Homeಮುಖಪುಟಇಸ್ರೇಲ್‌- ಪ್ಯಾಲೆಸ್ತೀನ್‌ನ ಸಾಕ್ಷ್ಯಚಿತ್ರ ‘ನೋ ಅದರ್ ಲ್ಯಾಂಡ್‌’ಗೆ ಆಸ್ಕರ್ ಪ್ರಶಸ್ತಿ

ಇಸ್ರೇಲ್‌- ಪ್ಯಾಲೆಸ್ತೀನ್‌ನ ಸಾಕ್ಷ್ಯಚಿತ್ರ ‘ನೋ ಅದರ್ ಲ್ಯಾಂಡ್‌’ಗೆ ಆಸ್ಕರ್ ಪ್ರಶಸ್ತಿ

ಪ್ಯಾಲೆಸ್ತೀನಿಯರ ಜನಾಂಗೀಯ ನಿರ್ಮೂಲನೆ ನಿಲ್ಲಿಸಲು ಚಿತ್ರ ತಂಡ ಆಗ್ರಹ

- Advertisement -
- Advertisement -

ಇಸ್ರೇಲ್ ಸೇನೆಯ ಆಕ್ರಮಣದಿಂದ ತಮ್ಮ ತಾಯ್ನಾಡನ್ನು ರಕ್ಷಿಸಿಕೊಳ್ಳಲು ಹೋರಾಡುತ್ತಿರುವ ಪ್ಯಾಲೆಸ್ತೀನಿಯರ ಕುರಿತಾದ ‘ನೋ ಅದರ್ ಲ್ಯಾಂಡ್’ ಚಿತ್ರ ಅತ್ಯುತ್ತಮ ಸಾಕ್ಷ್ಯಚಿತ್ರ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಗೆದ್ದಿದೆ.

ಇಸ್ರೇಲ್ ಮತ್ತು ಪ್ಯಾಲೆಸ್ತೀನಿಯನ್ ಹೋರಾಟಗಾರರು ಹಾಗೂ ಚಲನಚಿತ್ರ ನಿರ್ಮಾಪಕರಾದ ಬಾಸೆಲ್ ಅದ್ರಾ, ಯುವಲ್ ಅಬ್ರಹಾಂ, ರಾಚೆಲ್ ಸ್ಜೋರ್ ಮತ್ತು ಹಮ್ದನ್ ಬಲ್ಲಾಲ್ ಅವರನ್ನು ಒಳಗೊಂಡ ಚಿತ್ರ ತಂಡವು, 97ನೇ ಅಕಾಡೆಮಿ ಅವಾರ್ಡ್‌ನಲ್ಲಿ ಪೋರ್ಸಲೇನ್ ವಾರ್, ಶುಗರ್ಕೇನ್, ಬ್ಲ್ಯಾಕ್ ಬಾಕ್ಸ್ ಡೈರೀಸ್ ಮತ್ತು ಸೌಂಡ್‌ಟ್ರ್ಯಾಕ್ ಟು ಎ ಕಪ್ ಡಿ’ಎಟಾಟ್‌ ಚಿತ್ರಗಳ ಜೊತೆಗಿನ ಸ್ಪರ್ಧೆಯಲ್ಲಿ ಭಾನುವಾರ (ಮಾ.2) ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದೆ.

2019 ಮತ್ತು 2023ರ ನಡುವೆ ‘ನೋ ಅದರ್ ಲ್ಯಾಂಡ್’ ಚಿತ್ರವನ್ನು ನಿರ್ಮಿಸಲಾಗಿದೆ. ಆ ಬಳಿಕ ನಿರ್ದೇಶಕರ ಪೈಕಿ ಒಬ್ಬರಾದ ಬೇಸಲ್ ಅದ್ರಾ ಅವರು ಬಂಧನ ಭೀತಿ ಎದುರಿಸುತ್ತಿದ್ದರು. ಬೇಸಲ್ ಅದ್ರಾ ಅವರ ಹುಟ್ಟೂರು ಮಸಾಫರ್ ಯಟ್ಟಾವನ್ನು ಇಸ್ರೇಲ್‌ ಸೈನಿಕರು ಆಕ್ರಮಿಸಿಕೊಂಡು ಪಶ್ಚಿಮ ದಂಡೆಯ ದಕ್ಷಿಣ ತುದಿಯನ್ನು ಮಿಲಿಟರಿ ತರಬೇತಿ ವಲಯವಾಗಿ ನಿರ್ಮಿಸಲು ಮುಂದಾಗಿದ್ದ ಬಗ್ಗೆ ಚಿತ್ರ ಗಮನ ಸೆಳೆದಿತ್ತು.

ಆದ್ರಾ ಅವರು ಯಹೂದಿ-ಇಸ್ರೇಲಿ ಪತ್ರಕರ್ತ ಯುವಲ್ ಅಬ್ರಹಾಂ ಜೊತೆ ಸ್ನೇಹ ಬೆಳೆಸುವವರೆಗೂ ಅವರ ಧ್ವನಿಯನ್ನು ಕೇಳುವವರು ಇರಲಿಲ್ಲ. ಪತ್ರಕರ್ತ ಯುವಲ್ ಅಬ್ರಹಾಂ ಜೊತೆ ಸ್ನೇಹ ಬೆಳೆಸಿದ ನಂತರ, ಅವರು ಆದ್ರಾ ಅವರ ಕಥೆಯನ್ನು ಹೊರ ಜಗತ್ತಿಗೆ ತಿಳಿಸಲು ಸಹಾಯ ಮಾಡುತ್ತಾರೆ.

ಆಸ್ಕರ್ ಪ್ರಶಸ್ತಿಯನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಆದ್ರಾ, ‘ನೋ ಅದರ್ ಲ್ಯಾಂಡ್’ ಪ್ಯಾಲೆಸ್ತೀನಿಯರು ದಶಕಗಳಿಂದ ಅನುಭವಿಸುತ್ತಿರುವ ಕಠೋರ ವಾಸ್ತವವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

“ಎರಡು ತಿಂಗಳ ಹಿಂದೆಯಷ್ಟೇ ನಾನು ತಂದೆಯಾದೆ. ನನ್ನ ಮಗಳು ನಾನು ಈಗ ಬದುಕುತ್ತಿರುವಂತೆ ಬದುಕಬಾರದು ಎಂಬ ಆಶಯವನ್ನು ಹೊಂದಿದ್ದೇನೆ. ಈಗ ಪ್ರತಿದಿನ ವಸಾಹತುಗಾರರು, ಹಿಂಸಾಚಾರ ಮಾಡುತ್ತಿದ್ದಾರೆ, ಮನೆಗಳನ್ನು ಉರುಳಿಸುತ್ತಿದ್ದಾರೆ. ಬಲವಂತದಿಂದ ಸ್ಥಳಾಂತರ ಮಾಡುತ್ತಿದ್ದಾರೆ. ನನ್ನ ಸಮುದಾಯ ಇಸ್ರೇಲ್‌ ಆಕ್ರಮಣವನ್ನು ಎದುರಿಸಿಕೊಂಡೇ ಪ್ರತಿದಿನ ವಾಸಿಸುತ್ತಿದೆ ಮತ್ತು ಅನುಭವಿಸುತ್ತಿದೆ” ಎಂದು ಆದ್ರಾ ಹೇಳಿದ್ದಾರೆ.

“ಪ್ಯಾಲೆಸ್ತೀನಿಯನ್ ಜನರ ಮೇಲಿನ ಅನ್ಯಾಯ ಮತ್ತು ಜನಾಂಗೀಯ ನಿರ್ಮೂಲನೆಯನ್ನು ನಿಲ್ಲಿಸಲು ಗಂಭೀರ ಕ್ರಮಗಳನ್ನು ತೆಗೆದುಕೊಳ್ಳುವಂತೆ” ಅವರು ಜಗತ್ತಿಗೆ ಕರೆ ನೀಡಿದ್ದಾರೆ.

ಪ್ಯಾಲೆಸ್ತೀನಿಯರ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಲಾಗಿರುವ ಸಾಕ್ಷ್ಯಚಿತ್ರದ ಕುರಿತು ಮಾತನಾಡಿದ ಇಸ್ರೇಲ್ ಪತ್ರಕರ್ತ ಯುವಲ್ ಅಬ್ರಹಾಂ, “ಪ್ಯಾಲೆಸ್ತೀನಿಯರು ಹಾಗೂ ಇಸ್ರೇಲಿಗರಾದ ನಾವು ಈ ಚಿತ್ರವನ್ನು ಒಟ್ಟಾಗಿ ನಿರ್ಮಿಸಿದ್ದೇವೆ. ಕಾರಣ, ನಮ್ಮ ಧ್ವನಿಗಳು ಶಕ್ತಿಶಾಲಿಯಾಗಿವೆ. ಅಂತ್ಯಗೊಳ್ಳಲೇಬೇಕಾದ ಗಾಝಾ ಹಾಗೂ ಅಲ್ಲಿನ ಜನರ ವಿನಾಶವನ್ನು ನಾವಿಬ್ಬರೂ ನೋಡುತ್ತಿದ್ದೇವೆ. ಅಕ್ಟೋಬರ್ 7ರಂದು ಅತ್ಯಂತ ಅಮಾನುಷವಾಗಿ ಒತ್ತೆಯಾಳುಗಳನ್ನಾಗಿಸಿಕೊಳ್ಳಲಾಗಿರುವ ಇಸ್ರೇಲ್ ಪ್ರಜೆಗಳನ್ನು ಕೂಡ ಬಿಡುಗಡೆ ಮಾಡಲೇಬೇಕು” ಎಂದಿದ್ದಾರೆ.

ತಮ್ಮಿಬ್ಬರ ನಡುವಿನ ಅಸಮಾನತೆಯ ಮೇಲೂ ಬೆಳಕು ಚೆಲ್ಲಿದ ಅಬ್ರಹಾಂ, “ನಾನು ನಾಗರಿಕ ಕಾನೂನುಗಳಿರುವ ಪ್ರಭುತ್ವದಡಿ ಸ್ವತಂತ್ರವಾಗಿ ಜೀವಿಸುತ್ತಿದ್ದರೆ, ತನ್ನ ಜೀವನವನ್ನು ನಾಶಗೊಳಿಸಿದ ಹಾಗೂ ಅದನ್ನು ತನ್ನಿಂದ ತಡೆಯಲಾಗದ ಆದ್ರಾ ಸೇನಾ ಕಾನೂನುಗಳ ಆಡಳಿತದಡಿ ಜೀವಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಈ ಬಿಕ್ಕಟ್ಟಿಗೆ ಭಿನ್ನ ದಾರಿಯಿದ್ದು, ಜನಾಂಗೀಯ ಮೇಲರಿಮೆಯಿಲ್ಲದ, ಎರಡೂ ಕಡೆಯ ಜನರಿಗೆ ರಾಷ್ಟ್ರೀಯ ಹಕ್ಕುಗಳಿರುವ ರಾಜಕೀಯ ಪರಿಹಾರ ಸಾಧ್ಯವಿದೆ” ಎಂದೂ ಅವರು ಸಲಹೆ ನೀಡಿದ್ದಾರೆ.

ಅಮೆರಿಕ ವಿದೇಶಾಂಗ ನೀತಿಯನ್ನೂ ಟೀಕಿಸಿದ ಅಬ್ರಹಾಂ, “ಆದ್ರಾ ಅವರ ಜನರಿಗೆ ನೈಜ ಸ್ವಾತಂತ್ರ್ಯ ದೊರೆತಾಗ ಮಾತ್ರ ನಾವು ಸುರಕ್ಷಿತ ಎಂಬಂತೆ ನಾವಿಬ್ಬರೂ ಪರಸ್ಪರ ಬೆಸೆದುಕೊಂಡಿರುವುದು ನಿಮಗೇಕೆ ಕಾಣುತ್ತಿಲ್ಲ?” ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

ಈ ಸಾಕ್ಷ್ಯಚಿತ್ರವನ್ನು ಇಸ್ರೇಲ್ ಹಾಗೂ ಪ್ಯಾಲೆಸ್ತೀನ್‌ ನಾಲ್ವರು ಹೋರಾಟಗಾರರು ಒಟ್ಟಾಗಿ ನಿರ್ಮಿಸಿದ್ದು, ಸದ್ಯ ಮುಂದುವರಿದಿರುವ ಪ್ರಾಂತೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ನ್ಯಾಯಕ್ಕಾಗಿ ತೋರುವ ಪ್ರತಿರೋಧದ ಕ್ರಿಯೆಯನ್ನು ಈ ಸಾಕ್ಷ್ಯಚಿತ್ರ ಮಂಡಿಸುತ್ತದೆ.

ಬರ್ಲಿನ್ 74ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಪನೋರಮಾ ವಿಭಾಗಕ್ಕೆ ‘ನೋ ಅದರ್ ಲ್ಯಾಂಡ್’ ಆಯ್ಕೆಯಾಗಿತ್ತು. ಫೆಬ್ರವರಿ 14, 2024ರಂದು ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿದ್ದ ಈ ಸಾಕ್ಷ್ಯಚಿತ್ರವು, ಅತ್ಯುತ್ತಮ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪನೋರಮಾ ಪ್ರೇಕ್ಷಕರ ಪ್ರಶಸ್ತಿ ಹಾಗೂ ಬರ್ಲಿನ್ ಸಾಕ್ಷ್ಯಚಿತ್ರ ಪ್ರಶಸ್ತಿಗೆ ಭಾಜನವಾಗಿತ್ತು.

ಪಾಕಿಸ್ತಾನದ ಜನಪ್ರಿಯ ಲೇಖಕಿ ಬಾಪ್ಸಿ ಸಿಧ್ವಾ (86) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...