿತ ಪ್ರಕರಣ | ಕಳೆದ 2 ತಿಂಗಳಲ್ಲಿ 47% ಹೆಚ್ಚಳ; ರೇಬಿಸ್‌ನಿಂದ 8 ಸಾವು

ನಾಯಿ ಕಡಿತ ಪ್ರಕರಣ | ಕಳೆದ 2 ತಿಂಗಳಲ್ಲಿ 47% ಹೆಚ್ಚಳ; ರೇಬಿಸ್‌ನಿಂದ 8 ಸಾವು

- Advertisement -
- Advertisement -

ಕಳೆದ ಎರಡು ತಿಂಗಳಲ್ಲಿ ರಾಜ್ಯದಲ್ಲಿ ರೇಬೀಸ್‌ನಿಂದ ಎಂಟು ಸಾವುಗಳು ಸಂಭವಿಸಿವೆ ಎಂದು ಡೆಕ್ಕನ್ ಹೆರಾಲ್ಡ್‌ ಸೋಮವಾರ ವರದಿ ಮಾಡಿದ್ದು, ಈ ಸಾವುಗಳಲ್ಲಿ ನಾಲ್ಕು ಸಾವು ಬೆಂಗಳೂರಿನಲ್ಲೆ ಸಂಭವಿಸಿವೆ ಎಂದು ಪತ್ರಿಕೆ ಆರೋಗ್ಯ ಇಲಾಖೆಯ ಮೂಲವನ್ನು ಉಲ್ಲೇಖಿಸಿ ವರದಿ ಮಾಡಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ವರದಿಯಾದ ನಾಯಿ ಕಡಿತ ಪ್ರಕರಣಗಳಿಗೆ ಹೋಲಿಸಿದರೆ ಈ ವರ್ಷ 47% ಕ್ಕಿಂತ ಹೆಚ್ಚು ಹೆಚ್ಚಳವಾಗಿದೆ ಎಂದು ವರದಿ ಉಲ್ಲೇಖಿಸಿದೆ. ನಾಯಿ ಕಡಿತ ಪ್ರಕರಣ

ಬೆಂಗಳೂರಿನಲ್ಲಿ ಸಂಭವಿಸಿದ ನಾಲ್ಕು ಸಾವುಗಳಲ್ಲಿ, ಮೂವರು (ಹರಿಯಾಣ ಮೂಲದ 38 ವರ್ಷದ ವ್ಯಕ್ತಿ, ಚಿತ್ರದುರ್ಗದ 36 ವರ್ಷದ ವ್ಯಕ್ತಿ ಮತ್ತು ತುಮಕೂರಿನ 26 ವರ್ಷದ ವ್ಯಕ್ತಿ) ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣದ ಬಳಿಯ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಯಲ್ಲಿದ್ದರು. ಇದು ಶಂಕಿತ ರೇಬೀಸ್ ಪ್ರಕರಣಗಳಿಗೆ ಗೊತ್ತುಪಡಿಸಿದ ಪ್ರತ್ಯೇಕ ಆಸ್ಪತ್ರೆಯಾಗಿದ್ದು, ಇತರ ಜಿಲ್ಲೆಗಳ ರೋಗಿಳನ್ನು ಇಲ್ಲಿಗೆ ಕಳುಹಿಸಲಾಗುತ್ತದೆ. ನಾಯಿ ಕಡಿತ ಪ್ರಕರಣ

ನಾಲ್ಕನೆಯ ಘಟನೆ ಜನವರಿ 5 ರಂದು ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ (IGICH) ಸಾವನ್ನಪ್ಪಿದ ನಾಲ್ಕು ವರ್ಷದ ಬಾಲಕನದ್ದಾಗಿದೆ ಎಂದು ವರದಿ ಹೇಳಿದೆ. ಅಲ್ಲದೆ, ಬೆಳಗಾವಿಯಲ್ಲಿ ಇಬ್ಬರು ಮತ್ತು ಬಳ್ಳಾರಿ ಮತ್ತು ಶಿವಮೊಗ್ಗದಲ್ಲಿ ತಲಾ ಒಬ್ಬರು ರೇಬೀಸ್ ನಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಫೆಬ್ರವರಿ 23, 2025 ರ ಹೊತ್ತಿಗೆ ಆರೋಗ್ಯ ಇಲಾಖೆಯು ಸುಮಾರು 66,489 ನಾಯಿ ಕಡಿತ ಪ್ರಕರಣಗಳನ್ನು ದಾಖಲಿಸಿದೆ. ಇದರಲ್ಲಿ ವಿಜಯಪುರ (4,552), ಬೆಂಗಳೂರಿನ ಬಿಬಿಎಂಪಿ ಮಿತಿಯಲ್ಲಿ (4,072) ಮತ್ತು ಹಾಸನ (3,688) ಗಳಲ್ಲಿ ಅತಿ ಹೆಚ್ಚು ಘಟನೆ ವರದಿಯಾಗಿದೆ. ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ಇದು 47% ಕ್ಕಿಂತ ಹೆಚ್ಚು ಹೆಚ್ಚಳವಾಗಿದೆ.

ಕಳೆದ ವರ್ಷದ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ರಾಜ್ಯದಲ್ಲಿ ಸುಮಾರು 45,173 ನಾಯಿ ಕಡಿತ ಪ್ರಕರಣಗಳು ವರದಿಯಾಗಿತ್ತು. ಜನವರಿ ಮತ್ತು ಡಿಸೆಂಬರ್ 2024 ರ ನಡುವೆ, ಒಟ್ಟು 42 ಸಾವುಗಳು ಮತ್ತು 3,61,522 ನಾಯಿ ಕಡಿತ ಪ್ರಕರಣಗಳು ಕಳೆದ ವರ್ಷ ವರದಿಯಾಗಿದ್ದವು. 2023 ರಲ್ಲಿ, ಕರ್ನಾಟಕದಲ್ಲಿ ಕನಿಷ್ಠ 2.32 ಲಕ್ಷ ನಾಯಿ ಕಡಿತ ಮತ್ತು ನಾಲ್ಕು ಸಾವುಗಳು ವರದಿಯಾಗಿದ್ದವು.

ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಹೆಚ್ಚಿದ ಕಣ್ಗಾವಲು ಹಾಗೂ ಪ್ರಕರಣಗಳ ವರದಿಯೇ ಈ ಏರಿಕೆಗೆ ಕಾರಣ ಎಂದು ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದ ಯೋಜನಾ ನಿರ್ದೇಶಕ ಡಾ. ಅನ್ಸರ್ ಅಹ್ಮದ್ ಅವರು ಹೇಳಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ. “ಎಲ್ಲಾ ನಾಯಿ ಕಡಿತ ಪ್ರಕರಣಗಳು ರೇಬೀಸ್ ಪ್ರಕರಣಗಳಲ್ಲ. ಆದಾಗ್ಯೂ, ರೋಗದ ಸಾಧ್ಯತೆಯನ್ನು ಕಡಿಮೆ ಮಾಡಲು ಪ್ರತಿಯೊಂದು ಗಾಯವನ್ನು ತಕ್ಷಣವೇ ಸೋಂಕುರಹಿತ ನೀರು ಮತ್ತು ಸೋಪಿನಿಂದ ತೊಳೆಯುವುದು ಮುಖ್ಯ,” ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ : ಉಭಯ ಪಕ್ಷಗಳ ವಾಗ್ಯುದ್ಧಕ್ಕೆ ವೇದಿಕೆ ಸಜ್ಜು

ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ : ಉಭಯ ಪಕ್ಷಗಳ ವಾಗ್ಯುದ್ಧಕ್ಕೆ ವೇದಿಕೆ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...